Homeಕರ್ನಾಟಕ‘ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿ’: ಸಚಿವರ ಹೇಳಿಕೆ ಸ್ವಾಗತಿಸಿದ ರೈತರು ಏನಂತಾರೆ?

‘ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿ’: ಸಚಿವರ ಹೇಳಿಕೆ ಸ್ವಾಗತಿಸಿದ ರೈತರು ಏನಂತಾರೆ?

ಗೋ ಹತ್ಯೆ ನಿಷೇಧ ಕಾಯ್ದೆಯಲ್ಲಿ ತಿದ್ದುಪಡಿಗಳನ್ನು ತರಬೇಕಾದ ಅಗತ್ಯತೆಗಳ ಬಗ್ಗೆ ರೈತರು ತಮ್ಮ ಅಭಿಪ್ರಾಯಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ

- Advertisement -
- Advertisement -

“ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ರಾಜ್ಯ ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ್ ಅವರು ಹೇಳಿರುವುದನ್ನು ರೈತರು ಸ್ವಾಗತಿಸಿದ್ದಾರೆ.

“ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಕೇವಲ ಕೋಮು ಕೇಂದ್ರಿತವಾಗಿ ನೋಡಲಾಗುತ್ತಿತ್ತು. ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿತ್ತು. ಆದರೆ ಇದರಿಂದ ಇಡೀ ರೈತಾಪಿ ಸಮುದಾಯ ತೊಂದರೆಗೆ ಸಿಲುಕಿರುವುದು ಚರ್ಚೆಯಾಗಿರಲಿಲ್ಲ. ಈ ನಿಟ್ಟಿನಲ್ಲಿ ಸಚಿವರು ಇಟ್ಟಿರುವ ಹೆಜ್ಜೆ ಸ್ವಾಗತಾರ್ಹ” ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸಚಿವ ಕೆ.ವೆಂಕಟೇಶ್, “ಈಗ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕೋಣ ಮತ್ತು ಎಮ್ಮೆಗಳ ವಧೆಗೆ ಅವಕಾಶವಿದೆ. ಆದರೆ ಹಸುವನ್ನು ಕಡಿಯಲು ಅವಕಾಶ ಇಲ್ಲ. ಹಸುವನ್ನು ಯಾಕೆ ಕಡಿಯಬಾರದು? ಈ ಕಾಯ್ದೆಯಿಂದಾಗಿ ರೈತರಿಗೆ ಬಹಳ ತೊಂದರೆ ಆಗುತ್ತಿದೆ. ಸ್ವತಃ ನಾನು ಹಸುವನ್ನು ಸಾಕಿದ್ದೇನೆ. ಒಂದು ಹಸು ಸತ್ತುಹೋದಾಗ ಅದನ್ನು ಮಣ್ಣು ಮಾಡಲು ಕಷ್ಟಪಡಬೇಕಾಯಿತು. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ಕ್ರಮ ಜರುಗಿಸುತ್ತೇವೆ” ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, “ಗೋಹತ್ಯೆ ನಿಷೇಧ ಹಿಂಪಡೆಯುವ ಮುನ್ನ ಕಾಂಗ್ರೆಸ್ಸಿನವರು ಗೋಹತ್ಯೆಯ ಬಗ್ಗೆ ಗಾಂಧೀಜಿಯವರ ನಿಲುವು ಏನಿತ್ತು ಎಂಬುದನ್ನು ತಿಳಿಯಲಿ” ಎಂದಿದ್ದಾರೆ.

ರಾಜಕೀಯ ಹಗ್ಗಜಗ್ಗಾಟ ಏನೇ ಇರಲಿ, ರಾಜ್ಯದ ರೈತಾಪಿ ಸಮುದಾಯ ಸಚಿವರ ಹೇಳಿಕೆಯನ್ನು ಮುಕ್ತವಾಗಿ ನೋಡುತ್ತಿದೆ.

