Homeಮುಖಪುಟದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು:...

ದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು: ವರದಿ

- Advertisement -
- Advertisement -

ಶುಕ್ರವಾರ ರಾತ್ರಿ ಘಟಿಸಿದ ಅತ್ಯಂತ ಭೀಕರ ರೈಲು ದುರಂತದಲ್ಲಿ ಕನಿಷ್ಠ 288 ಪ್ರಯಾಣಿಕರು ಸಾವನ್ನಪ್ಪಿ, 900ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಇಂತಹ ಘೋರ ದುರಂತ ಘಟಿಸುವ ಸೂಚನೆಯನ್ನು ಕಳೆದ ಆರು ತಿಂಗಳಲ್ಲಿ ಎರಡು ಬಾರಿ ನೀಡಲಾಗಿತ್ತು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ರೈಲು ಹಳಿ ತಪ್ಪಲು ಕಾರಣವಾಗುವ ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷಗಳ ಬಗ್ಗೆ ಕಳೆದ ಆರು ತಿಂಗಳಲ್ಲಿ ಎರಡು ಬಾರಿ ರೈಲ್ವೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿತ್ತು ಎಂಬ ಅಂಶ ಈಗ ಬಯಲಾಗಿದೆ.

ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಕಳೆದ ಡಿಸೆಂಬರ್‌ನಲ್ಲಿ ವರದಿಯನ್ನು ಮಂಡಿಸಿದ್ದರು. ರೈಲುಗಳು ತಪ್ಪಾದ ಹಳಿಯಲ್ಲಿ ಚಲಿಸಲು ಕಾರಣವಾಗುವ 24 ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಏಪ್ರಿಲ್ 2017ರಿಂದ ಮಾರ್ಚ್ 2021ರ ನಡುವೆ ಎಷ್ಟು ರೈಲುಗಳು ತಪ್ಪಾದ ಹಳಿಯಲ್ಲಿ ಚಲಿಸಿವೆ, ಅದಕ್ಕೆ ಕಾರಣಗಳೇನು ಎಂಬುದನ್ನು “ಭಾರತೀಯ ರೈಲ್ವೇಯಲ್ಲಿನ ಹಳಿತಪ್ಪುವಿಕೆಗಳು” ವರದಿ ಪಟ್ಟಿ ಮಾಡಿದೆ. ಹಳಿಗಳ ಅಸಮರ್ಪಕ ನಿರ್ವಹಣೆಯೇ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ವರದಿ ಎಚ್ಚರಿಸಿದೆ.

ಫೆಬ್ರವರಿಯಲ್ಲಿ ನಡೆದ ಪ್ರತ್ಯೇಕ ಬೆಳವಣಿಗೆಯೊಂದಕ್ಕೆ ಸಂಬಂಧಿಸಿದಂತೆ ನೈಋತ್ಯ ರೈಲ್ವೆ ವಲಯದ ಪ್ರಧಾನ ಮುಖ್ಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕರು ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ‘ಗಂಭೀರ ನ್ಯೂನತೆ’ಗಳ ಬಗ್ಗೆ ಅಧಿಕಾರಿಗಳಿಗೆ ಪತ್ರ ಬರೆದಿದ್ದರು ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.

ಫೆಬ್ರುವರಿಯಲ್ಲಿ ಭೀಕರ ರೈಲು ಅಪಘಾತ ಕೂದಲೆಳೆಯಲ್ಲಿ ತಪ್ಪಿ ಹೋಗಿತ್ತು. ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆಯುವ ಸನ್ನಿವೇಶವೇ ನಿರ್ಮಾಣವಾಗಿತ್ತು. “ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ದೋಷಗಳನ್ನು ಸರಿಪಡಿಸದಿದ್ದರೆ, ಇಂತಹ ಘಟನೆಗಳು ಮರು ಕಳಿಸಬಹುದು ಮತ್ತು ಗಂಭೀರ ಅಪಘಾತಗಳಿಗೆ ಕಾರಣವಾಗಬಹುದು” ಎಂದು ಅಧಿಕಾರಿ ಎಚ್ಚರಿಸಿದ್ದರು.

