Homeಮುಖಪುಟಒಡಿಸ್ಸಾ ರೈಲು ದುರಂತ ನಿರ್ಲಕ್ಷ್ಯದಿಂದ ಸಂಭವಿಸಿದೆ; ಅಪರಿಚಿತರ ವಿರುದ್ಧ ಎಫ್‌ಐಆರ್‌

ಒಡಿಸ್ಸಾ ರೈಲು ದುರಂತ ನಿರ್ಲಕ್ಷ್ಯದಿಂದ ಸಂಭವಿಸಿದೆ; ಅಪರಿಚಿತರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಒಡಿಸ್ಸಾದ ಬಾಲಸೋರ್‌ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಸೋಮವಾರ ಎಫ್‌ಐಆರ್‌ ದಾಖಲಾಗಿದ್ದು, “ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ” ಎಂದು ಉಲ್ಲೇಖಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಒಡಿಶಾದ ಸರ್ಕಾರಿ ರೈಲ್ವೆ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ, ಅಪರಿಚಿತ ವ್ಯಕ್ತಿಗಳನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಲಾಗಿದೆ.

ಭಾರತದಲ್ಲಿ ನಡೆದ ಅತ್ಯಂತ ಭೀಕರ ರೈಲು ಅಪಘಾತಗಳಲ್ಲಿ ಒಂದಾದ ಬಾಲಸೋರ್‌ ದುರಂತದಲ್ಲಿ 288 ಪ್ರಯಾಣಿಕರು ಸಾವನ್ನಪ್ಪಿದರು ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡರು.

ಐಪಿಸಿ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು), ದುಷ್ಕೃತ್ಯ ಅಥವಾ ನಿರ್ಲಕ್ಷ್ಯದ ಕ್ರಿಯೆಯ ಮೂಲಕ ಜೀವಕ್ಕೆ ಹಾನಿ, ಅಪಾಯವನ್ನುಂಟುಮಾಡುವ ಆರೋಪಗಳಿಗೆ ಸಂಬಂಧಿಸಿದ ಸೆಕ್ಷನ್ 37, 38 ಮತ್ತು ಸೆಕ್ಷನ್‌ 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರೈಲ್ವೆ ಕಾಯ್ದೆಯ ಸೆಕ್ಷನ್‌ 153 (ರೈಲ್ವೇ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟು ಮಾಡುವ ಕಾನೂನುಬಾಹಿರ ಮತ್ತು ನಿರ್ಲಕ್ಷ್ಯದ ಕ್ರಮ), 154 ಮತ್ತು 175 (ಜೀವಕ್ಕೆ ಅಪಾಯ ತಂದೊಡ್ಡುವುದು) ಅಡಿಯಲ್ಲೂ ಅಪರಿಚಿತ ವ್ಯಕ್ತಿಗಳ ವಿರುದ್ಧ ಆರೋಪಗಳನ್ನು ಹೊರಿಸಲಾಗಿದೆ.

“ಪ್ರಸ್ತುತ ನಿರ್ದಿಷ್ಟ ರೈಲ್ವೆ ಉದ್ಯೋಗಿಗಳ ಅಪರಾಧವನ್ನು ಖಚಿತಪಡಿಸಲಾಗಿಲ್ಲ, ಇದು ತನಿಖೆಯ ಸಮಯದಲ್ಲಿ ಬೆಳಕಿಗೆ ಬರಲಿದೆ” ಎಂದು ಎಫ್‌ಐಆರ್ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಸಬ್ ಇನ್ಸ್ ಪೆಕ್ಟರ್ ಪಾಪುಕುಮಾರ್ ನಾಯ್ಕ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಜೂನ್ 2 ರಂದು ಹೌರಾದಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, ಒಡಿಶಾದ ಬಾಲಸೋರ್ ಬಳಿ ಲೂಪ್ ಲೈನ್‌ನಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಮೇಲ್ಮುಖ ಮಾರ್ಗವನ್ನು ಪ್ರವೇಶಿಸುವಂತೆ ಆರಂಭದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿತ್ತು, ಆದರೆ ನಂತರ ಸಿಗ್ನಲ್ ತೆಗೆಯಲಾಯಿತು. ಇದರ ಬೆನ್ನಲ್ಲೇ ಎಕ್ಸ್ ಪ್ರೆಸ್ ರೈಲು ಲೂಪ್ ಲೈನ್ ಪ್ರವೇಶಿಸಿತು.

