Homeಮುಖಪುಟರೈಲ್ವೆ ಇಲಾಖೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ: ಮಲ್ಲಿಕಾರ್ಜುನ ಖರ್ಗೆ

ರೈಲ್ವೆ ಇಲಾಖೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಒಡಿಶಾ ರೈಲು ಅಪಘಾತದ ಬಗ್ಗೆ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು “ರೈಲ್ವೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ” ಎಂದು ಸೋಮವಾರ ಆರೋಪಿಸಿದ್ದಾರೆ.

ಜೂನ್ 2 ರಂದು ಮೂರು ರೈಲುಗಳು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ 288 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. “ಸಿಗ್ನಲ್ ದೋಷವು ಅಪಘಾತಕ್ಕೆ ಕಾರಣವಾಗಿರಬಹುದು” ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರವು ಈ ವಿಷಯದ ಬಗ್ಗೆ ಕೇಂದ್ರೀಯ ಬ್ಯೂರೋ ತನಿಖೆಗೆ ಆದೇಶಿಸಿದೆ. ಆದರೆ ಪ್ರತಿಪಕ್ಷಗಳು ಸರ್ಕಾರವನ್ನು ತರಾಟಗೆ ತೆಗೆದುಕೊಂಡಿವೆ. ಕೆಲವು ಗಂಭೀರ ಪ್ರಶ್ನೆಗಳಿಗೆ ಉತ್ತರದ ಅಗತ್ಯವಿದೆ ಎಂದು ಒತ್ತಾಯಿಸಿವೆ.

ಪ್ರಧಾನಿ ಮೋದಿಯವರಿಗೆ ಪತ್ರವನ್ನು ಬರೆದಿದ್ದು, “ಈ ಅಪಘಾತವು ಪೂರ್ವ ಕರಾವಳಿ ರೈಲ್ವೆ ವ್ಯಾಪ್ತಿಯಲ್ಲಿ ಘಟಿಸಿದ್ದು, ಇಲ್ಲಿ ಸುಮಾರು 8,278 ಹುದ್ದೆಗಳು ಖಾಲಿ ಇವೆ” ಎಂದು ಉಲ್ಲೇಖಿಸಿದ್ದಾರೆ.

“ಪ್ರಧಾನಿ ಕಾರ್ಯಾಲಯ ಮತ್ತು ಕ್ಯಾಬಿನೆಟ್ ಸಮಿತಿಯೆರಡೂ ನೇಮಕಾತಿಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ. ಹಿರಿಯ ಹುದ್ದೆಗಳ ವಿಷಯದಲ್ಲಿಯೂ ಇದು ನಿರಾಸಕ್ತಿ, ನಿರ್ಲಕ್ಷ್ಯವನ್ನು ಸರ್ಕಾರ ತೋರಿದೆ” ಎಂದು ಟೀಕಿಸಿದ್ದಾರೆ.

1990ರ ದಶಕದಲ್ಲಿ ರೈಲ್ವೆಯಲ್ಲಿ 18 ಲಕ್ಷ ಜನರಿಗೆ ಉದ್ಯೋಗವಿತ್ತು. ಈಗ ಈ ಸಂಖ್ಯೆಯನ್ನು 12 ಲಕ್ಷಕ್ಕೆ ಇಳಿಸಲಾಗಿದ್ದು, ಈ ಪೈಕಿ 3.18 ಲಕ್ಷ ಮಂದಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗ ಮತ್ತು ಆರ್ಥಿಕ ದುರ್ಬಲ ವರ್ಗಗಳಿಗೆ ಸೇರಿದ ಉದ್ಯೋಗಗಳಿಗೆ ಕುತ್ತು ಬಂದಿದೆ. ಖಾಲಿ ಹುದ್ದೆಗಳಿಂದಾಗಿ ಅಪಾಯ ಬಂದೊದಗಿದೆ” ಎಂದು ಹೇಳಿದ್ದಾರೆ.

“ಕಳೆದ 9 ವರ್ಷಗಳಲ್ಲಿ ಇಷ್ಟೊಂದು ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಏಕೆ ಭರ್ತಿ ಮಾಡಲಾಗಿಲ್ಲ?” ಎಂದು ಅವರು ಪ್ರಶ್ನಿಸಿದ್ದಾರೆ.

