Homeಮುಖಪುಟಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

ಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

- Advertisement -
- Advertisement -

ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಮೂರು ರೈಲುಗಳ ಡಿಕ್ಕಿ ಸಂಭವಿಸಿ 288 ಜನರು ಸಾವನ್ನಪ್ಪಿದರು ಮತ್ತು 1000ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇದು ಭಾರತದ ಅತಿದೊಡ್ಡ ರೈಲ್ವೆ ಅಪಘಾತಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ.

ಈ ಘಟನೆಯು ಭಾರತದ ರೈಲ್ವೆ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದಾಖಲೆಗಳನ್ನು ಗಮನಿಸಿದರೆ ಕಳೆದ 10 ವರ್ಷಗಳಲ್ಲಿ ಸರಿಸುಮಾರು 2.6 ಲಕ್ಷ ಜನರು ರೈಲು ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

NCRB ಭಾರತದಲ್ಲಿ ಅಪರಾಧ ಡೇಟಾವನ್ನು ಸಂಗ್ರಹಿಸುವ ಮತ್ತು ವಿಶ್ಲೇಷಿಸುವ ಜವಾಬ್ದಾರಿಯನ್ನು ಹೊಂದಿರುವ ಭಾರತೀಯ ಸರ್ಕಾರಿ ಸಂಸ್ಥೆಯಾಗಿದೆ.

ಗಮನಾರ್ಹ ಸಂಗತಿಯೆಂದರೆ, ಬಹುಪಾಲು ರೈಲ್ವೇ ಅಪಘಾತದ ಸಾವುಗಳು ಶುಕ್ರವಾರ ಒಡಿಶಾದಲ್ಲಿ ಸಂಭವಿಸಿದ ದುರಂತದಂತೆ ಸಂಭವಿಸಿಲ್ಲ, ಬದಲಾಗಿ ಜನ ರೈಲುಗಳಿಂದ ಕೆಳಗೆ ಬೀಳುವುದು, ಅಥವಾ ರೈಲುಗಳು ಜನರ ಮೇಲೆ ಹರಿಯುವುದರಿಂದ ಹೆಚ್ಚಿನ ಸಾವು ಸಂಭವಿಸಿದೆ ಎಂದು ದಾಖಲೆಗಳು ತೋರಿಸುತ್ತವೆ. 2017-21 ರ ನಡುವಿನ ರೈಲ್ವೆ ಅಪಘಾತದ ಸಾವುಗಳಲ್ಲಿ 70 ಪ್ರತಿಶತದಷ್ಟು ಸಾವುಗಳು ಇದೇ ರೀತಿ ಸಂಭವಿಸಿವೆ ಎಂದು ಅಂಕಿಅಂಶಗಳು ಹೇಳುತ್ತವೆ.

ಕಳೆದ 10 ವರ್ಷಗಳಲ್ಲಿ ರೈಲ್ವೆ ಅಪಘಾತಗಳ ಬಗ್ಗೆ ಡೇಟಾ ಏನು ಹೇಳುತ್ತದೆ?

ಎನ್‌ಸಿಆರ್‌ಬಿ ರೈಲ್ವೇ ಅಪಘಾತದ ಸಾವುಗಳನ್ನು ಐದು ವಿಭಾಗಗಳಲ್ಲಿ ವರ್ಗೀಕರಿಸುತ್ತದೆ. ಹಳಿತಪ್ಪುವಿಕೆಗಳು, ಘರ್ಷಣೆಗಳು, ಸ್ಫೋಟಗಳು/ಬೆಂಕಿಗಳು, ರೈಲುಗಳಿಂದ ಬೀಳುವ ಜನರು ಅಥವಾ ರೈಲುಗಳು ಹಳಿಗಳ ಮೇಲೆ ಜನರಿಗೆ ಡಿಕ್ಕಿ ಹೊಡೆಯುವುದು ಮತ್ತು ‘ಇತರ ಕಾರಣಗಳು’.

ಎನ್‌ಸಿಆರ್‌ಬಿಯ ವರದಿಯ ಪ್ರಕಾರ ”ಭಾರತದಲ್ಲಿ ರೈಲ್ವೆ ಅಪಘಾತಗಳಿಂದ 2011 ರಲ್ಲಿ ಸುಮಾರು 25,872 ಜನ ಪ್ರಾಣ ಕಳೆದುಕೊಂಡಿದ್ದಾರೆ. 2012 ರಲ್ಲಿ 27,000 ಮತ್ತು 2013 ರಲ್ಲಿ 27,765 ರೈಲು ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ, 2014 ರಲ್ಲಿ ಇದರ ಪ್ರಮಾಣ 25,000 ಜನರಿಗೆ ಇಳಿಯಿತು.

