Homeಮುಖಪುಟವಂದೇ ಭಾರತ್‌ಗೆ ಒತ್ತು ನೀಡಿ ಉಳಿದ ರೈಲುಗಳನ್ನು ಕಡೆಗಣಿಸುತ್ತಿದ್ದಾರೆಯೇ ಮೋದಿ?

ವಂದೇ ಭಾರತ್‌ಗೆ ಒತ್ತು ನೀಡಿ ಉಳಿದ ರೈಲುಗಳನ್ನು ಕಡೆಗಣಿಸುತ್ತಿದ್ದಾರೆಯೇ ಮೋದಿ?

- Advertisement -
- Advertisement -

ಒಡಿಶಾದಲ್ಲಿ ಶುಕ್ರವಾರ ಮೂರು ರೈಲುಗಳು ಡಿಕ್ಕಿಯಾಗಿ ಕನಿಷ್ಠ 288 ಜನರು ಸಾವನ್ನಪ್ಪಿದ್ದಾರೆ ಮತ್ತು 900 ಜನರು ಗಾಯಗೊಂಡಿದ್ದಾರೆ. ಇದು ಭಾರತದ ಅತ್ಯಂತ ಕೆಟ್ಟ ರೈಲ್ವೆ ದುರಂತಗಳಲ್ಲಿ ಒಂದಾಗಿದೆ.

ಈ ಅಪಘಾತವು ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಮಾತ್ರವಲ್ಲದೆ, ಭಾರತೀಯ ರೈಲ್ವೆಯನ್ನು ಕಾಡುತ್ತಿರುವ ಇತರ ಸಮಸ್ಯೆಗಳತ್ತಲೂ ಬೊಟ್ಟು ಮಾಡಿದೆ. ಜನಸಂದಣಿ, ರೈಲಿನ ವಿಳಂಬದಂತಹ ಸಮಸ್ಯೆಗಳನ್ನು ಇದು ಎತ್ತಿ ಹಿಡಿದಿದೆ. ಇವುಗಳು ದೀರ್ಘಕಾಲದ ಕಳವಳಕಾರಿ ಸಂಗತಿಗಳಾದರೂ ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಇಚ್ಛಾಶಕ್ತಿಯು ಈ ಸಮಸ್ಯೆಗಳ ಮೇಲೆ ಕೇಂದ್ರೀಕೃತವಾಗಿಲ್ಲ. ಆದರೆ ವಂದೇ ಭಾರತ್‌ ರೈಲಿಗೆ ಒತ್ತು ಸಿಕ್ಕಿದೆ.

ವಂದೇ ಭಾರತ್‌ಗೆ ಒತ್ತು

‘ಎಕನಾಮಿಕ್ ಟೈಮ್ಸ್’ ವರದಿ ಪ್ರಕಾರ ರೈಲ್ವೇ ಇಲಾಖೆಯು ಪ್ರತಿ ವಂದೇ ಭಾರತ್ ರೈಲಿಗಾಗಿ 115 ಕೋಟಿ ರೂಪಾಯಿಗಳನ್ನು ಪಾವತಿಸುತ್ತಿದೆ. ಇದೇ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಈ ರೈಲುಗಳ ಮೇಲೆ ಸರ್ಕಾರ ಗಮನಹರಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರೇ ಸ್ವತಃ ಹಲವಾರು ವಂದೇ ಭಾರತ್ ಮಾರ್ಗಗಳನ್ನು ಪ್ರಾರಂಭಿಸಿದ್ದಾರೆ, ರೈಲುಗಳ ಪ್ರಯೋಜನಗಳ ಬಗ್ಗೆ ಪಟ್ಟುಬಿಡದೆ ಪ್ರಚಾರವನ್ನು ನಡೆಸುತ್ತಿದ್ದಾರೆ.

ಫೆಬ್ರವರಿಯಲ್ಲಿ ಕೇಂದ್ರ ಬಜೆಟ್‌ನಲ್ಲಿ ರೈಲ್ವೆಗೆ 2.4 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಾಗ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, “ವಂದೇ ಭಾರತ್ ರೈಲುಗಳ ಉತ್ಪಾದನೆಯನ್ನು ಹೆಚ್ಚಿಸಲು ಹಣವನ್ನು ಬಳಸಲಾಗುವುದು” ಎಂದು ಒತ್ತಿ ಹೇಳಿದರು.

ವಂದೇ ಭಾರತ್ ಟಿಕೆಟ್‌ ದರಗಳು ಭಾರತೀಯ ರೈಲ್ವೆಯ ಸಾಮಾನ್ಯ ರೈಲುಗಳಿಗಿಂತ ಹೆಚ್ಚಾಗಿದೆ. ಈ ರೈಲು 2019-20ರಲ್ಲಿ 808 ಕೋಟಿ ಪ್ರಯಾಣಿಕರನ್ನು ಒತ್ತು ಸಾಗಿಸಿದೆ. ವಿಶೇಷವಾಗಿ ಬಡವರಿಗೆ ಇದು ವೆಚ್ಚದಾಯಕವಾಗಿದೆ.

