Homeಮುಖಪುಟತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

ತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

- Advertisement -
- Advertisement -

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ 280 ಜನರು ಸಾವನ್ನಪ್ಪಿದ್ದಾರೆ. “ದುರಂತ ಸಂಭವಿಸುವ ಕೆಲವು ನಿಮಿಷಗಳ ಮೊದಲು ಕೋರಮಂಡಲ್‌ ಎಕ್ಸ್‌ಪ್ರೆಸ್‌ ತಪ್ಪಾದ ಹಳಿಯಲ್ಲಿ ಚಲಿಸುತ್ತಿತ್ತು. ಈ ಅವಘಡ  ಮಾನವ ನಿರ್ಮಿತ ಪ್ರಮಾದದಿಂದಾಗಿರಬಹುದು” ಎಂದು ರೈಲ್ವೆ ಸಿಗ್ನಲಿಂಗ್ ಕಂಟ್ರೋಲ್ ರೂಂನ ಆರಂಭಿಕ ವರದಿಗಳು ತಿಳಿಸಿವೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಖಚಿತ ಕಾರಣವು ಸಂಪೂರ್ಣ ತನಿಖೆಯ ನಂತರವೇ ತಿಳಿದುಬರುತ್ತದೆ.

“ರೈಲ್ವೆಯ ಖರಗ್‌ಪುರ ವಿಭಾಗದ ಸಿಗ್ನಲಿಂಗ್ ಕಂಟ್ರೋಲ್ ರೂಮ್‌ನ ವೀಡಿಯೊ ಪ್ರಕಾರ, ಚೆನ್ನೈಗೆ ಹೋಗುವ ಕೋರಮಂಡಲ್ ಎಕ್ಸ್‌ಪ್ರೆಸ್ ಶುಕ್ರವಾರ ಸಂಜೆ 6.55ಕ್ಕೆ ಬಹಾನಗರ್ ಬಜಾರ್ ನಿಲ್ದಾಣವನ್ನು ದಾಟಿತ್ತು. ನಂತರ ಮುಖ್ಯ ಮಾರ್ಗದ ಬದಲಿಗೆ ಗೂಡ್ಸ್ ರೈಲು ನಿಲುಗಡೆ ಮಾಡಿದ ಲೂಪ್ ಲೈನ್‌ನಲ್ಲಿ ಚಲಿಸುತ್ತಿತ್ತು” ಎಂದು ಹಿರಿಯ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡು ಮುಖ್ಯ ಮಾರ್ಗಗಳು ಮತ್ತು ಎರಡು ಲೂಪ್ ಲೈನ್‌ಗಳು ಸೇರಿದಂತೆ ನಾಲ್ಕು ರೈಲ್ವೆ ಹಳಿಗಳಿಗೆ ಸಂಬಂಧಿಸಿದ ದೃಶ್ಯಾವಳಿಗಳನ್ನು ಗಮನಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ಹೇಳಿಕೊಂಡಿದೆ.

ಗಂಟೆಗೆ ಸುಮಾರು 127 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಮುಖ್ಯ ಮಾರ್ಗದಲ್ಲಿ ಹಳಿ ತಪ್ಪಿದೆ ಎಂದು ರೈಲ್ವೆ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಕೆಲವೇ ನಿಮಿಷಗಳಲ್ಲಿ ಹೌರಾಕ್ಕೆ ಹೋಗುವ ಯಶವಂತನಗರ ಎಕ್ಸ್‌ಪ್ರೆಸ್ ಎದುರು ಭಾಗದಿಂದ ಬರುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

“ಇದು ಹೇಗೆ ಸಂಭವಿಸಿತು ಮತ್ತು ಏಕೆ ಸಂಭವಿಸಿತು ಎಂಬುದು ರೈಲ್ವೆ ಮಂಡಳಿಯು ಆದೇಶಿಸಿದ ವಿವರವಾದ ತನಿಖೆಯಲ್ಲಿ ಕಂಡುಬರುತ್ತದೆ. ಆದರೆ, ಮೇಲ್ನೋಟಕ್ಕೆ ಇದು ಮಾನವ ನಿರ್ಮಿತ ಅವಘಡ ಎಂದು ತೋರುತ್ತದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಅದೇ ಅಧಿಕಾರಿಯ ಹೇಳುವ ಪ್ರಕಾರ 1995ರಲ್ಲಿ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಇದೇ ರೀತಿಯ ಅವಘಡ ಸಂಭವಿಸಿತ್ತು. ಆ ಸಮಯದಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಸುಮಾರು 350 ಜನರು ಸಾವನ್ನಪ್ಪಿದರು. ರಕ್ಷಣಾ ಕಾರ್ಯಾಚರಣೆ ಮೂರು ದಿನಗಳ ಕಾಲ ನಡೆದಿತ್ತು.

ಒಡಿಸ್ಸಾಕ್ಕೆ ಇಂದು ಪ್ರಧಾನಿ ಭೇಟಿ

ಒಡಿಸ್ಸಾ ರಾಜ್ಯದಲ್ಲಿ ನೂರಾರು ಜನರು ಆಸ್ಪತ್ರೆಗೆ ದಾಖಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಒಡಿಶಾಕ್ಕೆ ಇಂದು ಭೇಟಿ ನೀಡಲಿದ್ದಾರೆ.

“ಪ್ರಧಾನಿ ಮೋದಿ ಅವರು ಮೊದಲು ಅಪಘಾತದ ಸ್ಥಳಕ್ಕೆ ಭೇಟಿ ನೀಡುತ್ತಾರೆ ಮತ್ತು ನಂತರ ಸಂತ್ರಸ್ತರು ದಾಖಲಾಗಿರುವ ಆಸ್ಪತ್ರೆಗೆ ತೆರಳಲಿದ್ದಾರೆ” ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಇದನ್ನೂ ಓದಿರಿ: ರೈಲು ದುರಂತ: ಗಾಯಾಳುಗಳ ಚಿಕಿತ್ಸೆಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಜನ

ಪ್ರಧಾನಿ ಮೋದಿ ಅವರು ಇಂದು ಗೋವಾದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದರು. ಒಡಿಶಾದಲ್ಲಿ ನಡೆದ ದುರಂತದ ನಂತರ ವಂದೇ ಭಾರತ್ ಚಾಲನೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಒಡಿಶಾದ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿಯವರು ಹಿರಿಯ ರೈಲ್ವೇ ಅಧಿಕಾರಿಗಳ ಉನ್ನತ ಮಟ್ಟದ ಸಭೆಯನ್ನೂ ಕರೆದಿದ್ದಾರೆ.

ಮೂರು ರೈಲುಗಳ ಅಪಘಾತದ ಸುಮಾರು 16 ಗಂಟೆಗಳ ನಂತರ, ರಕ್ಷಣಾ ಕಾರ್ಯಾಚರಣೆಯು ಶನಿವಾರ ಪೂರ್ಣಗೊಂಡಿದೆ ಎಂದು ಘೋಷಿಸಲಾಗಿದೆ. 280 ಜನರು ಸಾವನ್ನಪ್ಪಿದ್ದಾರೆಂದು ಅಧಿಕೃತವಾಗಿ ಘೋಷಿಸಲಾಯಿತು. ಸುಮಾರು 900 ಪ್ರಯಾಣಿಕರಿಗೆ ಸಣ್ಣ ಮತ್ತು ತೀವ್ರ ಗಾಯತರನಾದ ಗಾಯಗಳಾಗಿದ್ದು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...