ಇದನ್ನೂ ಓದಿರಿ: ಮಂಡ್ಯ: ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ನಿಧನ; ವಾರದಲ್ಲಿ 3ನೇ ಪ್ರಕರಣ

ರೈತರ ಮನದಾಳದ ಮಾತುಗಳು

ಮಂಡ್ಯ ಜಿಲ್ಲೆಯ ರೈತ ನಗರಕೆರೆ ಜಗದೀಶ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ ತಮ್ಮ ಅನುಭವಗಳನ್ನು ಹಂಚಿಕೊಂಡರು. “ಇತಿಹಾಸ ಪ್ರಸಿದ್ಧ ಮುಡುಕುತೊರೆ ಜಾತ್ರೆಯಲ್ಲಿ ಮಾರಾಟ ಮಾಡಲೆಂದು ಮಳವಳ್ಳಿ ರೈತನೊಬ್ಬ ಹಸುಗಳನ್ನು ಸಾಗಣೆ ಮಾಡುವಾಗ ಇಲ್ಲಿನ ಪೊಲೀಸರು ತಡೆದರು. ಗೋರಕ್ಷಣೆಯ ಹೆಸರಿನಲ್ಲಿ ದಾಂಧಲೆ ಎಬ್ಬಿಸುವವರೇನೂ ಅಲ್ಲಿರಲಿಲ್ಲ. ಸರ್ಕಾರದ ಭಾಗವಾಗಿರುವ ಪೊಲೀಸರೇ ತೊಂದರೆ ಕೊಟ್ಟರು. ಜಾತ್ರೆಯಲ್ಲಿ ಮಾರಲೆಂದು ತೆಗೆದುಕೊಂಡು ಹೋಗುತ್ತಿದ್ದೇವೆ ಎಂದರೂ ಕೇಳಲಿಲ್ಲ. ಮೈಸೂರಿನಲ್ಲಿರುವ ಗೋಶಾಲೆಯೊಂದಕ್ಕೆ ಹಸುಗಳನ್ನು ಎಳೆದುಕೊಂಡು ಹೋದರು. ಅದರ ಪಾಲನೆಗಾಗಿ ಪ್ರತಿ ದಿನ ಮುನ್ನೂರು ರೂಪಾಯಿ ಕಟ್ಟುವಂತೆ ರೈತನನ್ನು ಒತ್ತಾಯಿಸಲಾಯಿತು. ಕಾಯ್ದೆಯಡಿ ಪ್ರಕರಣ ಕೂಡ ದಾಖಲಾಗಿತ್ತು. ದಿನವೂ ಹಣ ಕಟ್ಟಲಾಗದೆ ಮನನೊಂದ ರೈತ, ಈ ಹಸುಗಳು ನನ್ನವಲ್ಲ ಎಂದು ಬರೆದುಕೊಟ್ಟು ತಪ್ಪಿಸಿಕೊಂಡ. ಸಾಗಣೆಗಾಗಿ ತರಲಾಗಿದ್ದ ವಾಹನದ ಮಾಲೀಕ ಜಾಮೀನು ಪಡೆಯಲೆಂದೇ 50,000 ರೂಪಾಯಿ ಖರ್ಚು ಮಾಡಿದ. ಈಗಲೂ ಕೋರ್ಟು ಕಚೇರಿ ಅಲೆಯುತ್ತಿದ್ದಾನೆ” ಎಂದು ವಿಷಾದಿಸಿದರು.

“ದನದ ಮಾಂಸ ಮಾರುವ ಮುಸ್ಲಿಮರಿಗೆ ತೊಂದರೆಯಾಗುತ್ತಿದೆ ಎಂಬುದಷ್ಟೇ ಮೇಲುನೋಟಕ್ಕೆ ಚರ್ಚೆಯಾಗುತ್ತಿದೆ. ಆದರೆ ರೈತರಿಗೆ ಆಗುತ್ತಿರುವ ನಷ್ಟ ಮಾತ್ರ ಯಾರ ಗಮನಕ್ಕೂ ಬರುತ್ತಿಲ್ಲ. ನಮ್ಮ ಮನೆಯಲ್ಲಿನ ಒಂದು ಹಸುವಿನ ಕಾಲು ಮುರಿಯಿತು. ಅದನ್ನು ಮಾರಾಟ ಮಾಡಬೇಕಾದಾಗ ಸಾಕಷ್ಟು ತೊಂದರೆಯಾಯಿತು. ಕಾನೂನಿನಲ್ಲಿ ಬದಲಾವಣೆ ತಂದರೆ ರೈತರಿಗೆ ಅನುಕೂಲವಾಗುತ್ತದೆ” ಎಂದರು.

