Homeಮುಖಪುಟಪ್ರತಿ ವರ್ಷ ಎಷ್ಟು ಮಂದಿ ಮುಸ್ಲಿಂ ಅಭ್ಯರ್ಥಿಗಳು ಐಎಎಸ್‌ ಆಗುತ್ತಿದ್ದಾರೆ?

ಪ್ರತಿ ವರ್ಷ ಎಷ್ಟು ಮಂದಿ ಮುಸ್ಲಿಂ ಅಭ್ಯರ್ಥಿಗಳು ಐಎಎಸ್‌ ಆಗುತ್ತಿದ್ದಾರೆ?

- Advertisement -
- Advertisement -

ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿಗಳಾಗುತ್ತಿರುವ ಮುಸ್ಲಿಂ ಅಭ್ಯರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿದೆ. ಈ ವರ್ಷ ಗರಿಷ್ಠ ಆರು ಮುಸ್ಲಿಂ ಅಭ್ಯರ್ಥಿಗಳು ಮಾತ್ರ ಐಎಎಸ್ ಅಧಿಕಾರಿಗಳಾಗುವ ಸಾಧ್ಯತೆ ಇದೆ ಎಂದು ‘siasat.com’ ಎಂದು ವರದಿ ಮಾಡಿದೆ.

2022ರ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಶಿಫಾರಸು ಮಾಡಿದ ಅಭ್ಯರ್ಥಿಗಳ ಪಟ್ಟಿಯನ್ನು ಯುಪಿಎಸ್‌ಸಿ ಇತ್ತೀಚೆಗೆ ಬಿಡುಗಡೆ ಮಾಡಿದೆ. ಲಿಖಿತ ಮತ್ತು ವ್ಯಕ್ತಿತ್ವ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಪಡೆದ ವಿವರಗಳನ್ನು ಪ್ರಕಟಿಸಿದೆ.

ಈ ವರ್ಷ ಆರು ಮುಸ್ಲಿಂ ಅಭ್ಯರ್ಥಿಗಳು ಐಎಎಸ್ ಆಗುವ ಸಾಧ್ಯತೆ ಇದೆ. ಹಿಂದಿನ ವರ್ಷದ ನಾಗರಿಕ ಸೇವಾ ಪರೀಕ್ಷೆಯ ಸೇವಾ ಹಂಚಿಕೆ ದತ್ತಾಂಶವನ್ನು ವಿಶ್ಲೇಷಿಸಿದಾಗ, ಈ ವರ್ಷ ಐಎಎಸ್ ಅಧಿಕಾರಿಗಳಾಗಲು ಕೇವಲ ಆರು ಮುಸ್ಲಿಂ ಅಭ್ಯರ್ಥಿಗಳು ಅರ್ಹರಾಗಿದ್ದಾರೆ ಎಂದು ಕಂಡುಬಂದಿದೆ.

ಆಯ್ಕೆಯಾಗಲಿರುವ ಆರು ಮಂದಿ ಮುಸ್ಲಿಂ ಅಭ್ಯರ್ಥಿಗಳು

  1. ಸಾಮಾನ್ಯ ವರ್ಗದ ಅಡಿಯಲ್ಲಿ ವಸೀಮ್ ಅಹ್ಮದ್ ಭಟ್ (ಅಖಿಲ ಭಾರತ ರ್‍ಯಾಂಕ್‌-7)
  2. ಸಾಮಾನ್ಯ ವರ್ಗದ ಅಡಿಯಲ್ಲಿ ನವೀದ್ ಅಹ್ಸಾನ್ ಭಟ್ (ರ್‍ಯಾಂಕ್‌- 84)
  3. ಒಬಿಸಿ ವರ್ಗದ ಅಡಿಯಲ್ಲಿ ಅಸದ್ ಜುಬೇರ್ (ರ್‍ಯಾಂಕ್‌-86)
  4. ಒಬಿಸಿ ವರ್ಗದ ಅಡಿಯಲ್ಲಿ ಆಕಿಪ್ ಖಾನ್ (ರ್‍ಯಾಂಕ್‌-268)
  5. ಒಬಿಸಿ ವರ್ಗದ ಅಡಿಯಲ್ಲಿ ಮೊಯಿನ್ ಅಹಮದ್ (ರ್‍ಯಾಂಕ್-296)
  6. ಎಸ್‌ಟಿ ವರ್ಗದ ಅಡಿಯಲ್ಲಿ ಮೊಹಮ್ಮದ್ ಇರ್ಫಾನ್ (ರ್‍ಯಾಂಕ್-476)

