Homeಕರ್ನಾಟಕಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ...

ಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ ಕಣ್ಣು

ಒಡಿಸ್ಸಾ ರೈಲು ದುರಂತಕ್ಕೆ ಕೋಮು ಬಣ್ಣ ಹಚ್ಚಲು ಯತ್ನಿಸಿ ಬಿಜೆಪಿ ನಾಯಕಿ ಎಸ್.ಶಕುಂತಲಾ ಟೀಕೆಗೆ ಗುರಿಯಾಗಿದ್ದಾರೆ

- Advertisement -
- Advertisement -

ಒಡಿಶಾದ ಭೀಕರ ಸರಣಿ ರೈಲು ಅಪಘಾತ ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಪ್ರಕ್ರಿಯೆಯಲ್ಲಾದ ಲೋಪವೇ ಕಾರಣ ಎಂದು ಸ್ವತಃ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೇ ಹೇಳಿದ್ದಾರೆ. ಆದರೆ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್​ ಎನ್ನುವವರು ಈ ದುರಂತಕ್ಕೆ ಮಸೀದಿ ಕಾರಣ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದು, ಸಧ್ಯ ಅದು ವೈರಲ್ ಆಗುತ್ತಿದೆ. ಈ ಪೋಸ್ಟ್ ಹಾಕಿರುವ ತುಮಕೂರಿನ ಮಹಿಳೆ ಯಾರೆಂದು ಒಡಿಶಾ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್ ಎನ್ನುವವರು ಈ ಘಟನೆಗೆ ಮಸೀದಿ ಪಕ್ಕದಲ್ಲಿ ಇರುವುದು ಕಾರಣ ಎಂದು ಬಿಂಬಿಸುವ ಅರ್ಥದಲ್ಲಿ ಪೋಸ್ಟ್ ಮಾಡಿದ್ದಾರೆ. ಇನ್ನು ಕೆಲವರು ಒಡಿಶಾ ಬಾಲಸೋರ್ ರೈಲು ದುರಂತಕ್ಕೆ ಜಿಹಾದಿಗಳು ಕಾರಣ ಎಂದು ಘಟನೆ ನಡೆದ ಸಮೀಪವಿರುವ ಮಸೀದಿ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ.

ಬಿಜೆಪಿ ನಾಯಕಿ ಶಕುಂತಲಾ ಎಸ್ ಅವರ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಒಡಿಶಾ ಪೊಲೀಸರ ಗಮನಕ್ಕೆ ಬಂದಿದೆ. ಕೂಡಲೇ ಒಡಿಶಾ ಪೊಲೀಸರು, ಮಸೀದಿ ಫೋಟೋ ಹರಿಬಿಟ್ಟ ಮಹಿಳೆ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಕರ್ನಾಟಕ ಪೊಲೀಸರಿಂದ ಮಹಿಳೆಯ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಒಡಿಶಾ ಪೊಲೀಸರು ಈ ಸುಳ್ಳು ಸುದ್ದಿ ಬಗ್ಗೆ ಟ್ವಿಟ್ಟರ್​ ಮೂಲಕ ಎಚ್ಚರಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

”ರೈಲು ದುರಂತದ ಬಗ್ಗೆ ಕೇಂದ್ರ ರೈಲ್ವೆ ಇಲಾಖೆ ತನಿಖೆ ನಡೆಸುತ್ತಿದೆ. ಯಾರು ಕೊಡ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಬಾರದು . ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಪೋಸ್ಟ್ ಮಾಡಿರುವವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಒಡಿಶಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಒಡಿಶಾದ ಭೀಕರ ರೈಲು ದುರಂತಕ್ಕೆ ಮುಸ್ಲಿಂ ಸಮುದಾಯ ಕಾರಣವೆಂದು ಘಟನೆ ಸಮೀಪದಲ್ಲಿರುವ ಮಸೀದಿ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಮೂಲಕ ಕೋಮು ಸೌಹಾರ್ದತೆಯನ್ನು ಕೆಡಿಸಲು ಪ್ರಯತ್ನಗಳು ನಡೆಯುತ್ತಿದ್ದು, ಇದರ ಮೇಲೆ ಒಡಿಶಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ಈ ರೀತಿ ಕೋಮು ಸೌಹಾರ್ದತೆಯನ್ನು ಕೆಡಿಸುವ ಪ್ರಯತ್ನ ಮಾಡಿರುವ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್ ವಿರುದ್ಧ ಯಾವುದೇ ಕ್ರಮ ವಹಿಸಿಲ್ಲ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಮಸೀದಿಯಲ್ಲ; ಮಂದಿರ

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ವೈರಲ್ ಚಿತ್ರದಲ್ಲಿ ಕಂಡುಬರುವ ಗುರುತು ಮಾಡಲಾದ ಧಾರ್ಮಿಕ ಕೇಂದ್ರ ಮಸೀದಿಯಲ್ಲ ಎಂದು ಸ್ಪಷ್ಟವಾಗಿದೆ. ಬದಲಿಗೆ ಗುರುತು ಮಾಡಿರುವ ಚಿತ್ರವು ದೇವಸ್ಥಾನ ಎಂದು ‘ಆಲ್ಟ್‌ನ್ಯೂಸ್’ ವರದಿ ಮಾಡಿದೆ.

