Homeಮುಖಪುಟದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು:...

ದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು: ವರದಿ

- Advertisement -
- Advertisement -

ಶುಕ್ರವಾರ ರಾತ್ರಿ ಘಟಿಸಿದ ಅತ್ಯಂತ ಭೀಕರ ರೈಲು ದುರಂತದಲ್ಲಿ ಕನಿಷ್ಠ 288 ಪ್ರಯಾಣಿಕರು ಸಾವನ್ನಪ್ಪಿ, 900ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಇಂತಹ ಘೋರ ದುರಂತ ಘಟಿಸುವ ಸೂಚನೆಯನ್ನು ಕಳೆದ ಆರು ತಿಂಗಳಲ್ಲಿ ಎರಡು ಬಾರಿ ನೀಡಲಾಗಿತ್ತು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ರೈಲು ಹಳಿ ತಪ್ಪಲು ಕಾರಣವಾಗುವ ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷಗಳ ಬಗ್ಗೆ ಕಳೆದ ಆರು ತಿಂಗಳಲ್ಲಿ ಎರಡು ಬಾರಿ ರೈಲ್ವೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿತ್ತು ಎಂಬ ಅಂಶ ಈಗ ಬಯಲಾಗಿದೆ.

ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಕಳೆದ ಡಿಸೆಂಬರ್‌ನಲ್ಲಿ ವರದಿಯನ್ನು ಮಂಡಿಸಿದ್ದರು. ರೈಲುಗಳು ತಪ್ಪಾದ ಹಳಿಯಲ್ಲಿ ಚಲಿಸಲು ಕಾರಣವಾಗುವ 24 ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಏಪ್ರಿಲ್ 2017ರಿಂದ ಮಾರ್ಚ್ 2021ರ ನಡುವೆ ಎಷ್ಟು ರೈಲುಗಳು ತಪ್ಪಾದ ಹಳಿಯಲ್ಲಿ ಚಲಿಸಿವೆ, ಅದಕ್ಕೆ ಕಾರಣಗಳೇನು ಎಂಬುದನ್ನು “ಭಾರತೀಯ ರೈಲ್ವೇಯಲ್ಲಿನ ಹಳಿತಪ್ಪುವಿಕೆಗಳು” ವರದಿ ಪಟ್ಟಿ ಮಾಡಿದೆ. ಹಳಿಗಳ ಅಸಮರ್ಪಕ ನಿರ್ವಹಣೆಯೇ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ವರದಿ ಎಚ್ಚರಿಸಿದೆ.

ಫೆಬ್ರವರಿಯಲ್ಲಿ ನಡೆದ ಪ್ರತ್ಯೇಕ ಬೆಳವಣಿಗೆಯೊಂದಕ್ಕೆ ಸಂಬಂಧಿಸಿದಂತೆ ನೈಋತ್ಯ ರೈಲ್ವೆ ವಲಯದ ಪ್ರಧಾನ ಮುಖ್ಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕರು ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ‘ಗಂಭೀರ ನ್ಯೂನತೆ’ಗಳ ಬಗ್ಗೆ ಅಧಿಕಾರಿಗಳಿಗೆ ಪತ್ರ ಬರೆದಿದ್ದರು ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.

ಫೆಬ್ರುವರಿಯಲ್ಲಿ ಭೀಕರ ರೈಲು ಅಪಘಾತ ಕೂದಲೆಳೆಯಲ್ಲಿ ತಪ್ಪಿ ಹೋಗಿತ್ತು. ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆಯುವ ಸನ್ನಿವೇಶವೇ ನಿರ್ಮಾಣವಾಗಿತ್ತು. “ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷಗಳನ್ನು ಸರಿಪಡಿಸದಿದ್ದರೆ, ಇಂತಹ ಘಟನೆಗಳು ಮರು ಕಳಿಸಬಹುದು ಮತ್ತು ಗಂಭೀರ ಅಪಘಾತಗಳಿಗೆ ಕಾರಣವಾಗಬಹುದು” ಎಂದು ಅಧಿಕಾರಿ ಎಚ್ಚರಿಸಿದ್ದರು.

