Homeಮುಖಪುಟಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

- Advertisement -
- Advertisement -

ಒಡಿಶಾ ರಾಜ್ಯದಲ್ಲಿ ಮೂರು ರೈಲುಗಳು ಡಿಕ್ಕಿಯಾಗಿ ಸುಮಾರು 300 ಮಂದಿ ಕೊನೆಯುಸಿರೆಳೆದಿದ್ದಾರೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲು ಮತ್ತು ಒಂದು ಗೂಡ್ಸ್‌ ರೈಲು ಗಾಡಿ ನಡುವೆ ನಡೆದಿರುವ ಈ ದುರಂತದಲ್ಲಿ ಸುಮಾರು 900 ಮಂದಿ ಗಾಯಗೊಂಡಿದ್ದಾರೆಂದು ಅಂದಾಜಿಸಲಾಗಿದೆ. ಶುಕ್ರವಾರ ರಾತ್ರಿ ಘಟಿಸಿರುವ ಈ ಪ್ರಕರಣ ಸೇರಿದಂತೆ ಭಾರತ ಇತ್ತೀಚಿನ ವರ್ಷಗಳಲ್ಲಿ ಹಲವು ರೈಲು ದುರಂತಗಳನ್ನು ಕಂಡಿದೆ.

ಹಳಿತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಕೆಲವು ಬೋಗಿಗಳಿಗೆ ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಡಿಕ್ಕಿ ಹೊಡೆದು ಎದುರಿನ ಹಳಿಯಲ್ಲಿ ಬಿದ್ದಿದೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿ ಟ್ವೀಟ್ ಮಾಡಿದ್ದಾರೆ. “ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ನೋವಾಗಿದೆ. ಈ ದುಃಖದ ಘಳಿಗೆಯಲ್ಲಿ ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿದ್ದೇನೆ. ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ. ಅಲ್ಲದೆ ಪ್ರಧಾನಿ ಮೋದಿಯವರು ಒಡಿಸ್ಸಾಕ್ಕೆ ಭೇಟಿ ನೀಡುತ್ತಿದ್ದಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸಹಾಯಕ್ಕೆ ಧಾವಿಸಿದ್ದಾರೆ

“ಇದು ಹೇಗೆ ಸಂಭವಿಸಿತು ಮತ್ತು ಏಕೆ ಸಂಭವಿಸಿತು ಎಂಬುದು ರೈಲ್ವೆ ಮಂಡಳಿಯು ಆದೇಶಿಸಿದ ವಿವರವಾದ ತನಿಖೆಯಲ್ಲಿ ಕಂಡುಬರುತ್ತದೆ. ಆದರೆ, ಮೇಲ್ನೋಟಕ್ಕೆ ಇದು ಮಾನವ ನಿರ್ಮಿತ ಅವಘಡ ಎಂದು ತೋರುತ್ತದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಅದೇ ಅಧಿಕಾರಿಯ ಹೇಳುವ ಪ್ರಕಾರ 1995ರಲ್ಲಿ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಇದೇ ರೀತಿಯ ಅವಘಡ ಸಂಭವಿಸಿತ್ತು. ಆ ಸಮಯದಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಸುಮಾರು 350 ಜನರು ಸಾವನ್ನಪ್ಪಿದ್ದರು. ರಕ್ಷಣಾ ಕಾರ್ಯಾಚರಣೆ ಮೂರು ದಿನಗಳ ಕಾಲ ನಡೆದಿತ್ತು.

300 ಮಂದಿಯ ಸಾವಿಗೆ ಕಾರಣವಾಗಿರುವ ಈಗಿನ ಘಟನೆಯು ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಘಟಿಸಿದ ಹಲವು ರೈಲು ದುರಂತಗಳನ್ನು ನೆನಪಿಸಿದೆ.

2011, ಜುಲೈ 7ರಂದು ಛಪ್ರಾ-ಮಥುರಾ ಎಕ್ಸ್‌ಪ್ರೆಸ್ ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ಬಳಿ ಬಸ್‌ಗೆ ಡಿಕ್ಕಿ ಹೊಡೆದಿತ್ತು. 69 ಮಂದಿ ಪ್ರಾಣ ಕಳೆದುಕೊಂಡಿದ್ದರು. ಹಲವಾರು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಮಾನವ ರಹಿತ ಕ್ರಾಸಿಂಗ್‌ನಲ್ಲಿ ರಾತ್ರಿ 1:55ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ರೈಲು ಅತಿವೇಗದಲ್ಲಿ ಚಲಿಸುತ್ತಿತ್ತು. ರೈಲಿಗೆ ಸಿಲುಕಿದ ಬಸ್ ಸುಮಾರು ಅರ್ಧ ಕಿಲೋಮೀಟರ್ ದೂರದಷ್ಟು ಎಳೆಯಲ್ಪಷ್ಟಿತ್ತು.

ರೈಲು ಅಪಘಾತಗಳನ್ನು ಅವಲೋಕಿಸುವಾಗ 2012ನೇ ಇಸವಿಯನ್ನು ಭಾರತೀಯ ರೈಲ್ವೇ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ವರ್ಷ ಎಂದು ಗುರುತಿಸಲಾಗುತ್ತದೆ. ಆ ವರ್ಷ ಸುಮಾರು 14 ಅಪಘಾತಗಳು ನಡೆದಿದ್ದವು. ರೈಲುಗಳ ಹಳಿತಪ್ಪುವಿಕೆ, ಮುಖಾಮುಖಿ ಡಿಕ್ಕಿಯಂತಹ ವರದಿಗಳಾಗಿದ್ದವು.

