Homeಕರ್ನಾಟಕಮಂಡ್ಯ: ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ನಿಧನ; ವಾರದಲ್ಲಿ 3ನೇ ಪ್ರಕರಣ

ಮಂಡ್ಯ: ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ನಿಧನ; ವಾರದಲ್ಲಿ 3ನೇ ಪ್ರಕರಣ

- Advertisement -
- Advertisement -

ಲಾರಿಗೆ ಭೀಕರವಾಗಿ ಕಾರು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಎಂ ಸ್ಯಾಂಡ್‌ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿಸಿದ್ದಾರೆ. ನಾಗಮಂಗಲ ತಾಲ್ಲೂಕು ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ತಿರುಮಲಾಪುರ ಗ್ರಾಮದ ಬಳಿ ಭಾನುವಾರ ನಸುಕಿನ ವೇಳೆ ಅಪಘಾತ ಸಂಭವಿಸಿದೆ.

ಮೃತರಲ್ಲಿ ಮಾಗಡಿ ತಾಲ್ಲೂಕು ಲಕ್ಕೇನಹಳ್ಳಿ ಗ್ರಾಮದ ಹೇಮಂತ್‌ (24), ಶರತ್‌ (28) ಗುರುತು ಪತ್ತೆಯಾಗಿದೆ, ಇನ್ನಿಬ್ಬರ ಗುರುತು ಪತ್ತೆಯಾಗಿಲ್ಲ. ಲಾರಿ ಎಂ ಸ್ಯಾಂಡ್‌ ತುಂಬಿಕೊಂಡು ಚನ್ನರಾಯಪಟ್ಟಣಕ್ಕೆ ತೆರಳುತ್ತಿತ್ತು. ಹಿಂದಿನಿಂದ ವೇಗವಾಗಿ ಬಂದ ಶೆವರ್‌ಲೆಟ್‌ ಸ್ಪಾರ್ಕ್‌ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹಗಳನ್ನು ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿಡಲಾಗಿದೆ. ಬೆಳ್ಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಕಳೆದೊಂದು ವಾರದಲ್ಲಿ ಇಂತಹದ್ದೇ ಇನ್ನೆರಡು ಬೀಕರ ಅಪಘಾತಗಳು ವರದಿಯಾಗಿದ್ದರು. ಕೊಳ್ಳೇಗಾಲ ಮತ್ತು ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿನ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿ ಹನ್ನೊಂದು ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು.

ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿತ್ತು. ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿತ್ತು.

ಇದನ್ನೂ ಓದಿರಿ: ದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು: ವರದಿ

ಅಪಘಾತದ ಭೀಕರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದವರು ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದರು.

ಕಾರಿನಲ್ಲಿ ಇಬ್ಬರು ಮಕ್ಕಳು ಹಾಗೂ ಮಹಿಳೆಯರು ಸೇರಿ 13 ಮಂದಿ ಇದ್ದರು. ಖಾಸಗಿ ಬಸ್‌ ಕೊಳ್ಳೇಗಾಲದ ಕಡೆಗೆ ಹೋಗುತ್ತಿತ್ತು.

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಕಲಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಭಾನುವಾರ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಆರು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಸೊಲ್ಲಾಪುರದ ಜಯಶ್ರೀ ಕಾಂಬಳೆ (25), ಚಾಲಕ ರಾಘವೇಂದ್ರ ಕಾಂಬಳೆ (28), ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ನಂದ್ರಾಳ ಗ್ರಾಮದ ಖಾಜಪ್ಪ ಬನಸೋಡೆ (36), ಶಿರನಾಳದ ಅಕ್ಷಯ ಶಿವಶರಣ (22), ರಾಕಿ (4) ಮತ್ತು ರಶ್ಮಿಕಾ (2) ಮೃತಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...