“ಹಸುವಿನಿಂದ ಉಪಯೋಗವಿಲ್ಲದಿದ್ದಾಗ ಅವುಗಳನ್ನು ಸಾಕುವ ಕಷ್ಟವೇನೆಂದು ರೈತರಿಗೆ ಮಾತ್ರ ಗೊತ್ತು. ಮೊದಲೆಲ್ಲ ಇಪ್ಪತ್ತು ಮೂವತ್ತು ಹಸುಗಳನ್ನು ಸಾಕಿಕೊಳ್ಳುತ್ತಿದ್ದವರು ಈಗ ತಮ್ಮ ಮನೆಗಷ್ಟೇ ಅವಶ್ಯಕತೆ ಇರುವಷ್ಟು ಹಸುಗಳನ್ನು ಕಟ್ಟಿಕೊಂಡಿದ್ದಾರೆ. ಹಸುವೊಂದು ಮೂರು ತಿಂಗಳು ಹಾಲು ನೀಡುವುದನ್ನು ನಿಲ್ಲಿಸಿದರೂ ಭಾರವೆನಿಸುತ್ತದೆ. ಮೂರು ತಿಂಗಳ ಕಾಲ ಪೋಷಣೆಯಲ್ಲಿ ಯಾವುದೇ ಕೊರತೆ ಮಾಡುವಂತಿಲ್ಲ. ಹಿಂಡಿ, ಬೂಸಾವನ್ನು ಹಾಕಲೇಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹಾಲು ಕಡಿಮೆಯಾಗುತ್ತದೆ. ಹೀಗಿರುವಾಗ ಗಂಡು ಕರುಗಳನ್ನು, ಕಾಲು ಮುರಿದುಕೊಂಡ ಹಸುಗಳನ್ನು ಇಟ್ಟುಕೊಂಡು ಏನು ಮಾಡೋಣ?” ಎಂದು ಪ್ರಶ್ನಿಸಿದರು.

“ಮೊದಲೆಲ್ಲ ಗೊಡ್ಡು ಹಸುಗಳನ್ನೂ ಇಟ್ಟುಕೊಳ್ಳಲಾಗುತ್ತಿತ್ತು. ಏಕೆಂದರೆ ಗೋಮಾಳಗಳು ಇದ್ದವು. ಹೇಗೋ ಮೇವು ಸಿಗುತ್ತಿತ್ತು. ಈಗ ಪರಿಸ್ಥಿತಿ ಬದಲಾಗಿದೆ. ಗೋಮಾಳಗಳು ಇಲ್ಲವಾಗಿವೆ. ಕಾನೂನಿನಲ್ಲಿ ತಿದ್ದುಪಡಿ ತಂದರೆ ಮೊದಲು ಅನುಕೂಲವಾಗುವುದು ರೈತರಿಗೆ” ಎಂದು ಸ್ಪಷ್ಟಪಡಿಸಿದರು.