ಶುಕ್ರವಾರ ರಾತ್ರಿ 7 ಗಂಟೆ ಸುಮಾರಿಗೆ ಒಡಿಶಾದ ಬಾಲಸೋರ್‌ನಲ್ಲಿ ಈಗ ಅಪಘಾತ ಸಂಭವಿಸಿದ್ದು, ತಪ್ಪಾದ ಹಳಿಯಲ್ಲಿ ಬಂದ ಕೋರ ಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ ರೈಲು ಕೂಡ ಹಳಿ ತಪ್ಪಿ, ಕೋರಮಂಡಲ್ ಎಕ್ಸ್ ಪ್ರೆಸ್ ಮಾರ್ಗದಲ್ಲಿ ಬಂದು ಡಿಕ್ಕಿ ಹೊಡೆದಿವೆ. ಮೂರು ರೈಲುಗಳು ಅಪಘಾತದೊಳಗೆ ಸಿಲುಕಿವೆ.

ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ವೈಫಲ್ಯದಿಂದ ಅಪಘಾತ ಸಂಭವಿಸಿರಬಹುದು ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ. ಮೇಲ್ಮುಖ ಮಾರ್ಗದಲ್ಲಿ ಪ್ರವೇಶಿಸುವಂತೆ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಆರಂಭದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಆದರೆ ನಂತರ ಸಿಗ್ನಲ್ ತೆಗೆಯಲಾಯಿತು. ಬಳಿಕ ಎಕ್ಸ್‌ಪ್ರೆಸ್‌ ಲೂಪ್ ಲೈನ್‌ಗೆ ಪ್ರವೇಶಿಸಿತು. ಅಲ್ಲಿ ನಿಂತಿದ್ದ ಗೂಡ್ಸ್‌ ರೈಲು ಗಾಡಿಗೆ ಡಿಕ್ಕಿ ಹೊಡೆಯಿತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸಿಗ್ನಲಿಂಗ್‌ನಲ್ಲಿನ ದೋಷಗಳ ಬಗ್ಗೆ ಪತ್ರ

ಯಶವಂತಪುರ-ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲು ಗಾಡಿಯು ಗೂಡ್ಸ್ ರೈಲಿಗೆ ಡಿಕ್ಕಿಯಾಗುವ ಅಪಾಯದಿಂದ ಕೂದಲೆಳೆಯಲ್ಲಿ ಪಾರಾದ ನಂತರ ನೈಋತ್ಯ ರೈಲ್ವೆ ವಲಯದ ಪ್ರಧಾನ ಮುಖ್ಯ ಕಾರ್ಯ ನಿರ್ವಾಹಕ ವ್ಯವಸ್ಥಾಪಕರು ಫೆಬ್ರವರಿ 9 ರಂದು ಉನ್ನತ  ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದು ‘ದಿ ಪ್ರಿಂಟ್’ ವರದಿ ತಿಳಿಸಿದೆ.

“ಎಸ್‌ಎಂಎಸ್‌ (ಸಿಗ್ನಲ್ ನಿರ್ವಹಣಾ ವ್ಯವಸ್ಥೆ)ನಲ್ಲಿ ಗಂಭೀರ ದೋಷಗಳಿವೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮೇಲಿನ ಘಟನೆಯಲ್ಲಿ ಏನಾಗಿತ್ತೆಂದರೆ, ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ಗೆ ಕರ್ನಾಟಕದ ಹೊಸದುರ್ಗ ರಸ್ತೆ ನಿಲ್ದಾಣದ ಬಳಿ ಡೌನ್‌ಲೈನ್‌ಗೆ ಪ್ರವೇಶಿಸುವಂತೆ ಸಿಗ್ನಲಿಂಗ್ ವ್ಯವಸ್ಥೆಯು ತಪ್ಪಾಗಿ ಅನುಮತಿ ನೀಡಿತ್ತು. ಗೂಡ್ಸ್ ರೈಲಿಗೆ ಮುಖಾಮುಖಿ ಡಿಕ್ಕಿಯಾಗುವ ಅಪಾಯವು ‘ಲೋಕೋ ಪೈಲಟ್‌ನ ಎಚ್ಚರಿಕೆ’ಯಿಂದಾಗಿ ತಪ್ಪಿತ್ತು. ಮಾರ್ಗವನ್ನು ಪ್ರವೇಶಿಸುವ ಮೊದಲೇ ಎಚ್ಚೆತ್ತುಕೊಂಡು ಅಪಾಯವನ್ನು ತಡೆದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹಳಿತಪ್ಪಿದ ಬಗ್ಗೆ ಸಿಎಜಿ ವರದಿ

