Homeಮುಖಪುಟಮಣಿಪುರ: ಜನಾಂಗೀಯ ಕಲಹದಲ್ಲಿ 98 ಮಂದಿ ಸಾವು, ಸಹಜ ಸ್ಥಿತಿಯತ್ತ ರಾಜ್ಯ

ಮಣಿಪುರ: ಜನಾಂಗೀಯ ಕಲಹದಲ್ಲಿ 98 ಮಂದಿ ಸಾವು, ಸಹಜ ಸ್ಥಿತಿಯತ್ತ ರಾಜ್ಯ

- Advertisement -
- Advertisement -

ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಯಲ್ಲಿ ಕನಿಷ್ಠ 98 ಜನರು ಸಾವನ್ನಪ್ಪಿದ್ದಾರೆ ಮತ್ತು 310 ಜನರು ಗಾಯಗೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ.

ಮೈತೇಯಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ನಿರ್ಧಾರ ಪ್ರಕಟವಾದ ಬಳಿಕ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಕಳೆದೊಂದು ತಿಂಗಳಿಂದ ಕಲಹ ನಡೆಯುತ್ತಿದ್ದು, ಸದ್ಯಕ್ಕೆ ಪರಿಸ್ಥಿತಿ ತುಸು ಸುಧಾರಿಸಿದಂತೆ ಕಾಣುತ್ತಿದೆ.

ಮಣಿಪುರದ ದೊಡ್ಡ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಕುಕಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿದ್ದಾರೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಮೈತೇಯಿ ಸಮುದಾಯವು ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿದೆ.

ಪ್ರತಿಭಟನಾ ಮೆರವಣಿಗೆಯ ನಂತರ, ಈಶಾನ್ಯ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರಗಳು ವರದಿಯಾದವು. ರಾಜ್ಯದ ಶಾಸಕರು ಮತ್ತು ಸಚಿವರ ಮನೆಗಳ ಮೇಲೆ ದಾಳಿಗಳು ನಡೆದು ಪರಿಸ್ಥಿತಿ ಬಿಗಡಾಯಿಸಿತ್ತು.

ಶುಕ್ರವಾರ ಮುಖ್ಯಮಂತ್ರಿಗಳ ಕಚೇರಿ ಹೇಳಿಕೆ ನೀಡಿದ್ದು 37,450 ನಿವಾಸಿಗಳು ಪ್ರಸ್ತುತ 272 ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.

ಕಳೆದ ಒಂದು ತಿಂಗಳಿನಿಂದ, ಮಣಿಪುರ ಪೊಲೀಸರು 3,734 ಪ್ರಕರಣಗಳನ್ನು ದಾಖಲಿಸಿದ್ದಾರೆ ಮತ್ತು ಹಿಂಸಾಚಾರದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ 65 ಜನರನ್ನು ಬಂಧಿಸಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನವಿಯ ನಂತರ ಹಲವು ಪ್ರತಿಭಟನಾಕಾರರು 150 ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ ಎಂದು ಮಣಿಪುರ ಪೊಲೀಸರು ಹೇಳಿದ್ದಾರೆ ಎಂದು ‘ಎಕನಾಮಿಕ್ ಟೈಮ್ಸ್’ ವರದಿ ಮಾಡಿದೆ.

ಸ್ವಯಂ-ಲೋಡಿಂಗ್ ರೈಫಲ್‌ಗಳು, ಕಾರ್ಬೈನ್, ಎಕೆ ಮತ್ತು ಐಎನ್‌ಎಸ್‌ಎಎಸ್ ರೈಫಲ್‌ಗಳು, ಲೈಟ್ ಮೆಷಿನ್‌ ಗನ್‌ಗಳು, ಪಿಸ್ತೂಲ್‌ಗಳು, ಎಂ16 ರೈಫಲ್‌ಗಳು, ಸ್ಮೋಕ್ ಗನ್‌ಗಳು/ಟಿಯರ್ ಗ್ಯಾಸ್, ಸ್ಟನ್ ಗನ್‌ಗಳು ಮತ್ತು ಗ್ರೆನೇಡ್ ಲಾಂಚರ್‌ಗಳನ್ನು ಸರ್ಕಾರಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿರಿ: ತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

ಯಾವುದೇ ವ್ಯಕ್ತಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊಂದಿದ್ದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ಎಚ್ಚರಿಸಿದೆ.

ಬಹುತೇಕ ಜಿಲ್ಲೆಗಳಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿದ್ದು, ಸಮುದಾಯಗಳ ನಡುವಿನ ಸಂಘರ್ಷವನ್ನು ಬಗೆಹರಿಸಲು ನಾಗರಿಕ ಸಂಘಟನೆಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ಬಿಷ್ಣುಪುರ್ ಮತ್ತು ಫರ್ಜಾಲ್‌ನಲ್ಲಿ 12 ಗಂಟೆಗಳ ಕಾಲ, ಕಾಂಗ್‌ಪೋಕ್ಪಿಯಲ್ಲಿ 11 ಗಂಟೆಗಳ ಕಾಲ, ಚುರಾಚಂದ್‌ಪುರ ಮತ್ತು ಚಾಂಡೆಲ್‌ನಲ್ಲಿ 10 ಗಂಟೆಗಳ ಕಾಲ, ಜಿರಿಬಾಮ್ ಮತ್ತು ತೆನುಗೋಪಾಲ್‌ನಲ್ಲಿ 8 ಗಂಟೆಗಳ ಕಾಲ, ತೌಬಲ್ ಮತ್ತು ಕಾಕ್ಚಿಂಗ್ ಜಿಲ್ಲೆಗಳಲ್ಲಿ 7 ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಗಿದೆ.

ಸೇನಾಪತಿ, ಉಖ್ರುಲ್, ಕಾಮ್‌ಜಾಂಗ್, ನೋನಿ ಮತ್ತು ತಮೆಂಗ್‌ಲಾಂಗ್ ಜಿಲ್ಲೆಗಳಲ್ಲಿ ಕರ್ಫ್ಯೂ ಹಿಂತೆಗೆದುಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...