ಶುಕ್ರವಾರ ರಾತ್ರಿ 7 ಗಂಟೆ ಸುಮಾರಿಗೆ ಒಡಿಶಾದ ಬಾಲಸೋರ್‌ನಲ್ಲಿ ಈಗ ಅಪಘಾತ ಸಂಭವಿಸಿದ್ದು, ತಪ್ಪಾದ ಹಳಿಯಲ್ಲಿ ಬಂದ ಕೋರ ಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ ರೈಲು ಕೂಡ ಹಳಿ ತಪ್ಪಿ, ಕೋರಮಂಡಲ್ ಎಕ್ಸ್ ಪ್ರೆಸ್ ಮಾರ್ಗದಲ್ಲಿ ಬಂದು ಡಿಕ್ಕಿ ಹೊಡೆದಿವೆ. ಮೂರು ರೈಲುಗಳು ಅಪಘಾತದೊಳಗೆ ಸಿಲುಕಿವೆ.

ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ವೈಫಲ್ಯದಿಂದ ಅಪಘಾತ ಸಂಭವಿಸಿರಬಹುದು ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ. ಮೇಲ್ಮುಖ ಮಾರ್ಗದಲ್ಲಿ ಪ್ರವೇಶಿಸುವಂತೆ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಆರಂಭದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಆದರೆ ನಂತರ ಸಿಗ್ನಲ್ ತೆಗೆಯಲಾಯಿತು. ಬಳಿಕ ಎಕ್ಸ್‌ಪ್ರೆಸ್‌ ಲೂಪ್ ಲೈನ್‌ಗೆ ಪ್ರವೇಶಿಸಿತು. ಅಲ್ಲಿ ನಿಂತಿದ್ದ ಗೂಡ್ಸ್‌ ರೈಲು ಗಾಡಿಗೆ ಡಿಕ್ಕಿ ಹೊಡೆಯಿತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸಿಗ್ನಲಿಂಗ್‌ನಲ್ಲಿನ ದೋಷಗಳ ಬಗ್ಗೆ ಪತ್ರ

ಯಶವಂತಪುರ-ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲು ಗಾಡಿಯು ಗೂಡ್ಸ್ ರೈಲಿಗೆ ಡಿಕ್ಕಿಯಾಗುವ ಅಪಾಯದಿಂದ ಕೂದಲೆಳೆಯಲ್ಲಿ ಪಾರಾದ ನಂತರ ನೈಋತ್ಯ ರೈಲ್ವೆ ವಲಯದ ಪ್ರಧಾನ ಮುಖ್ಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕರು ಫೆಬ್ರವರಿ 9 ರಂದು ಉನ್ನತ  ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದು ‘ದಿ ಪ್ರಿಂಟ್’ ವರದಿ ತಿಳಿಸಿದೆ.

“ಎಸ್‌ಎಂಎಸ್‌ (ಸಿಗ್ನಲ್ ನಿರ್ವಹಣಾ ವ್ಯವಸ್ಥೆ)ನಲ್ಲಿ ಗಂಭೀರ ದೋಷಗಳಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮೇಲಿನ ಘಟನೆಯಲ್ಲಿ ಏನಾಗಿತ್ತೆಂದರೆ, ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ಗೆ ಕರ್ನಾಟಕದ ಹೊಸದುರ್ಗ ರಸ್ತೆ ನಿಲ್ದಾಣದ ಬಳಿ ಡೌನ್‌ಲೈನ್‌ಗೆ ಪ್ರವೇಶಿಸುವಂತೆ ಸಿಗ್ನಲಿಂಗ್ ವ್ಯವಸ್ಥೆಯು ತಪ್ಪಾಗಿ ಅನುಮತಿ ನೀಡಿತ್ತು. ಗೂಡ್ಸ್ ರೈಲಿಗೆ ಮುಖಾಮುಖಿ ಡಿಕ್ಕಿಯಾಗುವ ಅಪಾಯವು ‘ಲೋಕೋ ಪೈಲಟ್‌ನ ಎಚ್ಚರಿಕೆ’ಯಿಂದಾಗಿ ತಪ್ಪಿತ್ತು. ಮಾರ್ಗವನ್ನು ಪ್ರವೇಶಿಸುವ ಮೊದಲೇ ಎಚ್ಚೆತ್ತುಕೊಂಡು ಅಪಾಯವನ್ನು ತಡೆದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹಳಿತಪ್ಪಿದ ಬಗ್ಗೆ ಸಿಎಜಿ ವರದಿ

