Homeದಲಿತ್ ಫೈಲ್ಸ್ಎರಡು ಬಾರಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಿರ್ಲಕ್ಷ್ಯ ತಾಳಿದ್ದ ಯುಪಿ ಪೊಲೀಸರು

ಎರಡು ಬಾರಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಿರ್ಲಕ್ಷ್ಯ ತಾಳಿದ್ದ ಯುಪಿ ಪೊಲೀಸರು

- Advertisement -
- Advertisement -

2021, ಡಿಸೆಂಬರ್ 31. ಸಂಜೆ 5:30ರ ಸಮಯ. ಬಾಲಕಿಯು ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಗ್ರಾಮದ ನಿವಾಸಿ ಸತೀಶ್ ಅಲ್ಲಿಗೆ ಬಂದನು. “ನಿನ್ನ ತಂದೆ ನಿನ್ನನ್ನು ಅರುಣ್ ಅವರ ಮನೆಗೆ ಬರುವಂತೆ ಕರೆಯುತ್ತಿದ್ದಾರೆ” ಎಂದು ನಂಬಿಸಿ ಕರೆದೊಯ್ದನು ಎಂದು ಎಫ್‌ಐಆರ್‌ ಉಲ್ಲೇಖಿಸುತ್ತದೆ.

ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆದಿರುವ ಭೀಕರ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಉನ್ನಾವೋದಲ್ಲಿನ ಮೌರವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಸತೀಶ್‌ನ ಮಾತನ್ನು ನಂಬಿ ಅರುಣ್ ಮನೆಗೆ ಹೋದಳು. ಅಲ್ಲಿ ರೋಷನ್, ಸುಖ್ದಿನ್, ಅರುಣ್, ರಂಜಿತ್ ಮತ್ತು ಸತೀಶ್ ಇದ್ದರು. ಮೊದಲು ರೋಷನ್ ಆಕೆಯ ಮೇಲೆ ಅತ್ಯಾಚಾರ ಎಸಗಿದನು. ನಂತರ ಸತೀಶ್. ನಂತರ ಎಲ್ಲರೂ ಸರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದರು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಬಾಲಕಿಯು ನಿರ್ಜೀವವಾದಾಗ, ಆಕೆಗೆ ಜ್ಯೂಸ್ ಮತ್ತು ಗ್ಲೂಕೋಸ್ ನೀಡಿದರು. ರಂಜಿತ್ ಇಡೀ ಘಟನೆಯನ್ನು ವಿಡಿಯೋ ಮಾಡಿಕೊಂಡನು. ಆಕೆ ಚೇತರಿಸಿಕೊಂಡಿದ್ದನ್ನು ಕಂಡು ಸುಖ್ದಿನ್ ಆಕೆಗೆ ಆಯುಧ ತೋರಿಸಿ, “ಈ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನನ್ನು, ನಿನ್ನ ಮನೆಯವರನ್ನು ಕೊಂದು ಹಾಕುತ್ತೇವೆ. ರಂಜಿತ್ ವಿಡಿಯೋ ಮಾಡಿಕೊಂಡಿದ್ದಾನೆ. ಜಾಲತಾಣಗಳಲ್ಲಿ ಹಾಕಲಾಗುತ್ತದೆ” ಎಂದು ಬೆದರಿಸಿದನು.

2023ರ ಮೇ 2ರಂದು ಉತ್ತರ ಪ್ರದೇಶದ ಪೋಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದು ಒಂದು ವರ್ಷ ನಾಲ್ಕು ತಿಂಗಳ ನಂತರ ಎಫ್‌ಐಆರ್‌ ಆಗಿದೆ. ದಲಿತ ಸಮುದಾಯದ ನಾಲ್ವರು ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರಿದ ಒಬ್ಬಾತ ದಲಿತ ಬಾಲಕಿ ಮೇಲಿನ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆ.