ಸುರಕ್ಷತಾ ಮಾನದಂಡಗಳಲ್ಲಿ ಕುಸಿತ

ವಂದೇ ಭಾರತ್ ಉತ್ತೇಜನದ ನಡುವೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ಅಂಕಿಅಂಶಗಳು ಗಮನ ಸೆಳೆಯುತ್ತವೆ. ಕಳೆದ ಕೆಲವು ವರ್ಷಗಳಿಂದ ರೈಲ್ವೆ ಅಪಘಾತಗಳು ಹೆಚ್ಚಿವೆ ಎಂದು ಈ ವರದಿ ತೋರಿಸುತ್ತದೆ. ರೈಲ್ವೇ ಸಚಿವಾಲಯದ ಸುರಕ್ಷತಾ ಪರಿಶೀಲನಾ ದತ್ತಾಂಶವನ್ನು ಉಲ್ಲೇಖಿಸಿದ ಬಿಸಿನೆಸ್ ಸ್ಟ್ಯಾಂಡರ್ಡ್‌ನಲ್ಲಿನ ವರದಿಯ ಪ್ರಕಾರ, “2022-23ರಲ್ಲಿ 37% (ಅವಘಡ) ಏರಿಕೆಯಾಗಿದೆ.”

ಕಳೆದ 10 ವರ್ಷಗಳಲ್ಲಿ ರೈಲು ಅಪಘಾತಗಳು ಸುಮಾರು 2.6 ಲಕ್ಷ ಸಾವುಗಳಿಗೆ ಕಾರಣವಾಗಿವೆ ಎಂದು ಅಪರಾಧ ಬ್ಯೂರೋ ಅಂಕಿಅಂಶಗಳು ಹೇಳುತ್ತಿವೆ. ಪ್ರಯಾಣಿಕರ ರೈಲು ಸೇವೆಗಳು ಗಮನಾರ್ಹವಾಗಿ ಕಡಿಮೆಯಾದಾಗ (ಕೋವಿಡ್ -19 ಸಾಂಕ್ರಾಮಿಕದ ಎರಡು ವರ್ಷಗಳ ಹೊರತುಪಡಿಸಿ) ಕಳೆದ ಐದು ವರ್ಷಗಳಲ್ಲಿ ರೈಲು ಅಪಘಾತಗಳಿಗೆ ಸಂಬಂಧಿಸಿದ ಸಾವುಗಳು ಸ್ವಲ್ಪಮಟ್ಟಿಗೆ ಏರಿದೆ.

ಅನುದಾನ ಕಡಿತದಿಂದ ಸುರಕ್ಷತೆಗೆ ಕುತ್ತು

2017 ಮತ್ತು 2021ರ ನಡುವಿನ ರೈಲು ಅಪಘಾತಗಳು ಹೆಚ್ಚಿನದಾಗಿ ಟ್ರ್ಯಾಕ್ ದೋಷಗಳಂತಹ ಯಾಂತ್ರಿಕ ವೈಫಲ್ಯಗಳಿಂದ ಸಂಭವಿಸಿವೆ. ಆದರೆ ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ 2022-23ರ ಬಜೆಟ್‌ನಲ್ಲಿ ಟ್ರ್ಯಾಕ್ ನವೀಕರಣಗಳಿಗಾಗಿ ಬಜೆಟ್ ಹಂಚಿಕೆಯಲ್ಲಿ 3,222.4 ಕೋಟಿ ರೂ.ಗಳಷ್ಟು ಕಡಿತಗೊಳಿಸಲಾಗಿದೆ.

ಭಾರತದ ಮುಖ್ಯ ಲೆಕ್ಕ ಪರಿಶೋಧನಾ ಸಂಸ್ಥೆಯಾದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ತನ್ನ 2022ರ ವರದಿಯಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದೆ. ರೈಲುಗಳ ಹಳಿತಪ್ಪುವಿಕೆ ಕುರಿತು ಹೈಲೇಟ್ ಮಾಡಿದೆ. ಕೆಲವು ರೈಲ್ವೆ ವಲಯಗಳು 2017-18 ಮತ್ತು 2019-20 ರ ನಡುವೆ ಈ ಉದ್ದೇಶಕ್ಕಾಗಿ (ಟ್ರ್ಯಾಕ್ ನವೀಕರಣ) ನಿಗದಿಪಡಿಸಿದ ಕೆಲವು ನಿಧಿಯನ್ನೂ ಹಿಂತಿರುಗಿಸಿವೆ.

