Homeಕರ್ನಾಟಕಸೂಲಿಬೆಲೆ ಆಟ ಇನ್ನು ನಡೆಯಲ್ಲ: ಎಂ.ಬಿ.ಪಾಟೀಲ್ ಖಡಕ್‌ ಎಚ್ಚರಿಕೆ

ಸೂಲಿಬೆಲೆ ಆಟ ಇನ್ನು ನಡೆಯಲ್ಲ: ಎಂ.ಬಿ.ಪಾಟೀಲ್ ಖಡಕ್‌ ಎಚ್ಚರಿಕೆ

- Advertisement -
- Advertisement -

ಸುಳ್ಳುಗಳನ್ನು ಹೇಳುತ್ತಾರೆಂಬ ಆರೋಪಗಳಿಗೆ ಗುರಿಯಾಗಿರುವ ಬಲಪಂಥೀಯ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಸಚಿವರು, “ಸಮಾಜದಲ್ಲಿ ಕೋಮು ಭಾವನೆ ಸೃಷ್ಟಿಸುವ ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯದು” ಎಂದಿದ್ದಾರೆ.

ಮೈಸೂರಿನಲ್ಲಿ ಆಯೋಜಿಸಲಾಗಿದ್ದ ವಿ.ಡಿ.ಸಾವರ್ಕರ್ ಜಯಂತಿಯಲ್ಲಿ ಮಾತನಾಡಿದ್ದ ಸೂಲಿಬೆಲೆ, ರಾಜ್ಯದಲ್ಲಿ ಹಿಟ್ಲರ್‌ ಸರ್ಕಾರವಿದೆ” ಎಂದಿದ್ದರು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಎಂ.ಬಿ.ಪಾಟೀಲ್‌, “ಬಿಜೆಪಿ ಸರ್ಕಾರದಲ್ಲಿ ಹಿಜಾಬ್, ಹಲಾಲ್, ಉರಿಗೌಡ ಅಂತೆಲ್ಲ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದ ಬಿಜೆಪಿ, ರಾಜ್ಯದ ಅಭಿವೃದ್ಧಿ ಕಡೆಗಣಿಸಿತು” ಎಂದು ಟೀಕಿಸಿದ್ದಾರೆ.

“ರೋಸಿಹೋದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ಮಾಧ್ಯಮಗಳೂ ಸೇರಿದಂತೆ ಎಲ್ಲರ ನಿರೀಕ್ಷೆ ಹುಸಿಗೊಳಿಸಿ ಕಾಂಗ್ರೆಸ್ ಪಕ್ಷಕ್ಕೆ ಅದ್ಭುತ ಬಹುಮತದ ಸರ್ಕಾರ ರಚನೆಗೆ ಮತದಾರ ಪ್ರಭುಗಳು ಆಶೀರ್ವಾದ ಮಾಡಿದ್ದಾರೆ. ನಮ್ಮ ಸರ್ಕಾರ ಎಲ್ಲ ಸಮುದಾಯಗಳ ರಕ್ಷಣೆ ವಿಷಯದಲ್ಲಿ ವಿಶೇಷ ಕಾಳಜಿ ತೋರಲಿದೆ” ಎಂದು ತಿಳಿಸಿದ್ದಾರೆ.

“ಗೋಹತ್ಯೆ ನಿಷೇಧ ಕಾನೂನು, ಮುಸ್ಲಿಮರಿಂದ ಕಿತ್ತುಕೊಂಡ ಶೇ.4 ಮೀಸಲಾತಿ, ಮತಾಂತರ ನಿಷೇಧ ಕಾನೂ ಹಿಂಪಡೆಯುವುದು ಸೇರಿದಂತೆ ಅಹಿಂದ ಸಂಘಟನೆಯ ಬೇಡಿಕೆ ಈಡೇರಿಸುವ ಕುರಿತು ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

“ಈ ಹಿಂದೆ ನಾಲ್ಕು ವರ್ಷ ಸೂಲಿಬೆಲೆ ಅನಾಹುತ ಮಾಡಿದ್ದಾರೆ. ಸೂಲಿಬೆಲೆ ಮಾಡಿದ ಅನಾಹುತಗಳನ್ನ ಈಗ ನಾವು ಸರಿಪಡೆಸುತ್ತಿದ್ದೇವೆ. ಅಲ್ಲದೇ, ಪಠ್ಯಪುಸ್ತಕ, ಹಿಜಾಬ್, ಹಲಾಲ್, ಅಝಾನ್ ಅಂತ ನಾಟಕ ಮಾಡಿದ್ದಾರೆ. ಇದಕ್ಕೆಲ್ಲ ಇತಿಶ್ರೀ ಹಾಡುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿ’: ಸಚಿವರ ಹೇಳಿಕೆ ಸ್ವಾಗತಿಸಿದ ರೈತರು ಏನಂತಾರೆ?

“ಕೇಸರಿ ಬಣ್ಣ ಬರೀ ಬಿಜೆಪಿಯವರು ಗುತ್ತಿಗೆ ಪಡೆದಿಲ್ಲ. ನಮ್ಮ ದೇವಸ್ಥಾನಗಳ ಮೇಲೆ ಕೇಸರಿ ಧ್ವಜವನ್ನೇ ಹಾರಿಸಲಾಗುತ್ತದೆ. ನಮ್ಮ ಮನೆಯಲ್ಲೂ ಕೇಸರಿ ಬಣ್ಣ ಬಳಕೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಶನಿವಾರ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸೂಲಿಬೆಲೆ, “ಇಂದಿನ ಕಾರ್ಯಕ್ರಮ ಇಲ್ಲ, ರದ್ದಾಗಲಿದೆ ಎಂದು ನಾವು ತಿಳಿದಿದ್ದೆವು. ಇದಕ್ಕೆ ಹಲವರು ಕಾರಣಗಳು ಇವೆ. ಸಾಹಿತಿ ಎಸ್.ಎಲ್.ಭೈರಪ್ಪ, ನಾನು ಇದ್ದೇವೆ ಎಂದು ರದ್ದು ಪಡಿಸುವ ಕೆಲಸವಾಗಿದೆ” ಎಂದಿದ್ದರು.

“ಸಾವರ್ಕರ್ ಕಾರ್ಯಕ್ರಮದ ಬಗ್ಗೆ ಸರ್ಕಾರಕ್ಕೆ ಭಯ ಇರಬಹುದು. ಅಧಿಕಾರಕ್ಕೆ ಬಂದು ಒಂದು ವಾರವಾಗಿಲ್ಲ. ಅಷ್ಟರಲ್ಲಿ ಸಾವರ್ಕರ್ ಜಯಂತಿ ರದ್ದು ಮಾಡಲು ಹೊರಟಿದ್ದಾರೆ. ಇದು ಹಿಟ್ಲರ್ ಸರ್ಕಾರ. ಸಾವರ್ಕರ್ ಇವತ್ತಿಗೂ ಪ್ರಸ್ತುತ ಹಾಗೂ ಜೀವಂತ” ಎಂದು ಅಭಿಪ್ರಾಯಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...