Homeಕರ್ನಾಟಕ‘ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿ’: ಸಚಿವರ ಹೇಳಿಕೆ ಸ್ವಾಗತಿಸಿದ ರೈತರು ಏನಂತಾರೆ?

‘ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿ’: ಸಚಿವರ ಹೇಳಿಕೆ ಸ್ವಾಗತಿಸಿದ ರೈತರು ಏನಂತಾರೆ?

ಗೋ ಹತ್ಯೆ ನಿಷೇಧ ಕಾಯ್ದೆಯಲ್ಲಿ ತಿದ್ದುಪಡಿಗಳನ್ನು ತರಬೇಕಾದ ಅಗತ್ಯತೆಗಳ ಬಗ್ಗೆ ರೈತರು ತಮ್ಮ ಅಭಿಪ್ರಾಯಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ

- Advertisement -
- Advertisement -

“ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ರಾಜ್ಯ ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ್ ಅವರು ಹೇಳಿರುವುದನ್ನು ರೈತರು ಸ್ವಾಗತಿಸಿದ್ದಾರೆ.

“ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಕೇವಲ ಕೋಮು ಕೇಂದ್ರಿತವಾಗಿ ನೋಡಲಾಗುತ್ತಿತ್ತು. ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿತ್ತು. ಆದರೆ ಇದರಿಂದ ಇಡೀ ರೈತಾಪಿ ಸಮುದಾಯ ತೊಂದರೆಗೆ ಸಿಲುಕಿರುವುದು ಚರ್ಚೆಯಾಗಿರಲಿಲ್ಲ. ಈ ನಿಟ್ಟಿನಲ್ಲಿ ಸಚಿವರು ಇಟ್ಟಿರುವ ಹೆಜ್ಜೆ ಸ್ವಾಗತಾರ್ಹ” ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸಚಿವ ಕೆ.ವೆಂಕಟೇಶ್, “ಈಗ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕೋಣ ಮತ್ತು ಎಮ್ಮೆಗಳ ವಧೆಗೆ ಅವಕಾಶವಿದೆ. ಆದರೆ ಹಸುವನ್ನು ಕಡಿಯಲು ಅವಕಾಶ ಇಲ್ಲ. ಹಸುವನ್ನು ಯಾಕೆ ಕಡಿಯಬಾರದು? ಈ ಕಾಯ್ದೆಯಿಂದಾಗಿ ರೈತರಿಗೆ ಬಹಳ ತೊಂದರೆ ಆಗುತ್ತಿದೆ. ಸ್ವತಃ ನಾನು ಹಸುವನ್ನು ಸಾಕಿದ್ದೇನೆ. ಒಂದು ಹಸು ಸತ್ತುಹೋದಾಗ ಅದನ್ನು ಮಣ್ಣು ಮಾಡಲು ಕಷ್ಟಪಡಬೇಕಾಯಿತು. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ಕ್ರಮ ಜರುಗಿಸುತ್ತೇವೆ” ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, “ಗೋಹತ್ಯೆ ನಿಷೇಧ ಹಿಂಪಡೆಯುವ ಮುನ್ನ ಕಾಂಗ್ರೆಸ್ಸಿನವರು ಗೋಹತ್ಯೆಯ ಬಗ್ಗೆ ಗಾಂಧೀಜಿಯವರ ನಿಲುವು ಏನಿತ್ತು ಎಂಬುದನ್ನು ತಿಳಿಯಲಿ” ಎಂದಿದ್ದಾರೆ.

ರಾಜಕೀಯ ಹಗ್ಗಜಗ್ಗಾಟ ಏನೇ ಇರಲಿ, ರಾಜ್ಯದ ರೈತಾಪಿ ಸಮುದಾಯ ಸಚಿವರ ಹೇಳಿಕೆಯನ್ನು ಮುಕ್ತವಾಗಿ ನೋಡುತ್ತಿದೆ.