2012, ಜುಲೈ 30ರಂದು ನೆಲ್ಲೂರು ಬಳಿ ‘ದೆಹಲಿ-ಚೆನ್ನೈ ತಮಿಳುನಾಡು ಎಕ್ಸ್‌ಪ್ರೆಸ್‌’ನ ಕೋಚ್‌ಗೆ ಬೆಂಕಿ ತಗುಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

2014 ಮೇ 26ರಂದು ಉತ್ತರ ಪ್ರದೇಶದ ಸಂತ ಕಬೀರ್ ನಗರ ಪ್ರದೇಶದಲ್ಲಿ ರೈಲು ದುರಂತ ಘಟಿಸಿತ್ತು. ಗೋರಖ್‌ಪುರ ಕಡೆಗೆ ಹೋಗುತ್ತಿದ್ದ ‘ಗೋರಖ್‌ಧಾಮ್ ಎಕ್ಸ್‌ಪ್ರೆಸ್’ ಖಲೀಲಾಬಾದ್ ನಿಲ್ದಾಣದ ಸಮೀಪದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು 25 ಜನರು ಸಾವನ್ನಪ್ಪಿದ್ದರು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿರಿ: ತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

2015 ಮಾರ್ಚ್ 20ರಂದು ಡೆಹ್ರಾಡೂನ್‌ನಿಂದ ವಾರಣಾಸಿಗೆ ಪ್ರಯಾಣಿಸುತ್ತಿದ್ದ ಜನತಾ ಎಕ್ಸ್‌ಪ್ರೆಸ್‌ ಅಪಘಾತಕ್ಕೆ ತುತ್ತಾಗಿತ್ತು. ಉತ್ತರ ಪ್ರದೇಶದ ರಾಯ್ ಬರೇಲಿಯ ಬಚ್ರವಾನ್ ರೈಲು ನಿಲ್ದಾಣದ ಬಳಿ ರೈಲಿನ ಇಂಜಿನ್ ಮತ್ತು ಎರಡು ಪಕ್ಕದ ಕೋಚ್‌ಗಳು ಹಳಿತಪ್ಪಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಸುಮಾರು 150 ಜನರು ಗಾಯಗೊಂಡಿದ್ದರು.

2016 ನವೆಂಬರ್ 20ರಂದು ಇಂದೋರ್-ಪಾಟ್ನಾ ಎಕ್ಸ್‌ಪ್ರೆಸ್ ಅಪಘಾತಕ್ಕೆ ತುತ್ತಾಗಿತ್ತು. ಈ ರೈಲು ಕಾನ್ಪುರದ ಪುಖ್ರಾಯನ್ ಬಳಿ ಹಳಿತಪ್ಪಿ ಕನಿಷ್ಠ 150 ಪ್ರಯಾಣಿಕರು ಸಾವನ್ನಪ್ಪಿದ್ದರು. 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಹರಿದ್ವಾರ ಮತ್ತು ಪುರಿ ನಡುವೆ ಚಲಿಸುವ ಕಳಿಂಗ ಉತ್ಕಲ್ ಎಕ್ಸ್‌ಪ್ರೆಸ್ 2017ರ ಆಗಸ್ಟ್ 19ರಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಖತೌಲಿ ಬಳಿ ಅಪಘಾತಕ್ಕೀಡಾಯಿತು. ರೈಲಿನ 14 ಬೋಗಿಗಳು ಹಳಿತಪ್ಪಿ 21 ಪ್ರಯಾಣಿಕರು ಮೃತಪಟ್ಟರೆ, 97 ಮಂದಿ ಗಾಯಗೊಂಡಿದ್ದರು.

ದೆಹಲಿಗೆ ಹೋಗುವ ಕೈಫಿಯತ್ ಎಕ್ಸ್‌ಪ್ರೆಸ್‌ನ ಒಂಬತ್ತು ರೈಲು ಬೋಗಿಗಳು 2017ರ ಆಗಸ್ಟ್ 23ರಂದು ಉತ್ತರ ಪ್ರದೇಶದ ಔರೈಯಾ ಬಳಿ ಹಳಿತಪ್ಪಿ ಕನಿಷ್ಠ 70 ಮಂದಿ ಗಾಯಗೊಂಡಿದ್ದರು.

ಜನವರಿ 13, 2022ರಂದು ಪಶ್ಚಿಮ ಬಂಗಾಳದ ಅಲಿಪುರ್ದೂರ್‌ನಲ್ಲಿ ಬಿಕಾನೇರ್-ಗುವಾಹಟಿ ಎಕ್ಸ್‌ಪ್ರೆಸ್‌ನ ಕನಿಷ್ಠ 12 ಬೋಗಿಗಳು ಹಳಿತಪ್ಪಿ 9 ಮಂದಿ ಸಾವನ್ನಪ್ಪಿದ್ದರು. 36 ಮಂದಿ ಗಾಯಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...