ಪ್ರಕರಣ ಬೆಳಕಿಗೆ ಬಂದಾಗ ಮತ್ತಷ್ಟು ವಿವರಗಳು ತಿಳಿದವು. ಇದೇ ಆರೋಪಿಗಳು 2021ರ ಡಿಸೆಂಬರ್‌ ಮತ್ತು 2022ರ ಫೆಬ್ರುವರಿಯಲ್ಲಿ ಸಾಮೂಹಿಕವಾಗಿ ಅತ್ಯಾಚಾರವನ್ನು ಈ ಬಾಲಕಿ ಮೇಲೆ ಎಸಗಿದ್ದರು. ಒಂದು ವರ್ಷದ ಹಿಂದೆ ಮೊದಲ ಬಾರಿಗೆ ಅತ್ಯಾಚಾರವಾದಾಗ ಎಫ್‌ಐಆರ್ ದಾಖಲಿಸಲು ಯುಪಿ ಪೊಲೀಸರ ಬಳಿ ಪುರಾವೆಗಳಿದ್ದರೂ, ಅವರು ನಿರ್ಲಕ್ಷಿಸಿದ್ದಾರೆ ಎಂಬುವುದು ಬೆಳಕಿಗೆ ಬಂದಿದೆ. ಸಂತ್ರಸ್ತ ಕುಟುಂಬವು ನ್ಯಾಯಾಲಯಕ್ಕೆ ಹೋಗುವವರೆಗೂ ಪ್ರಕರಣ ದಾಖಲಾಗಿರಲಿಲ್ಲ.

2022, ಸೆಪ್ಟೆಂಬರ್ 22ರಂದು ಅಪ್ರಾಪ್ತ ಬಾಲಕಿಯು ಮಗುವಿಗೆ ಜನ್ಮ ನೀಡಿದ ಬಳಿಕ ಪ್ರಕರಣ ತೀವ್ರತೆ ಪಡೆದುಕೊಂಡಿತು. ಎರಡನೇ ಬಾರಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ನಲ್ಲಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬ ಜಾಮೀನಿನ ಮೇಲೆ ಹೊರಬಂದಾಗ 2023ರ ಎಪ್ರಿಲ್‌ನಲ್ಲಿ ಸಂತ್ರಸ್ತಯ ಮನೆಗೆ ಬೆಂಕಿ ಹಚ್ಚಿದ್ದನು.

ಸಂತ್ರಸ್ತೆಯ ಆರು ತಿಂಗಳ ಮಗು (ಮೊದಲ ಬಾರಿಗೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಾಗ ಗರ್ಭಿಣಿಯಾಗಿದ್ದರಿಂದ ಜನಿಸಿದ ಮಗು) ಮತ್ತು ಆಕೆಯ ಮೂರು ವರ್ಷದ ಸಹೋದರಿಯ ಮೇಲೆ ದಾಳಿ ಮಾಡಲಾಯಿತು. ಸುಟ್ಟ ಗಾಯಗಳಾದವು.

ಪೊಲೀಸ್‌ ನಿರ್ಲಕ್ಷ್ಯ

2021, ಡಿಸೆಂಬರ್ 31ರಂದು ನಡೆದ ಮೊದಲ ಸಾಮೂಹಿಕ ಅತ್ಯಾಚಾರದ ಬಗ್ಗೆ ಅಪ್ರಾಪ್ತ ಬಾಲಕಿ ತನ್ನ ಕುಟುಂಬಕ್ಕೆ ತಿಳಿಸಿರಲಿಲ್ಲ ಎಂದು ಸಂತ್ರಸ್ತೆಯ ಪರ ವಕೀಲ ಸಂಜೀವ್ ತ್ರಿವೇದಿಯವರು ‘ಆರ್ಟಿಕಲ್ 14’ ಜಾಲತಾಣಕ್ಕೆ ತಿಳಿಸಿದ್ದಾರೆ.

ಆದರೆ ಫೆಬ್ರವರಿ 13 ರಂದು ಎರಡನೇ ಬಾರಿಗೆ ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ ಫೆಬ್ರವರಿ 14 ರಂದು ಎಫ್‌ಐಆರ್ ದಾಖಲಿಸಲಾಗಿದೆ. ಫೆಬ್ರವರಿ 15ರಂದು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು. ಸಂತ್ರಸ್ತೆಯು ಆರು ವಾರಗಳ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತು.

