Homeಮುಖಪುಟಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

- Advertisement -
- Advertisement -

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಒಂದನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದ ಕ್ರಿಕೆಟಿಗ ಯಶ್ ದಯಾಳ್ ವ್ಯಾಪಕ ಟೀಕೆ ವ್ಯಕ್ತವಾಗುತ್ತಲೇ ತಮ್ಮ ಪೋಸ್ಟ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ.

ಲವ್ ಜಿಹಾದ್ ಎಂಬ ಕಲ್ಪಿತ ಮುಸ್ಲಿಂ ಸಮುದಾಯ ದ್ವೇಷಿ ಕಾರ್ಟೂನ್ ಒಂದನ್ನು ಇತ್ತೀಚೆಗೆ ಗುಜರಾತ್ ಟೈಟನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಹಂಚಿಕೊಂಡಿದ್ದರು. ಅದರಲ್ಲಿ ಮುಸ್ಲಿಂ ಯುವಕನೊಬ್ಬ ತನ್ನ ಗೆಳತಿಯನ್ನು ಕೊಂದು ಮತ್ತೊಬ್ಬ ಹುಡುಗಿಗೆ ಲವ್ ಜಿಹಾದ್ ಇಲ್ಲ, ನನ್ನದು ಪರಿಶುದ್ಧ ಪ್ರೇಮ ಎಂದು ನಿವೇದಿಸಿಕೊಳ್ಳುವಂತೆ ಮತ್ತು ಆ ಹಿಂದೂ ಹುಡುಗಿ ಅದನ್ನು ಒಪ್ಪಿಕೊಳ್ಳುವಂತೆ ಚಿತ್ರಿಸಲಾಗಿತ್ತು. ಆ ಮೂಲಕ ಮುಸ್ಲಿಂ ಯುವಕರೆಲ್ಲ ಹಿಂದೂ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬ ಕೆಟ್ಟ ಅರ್ಥ ಕೊಡುತ್ತಿತ್ತು.

ಯಶ್​ ದಯಾಳ್​ ಶೇರ್ ಮಾಡಿದ್ದ ಪೋಸ್ಟರ್​​​ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಟ್ವಿಟರ್‌ ನಲ್ಲಿ ಹಲವರು, ಬಿಸಿಸಿಐ ಮತ್ತು ಗುಜರಾತ್​ ಟೈಟನ್ಸ್​ ಖಾತೆಗೆ ಟ್ಯಾಗ್​ ಮಾಡಿ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇನ್ನು ಹಲವು ನೆಟ್ಟಿಗರು ಯಶ್ ದಯಾಳ್ ಅವರ ಮನಸ್ಥಿತಿಯನ್ನು ಟೀಕಿಸಿದ್ದರು.

ಮುಸ್ಲಿಮರ ಕುರಿತು ಅಪನಂಬಿಕೆ ಹೊಂದಿರುವ ನೀನು, ಸಹ ಆಟಗಾರರಾದ ಮುಹಮ್ಮದ್‌ ಶಮಿ, ರಶೀದ್‌ ಖಾನ್‌, ನೂರ್‌ ಅಹ್ಮದ್‌ ಜೊತೆ ಎರಡು ತಿಂಗಳು ಜೊತೆಯಾಗಿ ಇದ್ದುದ್ದಾದರೂ ಹೇಗೆ? ಅವರನ್ನು ನೋಡಿ ಏನೂ ಕಲಿಯಲಿಲ್ಲವೇ ಎಂದು ಹಲವರು ಪ್ರಶ್ನಿಸಿದ್ದಾರೆ. ಇದು ವಿವಾದವಾಗುತ್ತಲೇ ಯಶ್ ದಯಾಳ್ ಆ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿ, ಕ್ಷಮೆ ಯಾಚಿಸಿದ್ದಾರೆ.

