Homeಮುಖಪುಟಘರ್ಷಣೆ ನಿರೋಧಕ ಸಾಧನ ಏಕಿರಲಿಲ್ಲ?; ರೈಲ್ವೆ ಸಚಿವರ ಎದುರಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

ಘರ್ಷಣೆ ನಿರೋಧಕ ಸಾಧನ ಏಕಿರಲಿಲ್ಲ?; ರೈಲ್ವೆ ಸಚಿವರ ಎದುರಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

- Advertisement -
- Advertisement -

ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತವನ್ನು ‘ಶತಮಾನದ ಅತಿದೊಡ್ಡ’ ದುರಂತ ಎಂದು ಕರೆದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ರೈಲುಗಳಲ್ಲಿ Anti-collision device (ಘರ್ಷಣೆ ನಿರೋಧಕ ಸಾಧನ) ಏಕಿರಲಿಲ್ಲ? ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಪ್ರಶ್ನಿಸಿದ್ದಾರೆ.

ರೈಲುಗಳಲ್ಲಿ ಏಕೆ ಆಂಟಿ-ಕಲ್ಯೂಷನ್ ಡಿವೈಸ್ಇದ್ದಿದ್ದರೆ ದುರಂತವನ್ನು ತಡೆಯಬಹುದಿತ್ತು. ಆ ಸಾಧನವನ್ನು ರೈಲುಗಳಲ್ಲಿ ಏಕೆ ಅಳವಡಿಸಲಾಗಿಲ್ಲ ಎಂದು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

“ಇದು ಈ ಶತಮಾನದ ಅತಿ ದೊಡ್ಡ ರೈಲು ಅಪಘಾತವಾಗಿದ್ದು, ಇದರ ಹಿಂದೆ ಏನಾದರೂ ಕೈವಾಡವಿರಬೇಕು. ಈ ಕುರಿತು ಸೂಕ್ತ ತನಿಖೆ ನಡೆಸಿ, ಸತ್ಯ ಹೊರಬರಬೇಕು. Anti-collision device ಏಕೆ ಕೆಲಸ ಮಾಡಲಿಲ್ಲ?” ಎಂದು ವೈಷ್ಣವ್ ಅವರ ಪಕ್ಕದಲ್ಲಿ ನಿಂತು ಪ್ರಶ್ನಿಸಿದ್ದಾರೆ.

“ಕೋರಮಂಡಲ್ ಅತ್ಯುತ್ತಮ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಒಂದಾಗಿದೆ. ನಾನು ಮೂರು ಬಾರಿ ರೈಲ್ವೆ ಸಚಿವಳಾಗಿದ್ದೆ. ನಾನು ನೋಡಿದ ಪ್ರಕಾರ ಇದು 21 ನೇ ಶತಮಾನದ ಅತಿದೊಡ್ಡ ರೈಲ್ವೆ ಅಪಘಾತವಾಗಿದೆ. ನನಗೆ ತಿಳಿದ ಮಟ್ಟಿಗೆ ರೈಲಿನಲ್ಲಿ Anti-collision device ಇರಲಿಲ್ಲ. ಆ  ಸಾಧನ ರೈಲಿನಲ್ಲಿ ಇದ್ದಿದ್ದರೆ ಹೀಗಾಗುತ್ತಿರಲಿಲ್ಲ… ಸತ್ತವರನ್ನು ಮರಳಿ ತರಲು ಸಾಧ್ಯವಿಲ್ಲ ಆದರೆ ಈಗ ನಮ್ಮ ಕೆಲಸ ರಕ್ಷಣಾ ಕಾರ್ಯಾಚರಣೆ ಮತ್ತು ಸಹಜ ಸ್ಥಿತಿಯ ಮರುಸ್ಥಾಪನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ನಾನು ಇಲ್ಲಿ ರೈಲ್ವೆ ಸಚಿವರು ಮತ್ತು ಬಿಜೆಪಿ ಸಂಸದರೊಂದಿಗೆ ನಿಂತಿದ್ದೇನೆ. ಬಂಗಾಳ ಸರ್ಕಾರವು ಅಪಘಾತದಲ್ಲಿ ಮರಣ ಹೊಂದಿಗೆ ನಮ್ಮ ರಾಜ್ಯದ ಜನರಿ ಕುಟುಂಬಗಳಿಗೆ ತಲಾ ₹ 5 ಲಕ್ಷ ನೀಡಲಿದೆ ಮತ್ತು ಕೆಲಸ ಪೂರ್ಣಗೊಳ್ಳುವವರೆಗೆ ರೈಲ್ವೆ ಮತ್ತು ಒಡಿಶಾ ಸರ್ಕಾರದೊಂದಿಗೆ ಸಹಕರಿಸುತ್ತದೆ. ನಾವು ಹೆಚ್ಚಿನ ವೈದ್ಯಕೀಯ ಸಹಾಯಕ್ಕಾಗಿ ಬಂಗಾಳದಿಂದ ಒಡಿಶಾಗೆ ಎರಡು ಬಸ್ಸುಗಳು ಮತ್ತು 40 ವೈದ್ಯರನ್ನು ಸಹ ಕಳುಹಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

Anti-collision device ಎಂದರೇನು?