ಮದ್ದೂರು ಪಟ್ಟಣದ ರೈತರಾದ ದಿವಾಕರ್‌ ತಮ್ಮ ಕಷ್ಟಗಳನ್ನು ‘ನಾನುಗೌರಿ.ಕಾಂ’ ಜೊತೆಯಲ್ಲಿ ಹಂಚಿಕೊಂಡರು. “ಪ್ರಯೋಜನವಿಲ್ಲದ ಹಸುವನ್ನು ಇಂದಿನ ಪರಿಸ್ಥಿತಿಯಲ್ಲಿ ಪೋಷಿಸುವುದು ಕಷ್ಟ. ಮನುಷ್ಯರನ್ನು ಸಾಕುವುದು ಸುಲಭ. ಗೋವುಗಳ ವಿಚಾರದಲ್ಲಿ ಈ ಮಾತನ್ನು ಹೇಳಲಾಗದು. ಹಸುಗಳನ್ನು ಗೋಶಾಲೆಗೆ ಹೊಡೆದು ಹಿಂಸೆ ಕೊಟ್ಟು ಸಾಯಿಸಲಾಗುತ್ತಿದೆ. ಮೇವು, ನೀರಿಲ್ಲದೆ ಅವುಗಳು ಸೊರಗುತ್ತವೆ. ಇದನ್ನೆಲ್ಲ ಕಣ್ಣಿಂದಲೇ ನೋಡಿದ್ದೇವೆ. ಹಾಗೆ ಸಾಯಿಸುವುದಕ್ಕಿಂತ ನೇರವಾಗಿ ಮಾಂಸ ಮಾರಾಟಗಾರರಿಗೆ ಮಾರುವುದು ಉತ್ತಮ. ನಾಲ್ಕಾರು ಜನರಾದರೂ ತಿನ್ನುತ್ತಾರೆ” ಎಂದು ಆಶಿಸಿದರು.

“ಗೋವಿನ ಮಾಂಸ ಸಿಗದಿದ್ದಾಗ ಮಟನ್ ಬೆಲೆ ಹೆಚ್ಚಾಯಿತು. ಹಸು ಸಾಕುವುದಕ್ಕಿಂತ ಕುರಿ, ಮೇಕೆ ಸಾಕುವುದು ಸೂಕ್ತ ಎಂಬ ನಿರ್ಧಾರಕ್ಕೆ ರೈತ ಬಂದನು. 2003-04ರಲ್ಲಿ ಒಂದು ಕಂತೆ ಮೇವಿಗೆ ಮೂರರಿಂದ ನಾಲ್ಕು ರೂಪಾಯಿ ಇತ್ತು. ಕೆಲವು ರೈತರು ತಮ್ಮ ಗದ್ದೆಗಳಲ್ಲಿಯೇ ಉಚಿವಾಗಿ ಮೇವು ಕೊಟ್ಟುಬಿಡುತ್ತಿದ್ದರು. ಇಂದು ಒಂದು ಕಂತೆ ಮೇವಿಗೆ 50 ರೂಪಾಯಿ ಆಗಿದೆ. ಒಂದು ಹಸುವಿಗೆ ದಿನಕ್ಕೆ ಒಂದು ಹೊರೆ ಹಸಿ ಹುಲ್ಲು, ಎರಡು ಹೊರೆ ಒಣ ಹುಲ್ಲು ಹಾಕಬೇಕು. ಒಂದು ಟೈಮ್‌ಗೆ ಎರಡೂವರೆ ಕೆ.ಜಿ. ಹಿಂಡಿಯನ್ನು ನೀಡಬೇಕು. ಒಂದು ಕೆ.ಜಿ. ಹಿಂಡಿಯ ಬೆಲೆ ಕನಿಷ್ಠ 35 ರೂಪಾಯಿ ಇದೆ. ಹೀಗಿರುವಾಗ ಹೇಗೆ ಹಸುಗಳನ್ನು ಸಾಕುವುದು?” ಎಂದು ಕೇಳಿದರು.