ಏಪ್ರಿಲ್ 2017 ಮತ್ತು ಮಾರ್ಚ್ 2021ರ ನಡುವೆ ಹಳಿತಪ್ಪುವಿಕೆಯಿಂದ ಸಂಭವಿಸಿದ ಅಪಘಾತಗಳ 1,129 ವಿಚಾರಣೆಗಳನ್ನು ಸಿಎಜಿ (ಕಂಟ್ರೋಲರ್ ಮತ್ತು ಆಡಿಟರ್ ಜನರಲ್) ವರದಿ ಮಾಡಿದೆ.

ಸಿಎಜಿ ವರದಿಯು ಹಲವಾರು ಅಂಶಗಳತ್ತ ಬೊಟ್ಟು ಮಾಡಿದೆ. ರಾಷ್ಟ್ರೀಯ ರೈಲು ಸಂರಕ್ಷಣಾ ಕೋಶ್‌ನ ಆದ್ಯತಾ-1ರ ಕಾಮಗಾರಿ ವೆಚ್ಚದಲ್ಲಿ ಕಡಿತವಾಗಿರುವುದನ್ನು ವರದಿ ಉಲ್ಲೇಖಿಸಿದೆ. ಈ ವೆಚ್ಚವು 2017-18 ರಲ್ಲಿ 81.55% ಇತ್ತು. 2019-20ರಲ್ಲಿ 73.76%ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿರಿ: ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ರೈಲ್ವೇ ಸಚಿವಾಲಯವು 2017-18 ರಿಂದ ಐದು ವರ್ಷಗಳ ಅವಧಿಯಲ್ಲಿ ‘ರಾಷ್ಟ್ರೀಯ ರೈಲು ಸಂರಕ್ಷಾ ಕೋಶ್ – ರೈಲು ಸುರಕ್ಷತೆ’ಗಾಗಿ ಮೀಸಲು ನಿಧಿಗೆ 1 ಲಕ್ಷ ಕೋಟಿ ರೂ.ಗಳ ಹಂಚಿಕೆಯನ್ನು ಘೋಷಿಸಿತ್ತು.

ಟ್ರ್ಯಾಕ್ ನವೀಕರಣ ನಿಧಿಯು 2018-19ರಲ್ಲಿ 9,607.65 ಕೋಟಿ ರೂ. ಇತ್ತು. 2019-20ರಲ್ಲಿ 7,417 ಕೋಟಿ ರೂ.ಗಳಿಗೆ ಆ ನಿಧಿಯನ್ನು ಇಳಿಸಲಾಗಿದೆ ಎಂಬುದನ್ನು ಸಿಎಜಿ ವರದಿ ಉಲ್ಲೇಖಿಸಿದೆ. ನಿಗದಿಪಡಿಸಿದ ಹಣವೂ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿಲ್ಲ ಎಂದೂ ಆಕ್ಷೇಪ ವ್ಯಕ್ತಪಡಿಸಿದೆ.

ಹಳಿ ತಪ್ಪಿದ ಘಟನೆಗಳ ಶೇ. 63ರಷ್ಟು ಪ್ರಕರಣಗಳಲ್ಲಿ, ತನಿಖಾ ವರದಿಗಳನ್ನು ನಿಗದಿತ ಸಮಯದೊಳಗೆ ಸಲ್ಲಿಸಲಾಗಿಲ್ಲ. ಶೇ.49ರಷ್ಟು ಪ್ರಕರಣಗಳಲ್ಲಿ ವರದಿಯನ್ನು ಸ್ವೀಕರಿಸುವಲ್ಲಿ ಅಧಿಕಾರಿಗಳಿಂದ ವಿಳಂಬವಾಗಿದೆ ಎಂಬುದನ್ನು ಸಿಎಜಿ ವರದಿ ಬಹಿರಂಗಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...