Homeಮುಖಪುಟಪ್ರತಿ ವರ್ಷ ಎಷ್ಟು ಮಂದಿ ಮುಸ್ಲಿಂ ಅಭ್ಯರ್ಥಿಗಳು ಐಎಎಸ್‌ ಆಗುತ್ತಿದ್ದಾರೆ?

ಪ್ರತಿ ವರ್ಷ ಎಷ್ಟು ಮಂದಿ ಮುಸ್ಲಿಂ ಅಭ್ಯರ್ಥಿಗಳು ಐಎಎಸ್‌ ಆಗುತ್ತಿದ್ದಾರೆ?

- Advertisement -
- Advertisement -

ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿಗಳಾಗುತ್ತಿರುವ ಮುಸ್ಲಿಂ ಅಭ್ಯರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿದೆ. ಈ ವರ್ಷ ಗರಿಷ್ಠ ಆರು ಮುಸ್ಲಿಂ ಅಭ್ಯರ್ಥಿಗಳು ಮಾತ್ರ ಐಎಎಸ್ ಅಧಿಕಾರಿಗಳಾಗುವ ಸಾಧ್ಯತೆ ಇದೆ ಎಂದು ‘siasat.com’ ಎಂದು ವರದಿ ಮಾಡಿದೆ.

2022ರ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಶಿಫಾರಸು ಮಾಡಿದ ಅಭ್ಯರ್ಥಿಗಳ ಪಟ್ಟಿಯನ್ನು ಯುಪಿಎಸ್‌ಸಿ ಇತ್ತೀಚೆಗೆ ಬಿಡುಗಡೆ ಮಾಡಿದೆ. ಲಿಖಿತ ಮತ್ತು ವ್ಯಕ್ತಿತ್ವ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಪಡೆದ ವಿವರಗಳನ್ನು ಪ್ರಕಟಿಸಿದೆ.

ಈ ವರ್ಷ ಆರು ಮುಸ್ಲಿಂ ಅಭ್ಯರ್ಥಿಗಳು ಐಎಎಸ್ ಆಗುವ ಸಾಧ್ಯತೆ ಇದೆ. ಹಿಂದಿನ ವರ್ಷದ ನಾಗರಿಕ ಸೇವಾ ಪರೀಕ್ಷೆಯ ಸೇವಾ ಹಂಚಿಕೆ ದತ್ತಾಂಶವನ್ನು ವಿಶ್ಲೇಷಿಸಿದಾಗ, ಈ ವರ್ಷ ಐಎಎಸ್ ಅಧಿಕಾರಿಗಳಾಗಲು ಕೇವಲ ಆರು ಮುಸ್ಲಿಂ ಅಭ್ಯರ್ಥಿಗಳು ಅರ್ಹರಾಗಿದ್ದಾರೆ ಎಂದು ಕಂಡುಬಂದಿದೆ.

ಆಯ್ಕೆಯಾಗಲಿರುವ ಆರು ಮಂದಿ ಮುಸ್ಲಿಂ ಅಭ್ಯರ್ಥಿಗಳು

  1. ಸಾಮಾನ್ಯ ವರ್ಗದ ಅಡಿಯಲ್ಲಿ ವಸೀಮ್ ಅಹ್ಮದ್ ಭಟ್ (ಅಖಿಲ ಭಾರತ ರ್‍ಯಾಂಕ್‌-7)
  2. ಸಾಮಾನ್ಯ ವರ್ಗದ ಅಡಿಯಲ್ಲಿ ನವೀದ್ ಅಹ್ಸಾನ್ ಭಟ್ (ರ್‍ಯಾಂಕ್‌- 84)
  3. ಒಬಿಸಿ ವರ್ಗದ ಅಡಿಯಲ್ಲಿ ಅಸದ್ ಜುಬೇರ್ (ರ್‍ಯಾಂಕ್‌-86)
  4. ಒಬಿಸಿ ವರ್ಗದ ಅಡಿಯಲ್ಲಿ ಆಕಿಪ್ ಖಾನ್ (ರ್‍ಯಾಂಕ್‌-268)
  5. ಒಬಿಸಿ ವರ್ಗದ ಅಡಿಯಲ್ಲಿ ಮೊಯಿನ್ ಅಹಮದ್ (ರ್‍ಯಾಂಕ್-296)
  6. ಎಸ್‌ಟಿ ವರ್ಗದ ಅಡಿಯಲ್ಲಿ ಮೊಹಮ್ಮದ್ ಇರ್ಫಾನ್ (ರ್‍ಯಾಂಕ್-476)