“ಕುಟುಂಬಕ್ಕೆ ಈ ಮಾಹಿತಿ ಇರಲಿಲ್ಲ…. ಏಪ್ರಿಲ್‌ನಲ್ಲಿ ಸಂತ್ರಸ್ತೆಯ ಹೊಟ್ಟೆ ಉಬ್ಬಲು ಶುರುವಾಯಿತು. ಏನೋ ಅನಾರೋಗ್ಯ ಇರಬಹುದು ಎಂದು ತಿಳಿದ ಕುಟುಂಬ ವೈದ್ಯರ ಬಳಿ ಕರೆದೊಯ್ದರು. ಬಾಲಕಿಗೆ ಆಂತರಿಕ ಊತ ಕಾಣಿಸಿಕೊಂಡಿದೆ ಎಂದು ತಿಳಿಸಿ, ಔಷಧಗಳನ್ನು ನೀಡಿದ್ದರು” ಎನ್ನುತ್ತಾರೆ ತ್ರಿವೇದಿ.

ಆದರೆ ಆಕೆಯ ಹೊಟ್ಟೆ ಬೆಳೆಯಿತು. ಮತ್ತೆ ಜುಲೈ-ಆಗಸ್ಟ್‌ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಏಳರಿಂದ ಎಂಟು ತಿಂಗಳ ಗರ್ಭಿಣಿ ಎಂದು ತಿಳಿದುಕೊಂಡರು. ಅದು ಎರಡನೇ ಸಾಮೂಹಿಕ ಅತ್ಯಾಚಾರದ ಪರಿಣಾಮವಾಗಿರಲಿಲ್ಲ. ಗರ್ಭ ತೆಗೆಸಲು ಸಾಧ್ಯವಿರಲಿಲ್ಲ. ಯಾಕೆಂದರೆ ಸಮಯ ಮೀರಿ ಹೋಗಿತ್ತು.

2021 ಡಿಸೆಂಬರ್ 31ರಂದು ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಬಾಲಕಿ ತನ್ನ ತಾಯಿಗೆ ತಿಳಿಸಿದಳು. ಅವರು ಮತ್ತೊಂದು ಎಫ್‌ಐಆರ್ ದಾಖಲಿಸಲು ಪೊಲೀಸರನ್ನು ಸಂಪರ್ಕಿಸಿದರು. ಆದರೆ ಎರಡನೇ ಬಾರಿ ಸಾಮೂಹಿಕ ಅತ್ಯಾಚಾರಕ್ಕೊಳದಾಗ ದಾಖಲಾಗಿರುವ ಎಫ್‌ಐಆರ್‌ ಒಂದೇ ಸಾಕಾಗುತ್ತದೆ ಎಂದು ಪೊಲೀಸರು ಹೇಳಿದರು.

2023, ಮೇ 2ರಂದು ದಾಖಲಾದ ಎಫ್‌ಐಆರ್‌ನಲ್ಲಿನ ಘಟನೆಗಳ ಸಾರಾಂಶವು ಪೊಲೀಸರು ಮೊದಲ ಸಲದ ಅತ್ಯಾಚಾರದ ಬಗ್ಗೆ ದಾಖಲಿಸಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. “ದೂರುದಾರರ ಅಪ್ರಾಪ್ತ ಮಗಳು ಮನೆಗೆ ಬಂದಾಗ, ಆಕೆ ಏನನ್ನೂ ಹೇಳಲಿಲ್ಲ. ಕೆಲವು ತಿಂಗಳುಗಳ ನಂತರ, ಕುಟುಂಬಕ್ಕೆ ತಿಳಿಯಿತು. ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಆದರೆ ಅವರ ದೂರಿನ ಮೇಲೆ ಯಾವುದೇ ತನಿಖೆ ನಡೆಸಲಿಲ್ಲ. ಕುಟುಂಬವು ವೈದ್ಯಕೀಯ ಸಮಸ್ಯೆಗಳಲ್ಲಿ ನಿರತರಾವಾಯಿತು. ಏಕೆಂದರೆ ಮಗಳ ಜೀವವನ್ನು ಉಳಿಸುವುದು ಅವರ ಮುಂದಿನ ಸವಾಲಾಗಿತ್ತು.”