ಇದಾದ ನಂತರ ಹೌರಾ ಕಡೆಗೆ ಹೊರಟಿದ್ದ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಬಂದಿತ್ತು. ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಳಿತಪ್ಪಿದ ಕೋಚ್‌ಗಳಿಗೆ ಡಿಕ್ಕಿ ಹೊಡೆಯಿತು. ಸಿಗ್ನಲ್ ದೋಷದಿಂದ ಅಪಘಾತ ಸಂಭವಿಸಿರಬಹುದು ಎಂದು ರೈಲ್ವೆಯ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕೇಂದ್ರೀಯ ತನಿಖಾ ದಳದ 10 ಸದಸ್ಯರ ತಂಡವು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅದರ ತನಿಖೆಯನ್ನು ಸೋಮವಾರ ಪ್ರಾರಂಭಿಸಿತು ಎಂದು ಪಿಟಿಐ ವರದಿ ಮಾಡಿದೆ.

ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಭಾನುವಾರ ಶಿಫಾರಸು ಮಾಡಿದೆ. ಈ ಕ್ರಮವನ್ನು ಕಾಂಗ್ರೆಸ್ ಸೇರಿದಂತೆ 12 ರಾಜಕೀಯ ಪಕ್ಷಗಳು ಪ್ರಶ್ನಿಸಿದ್ದು, “ತಾಂತ್ರಿಕ, ಸಾಂಸ್ಥಿಕ ಮತ್ತು ರಾಜಕೀಯ ವೈಫಲ್ಯಗಳಿಗೆ ಕಾನೂನು ಜಾರಿ ಸಂಸ್ಥೆಗಳ ತನಿಖೆ ಸರಿಯಲ್ಲ” ಎಂದು ಹೇಳಿವೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, “ಸಿಬಿಐ ಅಪರಾಧಗಳನ್ನು ತನಿಖೆ ಮಾಡಲು ಇದೆ, ರೈಲ್ವೆ ಅಪಘಾತಗಳನ್ನಲ್ಲ” ಎಂದು ಟೀಕಿಸಿದ್ದಾರೆ.

“…ಹೆಚ್ಚುವರಿಯಾಗಿ, ಸಿಬಿಐನವರು ರೈಲ್ವೆ ಸುರಕ್ಷತೆ, ಸಿಗ್ನಲಿಂಗ್ ಮತ್ತು ನಿರ್ವಹಣೆ ವಿಚಾರಗಳಲ್ಲಿ ತಾಂತ್ರಿಕ ಪರಿಣತಿಯನ್ನು ಹೊಂದಿರುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಒಡಿಶಾ ರೈಲು ಅಪಘಾತದಲ್ಲಿ ಸತ್ತವರ ಸಂಖ್ಯೆ 500 ರಷ್ಟಿದೆ, ಆದರೆ ಕೇಂದ್ರ ಕಡಿಮೆ ಲೆಕ್ಕ ತೋರಿಸುತ್ತಿದೆ: ಮಮತಾ ಬ್ಯಾನರ್ಜಿ ಆರೋಪ

ಕಾನ್ಪುರದಲ್ಲಿ 2016ರಲ್ಲಿ ರೈಲು ಹಳಿ ತಪ್ಪಿ 150 ಪ್ರಯಾಣಿಕರು ಸಾವಿಗೀಡಾಗಿದ್ದನ್ನು ಖರ್ಗೆ ಉಲ್ಲೇಖಿಸಿದ್ದಾರೆ. ಆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಿದ್ದನ್ನು ಅವರು ಪ್ರಸ್ತಾಪಿಸಿದ್ದಾರೆ.

“2017ರ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ, ‘ಪಿತೂರಿ’ ನಡೆದಿದೆ ಎಂದು ತಮ್ಮಷ್ಟಕ್ಕೆ ತಾವೇ ಹೇಳಿಕೊಂಡಿರಿ. ಕಠಿಣ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ದೇಶಕ್ಕೆ ಭರವಸೆ ನೀಡಲಾಯಿತು. ಆದರೆ 2018ರಲ್ಲಿ ಎನ್ಐಎ ತನಿಖೆಯನ್ನು ಮುಕ್ತಾಯಗೊಳಿಸಿತು. ಆರೋಪಪಟ್ಟಿ ಸಲ್ಲಿಸಲು ನಿರಾಕರಿಸಿತು. ರಾಷ್ಟ್ರವು ಇನ್ನೂ ಕತ್ತಲೆಯಲ್ಲಿದೆ. 150 ಸಾವುಗಳಿಗೆ ಯಾರು ಹೊಣೆ?” ಎಂದು ಖರ್ಗೆ ಕೇಳಿದ್ದಾರೆ.

ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕು ಮತ್ತು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.

ಇದರ ನಡುವೆ ತನ್ನ ಸಿಗ್ನಲಿಂಗ್ ವ್ಯವಸ್ಥೆಗಳ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ ರಾಷ್ಟ್ರವ್ಯಾಪಿ ಸುರಕ್ಷತಾ ಅಭಿಯಾನವನ್ನು ರೈಲ್ವೆ ಇಲಾಖೆ ಪ್ರಾರಂಭಿಸಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...