ಹಿಂದಿನ ವರ್ಷಗಳ ಅಂಕಿ-ಅಂಶ

2021ರಲ್ಲಿ ಒಟ್ಟು ಐಎಎಸ್‌ ಅಧಿಕಾರಿಗಳ ಪೈಕಿ ಕೇವಲ 1.6 ಪ್ರತಿಶತದಷ್ಟು ಮುಸ್ಲಿಮರಿದ್ದರು. 2020ಕ್ಕೆ ಹೋಲಿಸಿದರೆ ಶೇ. 4.4ರಷ್ಟು ಕುಸಿತವನ್ನು ಇಲ್ಲಿ ಕಾಣಬಹುದು. ಹಿಂದಿನ ವರ್ಷಗಳಲ್ಲಿಯೂ ಅಂತಹ ಏರಿಕೆ ಕಂಡುಬಂದಿಲ್ಲ. ಐಎಎಸ್‌ ಅಧಿಕಾರಿಗಳಾಗುವ ಮುಸ್ಲಿಮರ ಸಂಖ್ಯೆ ಶೇಕಡಾ 1 ರಿಂದ 5ರ ನಡುವೆ ಇತ್ತಷ್ಟೆ. ಮುಸ್ಲಿಂ ಜನಸಂಖ್ಯೆಗೆ ಹೋಲಿಸಿದರೆ ಗಮನಾರ್ಹವಾಗಿ ಕಡಿಮೆ ಕುಸಿತ ಇರುವುದನ್ನು ಕಾಣಬಹುದು. ಭಾರತದಲ್ಲಿ 2011ರ ಜನಗಣತಿಯ ಪ್ರಕಾರ ಶೇ. 17.22 ಮುಸ್ಲಿಮರಿದ್ದಾರೆ.

ಮಾಹಿತಿ ಕೃಪೆ: www.siasat.com

ಯುಪಿಎಸ್‌ ನಾಗರಿಕ ಸೇವೆಗಳ ಪರೀಕ್ಷೆಯ ಹಂತಗಳು

ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯು ಮೂರು ಹಂತಗಳನ್ನು ಒಳಗೊಂಡಿದೆ. ಅವುಗಳೆಂದರೆ ಪ್ರಿಲಿಮ್ಸ್, ಮೇನ್ಸ್‌ ಮತ್ತು ಸಂದರ್ಶನ. ಭಾರತೀಯ ಆಡಳಿತ ಸೇವೆ (ಐಎಎಸ್‌), ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್‌), ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಮತ್ತು ಇತರ ಸರ್ಕಾರಿ ಪ್ರತಿಷ್ಠಿತ ಹುದ್ದೆಗಳಿಗೆ ಅಧಿಕಾರಿಗಳನ್ನು ಆಯ್ಕೆ ಮಾಡಲು ನಾಗರಿಕ ಸೇವಾ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಇದನ್ನೂ ಓದಿರಿ: ದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು: ವರದಿ

ಸೀಮಿತ ಸಂಖ್ಯೆಯ ಖಾಲಿ ಹುದ್ದೆಗಳಿಗೆ ಲಕ್ಷಗಟ್ಟಲೆ ಆಕಾಂಕ್ಷಿಗಳು ಪೈಪೋಟಿ ನಡೆಸುತ್ತಿರುವುದರಿಂದ ಈ ಹುದ್ದೆಗಳಿಗೆ ಪೈಪೋಟಿ ತೀವ್ರವಾಗಿರುತ್ತದೆ.

ಯುಪಿಎಸ್‌ಸಿ, ಸಿಎಸ್‌ಇಯಲ್ಲಿ ಮುಸ್ಲಿಂ ಅಭ್ಯರ್ಥಿಗಳ ಪ್ರಾತಿನಿಧ್ಯ ಕಡಿಮೆಯಿರುವುದು ಕಳವಳಕಾರಿ ವಿಷಯವಾಗಿದೆ. ಸರ್ಕಾರ ಮಾತ್ರವಲ್ಲದೆ ನಾಗರಿಕ ಸಮಾಜ ಸಂಸ್ಥೆಗಳು ಸಹ ಈ ಸಮಸ್ಯೆಯನ್ನು ಪರಿಹರಿಸಬೇಕಿದೆ ಎಂದು ‘siasat.com’ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....