2017-18 ಮತ್ತು 2020-21ರ ನಡುವಿನ ರೈಲು ಅಪಘಾತಗಳಲ್ಲಿ ನಾಲ್ಕರಲ್ಲಿ ಮೂರರಷ್ಟು ಅಪಘಾತಗಳು ರೈಲುಗಳು ಹಳಿ ತಪ್ಪಿದ್ದರಿಂದ ಸಂಭವಿಸಿವೆ ಎಂದು  ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಅವರು ಸಲ್ಲಿಸಿರುವ ಇತ್ತೀಚಿನ ವರದಿಯ ಬಗ್ಗೆಯೂ ಖರ್ಗೆಯವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“2017-18ರ ನಡುವೆ, ಪೂರ್ವ ಕರಾವಳಿ ರೈಲ್ವೆಯಲ್ಲಿ ಸುರಕ್ಷತೆ ನಿಟ್ಟಿನಲ್ಲಿ ರೈಲು ಮತ್ತು ಟ್ರಾಕ್‌ ಪರೀಕ್ಷೆಯನ್ನು ಯಾವುದೇ ರೀತಿಯಲ್ಲೂ ನಡೆಸಲಾಗಿಲ್ಲ” ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ.

ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತದ ಹಿಂದಿನ ಕಾರಣಗಳ ಬಗ್ಗೆ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಲು ರೈಲ್ವೆ ಮಂಡಳಿ ನಿರ್ಧರಿಸಿರುವುದನ್ನು ಖರ್ಗೆ ಪ್ರಶ್ನಿಸಿದ್ದಾರೆ. ತಾಂತ್ರಿಕ, ಸಾಂಸ್ಥಿಕ ಮತ್ತು ರಾಜಕೀಯ ವೈಫಲ್ಯಗಳಿಗೆ ಕಾನೂನು ಜಾರಿ ಸಂಸ್ಥೆಗಳು ಹೊಣೆಗಾರಿಕೆಯನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಅವರು ಕುಟುಕಿದ್ದಾರೆ.

ಇದನ್ನೂ ಓದಿರಿ: ಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

“ಸಿಬಿಐ ಅಪರಾಧಗಳನ್ನು ತನಿಖೆ ಮಾಡಲು ಇದೆ, ರೈಲ್ವೆ ಅಪಘಾತಗಳನ್ನಲ್ಲ” ಎಂದು ಟೀಕಿಸಿದ್ದಾರೆ. “…ಹೆಚ್ಚುವರಿಯಾಗಿ, ಸಿಬಿಐನವರು ರೈಲ್ವೆ ಸುರಕ್ಷತೆ, ಸಿಗ್ನಲಿಂಗ್ ಮತ್ತು ನಿರ್ವಹಣೆ ವಿಚಾರಗಳಲ್ಲಿ ತಾಂತ್ರಿಕ ಪರಿಣತಿಯನ್ನು ಹೊಂದಿರುವುದಿಲ್ಲ” ಎಂದಿದ್ದಾರೆ.

ಕಾನ್ಪುರದಲ್ಲಿ 2016ರಲ್ಲಿ ರೈಲು ಹಳಿ ತಪ್ಪಿ 150 ಪ್ರಯಾಣಿಕರು ಸಾವಿಗೀಡಾಗಿದ್ದನ್ನು ಖರ್ಗೆ ಉಲ್ಲೇಖಿಸಿದ್ದಾರೆ. ಆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಿದ್ದನ್ನು ಖರ್ಗೆ ಪ್ರಸ್ತಾಪಿಸಿದ್ದಾರೆ.

“2017ರ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ, ‘ಪಿತೂರಿ’ ನಡೆದಿದೆ ಎಂದು ತಮ್ಮಷ್ಟಕ್ಕೆ ತಾವೇ ಹೇಳಿಕೊಂಡಿರಿ. ಕಠಿಣ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ದೇಶಕ್ಕೆ ಭರವಸೆ ನೀಡಲಾಯಿತು. ಆದರೆ 2018ರಲ್ಲಿ ಎನ್ಐಎ ತನಿಖೆಯನ್ನು ಮುಕ್ತಾಯಗೊಳಿಸಿತು. ಆರೋಪಪಟ್ಟಿ ಸಲ್ಲಿಸಲು ನಿರಾಕರಿಸಿತು. ರಾಷ್ಟ್ರವು ಇನ್ನೂ ಕತ್ತಲೆಯಲ್ಲಿದೆ. 150 ಸಾವುಗಳಿಗೆ ಯಾರು ಹೊಣೆ?” ಎಂದು ಖರ್ಗೆ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...