Homeದಲಿತ್ ಫೈಲ್ಸ್ಗುಜರಾತ್‌: ದಲಿತ ಬಾಲಕ ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದ್ರು...

ಗುಜರಾತ್‌: ದಲಿತ ಬಾಲಕ ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದ್ರು…

- Advertisement -
- Advertisement -

ಕ್ರಿಕೆಟ್ ಆಡುತ್ತಿದ್ದಾಗ ದಲಿತ ಬಾಲಕ ಚೆಂಡನ್ನು ಮುಟ್ಟಿದ ವಿಚಾರವಾಗಿ ಜಗಳವಾಗಿ ದಲಿತ ವ್ಯಕ್ತಿಯೊಬ್ಬರ ಹೆಬ್ಬರಳನ್ನೇ ಕತ್ತರಿಸಿರುವ ಘಟನೆ ಗುಜರಾತ್‌ನ ಪಟಾನ್ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕಾಕೋಶಿ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಾಲೆಯ ಆಟದ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಆ ವೇಳೆ ದಲಿತ ಬಾಲಕ (ಹೆಬ್ಬೆರಳು ಕಳೆದುಕೊಂಡ ವ್ಯಕ್ತಿಯ ಸಹೋದರನ ಪುತ್ರ) ಕ್ರಿಕೆಟ್ ಬಾಲನ್ನು ಎತ್ತಿಕೊಟ್ಟಿದ್ದನು. ಈ ವಿಚಾರವಾಗಿ ಜಗಳವಾಗಿ ಬಾಲಕನ ಚಿಕ್ಕಪ್ಪನ ಮೇಲೆ ಸವರ್ಣೀಯ ಜಾತಿಯ ಗುಂಪು ಹಲ್ಲೆ ನಡೆಸಿದೆ. ನಂತರ ಅವರ ಹೆಬ್ಬರಳನ್ನು ಕತ್ತರಿಸಿ ವಿಕೃತಿ ಮೆರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

“ಗ್ರಾಮದ ಶಾಲೆಯ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದ್ದಾಗ ಚೆಂಡನ್ನು ಎತ್ತಿಕೊಂಡ ಬಾಲಕನಿಗೆ ಜಾತಿವಾದಿಗಳು ಬೆದರಿಕೆ ಹಾಕಿದ್ದರು. ಕೋಪಗೊಂಡು ಪ್ರತಿಕ್ರಿಯೆ ನೀಡಿದ್ದರು” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ದಲಿತ ಸಮುದಾಯದ ಜನರನ್ನು ಅವಮಾನಿಸುವ ಮತ್ತು ಬೆದರಿಸುವ ಉದ್ದೇಶದಿಂದ ಇವರು ಜಾತಿ ನಿಂದನೆಗಳನ್ನು ಮಾಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆಯ ವೇಳೆ ಬಾಲಕನ ಚಿಕ್ಕಪ್ಪ ಧೀರಜ್ ಪರ್ಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಸಂಜೆ ವೇಳೆಗೆ ಈ ಘಟನೆ ಮತ್ತೊಂದು ತಿರುವು ಪಡೆಯಿತು. ಏಳು ಜನರ ಗುಂಪು ಹರಿತವಾದ ಆಯುಧಗಳಿಂದ ಶಸ್ತ್ರಸಜ್ಜಿತವಾಗಿ ಬಂದು ಧೀರಜ್ ಮತ್ತು ಅವರ ಮತ್ತೊಬ್ಬ ಸಹೋದರ ಕೀರ್ತಿ ಮೇಲೆ ಹಲ್ಲೆ ನಡೆಸಿತು ಎಂದು ಪೊಲೀಸರು ವಿವರಿಸಿದ್ದಾರೆ.

ಕೀರ್ತಿ ಅವರ ಹೆಬ್ಬೆರಳನ್ನು ಆರೋಪಿಯೊಬ್ಬ ಕತ್ತರಿಸಿ ಗಂಭೀರವಾಗಿ ಗಾಯಗೊಳಿಸಿದನು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 326 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಆಯುಧಗಳಿಂದ ಗಂಭೀರ ಗಾಯವನ್ನು ಉಂಟುಮಾಡುವುದು), 506 (ಕ್ರಿಮಿನಲ್ ಬೆದರಿಕೆ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಹಾಗೂ ‘ಎಸ್‌ಸಿ ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ಯ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಆರೋಪಿಗಳನ್ನು ಬಂಧಿಸುವ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ನಡೆದಿದ್ದ ಮತ್ತೊಂದು ಘಟನೆ

ಉತ್ತಮ ಬಟ್ಟೆ ಮತ್ತು ಕೂಲಿಂಗ್ ಗ್ಲಾಸ್‌ ಧರಿಸಿದ ಕಾರಣಕ್ಕಾಗಿ ಸವರ್ಣೀಯ ಜಾತಿಯ ಗುಂಪೊಂದು ದಲಿತ ವ್ಯಕ್ತಿಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದ ಘಟನೆ ಗುಜರಾತ್‌ನ ಬನಸ್ಕಾಂತ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಇತ್ತೀಚೆಗೆ ನಡೆದಿತ್ತು.

ಸಂತ್ರಸ್ತ ವ್ಯಕ್ತಿ ಜಿಗರ್ ಶೆಖಾಲಿಯಾ ಅವರು ನೀಡಿದ ದೂರಿನ ಆಧಾರದ ಮೇಲೆ ಏಳು ಜನರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿತ್ತು. ಒಳ್ಳೆಯ ಬಟ್ಟೆ ಮತ್ತು ಕನ್ನಡಕ ಧರಿಸಿದ್ದಕ್ಕಾಗಿ ಅಸಮಾಧಾನಗೊಂಡ ಸವರ್ಣೀಯ ಗುಂಪು, ಜಿಗರ್‌ ಮತ್ತು ಆತನ ತಾಯಿಗೆ ಹೊಡೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Very very unfortunate things happened deliberately again & again , shameful to this hatred society,that to our self boosted , uneducated,dishonest,PM modiji homeland

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...