“2022 ಫೆಬ್ರವರಿ 13ರಂದು ಸಂತ್ರಸ್ತೆಯು ಧರಿಸಿದ್ದ ಬಟ್ಟೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಿದೆ. ರಕ್ತದ ಕಲೆಗಳು ಬಟ್ಟೆಯಲ್ಲಿ ಕಂಡುಬಂದಿವೆ” ಎಂದು ವಕೀಲ ತ್ರಿವೇದಿ ಹೇಳುತ್ತಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

“2021 ಡಿಸೆಂಬರ್ 31  ಮತ್ತು 2022 ಫೆಬ್ರವರಿ, 13ರಂದು ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎನ್ನುತ್ತಾರೆ ತ್ರಿವೇದಿ. ಆದರೂ ಮೊದಲ ಸಲದ ಅತ್ಯಾಚಾರದ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ ಎಂದಿದ್ದಾರೆ.

ಮೇ 9 ರಂದು ನಿಗದಿಯಾಗಿದ್ದ ವಿಚಾರಣೆಗೆ ಮೊದಲು, ಯುಪಿ ಪೊಲೀಸರು ಮೇ 2ರಂದು ಎಫ್‌ಐಆರ್ ದಾಖಲಿಸಿದ್ದಾರೆ. “ಪೊಲೀಸರು ಗೊಂದಲಕ್ಕೊಳಗಾದರು ಮತ್ತು ಮೇ 2 ರಂದು ಎಫ್ಐಆರ್ ದಾಖಲಿಸಿದರು” ಎಂದು ತ್ರಿವೇದಿ ಹೇಳಿದರು.

2023ರ ಮೇ 2ರಂದು ದಾಖಲಾದ ಎಫ್‌ಐಆರ್‌ನಲ್ಲಿ ರೋಷನ್ ಲೋಧಿ, ಸುಖ್ದಿನ್, ಅರುಣ್, ರಂಜಿತ್ ಮತ್ತು ಸತೀಶ್ ಎಂಬವರನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿದೆ. ಸಾಮೂಹಿಕ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಆರೋಪಗಳನ್ನು ಐಪಿಸಿ ಸೆಕ್ಷನ್‌ನ ಅಡಿಯಲ್ಲಿ ಹೊರಿಸಲಾಗಿದೆ. ಪೋಕ್ಸೋ ಮತ್ತು ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾ‌ಯ್ದೆಯಲ್ಲೂ ಪ್ರಕರಣ ದಾಖಲಿಸಲಾಗಿದೆ.

ಅಪ್ರಾಪ್ತರ ಮನೆಗೆ ಬೆಂಕಿ ಹಚ್ಚಿದ ನಂತರ 2023ರ ಏಪ್ರಿಲ್ 17 ರಂದು ಮುರವ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ರೋಷನ್, ಸತೀಶ್, ರಂಜಿತ್, ರಾಜ್ ಬಹದ್ದೂರ್, ಚಂದನ್, ಸುಖದಿನ್ ಮತ್ತು ಅಮನ್ ದೋಮ್ ಆರೋಪಿಗಳಲ್ಲಿ. ಆರೋಪಿಗಳಲ್ಲಿ ಅಪ್ರಾಪ್ತ ಬಾಲಕಿಯ ಅಜ್ಜ ಚಂದನ್, ಆಕೆಯ ಚಿಕ್ಕಪ್ಪ ರಾಜ್ ಬಹದ್ದೂರ್ ಸೇರಿದ್ದಾರೆ.

ವರದಿ ಕೃಪೆ: Article14.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...