Homeಕರ್ನಾಟಕಗ್ಯಾರಂಟಿ ಯೋಜನೆ ಜಾರಿ ಕುರಿತು ಟೀಕೆ ಮಾಡಿದ್ದ ಪ್ರತಾಪ್‌ ಸಿಂಹ ವಿರುದ್ಧ ಡಿ.ಕೆ.ಸುರೇಶ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಜಾರಿ ಕುರಿತು ಟೀಕೆ ಮಾಡಿದ್ದ ಪ್ರತಾಪ್‌ ಸಿಂಹ ವಿರುದ್ಧ ಡಿ.ಕೆ.ಸುರೇಶ್ ವಾಗ್ದಾಳಿ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ಹಾಗೂ ‌ಪ್ರತಾಪ್ ಸಿಂಹ ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆ. ಇದಕ್ಕೆ ಕಾಂಗ್ರೆಸ್​​​ ಸಂಸದ ಡಿ.ಕೆ.ಸುರೇಶ್ ಅವರು ಬಿಜೆಪಿ ಹಾಗೂ ಪ್ರತಾಪ್ ಸಿಂಹರದ್ದು ಒಡೆದು ಆಳುವ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದರು.

ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಾಪ್​ ಸಿಂಹ ಟೀಕೆ ವಿಚಾರಕ್ಕೆ ತಿರುಗೇಟು ನೀಡಿದರು. ”ಕಾಂಗ್ರೆಸ್​ನಲ್ಲಿ ಒಡೆದು ಆಳುವ ಸಂಸ್ಕೃತಿ ಇಲ್ಲ. ಪ್ರತಾಪ್ ಸಿಂಹ ಅವರು ಒಡೆದು ಆಳುವ ಸಂಸ್ಕೃತಿ ಇಟ್ಟುಕೊಂಡು ಮನೆಹಾಳು ಮಾಡುತ್ತಾರೆ” ಎಂದು ಕಿಡಿಕಾರಿದ್ದಾರೆ.

”ಸಂಸದ ಪ್ರತಾಪ್​ ಸಿಂಹ ಮುಸ್ಲಿಮರನ್ನು ವಿರೋಧ ಮಾಡುತ್ತಿದ್ದರು. ಈಗ ಯಾಕೆ ಮುಸ್ಲಿಮರ ಮೇಲೆ ಪ್ರೀತಿ. ಅವರು ತತ್ವ ಸಿದ್ಧಾಂತ ‌ಇಟ್ಟುಕೊಂಡಿದ್ದಾರೆ ಅದರಿಂದ ಆಚೆ ಬರುವುದು ಬೇಡ. ಕಾಂಗ್ರೆಸ್ ಪಕ್ಷ​ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತದೆ. ನಾವು ಏನು ಗ್ಯಾರಂಟಿ ಕೊಟ್ಟಿದ್ದೆವೋ ಅದನ್ನ ಅನುಷ್ಠಾನ ಮಾಡುತ್ತೇವೆ. ರಾಜ್ಯದಲ್ಲಿ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಕಾಂಗ್ರೆಸ್​ ಮಾಡುತ್ತಿದೆ” ಎಂದು ಹೇಳಿದರು.

ಈ ವೇಳೆ ಗೋ ಹತ್ಯೆ ನಿಷೇದ ಕಾಯ್ದೆ ರದ್ದು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿದ್ದು, ”ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸರ್ಕಾರ ಏನು ತೀರ್ಮಾನ ಮಾಡುತ್ತೇ ನೋಡೋಣ. ರೈತರಿಗೆ ಅನುಪಯುಕ್ತವಾದ ಜಾನುವಾರುಗಳನ್ನ ಇಂದಿನಿಂದಲೂ ಬೇರೆ ಬೇರೆದಕ್ಕೆ ಬಳಸುತ್ತಿದ್ದಾರೆ. ಈ ಬಗ್ಗೆ ವ್ಯಾಪಾಕ ಚರ್ಚೆ ಆಗಬೇಕು. ರೈತರ ದೃಷ್ಟಿಯಿಂದ ಮತ್ತು ಸಂಸ್ಕೃತಿ‌ ದೃಷ್ಟಿಯಿಂದ ಏನು ಮಾಡಬೇಕು ಎಂದು ಚರ್ಚೆ ಮಾಡಬೇಕಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಗ್ಯಾರಂಟಿ ಜಾರಿಯ ಕುರಿತು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದೇನು?