ಇದನ್ನೂ ಓದಿರಿ: ಮಂಡ್ಯ: ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ನಿಧನ; ವಾರದಲ್ಲಿ 3ನೇ ಪ್ರಕರಣ

ರೈತರ ಮನದಾಳದ ಮಾತುಗಳು

ಮಂಡ್ಯ ಜಿಲ್ಲೆಯ ರೈತ ನಗರಕೆರೆ ಜಗದೀಶ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ ತಮ್ಮ ಅನುಭವಗಳನ್ನು ಹಂಚಿಕೊಂಡರು. “ಇತಿಹಾಸ ಪ್ರಸಿದ್ಧ ಮುಡುಕುತೊರೆ ಜಾತ್ರೆಯಲ್ಲಿ ಮಾರಾಟ ಮಾಡಲೆಂದು ಮಳವಳ್ಳಿ ರೈತನೊಬ್ಬ ಹಸುಗಳನ್ನು ಸಾಗಣೆ ಮಾಡುವಾಗ ಇಲ್ಲಿನ ಪೊಲೀಸರು ತಡೆದರು. ಗೋರಕ್ಷಣೆಯ ಹೆಸರಿನಲ್ಲಿ ದಾಂಧಲೆ ಎಬ್ಬಿಸುವವರೇನೂ ಅಲ್ಲಿರಲಿಲ್ಲ. ಸರ್ಕಾರದ ಭಾಗವಾಗಿರುವ ಪೊಲೀಸರೇ ತೊಂದರೆ ಕೊಟ್ಟರು. ಜಾತ್ರೆಯಲ್ಲಿ ಮಾರಲೆಂದು ತೆಗೆದುಕೊಂಡು ಹೋಗುತ್ತಿದ್ದೇವೆ ಎಂದರೂ ಕೇಳಲಿಲ್ಲ. ಮೈಸೂರಿನಲ್ಲಿರುವ ಗೋಶಾಲೆಯೊಂದಕ್ಕೆ ಹಸುಗಳನ್ನು ಎಳೆದುಕೊಂಡು ಹೋದರು. ಅದರ ಪಾಲನೆಗಾಗಿ ಪ್ರತಿ ದಿನ ಮುನ್ನೂರು ರೂಪಾಯಿ ಕಟ್ಟುವಂತೆ ರೈತನನ್ನು ಒತ್ತಾಯಿಸಲಾಯಿತು. ಕಾಯ್ದೆಯಡಿ ಪ್ರಕರಣ ಕೂಡ ದಾಖಲಾಗಿತ್ತು. ದಿನವೂ ಹಣ ಕಟ್ಟಲಾಗದೆ ಮನನೊಂದ ರೈತ, ಈ ಹಸುಗಳು ನನ್ನವಲ್ಲ ಎಂದು ಬರೆದುಕೊಟ್ಟು ತಪ್ಪಿಸಿಕೊಂಡ. ಸಾಗಣೆಗಾಗಿ ತರಲಾಗಿದ್ದ ವಾಹನದ ಮಾಲೀಕ ಜಾಮೀನು ಪಡೆಯಲೆಂದೇ 50,000 ರೂಪಾಯಿ ಖರ್ಚು ಮಾಡಿದ. ಈಗಲೂ ಕೋರ್ಟು ಕಚೇರಿ ಅಲೆಯುತ್ತಿದ್ದಾನೆ” ಎಂದು ವಿಷಾದಿಸಿದರು.

“ದನದ ಮಾಂಸ ಮಾರುವ ಮುಸ್ಲಿಮರಿಗೆ ತೊಂದರೆಯಾಗುತ್ತಿದೆ ಎಂಬುದಷ್ಟೇ ಮೇಲುನೋಟಕ್ಕೆ ಚರ್ಚೆಯಾಗುತ್ತಿದೆ. ಆದರೆ ರೈತರಿಗೆ ಆಗುತ್ತಿರುವ ನಷ್ಟ ಮಾತ್ರ ಯಾರ ಗಮನಕ್ಕೂ ಬರುತ್ತಿಲ್ಲ. ನಮ್ಮ ಮನೆಯಲ್ಲಿನ ಒಂದು ಹಸುವಿನ ಕಾಲು ಮುರಿಯಿತು. ಅದನ್ನು ಮಾರಾಟ ಮಾಡಬೇಕಾದಾಗ ಸಾಕಷ್ಟು ತೊಂದರೆಯಾಯಿತು. ಕಾನೂನಿನಲ್ಲಿ ಬದಲಾವಣೆ ತಂದರೆ ರೈತರಿಗೆ ಅನುಕೂಲವಾಗುತ್ತದೆ” ಎಂದರು.

