Homeಮುಖಪುಟಘರ್ಷಣೆ ನಿರೋಧಕ ಸಾಧನ ಏಕಿರಲಿಲ್ಲ?; ರೈಲ್ವೆ ಸಚಿವರ ಎದುರಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

ಘರ್ಷಣೆ ನಿರೋಧಕ ಸಾಧನ ಏಕಿರಲಿಲ್ಲ?; ರೈಲ್ವೆ ಸಚಿವರ ಎದುರಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

- Advertisement -
- Advertisement -

ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತವನ್ನು ‘ಶತಮಾನದ ಅತಿದೊಡ್ಡ’ ದುರಂತ ಎಂದು ಕರೆದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ರೈಲುಗಳಲ್ಲಿ Anti-collision device (ಘರ್ಷಣೆ ನಿರೋಧಕ ಸಾಧನ) ಏಕಿರಲಿಲ್ಲ? ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಪ್ರಶ್ನಿಸಿದ್ದಾರೆ.

ರೈಲುಗಳಲ್ಲಿ ಏಕೆ ಆಂಟಿ-ಕಲ್ಯೂಷನ್ ಡಿವೈಸ್ಇದ್ದಿದ್ದರೆ ದುರಂತವನ್ನು ತಡೆಯಬಹುದಿತ್ತು. ಆ ಸಾಧನವನ್ನು ರೈಲುಗಳಲ್ಲಿ ಏಕೆ ಅಳವಡಿಸಲಾಗಿಲ್ಲ ಎಂದು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

“ಇದು ಈ ಶತಮಾನದ ಅತಿ ದೊಡ್ಡ ರೈಲು ಅಪಘಾತವಾಗಿದ್ದು, ಇದರ ಹಿಂದೆ ಏನಾದರೂ ಕೈವಾಡವಿರಬೇಕು. ಈ ಕುರಿತು ಸೂಕ್ತ ತನಿಖೆ ನಡೆಸಿ, ಸತ್ಯ ಹೊರಬರಬೇಕು. Anti-collision device ಏಕೆ ಕೆಲಸ ಮಾಡಲಿಲ್ಲ?” ಎಂದು ವೈಷ್ಣವ್ ಅವರ ಪಕ್ಕದಲ್ಲಿ ನಿಂತು ಪ್ರಶ್ನಿಸಿದ್ದಾರೆ.

“ಕೋರಮಂಡಲ್ ಅತ್ಯುತ್ತಮ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಒಂದಾಗಿದೆ. ನಾನು ಮೂರು ಬಾರಿ ರೈಲ್ವೆ ಸಚಿವಳಾಗಿದ್ದೆ. ನಾನು ನೋಡಿದ ಪ್ರಕಾರ ಇದು 21 ನೇ ಶತಮಾನದ ಅತಿದೊಡ್ಡ ರೈಲ್ವೆ ಅಪಘಾತವಾಗಿದೆ. ನನಗೆ ತಿಳಿದ ಮಟ್ಟಿಗೆ ರೈಲಿನಲ್ಲಿ Anti-collision device ಇರಲಿಲ್ಲ. ಆ  ಸಾಧನ ರೈಲಿನಲ್ಲಿ ಇದ್ದಿದ್ದರೆ ಹೀಗಾಗುತ್ತಿರಲಿಲ್ಲ… ಸತ್ತವರನ್ನು ಮರಳಿ ತರಲು ಸಾಧ್ಯವಿಲ್ಲ ಆದರೆ ಈಗ ನಮ್ಮ ಕೆಲಸ ರಕ್ಷಣಾ ಕಾರ್ಯಾಚರಣೆ ಮತ್ತು ಸಹಜ ಸ್ಥಿತಿಯ ಮರುಸ್ಥಾಪನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ನಾನು ಇಲ್ಲಿ ರೈಲ್ವೆ ಸಚಿವರು ಮತ್ತು ಬಿಜೆಪಿ ಸಂಸದರೊಂದಿಗೆ ನಿಂತಿದ್ದೇನೆ. ಬಂಗಾಳ ಸರ್ಕಾರವು ಅಪಘಾತದಲ್ಲಿ ಮರಣ ಹೊಂದಿಗೆ ನಮ್ಮ ರಾಜ್ಯದ ಜನರಿ ಕುಟುಂಬಗಳಿಗೆ ತಲಾ ₹ 5 ಲಕ್ಷ ನೀಡಲಿದೆ ಮತ್ತು ಕೆಲಸ ಪೂರ್ಣಗೊಳ್ಳುವವರೆಗೆ ರೈಲ್ವೆ ಮತ್ತು ಒಡಿಶಾ ಸರ್ಕಾರದೊಂದಿಗೆ ಸಹಕರಿಸುತ್ತದೆ. ನಾವು ಹೆಚ್ಚಿನ ವೈದ್ಯಕೀಯ ಸಹಾಯಕ್ಕಾಗಿ ಬಂಗಾಳದಿಂದ ಒಡಿಶಾಗೆ ಎರಡು ಬಸ್ಸುಗಳು ಮತ್ತು 40 ವೈದ್ಯರನ್ನು ಸಹ ಕಳುಹಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

Anti-collision device ಎಂದರೇನು?