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ”ಗೃಹಲಕ್ಷ್ಮೀ ಯೋಜನೆ ಜಗಳ ಹಚ್ಚುವಂತಿದೆ. ಮನೆ ಯಜಮಾನಿ ಯಾರು ಅಂತಾ ತೀರ್ಮಾನ ಮಾಡಬೇಕಂತೆ? ಮನೆಯೊಳಗೆ ಅತ್ತೆ – ಸೊಸೆ ಕೂತು ಈ ತೀರ್ಮಾನ ಮಾಡಲು ಸಾಧ್ಯನಾ? ಹಿಂದೂಗಳ ಮನೆಯಲ್ಲದರೂ ಅತ್ತೆ – ಸೊಸೆ ನಡುವೆ ಯಜಮಾನಿಗೆ ಪೈಪೋಟಿ ಇರುತ್ತೆ. ಆದರೆ, ಸಾಬರ ಮನೆಯಲ್ಲಿ ಎರಡು ಹೆಂಡ್ತಿ ಮೂರು ಹೆಂಡ್ತಿ ಇದ್ದಾರೆ. ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? ಅವರ ಮನೆಯೊಳಗೆ ಬೆಂಕಿ ಹಾಕುತ್ತಿದ್ದಿರಿ. ಕುಟುಂಬ ಒಡೆಯುವ ಕೆಲಸ ಆಗುತ್ತಿದೆ” ಎಂದಿದ್ದರು.

”ಜನ್ ಧನ್ ಅಕೌಂಟ್ ಓಪನ್ ಆಗಿದೆ. ಅದಕ್ಕೆ ಆಧಾರ್ ಕಾರ್ಡ್ ಲಿಂಕ್ ಆಗಿದೆ. ಹೀಗಿದ್ದರು ಗೃಹ ಲಕ್ಷ್ಮಿ ಜಾರಿ ಯಾಕೆ ಆಗುತ್ತಿಲ್ಲ. ಗೃಹ ಲಕ್ಷ್ಮಿ ಯೋಜನೆ ಮುಂದೂಡಲು ಕುಂಟು ನೆಪ ಹೇಳಲಾಗುತ್ತಿದೆ. ಚುನಾವಣೆ ಮೊದಲು ಕಾಂಗ್ರೆಸ್‌ನವರು ಊರಿಗೆ ಹೋಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ತಮಟೆ ಬಾರಿಸಿದ್ದರು. ಸದ್ಯ ಮಹಿಳೆಯರ ಉಚಿತ ಪ್ರಯಾಣದ ಬಗ್ಗೆ ಕೆಎಸ್ ಆರ್ ಟಿಸಿ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿಲ್ಲ” ಎಂದು ಟೀಕಿಸಿದ್ದರು.

”ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇವೆ ಎನ್ನುತ್ತಿದ್ದರು. ಈಗ ಸರಾಸರಿ ಆಧರಿಸಿ ಉಚಿತ ವಿದ್ಯುತ್ ಎನ್ನುತ್ತಿದ್ದಾರೆ. ಯಾವುದೇ ಷರತ್ತು ಇಲ್ಲದೇ ಉಚಿತ ವಿದ್ಯುತ್ ಜಾರಿ ಮಾಡಿ. ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತ ಎಂದು ಹೇಳಿದ್ದಿರಿ. ಈಗ ಸರಾಸರಿ ತೆಗೆದು ಉಚಿತ ಕೊಡುತ್ತೇವೆ ಎಂದು ಹೇಳಿದ್ದೀರಿ ಇದು ಮೋಸ ಅಲ್ವಾ? ಯಾವುದು ಷರತ್ತು ಇಲ್ಲದೆ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲೇಬೇಕು” ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...