“ಹಸುವಿನಿಂದ ಉಪಯೋಗವಿಲ್ಲದಿದ್ದಾಗ ಅವುಗಳನ್ನು ಸಾಕುವ ಕಷ್ಟವೇನೆಂದು ರೈತರಿಗೆ ಮಾತ್ರ ಗೊತ್ತು. ಮೊದಲೆಲ್ಲ ಇಪ್ಪತ್ತು ಮೂವತ್ತು ಹಸುಗಳನ್ನು ಸಾಕಿಕೊಳ್ಳುತ್ತಿದ್ದವರು ಈಗ ತಮ್ಮ ಮನೆಗಷ್ಟೇ ಅವಶ್ಯಕತೆ ಇರುವಷ್ಟು ಹಸುಗಳನ್ನು ಕಟ್ಟಿಕೊಂಡಿದ್ದಾರೆ. ಹಸುವೊಂದು ಮೂರು ತಿಂಗಳು ಹಾಲು ನೀಡುವುದನ್ನು ನಿಲ್ಲಿಸಿದರೂ ಭಾರವೆನಿಸುತ್ತದೆ. ಮೂರು ತಿಂಗಳ ಕಾಲ ಪೋಷಣೆಯಲ್ಲಿ ಯಾವುದೇ ಕೊರತೆ ಮಾಡುವಂತಿಲ್ಲ. ಹಿಂಡಿ, ಬೂಸಾವನ್ನು ಹಾಕಲೇಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹಾಲು ಕಡಿಮೆಯಾಗುತ್ತದೆ. ಹೀಗಿರುವಾಗ ಗಂಡು ಕರುಗಳನ್ನು, ಕಾಲು ಮುರಿದುಕೊಂಡ ಹಸುಗಳನ್ನು ಇಟ್ಟುಕೊಂಡು ಏನು ಮಾಡೋಣ?” ಎಂದು ಪ್ರಶ್ನಿಸಿದರು.

“ಮೊದಲೆಲ್ಲ ಗೊಡ್ಡು ಹಸುಗಳನ್ನೂ ಇಟ್ಟುಕೊಳ್ಳಲಾಗುತ್ತಿತ್ತು. ಏಕೆಂದರೆ ಗೋಮಾಳಗಳು ಇದ್ದವು. ಹೇಗೋ ಮೇವು ಸಿಗುತ್ತಿತ್ತು. ಈಗ ಪರಿಸ್ಥಿತಿ ಬದಲಾಗಿದೆ. ಗೋಮಾಳಗಳು ಇಲ್ಲವಾಗಿವೆ. ಕಾನೂನಿನಲ್ಲಿ ತಿದ್ದುಪಡಿ ತಂದರೆ ಮೊದಲು ಅನುಕೂಲವಾಗುವುದು ರೈತರಿಗೆ” ಎಂದು ಸ್ಪಷ್ಟಪಡಿಸಿದರು.

