Homeಕರ್ನಾಟಕಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ...

ಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ ಕಣ್ಣು

ಒಡಿಸ್ಸಾ ರೈಲು ದುರಂತಕ್ಕೆ ಕೋಮು ಬಣ್ಣ ಹಚ್ಚಲು ಯತ್ನಿಸಿ ಬಿಜೆಪಿ ನಾಯಕಿ ಎಸ್.ಶಕುಂತಲಾ ಟೀಕೆಗೆ ಗುರಿಯಾಗಿದ್ದಾರೆ

- Advertisement -
- Advertisement -

ಒಡಿಶಾದ ಭೀಕರ ಸರಣಿ ರೈಲು ಅಪಘಾತ ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಪ್ರಕ್ರಿಯೆಯಲ್ಲಾದ ಲೋಪವೇ ಕಾರಣ ಎಂದು ಸ್ವತಃ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೇ ಹೇಳಿದ್ದಾರೆ. ಆದರೆ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್​ ಎನ್ನುವವರು ಈ ದುರಂತಕ್ಕೆ ಮಸೀದಿ ಕಾರಣ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದು, ಸಧ್ಯ ಅದು ವೈರಲ್ ಆಗುತ್ತಿದೆ. ಈ ಪೋಸ್ಟ್ ಹಾಕಿರುವ ತುಮಕೂರಿನ ಮಹಿಳೆ ಯಾರೆಂದು ಒಡಿಶಾ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್ ಎನ್ನುವವರು ಈ ಘಟನೆಗೆ ಮಸೀದಿ ಪಕ್ಕದಲ್ಲಿ ಇರುವುದು ಕಾರಣ ಎಂದು ಬಿಂಬಿಸುವ ಅರ್ಥದಲ್ಲಿ ಪೋಸ್ಟ್ ಮಾಡಿದ್ದಾರೆ. ಇನ್ನು ಕೆಲವರು ಒಡಿಶಾ ಬಾಲಸೋರ್ ರೈಲು ದುರಂತಕ್ಕೆ ಜಿಹಾದಿಗಳು ಕಾರಣ ಎಂದು ಘಟನೆ ನಡೆದ ಸಮೀಪವಿರುವ ಮಸೀದಿ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ.

ಬಿಜೆಪಿ ನಾಯಕಿ ಶಕುಂತಲಾ ಎಸ್ ಅವರ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಒಡಿಶಾ ಪೊಲೀಸರ ಗಮನಕ್ಕೆ ಬಂದಿದೆ. ಕೂಡಲೇ ಒಡಿಶಾ ಪೊಲೀಸರು, ಮಸೀದಿ ಫೋಟೋ ಹರಿಬಿಟ್ಟ ಮಹಿಳೆ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಕರ್ನಾಟಕ ಪೊಲೀಸರಿಂದ ಮಹಿಳೆಯ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಒಡಿಶಾ ಪೊಲೀಸರು ಈ ಸುಳ್ಳು ಸುದ್ದಿ ಬಗ್ಗೆ ಟ್ವಿಟ್ಟರ್​ ಮೂಲಕ ಎಚ್ಚರಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

”ರೈಲು ದುರಂತದ ಬಗ್ಗೆ ಕೇಂದ್ರ ರೈಲ್ವೆ ಇಲಾಖೆ ತನಿಖೆ ನಡೆಸುತ್ತಿದೆ. ಯಾರು ಕೊಡ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಬಾರದು . ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಪೋಸ್ಟ್ ಮಾಡಿರುವವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಒಡಿಶಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಒಡಿಶಾದ ಭೀಕರ ರೈಲು ದುರಂತಕ್ಕೆ ಮುಸ್ಲಿಂ ಸಮುದಾಯ ಕಾರಣವೆಂದು ಘಟನೆ ಸಮೀಪದಲ್ಲಿರುವ ಮಸೀದಿ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಮೂಲಕ ಕೋಮು ಸೌಹಾರ್ದತೆಯನ್ನು ಕೆಡಿಸಲು ಪ್ರಯತ್ನಗಳು ನಡೆಯುತ್ತಿದ್ದು, ಇದರ ಮೇಲೆ ಒಡಿಶಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ಈ ರೀತಿ ಕೋಮು ಸೌಹಾರ್ದತೆಯನ್ನು ಕೆಡಿಸುವ ಪ್ರಯತ್ನ ಮಾಡಿರುವ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್ ವಿರುದ್ಧ ಯಾವುದೇ ಕ್ರಮ ವಹಿಸಿಲ್ಲ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಮಸೀದಿಯಲ್ಲ; ಮಂದಿರ

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ವೈರಲ್ ಚಿತ್ರದಲ್ಲಿ ಕಂಡುಬರುವ ಗುರುತು ಮಾಡಲಾದ ಧಾರ್ಮಿಕ ಕೇಂದ್ರ ಮಸೀದಿಯಲ್ಲ ಎಂದು ಸ್ಪಷ್ಟವಾಗಿದೆ. ಬದಲಿಗೆ ಗುರುತು ಮಾಡಿರುವ ಚಿತ್ರವು ದೇವಸ್ಥಾನ ಎಂದು ‘ಆಲ್ಟ್‌ನ್ಯೂಸ್’ ವರದಿ ಮಾಡಿದೆ.