ಅಪಘಾತ ನಡೆದ ಸ್ಥಳದಲ್ಲಿ ಹಾಜರಿದ್ದ ಪತ್ರಕರ್ತ ತಮಲ್ ಸಹಾ ಅವರನ್ನು ಆಲ್ಟ್‌ನ್ಯೂಸ್ ತಂಡ ಸಂಪರ್ಕಿಸಿದೆ. ಘಟನೆ ನಡೆದ ಸ್ಥಳಕ್ಕೆ ಸಮೀಪದಲ್ಲಿ ಕಂಡುಬರುವ ರಚನೆಯು ನಿಜವಾಗಿಯೂ ದೇವಾಲಯವಾಗಿದೆ ಎಂದು ಅವರು ‘ಆಲ್ಟ್ ನ್ಯೂಸ್‌’ಗೆ ಖಚಿತಪಡಿಸಿದ್ದಾರೆ.

ವೈರಲ್ ಪೋಸ್ಟ್‌ನಲ್ಲಿ ಮಸೀದಿ ಎಂದು ಪ್ರತಿಪಾದಿಸಿರುವ ಬಿಳಿ ಬಣ್ಣದ ಕಟ್ಟಡವು ಇಸ್ಕಾನ್ ದೇವಸ್ಥಾನವಾಗಿದೆ. ಐದು ತಿಂಗಳ ಹಿಂದೆ ಅಪ್‌ಲೋಡ್ ಮಾಡಲಾದ ದೇವಾಲಯದ ಯೂಟ್ಯೂಬ್ ವೀಡಿಯೊದಲ್ಲಿಯೂ ಇದು ಸ್ಪಷ್ಟವಾಗುತ್ತದೆ. ವಿಡಿಯೋವನ್ನು ಅಪ್‌ಲೋಡ್ ಮಾಡುವ ಸಂದರ್ಭದಲ್ಲಿ ದೇವಾಲಯದ ನಿರ್ಮಾಣದ ಕೆಲಸ ಪ್ರಗತಿಯಲಿರುವುದು. ಗೊತ್ತಾಗುತ್ತದೆ.

ಆಲ್ಟ್‌ನ್ಯೂಸ್ ತಂಡಕ್ಕೆ ಮಾಹಿತಿ ನೀಡಿರುವ ಪತ್ರಕರ್ತ ತಮಾಲ್ ಸಹಾ ಅವರು ದೇವಾಲಯಕ್ಕೆ ಭೇಟಿ ನೀಡಿ, ದೇವಾಲಯದ ಹೊರಗೆ ಇಸ್ಕಾನ್ ಬಹನಾಗ ಎಂಬ ಬೋರ್ಡ್‌ ಇರುವ ಚಿತ್ರವನ್ನು ಕಳುಹಿಸಿದ್ದಾರೆ ಎಂದು ‘ಆಲ್ಟ್‌ನ್ಯೂಸ್’ ವರದಿ ಮಾಡಿದೆ. ದೇವಸ್ಥಾನದ ಪ್ರವೇಶ ದ್ವಾರದ ಚಿತ್ರವನ್ನು ನೋಡಬಹುದು.

ಉದ್ದೇಶಿತ ಮಸೀದಿಯನ್ನು ತೋರಿಸುವ ವೈರಲ್ ಚಿತ್ರ ಮತ್ತು ರಾಯಿಟರ್ಸ್ ವರದಿಯಲ್ಲಿನ ಚಿತ್ರಗಳನ್ನು ಹೋಲಿಕೆ ಮಾಡಿದಾಗ ಈ ಮೂರು ಚಿತ್ರಗಳು ಒಂದೇ ಎಂಬುದು ಸ್ಪಷ್ಟವಾಗುತ್ತದೆ. ಅಂದರೆ, ವೈರಲ್ ಪೋಸ್ಟ್‌ಗಳಲ್ಲಿ, ಅದನ್ನು ಮಸೀದಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದ್ದು, ಅದು ನಿಜವಾಗಿಯೂ ದೇವಾಲಯವಾಗಿದೆ.

ಬಹನಾಗಾದ ಇಸ್ಕಾನ್ ದೇವಾಲಯದ ಆಡಳಿತ ಮಂಡಳಿಯ ಸದಸ್ಯರನ್ನು ಆಲ್ಟ್‌ನ್ಯೂಸ್ ಸಂಪರ್ಕಿಸಿ ಮಾಹಿತಿ ಪಡೆದಿದ್ದು, ಅವರು ದೇವಾಲಯದ ಸಮೀಪವಿರುವ ಹಳಿಗಳ ಮೇಲೆ ರೈಲು ಅಪಘಾತ ಸಂಭವಿಸಿರುವುದನ್ನು ಖಚಿತಪಡಿಸಿದ್ದಾರೆ. ಅಪಘಾತ ಸ್ಥಳದ ವೈರಲ್ ಚಿತ್ರದಲ್ಲಿ ಟ್ರ್ಯಾಕ್‌ಗಳ ಪಕ್ಕದಲ್ಲಿ ಕಂಡುಬರುವ ಕಟ್ಟಡವು ಇಸ್ಕಾನ್ ದೇವಾಲಯವಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Bjp shakuntala should be immediate FIR and arrest the odisha govt to bjp facist trying to provoke the incident as to show the Hindus bcoz of masjid it happened if not accident not happen. Sharing humanity of feel sad what happen to the people’s who died are severe wounded .sharing with poisoning bhagwa terrorist should arrest else try to do again again giving other angels.

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...