ಮದ್ದೂರು ಪಟ್ಟಣದ ರೈತರಾದ ದಿವಾಕರ್‌ ತಮ್ಮ ಕಷ್ಟಗಳನ್ನು ‘ನಾನುಗೌರಿ.ಕಾಂ’ ಜೊತೆಯಲ್ಲಿ ಹಂಚಿಕೊಂಡರು. “ಪ್ರಯೋಜನವಿಲ್ಲದ ಹಸುವನ್ನು ಇಂದಿನ ಪರಿಸ್ಥಿತಿಯಲ್ಲಿ ಪೋಷಿಸುವುದು ಕಷ್ಟ. ಮನುಷ್ಯರನ್ನು ಸಾಕುವುದು ಸುಲಭ. ಗೋವುಗಳ ವಿಚಾರದಲ್ಲಿ ಈ ಮಾತನ್ನು ಹೇಳಲಾಗದು. ಹಸುಗಳನ್ನು ಗೋಶಾಲೆಗೆ ಹೊಡೆದು ಹಿಂಸೆ ಕೊಟ್ಟು ಸಾಯಿಸಲಾಗುತ್ತಿದೆ. ಮೇವು, ನೀರಿಲ್ಲದೆ ಅವುಗಳು ಸೊರಗುತ್ತವೆ. ಇದನ್ನೆಲ್ಲ ಕಣ್ಣಿಂದಲೇ ನೋಡಿದ್ದೇವೆ. ಹಾಗೆ ಸಾಯಿಸುವುದಕ್ಕಿಂತ ನೇರವಾಗಿ ಮಾಂಸ ಮಾರಾಟಗಾರರಿಗೆ ಮಾರುವುದು ಉತ್ತಮ. ನಾಲ್ಕಾರು ಜನರಾದರೂ ತಿನ್ನುತ್ತಾರೆ” ಎಂದು ಆಶಿಸಿದರು.

“ಗೋವಿನ ಮಾಂಸ ಸಿಗದಿದ್ದಾಗ ಮಟನ್ ಬೆಲೆ ಹೆಚ್ಚಾಯಿತು. ಹಸು ಸಾಕುವುದಕ್ಕಿಂತ ಕುರಿ, ಮೇಕೆ ಸಾಕುವುದು ಸೂಕ್ತ ಎಂಬ ನಿರ್ಧಾರಕ್ಕೆ ರೈತ ಬಂದನು. 2003-04ರಲ್ಲಿ ಒಂದು ಕಂತೆ ಮೇವಿಗೆ ಮೂರರಿಂದ ನಾಲ್ಕು ರೂಪಾಯಿ ಇತ್ತು. ಕೆಲವು ರೈತರು ತಮ್ಮ ಗದ್ದೆಗಳಲ್ಲಿಯೇ ಉಚಿವಾಗಿ ಮೇವು ಕೊಟ್ಟುಬಿಡುತ್ತಿದ್ದರು. ಇಂದು ಒಂದು ಕಂತೆ ಮೇವಿಗೆ 50 ರೂಪಾಯಿ ಆಗಿದೆ. ಒಂದು ಹಸುವಿಗೆ ದಿನಕ್ಕೆ ಒಂದು ಹೊರೆ ಹಸಿ ಹುಲ್ಲು, ಎರಡು ಹೊರೆ ಒಣ ಹುಲ್ಲು ಹಾಕಬೇಕು. ಒಂದು ಟೈಮ್‌ಗೆ ಎರಡೂವರೆ ಕೆ.ಜಿ. ಹಿಂಡಿಯನ್ನು ನೀಡಬೇಕು. ಒಂದು ಕೆ.ಜಿ. ಹಿಂಡಿಯ ಬೆಲೆ ಕನಿಷ್ಠ 35 ರೂಪಾಯಿ ಇದೆ. ಹೀಗಿರುವಾಗ ಹೇಗೆ ಹಸುಗಳನ್ನು ಸಾಕುವುದು?” ಎಂದು ಕೇಳಿದರು.