Anti-collision device ಎಂಬುದು ರೈಲು-ಘರ್ಷಣೆ ತಡೆಗಟ್ಟುವ ವ್ಯವಸ್ಥೆಯಾಗಿದ್ದು, ಇದನ್ನು ರಾಜಾರಾಮ್ ಬೊಜ್ಜಿ ಎಂಬುವವರು ಕಂಡು ಹಿಡಿದಿದ್ದಾರೆ. ಇದನ್ನು ರೈಲುಗಳಲ್ಲಿ ಅಳವಡಿಸಿದರೆ ಅದು ರೇಡಿಯೋ ತರಂಗಾಂತರ ಮೂಲಕ ಎದುರಿಗೆ ಬರುವ ರೈಲುಗಳ ಮಾಹಿತಿಯನ್ನು ರವಾನಿಸುತ್ತದೆ. ಅಲ್ಲದೇ ಎದುರಿಗೆ 3 ಕಿ.ಮೀ ವ್ಯಾಪ್ತಿಯಲ್ಲಿ ರೈಲು ಬರುತ್ತಿರುವಾಗಲೇ ಅದು ಸ್ವಯಂಚಾಲಿತವಾಗಿ ಬ್ರೇಕ್‌ ಅನ್ನು ಒತ್ತುತ್ತದೆ. ಅಂದರೆ ಅವು 30 ಕಿಮೀ/ಗಂ ಅಥವಾ ಪರ್ಯಾಯ ಪೂರ್ವನಿರ್ಧರಿತ ವೇಗಕ್ಕೆ ಕ್ಷೀಣಿಸಲು ಬ್ರೇಕ್ ಹಾಕುತ್ತವೆ. ಆ ಮೂಲಕ ಅಪಘಾತ ತಡೆಗಟ್ಟುವಲ್ಲಿ ಶಸಕ್ತವಾಗಿದೆ ಎಂಬ ಖ್ಯಾತಿ ಪಡೆದಿದೆ.

ಈ ರೀತಿಯ Anti-collision device ಗಳನ್ನು ರೈಲ್ವೇ ಹಳಿ ಕ್ರಾಸಿಂಗ್‌ ಗೇಟ್‌ಗಳಲ್ಲಿ ಸಹ ಅಳವಡಿಸುತ್ತಾರೆ. ರೈಲುಗಳು ಗೇಟುಗಳ 2 ಕಿ.ಮೀ ದೂರ ಇರುವಾಗಲೇ ವೇಗವನ್ನು ಕಡಿತಗೊಳಿಸಲು ಸೂಚನೆ ನೀಡುತ್ತವೆ ಎನ್ನಲಾಗಿದೆ.

ಒಂದು ಲೊಕೊ ಎಸಿಡಿಯು ಇತರ ರೈಲು ಬೌಂಡ್ ಎಸಿಡಿಗಳಿಂದ ಹಸ್ತಚಾಲಿತ ‘ಎಸ್‌ಒಎಸ್’ ಸಂದೇಶವನ್ನು ಸ್ವೀಕರಿಸಿದರೆ ಅಥವಾ ಅದರ ರೇಡಿಯಲ್ ವ್ಯಾಪ್ತಿಯ ಮೂರು ಕಿಲೋಮೀಟರ್‌ಗಳೊಳಗಿನ ಸ್ಟೇಷನ್ ಎಸಿಡಿ, ರೈಲನ್ನು ನಿಲುಗಡೆಗೆ ತರಲು ಅದು ಸ್ವಯಂಚಾಲಿತವಾಗಿ ಬ್ರೇಕ್‌ಗಳನ್ನು ಅನ್ವಯಿಸುತ್ತದೆ. ಈ ಕುರಿತ ಹೆಚ್ಚಿನ ಮಾಹಿಗೆ ಕೆಳಗಿನ ವಿಡಿಯೋ  ನೋಡಿ.

ಇದನ್ನೂ ಓದಿ; ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...