ಏಪ್ರಿಲ್ 2017 ಮತ್ತು ಮಾರ್ಚ್ 2021ರ ನಡುವೆ ಹಳಿತಪ್ಪುವಿಕೆಯಿಂದ ಸಂಭವಿಸಿದ ಅಪಘಾತಗಳ 1,129 ವಿಚಾರಣೆಗಳನ್ನು ಸಿಎಜಿ (ಕಂಟ್ರೋಲರ್ ಮತ್ತು ಆಡಿಟರ್ ಜನರಲ್) ವರದಿ ಮಾಡಿದೆ.

ಸಿಎಜಿ ವರದಿಯು ಹಲವಾರು ಅಂಶಗಳತ್ತ ಬೊಟ್ಟು ಮಾಡಿದೆ. ರಾಷ್ಟ್ರೀಯ ರೈಲು ಸಂರಕ್ಷಣಾ ಕೋಶ್‌ನ ಆದ್ಯತಾ-1ರ ಕಾಮಗಾರಿ ವೆಚ್ಚದಲ್ಲಿ ಕಡಿತವಾಗಿರುವುದನ್ನು ವರದಿ ಉಲ್ಲೇಖಿಸಿದೆ. ಈ ವೆಚ್ಚವು 2017-18 ರಲ್ಲಿ 81.55% ಇತ್ತು. 2019-20ರಲ್ಲಿ 73.76%ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿರಿ: ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ರೈಲ್ವೇ ಸಚಿವಾಲಯವು 2017-18 ರಿಂದ ಐದು ವರ್ಷಗಳ ಅವಧಿಯಲ್ಲಿ ‘ರಾಷ್ಟ್ರೀಯ ರೈಲು ಸಂರಕ್ಷಾ ಕೋಶ್ – ರೈಲು ಸುರಕ್ಷತೆ’ಗಾಗಿ ಮೀಸಲು ನಿಧಿಗೆ 1 ಲಕ್ಷ ಕೋಟಿ ರೂ.ಗಳ ಹಂಚಿಕೆಯನ್ನು ಘೋಷಿಸಿತ್ತು.

ಟ್ರ್ಯಾಕ್ ನವೀಕರಣ ನಿಧಿಯು 2018-19ರಲ್ಲಿ 9,607.65 ಕೋಟಿ ರೂ. ಇತ್ತು. 2019-20ರಲ್ಲಿ 7,417 ಕೋಟಿ ರೂ.ಗಳಿಗೆ ಆ ನಿಧಿಯನ್ನು ಇಳಿಸಲಾಗಿದೆ ಎಂಬುದನ್ನು ಸಿಎಜಿ ವರದಿ ಉಲ್ಲೇಖಿಸಿದೆ. ನಿಗದಿಪಡಿಸಿದ ಹಣವೂ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿಲ್ಲ ಎಂದೂ ಆಕ್ಷೇಪ ವ್ಯಕ್ತಪಡಿಸಿದೆ.

ಹಳಿ ತಪ್ಪಿದ ಘಟನೆಗಳ ಶೇ. 63ರಷ್ಟು ಪ್ರಕರಣಗಳಲ್ಲಿ, ತನಿಖಾ ವರದಿಗಳನ್ನು ನಿಗದಿತ ಸಮಯದೊಳಗೆ ಸಲ್ಲಿಸಲಾಗಿಲ್ಲ. ಶೇ.49ರಷ್ಟು ಪ್ರಕರಣಗಳಲ್ಲಿ ವರದಿಯನ್ನು ಸ್ವೀಕರಿಸುವಲ್ಲಿ ಅಧಿಕಾರಿಗಳಿಂದ ವಿಳಂಬವಾಗಿದೆ ಎಂಬುದನ್ನು ಸಿಎಜಿ ವರದಿ ಬಹಿರಂಗಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...