ಇದನ್ನೂ ಓದಿ: ಒಡಿಶಾ ರೈಲು ದುರಂತದ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು

ಈ ಗ್ರಾಫ್ 2017 ರಿಂದ ಕ್ರಮೇಣ ಕಡಿಮೆಯಾಯಿತು – ಆ ವರ್ಷ, ಅಂತಹ ಸಾವುಗಳು 24,000ಕ್ಕೆ ಇಳಿದವು ಮತ್ತು 2019 ರವರೆಗೆ (24,619 ಆಗಿದ್ದಾಗ) ಆ ಅಂಕಿಅಂಶದ ಸುತ್ತ ಸುಳಿದಾಡಿತು. ನಿರೀಕ್ಷೆಯಂತೆ, 2020 ರಲ್ಲಿ ಅತ್ಯಂತ ಕುಸಿತವು ಸಂಭವಿಸಿತು. ಏಕೆಂದರೆ COVID-19 ಸಾಂಕ್ರಾಮಿಕದಿಂದ ರೈಲುಗಳ ಓಡಾಟ ಸ್ಥಗಿತವಾಗಿದ್ದು ಕೂಡ ಇದಕ್ಕೆ ಮುಖ್ಯ ಕಾರಣವಾಯಿತು. ಹಾಗಾಗಿ 2020ರಲ್ಲಿ ರೈಲ್ವೆ ಅಪಘಾತದ ಸಾವುಗಳು ಸುಮಾರು 11,968 ಕ್ಕೆ ಇಳಿದವು. 2021ರಲ್ಲಿ 16,431 ಕ್ಕೆ ಏರಿತು ಅಂದರೆ 27 ಪ್ರತಿಶತದಷ್ಟು ಸಾವಿನ ಸಂಖ್ಯೆ ಹೆಚ್ಚಾಯಿತು. ಆದರೂ ಇದು ಸಾಂಕ್ರಾಮಿಕ ಪೂರ್ವದ ಮಟ್ಟಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿದೆ.

ಸಾವಿನ ಕಾರಣಗಳು

ಹೆಚ್ಚಿನ ಸಾವುಗಳು ಜನರು ರೈಲಿನಿಂದ ಬೀಳುವುದರಿಂದ ಅಥವಾ ಅವರ ಮೇಲೆ ರೈಲು ಹರಿದು ಸಾವುಗಳು ಸಂಭವಿಸಿವೆ ಎಂದು ಡೇಟಾ ತೋರಿಸುತ್ತದೆ. ಎನ್‌ಸಿಆರ್‌ಬಿ ಪ್ರಕಾರ, 2021ರಲ್ಲಿ ಸಂಭವಿಸಿದ ಒಟ್ಟು 16,431 ಜನರು ರೈಲ್ವೆ ಅಪಘಾತದಿಂದ ಸಾವುಗಳಾಗಿದ್ದರೆ, ಅದರಲ್ಲಿ 11,036 ಜನರು ರೈಲಿನಿಂದ ಬಿದ್ದು, ರೈಲು ಹರಿದು ಸಾವಿಗೀಡಾಗಿದ್ದಾರೆ. ಇತರೆ ಕಾರಣಗಳಿಂದ 5,287 ಜನ ಸಾವನ್ನಪ್ಪಿದ್ದಾರೆ. ‘ಇತರ’ ವರ್ಗ ಎಂಬುದರ ಬಗ್ಗೆ ಎನ್‌ಸಿಆರ್ ಬಿ ಸ್ಪಷ್ಟವಾಗಿ ತಿಳಿಸಿಲ್ಲ. ರೈಲು ಡಿಕ್ಕಿಗಳಿಂದ 86 ಮತ್ತು ಹಳಿ ತಪ್ಪಿದ್ದರಿಂದ 22 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 2021ರಲ್ಲಿ ಬೆಂಕಿ ಅಥವಾ ಸ್ಫೋಟಗಳಲ್ಲಿ ಯಾರೂ ಸಾವನ್ನಪ್ಪಿಲ್ಲ.

2017-21 ರ ನಡುವೆ ವರದಿಯಾದ 1 ಲಕ್ಷ ರೈಲ್ವೆ ಅಪಘಾತ ಸಾವುಗಳಲ್ಲಿ, 71,000 ಕ್ಕೂ ಹೆಚ್ಚು ಜನರು ರೈಲಿನಿಂದ ಬಿದ್ದು ಅಥವಾ ರೈಲು ಹರಿದು ಸಾವನ್ನಪ್ಪಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಂಕಿಅಂಶಗಳನ್ನು ಗಮನಿಸಿದರೆ ಮಹಾರಾಷ್ಟ್ರದಲ್ಲಿ ಹೆಚ್ಚು ಸಾವು ಈ ಅವಧಿಯಲ್ಲಿ ಸಂಭವಿಸಿವೆ. ಇದು 2017 ಮತ್ತು 2021 ರ ನಡುವೆ 17,000 ಇಂತಹ ಸಾವುನೋವುಗಳು ಸಂಭವಿಸಿವೆ ಎಂದು ವರದಿ ಮಾಡಿದೆ. ಅದರ ನಂತರ ಉತ್ತರ ಪ್ರದೇಶ (13,074) ಮತ್ತು ಪಶ್ಚಿಮ ಬಂಗಾಳ (11,967). ಹೋಲಿಸಿದರೆ, ಅದೇ ಅವಧಿಯಲ್ಲಿ ಒಡಿಶಾದ ಸಂಖ್ಯೆಗಳು ಅತ್ಯಂತ ಕಡಿಮೆ, ಕೇವಲ 1,845 ಸಾವುಗಳು ಸಂಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...