Anti-collision device ಎಂಬುದು ರೈಲು-ಘರ್ಷಣೆ ತಡೆಗಟ್ಟುವ ವ್ಯವಸ್ಥೆಯಾಗಿದ್ದು, ಇದನ್ನು ರಾಜಾರಾಮ್ ಬೊಜ್ಜಿ ಎಂಬುವವರು ಕಂಡು ಹಿಡಿದಿದ್ದಾರೆ. ಇದನ್ನು ರೈಲುಗಳಲ್ಲಿ ಅಳವಡಿಸಿದರೆ ಅದು ರೇಡಿಯೋ ತರಂಗಾಂತರ ಮೂಲಕ ಎದುರಿಗೆ ಬರುವ ರೈಲುಗಳ ಮಾಹಿತಿಯನ್ನು ರವಾನಿಸುತ್ತದೆ. ಅಲ್ಲದೇ ಎದುರಿಗೆ 3 ಕಿ.ಮೀ ವ್ಯಾಪ್ತಿಯಲ್ಲಿ ರೈಲು ಬರುತ್ತಿರುವಾಗಲೇ ಅದು ಸ್ವಯಂಚಾಲಿತವಾಗಿ ಬ್ರೇಕ್‌ ಅನ್ನು ಒತ್ತುತ್ತದೆ. ಅಂದರೆ ಅವು 30 ಕಿಮೀ/ಗಂ ಅಥವಾ ಪರ್ಯಾಯ ಪೂರ್ವನಿರ್ಧರಿತ ವೇಗಕ್ಕೆ ಕ್ಷೀಣಿಸಲು ಬ್ರೇಕ್ ಹಾಕುತ್ತವೆ. ಆ ಮೂಲಕ ಅಪಘಾತ ತಡೆಗಟ್ಟುವಲ್ಲಿ ಶಸಕ್ತವಾಗಿದೆ ಎಂಬ ಖ್ಯಾತಿ ಪಡೆದಿದೆ.

ಈ ರೀತಿಯ Anti-collision device ಗಳನ್ನು ರೈಲ್ವೇ ಹಳಿ ಕ್ರಾಸಿಂಗ್‌ ಗೇಟ್‌ಗಳಲ್ಲಿ ಸಹ ಅಳವಡಿಸುತ್ತಾರೆ. ರೈಲುಗಳು ಗೇಟುಗಳ 2 ಕಿ.ಮೀ ದೂರ ಇರುವಾಗಲೇ ವೇಗವನ್ನು ಕಡಿತಗೊಳಿಸಲು ಸೂಚನೆ ನೀಡುತ್ತವೆ ಎನ್ನಲಾಗಿದೆ.

ಒಂದು ಲೊಕೊ ಎಸಿಡಿಯು ಇತರ ರೈಲು ಬೌಂಡ್ ಎಸಿಡಿಗಳಿಂದ ಹಸ್ತಚಾಲಿತ ‘ಎಸ್‌ಒಎಸ್’ ಸಂದೇಶವನ್ನು ಸ್ವೀಕರಿಸಿದರೆ ಅಥವಾ ಅದರ ರೇಡಿಯಲ್ ವ್ಯಾಪ್ತಿಯ ಮೂರು ಕಿಲೋಮೀಟರ್‌ಗಳೊಳಗಿನ ಸ್ಟೇಷನ್ ಎಸಿಡಿ, ರೈಲನ್ನು ನಿಲುಗಡೆಗೆ ತರಲು ಅದು ಸ್ವಯಂಚಾಲಿತವಾಗಿ ಬ್ರೇಕ್‌ಗಳನ್ನು ಅನ್ವಯಿಸುತ್ತದೆ. ಈ ಕುರಿತ ಹೆಚ್ಚಿನ ಮಾಹಿಗೆ ಕೆಳಗಿನ ವಿಡಿಯೋ  ನೋಡಿ.

ಇದನ್ನೂ ಓದಿ; ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...