ಹಿಂದಿನ ವರ್ಷಗಳ ಅಂಕಿ-ಅಂಶ

2021ರಲ್ಲಿ ಒಟ್ಟು ಐಎಎಸ್‌ ಅಧಿಕಾರಿಗಳ ಪೈಕಿ ಕೇವಲ 1.6 ಪ್ರತಿಶತದಷ್ಟು ಮುಸ್ಲಿಮರಿದ್ದರು. 2020ಕ್ಕೆ ಹೋಲಿಸಿದರೆ ಶೇ. 4.4ರಷ್ಟು ಕುಸಿತವನ್ನು ಇಲ್ಲಿ ಕಾಣಬಹುದು. ಹಿಂದಿನ ವರ್ಷಗಳಲ್ಲಿಯೂ ಅಂತಹ ಏರಿಕೆ ಕಂಡುಬಂದಿಲ್ಲ. ಐಎಎಸ್‌ ಅಧಿಕಾರಿಗಳಾಗುವ ಮುಸ್ಲಿಮರ ಸಂಖ್ಯೆ ಶೇಕಡಾ 1 ರಿಂದ 5ರ ನಡುವೆ ಇತ್ತಷ್ಟೆ. ಮುಸ್ಲಿಂ ಜನಸಂಖ್ಯೆಗೆ ಹೋಲಿಸಿದರೆ ಗಮನಾರ್ಹವಾಗಿ ಕಡಿಮೆ ಕುಸಿತ ಇರುವುದನ್ನು ಕಾಣಬಹುದು. ಭಾರತದಲ್ಲಿ 2011ರ ಜನಗಣತಿಯ ಪ್ರಕಾರ ಶೇ. 17.22 ಮುಸ್ಲಿಮರಿದ್ದಾರೆ.

ಮಾಹಿತಿ ಕೃಪೆ: www.siasat.com

ಯುಪಿಎಸ್‌ ನಾಗರಿಕ ಸೇವೆಗಳ ಪರೀಕ್ಷೆಯ ಹಂತಗಳು

ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯು ಮೂರು ಹಂತಗಳನ್ನು ಒಳಗೊಂಡಿದೆ. ಅವುಗಳೆಂದರೆ ಪ್ರಿಲಿಮ್ಸ್, ಮೇನ್ಸ್‌ ಮತ್ತು ಸಂದರ್ಶನ. ಭಾರತೀಯ ಆಡಳಿತ ಸೇವೆ (ಐಎಎಸ್‌), ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್‌), ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಮತ್ತು ಇತರ ಸರ್ಕಾರಿ ಪ್ರತಿಷ್ಠಿತ ಹುದ್ದೆಗಳಿಗೆ ಅಧಿಕಾರಿಗಳನ್ನು ಆಯ್ಕೆ ಮಾಡಲು ನಾಗರಿಕ ಸೇವಾ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಇದನ್ನೂ ಓದಿರಿ: ದೋಷಪೂರಿತ ರೈಲ್ವೆ ಸಿಗ್ನಲ್‌, ಕಳಪೆ ಹಳಿ ದುರಸ್ತಿ ಬಗ್ಗೆ 6 ತಿಂಗಳಲ್ಲಿ 2 ಸಲ ಎಚ್ಚರಿಸಲಾಗಿತ್ತು: ವರದಿ

ಸೀಮಿತ ಸಂಖ್ಯೆಯ ಖಾಲಿ ಹುದ್ದೆಗಳಿಗೆ ಲಕ್ಷಗಟ್ಟಲೆ ಆಕಾಂಕ್ಷಿಗಳು ಪೈಪೋಟಿ ನಡೆಸುತ್ತಿರುವುದರಿಂದ ಈ ಹುದ್ದೆಗಳಿಗೆ ಪೈಪೋಟಿ ತೀವ್ರವಾಗಿರುತ್ತದೆ.

ಯುಪಿಎಸ್‌ಸಿ, ಸಿಎಸ್‌ಇಯಲ್ಲಿ ಮುಸ್ಲಿಂ ಅಭ್ಯರ್ಥಿಗಳ ಪ್ರಾತಿನಿಧ್ಯ ಕಡಿಮೆಯಿರುವುದು ಕಳವಳಕಾರಿ ವಿಷಯವಾಗಿದೆ. ಸರ್ಕಾರ ಮಾತ್ರವಲ್ಲದೆ ನಾಗರಿಕ ಸಮಾಜ ಸಂಸ್ಥೆಗಳು ಸಹ ಈ ಸಮಸ್ಯೆಯನ್ನು ಪರಿಹರಿಸಬೇಕಿದೆ ಎಂದು ‘siasat.com’ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...