Homeದಲಿತ್ ಫೈಲ್ಸ್‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಬೋಂಧರ್ ಹವೇಲಿ ಗ್ರಾಮದಲ್ಲಿ ಜೂನ್ 1ರಂದು ಅಕ್ಷಯ್ ಭಲೇರಾವ್ ಎಂಬ ದಲಿತ ಯುವಕನ ಮೇಲೆ ದೊಣ್ಣೆ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಘಟನೆ ಸಂಬಂಧ ಅಕ್ಷಯ್ ಅವರ ಹಿರಿಯ ಸಹೋದರ ಆಕಾಶ್ ನೀಡಿರುವ ದೂರಿನ ಮೇರೆಗೆ ನಾಂದೇಡ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲಾಗಿದೆ.

ಸಹೋದರರಾದ ಅಕ್ಷಯ್ ಮತ್ತು ಆಕಾಶ್ ಅಂದು ಸಂಜೆ ಗ್ರಾಮದ ಕಿರಾಣಿ ಅಂಗಡಿಗೆ ಹೋಗಿದ್ದಾಗ, ಅಕ್ಷಯ್ ಅವರಿಗೆ ಸವರ್ಣೀಯ ಜಾತಿಯ ಗುಂಪಿನ ಜನರು ಜಾತಿ ನಿಂದನೆ ಮಾಡಲಾರಂಭಿಸಿದರು, ನಂತರ ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಂದು ಮುಖ್ಯರಸ್ತೆಯ ಮೂಲಕ ಹಾದು ಹೋಗುತ್ತಿದ್ದ ಮರಾಠಾ ಮದುಮಗನ ಮದುವೆಯ ಮೆರವಣಿಗೆಯಲ್ಲಿ ದುಷ್ಕರ್ಮಿಗಳು ಇದ್ದರು. ಡಿಜೆ ಮ್ಯೂಸಿಕ್‌ ಹಾಕಲಾಗಿತ್ತು. ಅರಚಾಡುತ್ತಾ ಕುಣಿಯುತ್ತಿದ್ದರು. ಮೆರವಣಿಗೆಯಲ್ಲಿದ್ದ ಕೆಲವು ಜನರು ಕತ್ತಿಗಳನ್ನು, ಕೋಲುಗಳನ್ನು ಝಳಪಿಸುತ್ತಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕಿರಾಣಿ ಅಂಗಡಿಯ ಬಳಿ ಅಕ್ಷಯ್ ಮತ್ತು ಆಕಾಶ್‌ ಅವರನ್ನು ಈ ಜಾತಿವಾದಿಗಳ ಗುಂಪು ಎದುರಾಗಿತ್ತು. ಅದರಲ್ಲಿದ್ದ ಒಬ್ಬಾತ ದಲಿತ ಸಹೋದರರಿಗೆ ಜಾತಿ ನಿಂದನೆ ಮಾಡಲು ಪ್ರಾರಂಭಿಸಿದನು. “ಇವರಿಬ್ಬರನ್ನು ಕೊಲ್ಲಬೇಕು, ಅಂಬೇಡ್ಕರ್‌ ಜಯಂತಿ ಆಚರಿಸಲು ಧೈರ್ಯ ಮಾಡ್ತೀರಾ?” ಎಂದನು.