ಅಪಘಾತ ನಡೆದ ಸ್ಥಳದಲ್ಲಿ ಹಾಜರಿದ್ದ ಪತ್ರಕರ್ತ ತಮಲ್ ಸಹಾ ಅವರನ್ನು ಆಲ್ಟ್‌ನ್ಯೂಸ್ ತಂಡ ಸಂಪರ್ಕಿಸಿದೆ. ಘಟನೆ ನಡೆದ ಸ್ಥಳಕ್ಕೆ ಸಮೀಪದಲ್ಲಿ ಕಂಡುಬರುವ ರಚನೆಯು ನಿಜವಾಗಿಯೂ ದೇವಾಲಯವಾಗಿದೆ ಎಂದು ಅವರು ‘ಆಲ್ಟ್ ನ್ಯೂಸ್‌’ಗೆ ಖಚಿತಪಡಿಸಿದ್ದಾರೆ.

ವೈರಲ್ ಪೋಸ್ಟ್‌ನಲ್ಲಿ ಮಸೀದಿ ಎಂದು ಪ್ರತಿಪಾದಿಸಿರುವ ಬಿಳಿ ಬಣ್ಣದ ಕಟ್ಟಡವು ಇಸ್ಕಾನ್ ದೇವಸ್ಥಾನವಾಗಿದೆ. ಐದು ತಿಂಗಳ ಹಿಂದೆ ಅಪ್‌ಲೋಡ್ ಮಾಡಲಾದ ದೇವಾಲಯದ ಯೂಟ್ಯೂಬ್ ವೀಡಿಯೊದಲ್ಲಿಯೂ ಇದು ಸ್ಪಷ್ಟವಾಗುತ್ತದೆ. ವಿಡಿಯೋವನ್ನು ಅಪ್‌ಲೋಡ್ ಮಾಡುವ ಸಂದರ್ಭದಲ್ಲಿ ದೇವಾಲಯದ ನಿರ್ಮಾಣದ ಕೆಲಸ ಪ್ರಗತಿಯಲಿರುವುದು. ಗೊತ್ತಾಗುತ್ತದೆ.

ಆಲ್ಟ್‌ನ್ಯೂಸ್ ತಂಡಕ್ಕೆ ಮಾಹಿತಿ ನೀಡಿರುವ ಪತ್ರಕರ್ತ ತಮಾಲ್ ಸಹಾ ಅವರು ದೇವಾಲಯಕ್ಕೆ ಭೇಟಿ ನೀಡಿ, ದೇವಾಲಯದ ಹೊರಗೆ ಇಸ್ಕಾನ್ ಬಹನಾಗ ಎಂಬ ಬೋರ್ಡ್‌ ಇರುವ ಚಿತ್ರವನ್ನು ಕಳುಹಿಸಿದ್ದಾರೆ ಎಂದು ‘ಆಲ್ಟ್‌ನ್ಯೂಸ್’ ವರದಿ ಮಾಡಿದೆ. ದೇವಸ್ಥಾನದ ಪ್ರವೇಶ ದ್ವಾರದ ಚಿತ್ರವನ್ನು ನೋಡಬಹುದು.

ಉದ್ದೇಶಿತ ಮಸೀದಿಯನ್ನು ತೋರಿಸುವ ವೈರಲ್ ಚಿತ್ರ ಮತ್ತು ರಾಯಿಟರ್ಸ್ ವರದಿಯಲ್ಲಿನ ಚಿತ್ರಗಳನ್ನು ಹೋಲಿಕೆ ಮಾಡಿದಾಗ ಈ ಮೂರು ಚಿತ್ರಗಳು ಒಂದೇ ಎಂಬುದು ಸ್ಪಷ್ಟವಾಗುತ್ತದೆ. ಅಂದರೆ, ವೈರಲ್ ಪೋಸ್ಟ್‌ಗಳಲ್ಲಿ, ಅದನ್ನು ಮಸೀದಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದ್ದು, ಅದು ನಿಜವಾಗಿಯೂ ದೇವಾಲಯವಾಗಿದೆ.

ಬಹನಾಗಾದ ಇಸ್ಕಾನ್ ದೇವಾಲಯದ ಆಡಳಿತ ಮಂಡಳಿಯ ಸದಸ್ಯರನ್ನು ಆಲ್ಟ್‌ನ್ಯೂಸ್ ಸಂಪರ್ಕಿಸಿ ಮಾಹಿತಿ ಪಡೆದಿದ್ದು, ಅವರು ದೇವಾಲಯದ ಸಮೀಪವಿರುವ ಹಳಿಗಳ ಮೇಲೆ ರೈಲು ಅಪಘಾತ ಸಂಭವಿಸಿರುವುದನ್ನು ಖಚಿತಪಡಿಸಿದ್ದಾರೆ. ಅಪಘಾತ ಸ್ಥಳದ ವೈರಲ್ ಚಿತ್ರದಲ್ಲಿ ಟ್ರ್ಯಾಕ್‌ಗಳ ಪಕ್ಕದಲ್ಲಿ ಕಂಡುಬರುವ ಕಟ್ಟಡವು ಇಸ್ಕಾನ್ ದೇವಾಲಯವಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Bjp shakuntala should be immediate FIR and arrest the odisha govt to bjp facist trying to provoke the incident as to show the Hindus bcoz of masjid it happened if not accident not happen. Sharing humanity of feel sad what happen to the people’s who died are severe wounded .sharing with poisoning bhagwa terrorist should arrest else try to do again again giving other angels.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...