ಇದನ್ನೂ ಓದಿರಿ: ನಮ್ಮ ಸಚಿವರಿವರು: ಸಭ್ಯ ರಾಜಕಾರಣಕ್ಕೆ ಮತ್ತೊಂದು ಹೆಸರೇ ‘ಕೆ.ವೆಂಕಟೇಶ್‌’

“2013ರಿಂದಲೂ ಹಾಲಿನ ಬೆಲೆಯಲ್ಲಿ ಚೇತರಿಕೆ ಕಂಡಿಲ್ಲ. ಬೇಸಿಗೆ ವೇಳೆ ಪ್ರತಿ ಲೀಟರ್‌ ಹಾಲಿನ ಬೆಲೆ ಹೆಚ್ಚೆಂದರೆ 27 ರೂಪಾಯಿ ಆಗುತ್ತದೆ. ಮಳೆಗಾಲ ಬಂತೆಂದರೆ ಹಾಲಿನ ಬೆಲೆ 23- 24 ರೂ.ವರೆಗೂ ಕುಸಿಯುತ್ತದೆ. ಹಾಲಿನ ಗುಣಮಟ್ಟ ಸರಿ ಇಲ್ಲ ಎಂಬ ತಕರಾರು ತೆಗೆಯುತ್ತಾರೆ. ಇದೆಲ್ಲ ನೋಡಿದರೆ ಹಸುಗಳನ್ನು ಯಾಕೆ ಸಾಕಬೇಕು ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ. ಒಂದು ಕಾಲದಲ್ಲಿ ಹತ್ತು ಹಸುಗಳನ್ನು ಸಾಕಿಕೊಂಡಿದ್ದ ನಾನು ಈಗ ಮನೆಯ ಅಗತ್ಯಕ್ಕೆ ಸಾಕೆಂದು ಒಂದು ಹಸು ಕಟ್ಟಿಕೊಂಡಿದ್ದೇನಷ್ಟೇ” ಎಂದು ತಮ್ಮ ಸಂಕಷ್ಟಗಳನ್ನು ವಿವರಿಸಿದರು.

ಮತ್ತೊಬ್ಬ ರೈತರಾದ ಕರೋಟಿ ತಮ್ಮಣ್ಣ ಮಾತನಾಡಿ, “ಹಸುಗಳನ್ನು ಸಾಕಲೆಂದು ಗೋ ಶಾಲೆಗಳನ್ನು ಸರ್ಕಾರ ಮಾಡಿದೆ. ಈ ಶಾಲೆಗಳು ಗೋವುಗಳಿಗೆ ನರಕವಾಗಿವೆ. ಇವುಗಳಿಗೆ ಸುರಿಯುವ ಹಣವನ್ನು ರೈತರಿಗೆ, ಹೈನುಗಾರಿಕೆ ಮಾಡುವವರಿಗೆ ಸಹಾಯಧನವಾಗಿ ನೀಡಿದರೆ ಗೋವಿನ ರಕ್ಷಣೆಯಾಗುತ್ತದೆ” ಎಂದರು.

ಮುಂದುವರಿದು, “ಹಸುಗಳನ್ನು ಸಾಕುವ ರೈತರು ಅವುಗಳಿಗೆ ವಯಸ್ಸಾದಾಗ ಮಾರಾಟ ಮಾಡಿ ಹಣವನ್ನು ದುಂದು ವೆಚ್ಚ ಮಾಡುತ್ತಿರಲಿಲ್ಲ. ಮತ್ತೊಂದು ಹಸುವನ್ನು ತಂದು ಸಾಕುತ್ತಿದ್ದನು. ಗೋಹತ್ಯೆ ನಿಷೇಧ ಕಾಯ್ದೆ ಬಂದ ಮೇಲೆ ಮಾರಾಟ ಕುಸಿಯಿತು. ಕದ್ದು ಮಾರಾಟ ಮಾಡುವಂತಾಯಿತು. ಹೈನುಗಾರಿಕೆ ಮಾಡುವವನಿಗೆ ಬಹುದೊಡ್ಡ ನಷ್ಟವಾಯಿತು. ಕಾನೂನು ತಿದ್ದುಪಡಿಯಾದರೆ ಸಾಕುವವನಿಗೂ ಮತ್ತು ಮಾರುವವನಿಗೂ ಇಬ್ಬರಿಗೂ ಅನುಕೂಲವಾಗುತ್ತದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....