ಬಳಿಕ ಮತ್ತೊಂದು ಪೋಸ್ಟ್ ಮೂಲಕ ಹಿಂದೆ ಪೋಸ್ಟ್​ ಮಾಡಿದ್ದ ಸ್ಟೇಟಸ್​ಗಾಗಿ ಕ್ಷಮೆ ಯಾಚಿಸಿದ್ದಾರೆ ʻಸ್ನೇಹಿತರೇ, ನಾನು ತಪ್ಪಾಗಿ ಈ ಹಿಂದಿನ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದೆ. ಇದ್ಕಕಾಗಿ ನಿಮ್ಮಲ್ಲಿ ಕ್ಷಮೆ ಕೋರುತ್ತಿದ್ದೇನೆ. ದಯವಿಟ್ಟು ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ನಾನು ಎಲ್ಲಾ ಸಮುದಾಯಗಳ ಭಾವನೆಗಳನ್ನು ಗೌರವಿಸುತ್ತೇನೆʼ ಎಂದು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದಿದ್ದಾರೆ.

ಇತ್ತೀಚಿಗೆ ಪ್ರೇಮಿಗಳು, ಮದುವೆಗಳಲ್ಲಿ ಕಲಹಗಳು ಹೆಚ್ಚಾಗಿ ಕಂಡುಬರುತ್ತಿವೆ. ಅವು ಕೊಲೆ ಮಾಡುವ ಮಟ್ಟಕ್ಕೂ ಬಂದು ನಿಂತಿವೆ. ಆದರೆ ಆ ಗಲಾಟೆ, ಮನಸ್ತಾಪ, ದ್ವೇಷ ಮತ್ತು ಕೊಲೆಗಳಿಗೆ ಧರ್ಮವಾಗಲೀ, ಜಾತಿಯಾಗಲೀ ಕಾರಣವಾಗಿಲ್ಲ. ಬದಲಿಗೆ ಅಹಂಕಾರ, ಹೊಂದಾಣಿಕೆ ಕೊರತೆ, ಸ್ವಾರ್ಥ, ಕೋಪ ಮತ್ತು ಹತಾಶೆಗಳು ಅವರನ್ನು ಆ ಕೃತ್ಯಗಳೆಸಲು ಪ್ರೇರೇಪಿಸತ್ತಿವೆ. ಇದುವರೆಗೆ ಈ ರೀತಿಯ ಕೊಲೆಗೈದವರಲ್ಲಿ ಎಲ್ಲಾ ಜಾತಿ-ಧರ್ಮದವರು ಇದ್ದಾರೆ. ಹಾಗಾಗಿ ಕೇವಲ ಮುಸ್ಲಿಂ ಯುವಕರು ಮತ್ರ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬುದು ಸುಳ್ಳು. ಆದರೂ ಮುಸ್ಲಿಂ ಸಮುದಾಯದ ವಿರುದ್ಧ ಕೆಟ್ಟ ಹೆಸರು ತರಲು ಕೆಲ ಮತಾಂಧರು ಈ ರೀತಿಯ ಫೇಕ್ ನ್ಯೂಸ್‌ಗಳನ್ನು ಹರಡುತ್ತಿದ್ದಾರೆ. ಅಂತಹುದ್ದೇ ಫೇಕ್ ನ್ಯೂಸ್ ಹರಡಿ ಕ್ರಿಕೆಟಿಗ ಯಶ್ ದಯಾಳ್ ತಮ್ಮ ವರ್ಚಸ್ಸನ್ನು ಹಾಳು ಮಾಡಿಕೊಂಡಿದ್ದಾರೆ. ಹಾಗಾಗಿ ಯಾರೂ ಸಹ ದ್ವೇಷ ಪೂರಿತ ಪೋಸ್ಟ್‌ಗಳನ್ನು ಹಾಕಿ ಸಂಕಷ್ಟಕ್ಕೆ ಸಿಲುಕಬೇಡಿ. ಯಾವುದೇ ಅನ್ಯಾಯ ನಡೆಯುತ್ತಿರುವುದು ಕಂಡುಬಂದಲ್ಲಿ ಪೊಲೀಸರಿಗೆ ದೂರು ನೀಡಿ. ಕಾನೂನನನ್ನು ಗೌರವಿಸಿ.

ಇದನ್ನೂ ಓದಿ; ಗುಜರಾತ್‌: ದಲಿತ ಬಾಲಕ ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದ್ರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...