Homeಕರ್ನಾಟಕಹಸುಗಳನ್ನು ಏಕೆ ಕಡಿಯಬಾರದು ಎಂಬ ಸಚಿವರ ಹೇಳಿಕೆಗೆ ಬೊಮ್ಮಾಯಿ ಖಂಡನೆ

ಹಸುಗಳನ್ನು ಏಕೆ ಕಡಿಯಬಾರದು ಎಂಬ ಸಚಿವರ ಹೇಳಿಕೆಗೆ ಬೊಮ್ಮಾಯಿ ಖಂಡನೆ

- Advertisement -
- Advertisement -

ಗೋಹತ್ಯೆ ವಿಚಾರವಾಗಿ ಪಶುಸಂಗೋಪನಾ ಸಚಿವ ವೆಂಕಟೇಶ್ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಮ್ಮೆ, ಕೋಣಗಳನ್ನು ಕಡಿಯುವುದಾದರೇ ಹಸುಗಳನ್ನು ಏಕೆ ಕಡಿಯಬಾರದು? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಹೇಳಿಕೆಯನ್ನು ಖಂಡಿಸಿ ಸರಣಿ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು, ”ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ” ಎಂದು ಹೇಳಿದ್ದಾರೆ.

”ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೊ, ಹೈ ಕಮಾಂಡ್ ಮೆಚ್ಚಿಸಲೊ?” ಎಂದು ಪ್ರಶ್ನೆ ಮಾಡಿದ್ದಾರೆ.

”ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಪೂಜ್ಯ ಮಹಾತ್ಮಾ ಗಾಂಧಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ” ಎಂದಿದ್ದಾರೆ.

”ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ‌” ಎಂದು ಹೇಳಿದ್ದಾರೆ.

”ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರ ಸಚಿವರಿಗೆ ಸೂಕ್ತ ಸಲಹೆ ನೀಡುವುದು ಅವಶ್ಯಕತೆ ಇದೆ” ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಗೋ ಹತ್ಯೆ ನಿಷೇಧ ಕಾಯ್ದೆ (Cow Slaughter Prohibition Act) ರದ್ದುಗೊಳಿಸುವ ವಿಚಾರ ಸಂಬಂಧ ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಶುಸಂಗೋಪನಾ ಸಚಿವ ವೆಂಕಟೇಶ್ ಅವರು, ”ಎಮ್ಮೆ, ಕೋಣಗಳನ್ನು ಕಡಿಯುವುದಾದರೇ ಹಸುಗಳನ್ನು ಏಕೆ ಕಡಿಯಬಾರದು? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿ’: ಸಚಿವರ ಹೇಳಿಕೆ ಸ್ವಾಗತಿಸಿದ ರೈತರು ಏನಂತಾರೆ?

”ಈಗ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕೋಣ ಮತ್ತು ಎಮ್ಮೆಗಳ ವಧೆಗೆ ಅವಕಾಶವಿದೆ. ಆದರೆ, ಹಸುವನ್ನು ಕಡಿಯಲು ಅವಕಾಶ ಇಲ್ಲ. ಹಸುವನ್ನು ಯಾಕೆ ಕಡಿಯಬಾರದು? ಈ ಕಾಯ್ದೆಯಿಂದಾಗಿ ರೈತರಿಗೆ ಬಹಳ ತೊಂದರೆ ಆಗುತ್ತಿದೆ. ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದರು.

ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ಸಚಿವರು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...