ಇದನ್ನೂ ಓದಿರಿ: ನಮ್ಮ ಸಚಿವರಿವರು: ಸಭ್ಯ ರಾಜಕಾರಣಕ್ಕೆ ಮತ್ತೊಂದು ಹೆಸರೇ ‘ಕೆ.ವೆಂಕಟೇಶ್‌’

“2013ರಿಂದಲೂ ಹಾಲಿನ ಬೆಲೆಯಲ್ಲಿ ಚೇತರಿಕೆ ಕಂಡಿಲ್ಲ. ಬೇಸಿಗೆ ವೇಳೆ ಪ್ರತಿ ಲೀಟರ್‌ ಹಾಲಿನ ಬೆಲೆ ಹೆಚ್ಚೆಂದರೆ 27 ರೂಪಾಯಿ ಆಗುತ್ತದೆ. ಮಳೆಗಾಲ ಬಂತೆಂದರೆ ಹಾಲಿನ ಬೆಲೆ 23- 24 ರೂ.ವರೆಗೂ ಕುಸಿಯುತ್ತದೆ. ಹಾಲಿನ ಗುಣಮಟ್ಟ ಸರಿ ಇಲ್ಲ ಎಂಬ ತಕರಾರು ತೆಗೆಯುತ್ತಾರೆ. ಇದೆಲ್ಲ ನೋಡಿದರೆ ಹಸುಗಳನ್ನು ಯಾಕೆ ಸಾಕಬೇಕು ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ. ಒಂದು ಕಾಲದಲ್ಲಿ ಹತ್ತು ಹಸುಗಳನ್ನು ಸಾಕಿಕೊಂಡಿದ್ದ ನಾನು ಈಗ ಮನೆಯ ಅಗತ್ಯಕ್ಕೆ ಸಾಕೆಂದು ಒಂದು ಹಸು ಕಟ್ಟಿಕೊಂಡಿದ್ದೇನಷ್ಟೇ” ಎಂದು ತಮ್ಮ ಸಂಕಷ್ಟಗಳನ್ನು ವಿವರಿಸಿದರು.

ಮತ್ತೊಬ್ಬ ರೈತರಾದ ಕರೋಟಿ ತಮ್ಮಣ್ಣ ಮಾತನಾಡಿ, “ಹಸುಗಳನ್ನು ಸಾಕಲೆಂದು ಗೋ ಶಾಲೆಗಳನ್ನು ಸರ್ಕಾರ ಮಾಡಿದೆ. ಈ ಶಾಲೆಗಳು ಗೋವುಗಳಿಗೆ ನರಕವಾಗಿವೆ. ಇವುಗಳಿಗೆ ಸುರಿಯುವ ಹಣವನ್ನು ರೈತರಿಗೆ, ಹೈನುಗಾರಿಕೆ ಮಾಡುವವರಿಗೆ ಸಹಾಯಧನವಾಗಿ ನೀಡಿದರೆ ಗೋವಿನ ರಕ್ಷಣೆಯಾಗುತ್ತದೆ” ಎಂದರು.

ಮುಂದುವರಿದು, “ಹಸುಗಳನ್ನು ಸಾಕುವ ರೈತರು ಅವುಗಳಿಗೆ ವಯಸ್ಸಾದಾಗ ಮಾರಾಟ ಮಾಡಿ ಹಣವನ್ನು ದುಂದು ವೆಚ್ಚ ಮಾಡುತ್ತಿರಲಿಲ್ಲ. ಮತ್ತೊಂದು ಹಸುವನ್ನು ತಂದು ಸಾಕುತ್ತಿದ್ದನು. ಗೋಹತ್ಯೆ ನಿಷೇಧ ಕಾಯ್ದೆ ಬಂದ ಮೇಲೆ ಮಾರಾಟ ಕುಸಿಯಿತು. ಕದ್ದು ಮಾರಾಟ ಮಾಡುವಂತಾಯಿತು. ಹೈನುಗಾರಿಕೆ ಮಾಡುವವನಿಗೆ ಬಹುದೊಡ್ಡ ನಷ್ಟವಾಯಿತು. ಕಾನೂನು ತಿದ್ದುಪಡಿಯಾದರೆ ಸಾಕುವವನಿಗೂ ಮತ್ತು ಮಾರುವವನಿಗೂ ಇಬ್ಬರಿಗೂ ಅನುಕೂಲವಾಗುತ್ತದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...