ಇದಾದ ನಂತರ ದುಷ್ಕರ್ಮಿಗಳ ಗುಂಪು ಅಕ್ಷಯ್‌ ಮೇಲೆ ಮುಗಿ ಬಿದ್ದು ಒದೆಯಲು ಆರಂಭಿಸಿತು. ಕೋಲುಗಳಿಂದ ಥಳಿಸಿತು. ಒಬ್ಬಾತ ಪದೇ ಪದೇ ಕತ್ತಿಯಿಂದ ಹಲ್ಲೆ ಮಾಡಲಾರಂಭಿಸಿದ. ಇತರರು ಅಕ್ಷಯ್ ಅವರ ಕೈ ಮತ್ತು ಕಾಲುಗಳನ್ನು ಬಿಗಿಯಾಗಿ ಹಿಡಿದರು. ಇದರಿಂದಾಗಿ ಅಕ್ಷಯ್‌ ತಕ್ಷಣ ಸಾವನ್ನಪ್ಪಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಸ್ಥಳದಲ್ಲಿದ್ದ ಆಕಾಶ್ ಹಾಗೂ ಅವರ ತಾಯಿಗೂ ಥಳಿಸಿದ್ದಾರೆ. ಅವರಿಗೂ ಗಾಯಗಳಾಗಿವೆ. ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ಯ ಸೆಕ್ಷನ್‌ 3(1)(ಆರ್‌), 3(1)(ಎಸ್‌), 3(2)(ವಿಎ), ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 143, 147, 148, 149, 302, 307, 324, 323, 294 ಮತ್ತು ಶಸ್ತ್ರಾಸ್ತ್ರ ಕಾಯಿದೆಯ ಸೆಕ್ಷನ್‌  4, 25, 27ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತೋಷ್ ತಿಡ್ಕೆ, ದತ್ತ ತಿಡ್ಕೆ, ಕೃಷ್ಣ ತಿಡ್ಕೆ, ನೀಲಕಂಠ ತಿಡ್ಕೆ, ನಾರಾಯಣ ತಿಡ್ಕೆ, ಶಿವಾಜಿ ತಿಡ್ಕೆ, ಮಹಾದು ತಿಡ್ಕೆ, ಬಾಬುರಾವ್ ತಿಡ್ಕೆ ಮತ್ತು ಬಾಲಾಜಿ ಮುಂಗಲ್ ಅವರನ್ನು ಆರೋಪಿಗಳೆಂದು ಎಫ್ಐಆರ್‌ನಲ್ಲಿ ಹೆಸರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿರಿ: ಗುಜರಾತ್: ಒಳ್ಳೆಯ ಬಟ್ಟೆ, ಕೂಲಿಂಗ್ ಕ್ಲಾಸ್ ಧರಿಸಿದ್ದಕ್ಕೆ ದಲಿತ ವ್ಯಕ್ತಿಯ ಮೇಲೆ ಹಲ್ಲೆ

ಯುವ ಪ್ಯಾಂಥರ್‌ನ ಅಧ್ಯಕ್ಷ ರಾಹುಲ್ ಪ್ರಧಾನ್ ಪ್ರತಿಕ್ರಿಯಿಸಿ, “ಬೊಂಧರ್ ಗ್ರಾಮವು ಬೌದ್ಧ ನಿವಾಸಿಗಳ ವಿರುದ್ಧದ ಅಪರಾಧಗಳಿಗೆ ಕುಖ್ಯಾತವಾಗಿದೆ. ಪ್ರಬಲ ಮರಾಠ ಸಮುದಾಯದ ವಿರೋಧದಿಂದಾಗಿ ಕಳೆದ 40-45 ವರ್ಷಗಳಿಂದ ಗ್ರಾಮದಲ್ಲಿ ಬೌದ್ಧ ಸಮುದಾಯದವರು ಅಂಬೇಡ್ಕರ್ ಜಯಂತಿಯಂದು ಮೆರವಣಿಗೆ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ‘ದಿ ಕ್ವಿಂಟ್‌’ ಜಾಲತಾಣಕ್ಕೆ ತಿಳಿಸಿದ್ದಾರೆ.

ಬೊಂಧರ್ ಹವೇಲಿ ಗ್ರಾಮದಲ್ಲಿ ಶೇ.30ಕ್ಕಿಂತ ಹೆಚ್ಚು ದಲಿತರಿದ್ದಾರೆ.

ದಾಳಿಯ ಬಗ್ಗೆ ತಿಳಿದ ತಕ್ಷಣ ಗ್ರಾಮಕ್ಕೆ ಆಗಮಿಸಿದ ಪ್ರಧಾನ್, “ಈ ವರ್ಷ ಬೌದ್ಧರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಿದ ಕಾರಣಕ್ಕಾಗಿ ಮರಾಠರು ಆಕ್ರೋಶಗೊಂಡಿದ್ದಾರೆ. ಅಕ್ಷಯ್ ಅವರು ಅಂಬೇಡ್ಕರ್‌ ಜಯಂತಿ ಆಯೋಜನೆಯಲ್ಲಿ ಮುಂಚೂಣಿಯಲ್ಲಿದ್ದರು. ಅದಕ್ಕಾಗಿಯೇ ಅವರನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...