Homeಮುಖಪುಟಪ್ರತಿಭಟನೆಯಿಂದ ನಾನು ಹಿಂದೆ ಸರಿದಿಲ್ಲ, ಮಾಧ್ಯಮಗಳೇ ಸುಳ್ಳು ಸುದ್ದಿ ಹಬ್ಬಿಸಬೇಡಿ: ಸಾಕ್ಷಿ ಮಲಿಕ್ ಟ್ವೀಟ್

ಪ್ರತಿಭಟನೆಯಿಂದ ನಾನು ಹಿಂದೆ ಸರಿದಿಲ್ಲ, ಮಾಧ್ಯಮಗಳೇ ಸುಳ್ಳು ಸುದ್ದಿ ಹಬ್ಬಿಸಬೇಡಿ: ಸಾಕ್ಷಿ ಮಲಿಕ್ ಟ್ವೀಟ್

- Advertisement -
- Advertisement -

ಸಾಕ್ಷಿ ಮಲಿಕ್ ಅವರು ಸೋಮವಾರ ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಬಿತ್ತರಿಸುತ್ತಿವೆ. ಆದರೆ ಇದು ಸುಳ್ಳು ಸುದ್ದಿ ಎಂದು ಸಾಕ್ಷಿಮಲಿಕ್ ಹಾಗೂ ಬಜರಂಗ್ ಪುನಿಯಾ ಸ್ಪಷ್ಟಣೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಈ ಸುದ್ದಿ ಸಂಪೂರ್ಣ ತಪ್ಪು. ನ್ಯಾಯಕ್ಕಾಗಿ ಹೋರಾಟದಲ್ಲಿ ನಾವೇನೂ ಹಿಂದೆ ಸರಿದಿಲ್ಲ, ನಾವೂ ಹಿಂದೆ ಸರಿಯುವುದಿಲ್ಲ. ಸತ್ಯಾಗ್ರಹದ ಜೊತೆಗೆ ರೈಲ್ವೆಯಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ದಯವಿಟ್ಟು ಯಾವುದೇ ತಪ್ಪು ಸುದ್ದಿ ಹಬ್ಬಿಸಬೇಡಿ” ಎಂದು ಮಾಧ್ಯಮ ವರದಿಗಳು ಸುಳ್ಳು ಎಂದು ಹೇಳಿದ್ದಾರೆ.

ಬಜರಂಗ್ ಪುನಿಯಾ ಕೂಡ ಟ್ವೀಟ್ ಮಾಡಿದ್ದು, ”ಚಳವಳಿ ಹಿಂಪಡೆಯುವ ಸುದ್ದಿ ಕೇವಲ ವದಂತಿಯಾಗಿದೆ. ನಮಗೆ ಹಾನಿ ಮಾಡಲು ಈ ಸುದ್ದಿ ಹಬ್ಬಿಸಲಾಗುತ್ತಿದೆ. ನಾವು ಹಿಂದೆ ಸರಿದಿಲ್ಲ ಅಥವಾ ಚಳವಳಿಯನ್ನು ಹಿಂತೆಗೆದುಕೊಂಡಿಲ್ಲ. ಎಫ್‌ಐಆರ್‌ ದಾಖಲಿಸಿರುವುದನ್ನು ಮಹಿಳಾ ಕುಸ್ತಿಪಟುಗಳು ಹಿಂಪಡೆಯುತ್ತಾರೆ ಎಂಬ ಸುದ್ದಿಯೂ ಸುಳ್ಳು. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ” ಎಂದು ತಿಳಿಸಿದ್ದಾರೆ.

ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕಿರುಕುಳ ಆರೋಪ ಮಾಡಿದ್ದು, ಅವರನ್ನು ಕೂಡಲೇ ಬಂದಿಸುವಂತೆ ಒತ್ತಾಯಿಸಿ ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್​-ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿದ ಕುಸ್ತಿಪಟುಗಳು ಶನಿವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.

