Homeಮುಖಪುಟಒಡಿಶಾ ರೈಲು ದುರಂತಕ್ಕೆ ಭಾರತ ಸರ್ಕಾರ, ಸಚಿವರು, ಪ್ರಧಾನಿ ಮೋದಿ ವೈಫಲ್ಯವೇ ಕಾರಣ: ತೇಜಸ್ವಿ ಯಾದವ್...

ಒಡಿಶಾ ರೈಲು ದುರಂತಕ್ಕೆ ಭಾರತ ಸರ್ಕಾರ, ಸಚಿವರು, ಪ್ರಧಾನಿ ಮೋದಿ ವೈಫಲ್ಯವೇ ಕಾರಣ: ತೇಜಸ್ವಿ ಯಾದವ್ ವಾಗ್ದಾಳಿ

- Advertisement -
- Advertisement -

270 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ಅಪಘಾತದ ಬಗ್ಗೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಭಾನುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಭಾರತ ಸರ್ಕಾರ, ರೈಲ್ವೆ ಸಚಿವರು ಮತ್ತು ಪ್ರಧಾನಿಯ ಸಂಪೂರ್ಣ ವೈಫಲ್ಯ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ” ಎಂದು ಪ್ರತಿಪಾದಿಸಿದ್ದಾರೆ. ರೈಲ್ವೇ ಸುರಕ್ಷತೆಯು ತಮ್ಮ ಆದ್ಯತೆಯಾಗಿದೆ ಎಂದು ಹೇಳಿಕೊಳ್ಳುತ್ತದೆ ಆದರೆ ಅಂತಹ ದೊಡ್ಡ ಅಪಘಾತದ ನಂತರವೂ ಅವರು ಯಾವುದೇ ಜವಾಬ್ದಾರಿಯನ್ನು ತೆಗೆದುಕೊಂಡಿಲ್ಲ” ಎಂದು ಕೇಂದ್ರ ಬಿಜೆಪಿ ವಿರುದ್ಧ ಹರಿಹಾಯ್ದರು.

”ಇದು ರಾಜಕೀಯಕ್ಕೆ ಅವಕಾಶವಾಗಬಾರದು, ಕೇಂದ್ರ ಸರ್ಕಾರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಅದೊಂದು ದೊಡ್ಡ ಅಪಘಾತ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

”ಕೇಂದ್ರವು ಕುಸ್ತಿಪಟುಗಳ ಸಮಸ್ಯೆಯ ಯಾವುದೇ ತನಿಖೆಯನ್ನು ಮಾಡಿಲ್ಲ, ಹಾಗಾಗಿ ಅವರು ಏನು ಮಾಡುತ್ತಾರೆಂದು ನನಗೆ ತಿಳಿದಿಲ್ಲ. ಕಾಲವೇ ಉತ್ತರಿಸುತ್ತದೆ. ಆದರೆ ಅಲ್ಲಿಯವರೆಗೆ ಯಾರಾದರೂ ಜವಾಬ್ದಾರಿ ತೆಗೆದುಕೊಳ್ಳಬೇಕು… ಇಂತಹ ದೊಡ್ಡ ಘಟನೆ ನಡೆದಿದೆ, ಪ್ರಧಾನಿ ಮೋದಿ ಪತ್ರಿಕಾಗೋಷ್ಠಿ ನಡೆಸಬೇಕಿತ್ತು” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಏಕೆ ತಮ್ಮ ಹುದ್ದೆಯನ್ನು ತ್ಯಜಿಸಬೇಕು?: 9 ಕಾರಣಗಳನ್ನು ಕೊಟ್ಟ ಸುರ್ಜೆವಾಲಾ

ಇತ್ತೀಚಿನ ವರದಿಗಳ ಪ್ರಕಾರ, ಒಡಿಶಾದ ಬಾಲಸೋರ್ ಬಳಿಯ ಬಹನಾಗ ರೈಲು ನಿಲ್ದಾಣದ ಬಳಿ ಮೂರು ರೈಲುಗಳು ಹಳಿ ತಪ್ಪಿದ ಪರಿಣಾಮ ಭಾರೀ ಅಪಘಾತ ಸಂಭವಿಸಿದೆ. ಟ್ರೈನ್‌ಗಳು ಡಿಕ್ಕಿ ಹೊಡೆದ ಪರಿಣಾಮ ರೈಲಿನ 3 ಸ್ಲೀಪರ್ ಕೋಚ್‌ಗಳನ್ನ ಹೊರತುಪಡಿಸಿ ಉಳಿದ 18 ಬೋಗಿಗಳು ಹಳಿ ತಪ್ಪಿ ಮತ್ತೊಂದು ಹಳಿಯ ಮೇಲೆ ಬಿದ್ದಿವೆ.

ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹೌರಾಗೆ ತೆರಳುತ್ತಿದ್ದಾಗ ಹಲವಾರು ಬೋಗಿಗಳು ಹಳಿತಪ್ಪಿ ಪಕ್ಕದ ಹಳಿಗಳ ಮೇಲೆ ಬಿದ್ದವು.

ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್, ಚೆನ್ನೈಗೆ ತೆರಳುತ್ತಿದ್ದಾಗ, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಹಳಿತಪ್ಪಿದ ಕೋಚ್‌ಗಳಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ 275 ಜನರು ಸಾವನ್ನಪ್ಪಿದ್ದಾರೆ ಮತ್ತು 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಈ ಅಪಘಾತಕ್ಕೆ ಕಾರಣ ಏನು?

ಕೋರಮಂಡಲ್‌ ಎಕ್ಸ್‌ಪ್ರೆಸ್‌ಗೆ ಬಹನಾಗ ನಿಲ್ದಾಣದಲ್ಲಿ’ಸ್ಟಾಪ್‌’ ಇರಲಿಲ್ಲ. ಹೀಗಾಗಿ ಗಂಟೆಗೆ 127 ಕಿ.ಮೀ. ವೇಗದಲ್ಲಿ ಬರುತ್ತಿದ್ದ ರೈಲಿಗೆ ಗ್ರೀನ್‌ ಸಿಗ್ನಲ್‌ ನೀಡಲಾಯಿತು. ಆದರೆ, ಈ ವೇಳೆ ಈಗಾಗಲೇ ಗೂಡ್ಸ್‌ ರೈಲು ನಿಂತಿರುವ ಹಳಿಯ ಮೇಲೆ ರೈಲು ಚಲಿಸಿದೆ. ಹೀಗಾಗಿ ನಿಂತಿದ್ದ ಗೂಡ್ಸ್‌ ರೈಲಿಗೆ ‘ಕೋರಮಂಡಲ್‌ ಎಕ್ಸ್‌ಪ್ರೆಸ್‌’ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೋರಮಂಡಲ್‌ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ ಗೂಡ್ಸ್‌ ರೈಲಿನ ಬೋಗಿಯ ಮೇಲೆ ಹತ್ತಿದರೆ, ಅದರ 13 ಬೋಗಿಗಳು ಹಳಿ ತಪ್ಪಿ ಚಲ್ಲಾಪಿಲ್ಲಿಯಾಗಿ ಉರುಳಿ ಬಿದ್ದಿವೆ.

ಹಳಿ ತಪ್ಪಿದ ಬೋಗಿಗಳಲ್ಲಿ ಹಲವು ಬೋಗಿಗಳು ಪಕ್ಕದ ಹಳಿಯ ಮೇಲೂ ಉರುಳಿ ಬಿದ್ದಿವೆ. ಇದಾಗಿ ನಾಲ್ಕೇ ನಿಮಿಷದೊಳಗೆ ‘ಹೌರಾ-ಯಶವಂತಪುರ’ ರೈಲು ಸಹ ಅದೇ ನಿಲ್ದಾಣಕ್ಕೆ ಬಂದಿದೆ. ಪಕ್ಕದ ಹಳಿಯಿಂದ ಉರುಳಿ ಬಿದ್ದಿದ್ದ ಅಪಘಾತಗೊಂಡ ರೈಲಿನ ಬೋಗಿಗಳಿಗೆ ಹೌರಾ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದಿದೆ. ಇದರಿಂದ ಆ ರೈಲಿನ 3 ಬೋಗಿಗಳೂ ಉರುಳಿ ಬಿದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...