“ನಿಧಿ ಹಂಚಿಕೆಯಲ್ಲಿನ ಕುಸಿತ ಮತ್ತು ಮಂಜೂರು ಮಾಡಿದ ನಿಧಿಯು ಬಳಕೆಯಾಗದಿರುವುದು ಟ್ರ್ಯಾಕ್ ನವೀಕರಣ ಕಾರ್ಯಗಳು ಸಕಾಲಿಕವಾಗಿ ಪೂರ್ಣಗೊಳ್ಳದಿರುವುದರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ” ಎಂದು ಲೆಕ್ಕಪರಿಶೋಧಕರು ಎಚ್ಚರಿಸಿದ್ದಾರೆ.

2017-18ರಿಂದ 2020-21ರವರೆಗಿನ 1,129 ಹಳಿತಪ್ಪಿ ತಪ್ಪಿದ ಪ್ರಕರಣಗಳಲ್ಲಿ ಶೇ. 26%ರಷ್ಟು ಪ್ರಕರಣಗಳು ಟ್ರ್ಯಾಕ್ ನವೀಕರಣ ವಿಷಯಕ್ಕೆ ಸಂಬಂಧಿಸಿವೆ ಎಂದು ಲೆಕ್ಕಪರಿಶೋಧಕರು ಹೇಳಿದ್ದಾರೆ.

ಇದನ್ನೂ ಓದಿರಿ: ಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ ಕಣ್ಣು

“ರೈಲ್ವೆ ಆಡಳಿತವು ರೈಲ್ವೆಯ ಸ್ಥಾಯಿ ಸಮಿತಿಯ [2016-’17] ಅವಲೋಕನಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ವಿಫಲವಾಗಿದೆ. ಟ್ರ್ಯಾಕ್ ನವೀಕರಣಗಳಿಗೆ ಸಂಬಂಧಿಸಿದಂತೆ ಭೌತಿಕ ಮತ್ತು ಆರ್ಥಿಕ ಗುರಿಗಳನ್ನು ಹೆಚ್ಚಿಸುವ ಅಗತ್ಯವಿದೆ” ಎಂದಿದ್ದಾರೆ ಲೆಕ್ಕಪರಿಶೋಧಕರು.

ಹಣಕಾಸಿನ ಕಡಿತದ ಜೊತೆಗೆ, ನೇಮಕಾತಿಯ ಕೊರತೆಯು ಸುರಕ್ಷತೆಯಲ್ಲಿನ ಲೋಪವನ್ನು ಎತ್ತಿ ಹಿಡಿಯುತ್ತದೆ. ಕೇಂದ್ರ ವಲಯದಲ್ಲಿ ಖಾಲಿ ಇರುವ 28,650 ಹುದ್ದೆಗಳಲ್ಲಿ ಅರ್ಧದಷ್ಟು ಹುದ್ದೆಗಳು ಸುರಕ್ಷತಾ ಕೆಲಸಗಳಿಗೆ ಸಂಬಂಧಿಸಿವೆ. ವಿವಿಧ ರೀತಿಯ ಇನ್ಸ್‌ಪೆಕ್ಟರ್‌ಗಳು, ಚಾಲಕರು, ರೈಲು ಪರೀಕ್ಷಕರು ಸೇರಿದಂತೆ ಮೊದಲಾದ ಸಿಬ್ಬಂದಿ ಸುರಕ್ಷತಾ ವರ್ಗಕ್ಕೆ ಸೇರುತ್ತಾರೆ.

ದರ ಏರಿಕೆ, ಪರಿಸ್ಥಿತಿ ಹದಗೆಡುವುದೇ?

ಇತ್ತೀಚಿನ ತಿಂಗಳುಗಳಲ್ಲಿ 130 ಹೆಚ್ಚು ರೈಲುಗಳಿಗೆ “ಸೂಪರ್‌ಫಾಸ್ಟ್” ಸ್ಥಾನಮಾನ ನೀಡಿ, ಅವುಗಳ ದರವನ್ನು ಹೆಚ್ಚಿಸಲಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ. ಹೆಚ್ಚಿನ ದರಗಳ ಹೊರತಾಗಿಯೂ, ಸ್ಲೀಪರ್ ಕೋಚ್‌ಗಳು ಸಹ ಕಿಕ್ಕಿರಿದು ತುಂಬಿರುತ್ತವೆ, ಕಳಪೆ ನಿರ್ವಹಣೆ ಇರುತ್ತದೆ ಎಂದು ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಾ ಬಂದಿದ್ದಾರೆ.

ಶುಕ್ರವಾರ ಅಪಘಾತಕ್ಕೆ ಒಳಗಾದ ರೈಲುಗಳಲ್ಲಿ ಒಂದಾದ ಕೋರಮಂಡಲ್ ಎಕ್ಸ್‌ಪ್ರೆಸ್ ಬಗ್ಗೆಯೇ ಹಲವು ದೂರುಗಳು ಬಂದಿವೆ. ರೈಲು ವಿಳಂಬ ಮತ್ತೊಂದು ಸಮಸ್ಯೆಯಾಗಿದೆ.

ವರದಿ ಕೃಪೆ: ಸ್ಕ್ರಾಲ್.ಇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...