ದೆಹಲಿಯ ಅಮಿತ್ ಶಾ ಅವರ ನಿವಾಸದಲ್ಲಿ ಶನಿವಾರ ತಡರಾತ್ರಿ ಸಭೆ ನಡೆದಿದ್ದು, ಕುಸ್ತಿಪಟುಗಳು ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಅವರ ಬಂಧನಕ್ಕೆ ತಮ್ಮ ಬೇಡಿಕೆಯನ್ನು ಎತ್ತಿದ್ದರಿಂದ ರಾತ್ರಿಯವರೆಗೂ ಸಭೆ ನಡೆಯಿತು.

ಸಭೆಯು ರಾತ್ರಿ 11 ಗಂಟೆಗೆ ಪ್ರಾರಂಭವಾಯಿತು ಮತ್ತು ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ಸಂಗೀತಾ ಫೋಗಟ್ ಮತ್ತು ಸತ್ಯವರ್ತ್ ಕಡಿಯಾನ್ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಮೆಡಲ್‌ಗಳನ್ನು ಗಂಗಾ ನದಿಗೆ ಎಸೆದು, ಆಮರಣಾಂತ ಉಪವಾಸ ಕೂರುತ್ತೇವೆ: ಕುಸ್ತಿಪಟು ಸಾಕ್ಷಿ ಮಲಿಕ್

”ನಾವು ಗೃಹ ಸಚಿವರಿಂದ ನಾವು ಬಯಸಿದ ಪ್ರತಿಕ್ರಿಯೆಯನ್ನು ಪಡೆಯಲಿಲ್ಲ. ಆದ್ದರಿಂದ ನಾವು ಸಭೆಯಿಂದ ಹೊರಬಂದೆವು. ನಾವು ಪ್ರತಿಭಟನೆಯ ಕಾರ್ಯತಂತ್ರವನ್ನು ರೂಪಿಸುತ್ತಿದ್ದೇವೆ. ನಾವು ಹಿಂದೆ ಸರಿಯುವುದಿಲ್ಲ” ಎಂದು ಕಡಿಯನ್ ಹೇಳಿದರು. ಕುಸ್ತಿಪಟುಗಳು ತಮ್ಮ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಹಾಕಲು ಹರಿದ್ವಾರಕ್ಕೆ ಹೋದ ಕೆಲವು ದಿನಗಳ ನಂತರ ಸಭೆ ನಡೆಸಲಾಯಿತು. ಆದರೆ ರೈತರ ಮುಖಂಡ ನರೇಶ್ ಟಿಕಾಯತ್ ಅವರನ್ನು ಆ ಸಭೆಯಿಂದ ಹೊರಗಿಡಲಾಯಿತು. ಆ ನಂತರ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಜೂನ್ 9 ರೊಳಗೆ ಬಂಧಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಆಗ್ರಹಿಸಲಾಯಿತು.

ಅಮಿತ್ ಶಾ ಭೇಟಿಗೂ ಮುನ್ನ ಕುಸ್ತಿಪಟುಗಳು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದರು. ಠಾಕೂರ್ ಅವರು ”ಕ್ರೀಡಾಪುಟಗಳು ಮಾಡಿರುವ ಆರೋಪಗಳ ಬಗ್ಗೆ ನ್ಯಾಯಯುತ ತನಿಖೆ ನಡೆಸುತ್ತೇವೆ” ಎಂದು ಭರವಸೆ ನೀಡಿದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಅಪ್ರಾಪ್ತ ವಯಸ್ಕ ಸೇರಿದಂತೆ ಮಹಿಳಾ ಗ್ರಾಪ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇಲ್ಲಿಯವರೆಗೆ, ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು ಅವರನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ದಾಖಲಿಸಲಾಗಿದೆ. ಆದರೆ ಈವರೆಗೂ ಬಂಧಿಸದಿರುವುದಕ್ಕೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...