Homeಮುಖಪುಟಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ಅಥವಾ ಆಶ್ಲೀಲತೆಯ ಮನೋದೃಷ್ಟಿಯಿಂದ ನೋಡೋದು ಸರಿಯಲ್ಲ, ನಗ್ನತೆಯನ್ನು ಲೈಂಗಿಕತೆಯೊಂದಿಗೆ ಸಮೀಕರಿಸುವುದು ತಪ್ಪು ಎಂದು ಕೇರಳ ಹೈಕೋರ್ಟ್ ಹೇಳಿದೆ.

ಮಹಿಳಾ ಪರ ಕಾರ್ಯಕರ್ತೆ ರೆಹಾನಾ ಫಾತಿಮಾ ಅವರು ತನ್ನ ಅರೆನಗ್ನ ದೇಹದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಚಿತ್ರ ಬಿಡಿಸಲು ಅವಕಾಶ ನೀಡಿದ್ದಲ್ಲದೇ, ಅದನ್ನು ವಿಡಿಯೋ ಮಾಡಿ ಪ್ರಸಾರ ಮಾಡಿದ್ದರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಕೇರಳ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

2020 ರಲ್ಲಿ ರೆಹಾನಾ ಫಾತಿಮಾ ಅವರು ತನ್ನ ಅರೆ-ನಗ್ನ ದೇಹದ ಮೇಲೆ ಅಪ್ರಾಪ್ತ ಮಕ್ಕಳು ಚಿತ್ರಿ ಬಿಡಿಸುತ್ತಿರುವುದನ್ನು ವೀಡಿಯೊ ಮಾಡಿ, ಪ್ರಸಾರ ಮಾಡಿದ್ದರು. ಆ ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರ ಏಕಸದಸ್ಯ ಪೀಠವು ”ಮಹಿಳೆಯ ಅರೆ ನಗ್ನ ದೇಹವನ್ನು ಯಾವಾಗಲೂ ಲೈಂಗಿಕ ಅಥವಾ ಅಶ್ಲೀಲ ದೃಷ್ಟಿಯಿಂದ ನೋಡಬಾರದು. ಮಕ್ಕಳು ಚಿತ್ರ ಬಿಡಿಸಲು ಅವರಿಗೆ ತನ್ನ ದೇಹವನ್ನೇ ಕ್ಯಾನ್ವಾಸ್‌ ಆಗಿ ಬಳಸಲು ಅವಕಾಶ ನೀಡಿದರೆ ಅದು ತಪ್ಪಲ್ಲ” ಎಂದು ಹೇಳಿ ರೆಹನಾ ಫಾತಿಮಾ ಅವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದೆ.

”ಅರೆ ನಗ್ನ ದೇಹವನ್ನು ಲೈಂಗಿಕ ದೃಷ್ಟಿಯಲ್ಲಿ ನೋಡದೆ ಸಂವೇದನಾಶೀಲತೆ ಬೆಳೆಸುವ ಉದ್ದೇಶದಿಂದ ಮಕ್ಕಳಿಗೆ ಕ್ಯಾನ್ವಾಸ್‌ ರೀತಿಯಲ್ಲಿ ನಗ್ನ ಎದೆ ತೆರೆದಿಟ್ಟಿರುವುದು ತಪ್ಪಲ್ಲ” ಹೈಕೋರ್ಟ್ ಹೇಳಿದೆ.

”ಸ್ತ್ರೀಯರ ದೇಹದ ವಿಚಾರದಲ್ಲಿ ಪುರುಷಪ್ರಧಾನ ಸಮಾಜ ಹೊಂದಿರುವ ನಂಬಿಕೆ ಮತ್ತು ಕಲ್ಪನೆಯನ್ನು ಪ್ರಶ್ನಿಸಿಲು ಮತ್ತು ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ಉದ್ದೇಶದಿಂದ ಈ ವಿಡಿಯೋ ಮಾಡಿದ್ದೇನೆ” ಎಂದು ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ ಅವರು ಹೇಳಿದ್ದರು. ಅವರ ಈ ಹೇಳಿಕೆಯನ್ನು ಮಾನ್ಯ ಮಾಡಿದ ಹೈಕೋರ್ಟ್, ವಿಡಿಯೋ ಅಶ್ಲೀಲ ಉದ್ದೇಶದಿಂದ ಕೂಡಿಲ್ಲ ಎಂದು ತೀರ್ಪು ನೀಡಿತು.

“ನಗ್ನತೆಯನ್ನು ಲೈಂಗಿಕತೆಗೆ ಜೋಡಿಸಬಾರದು. ಮಹಿಳೆಯರ ಬೆತ್ತಲೆ ದೇಹದ ಮೇಲ್ಭಾಗದ ನೋಟವು ಪೂರ್ವನಿಯೋಜಿತವಾಗಿ ಲೈಂಗಿಕವಾಗಿದೆ ಎಂದು ಪರಿಗಣಿಸಬಾರದೆಂದು” ನ್ಯಾಯಮೂರ್ತಿ ಎಡಪ್ಪಗತ್ ಹೇಳಿದರು.

ಇದನ್ನೂ ಓದಿ: ಮೃತದೇಹದ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧವಲ್ಲ: ಆರೋಪಿಯನ್ನು ಖುಲಾಸೆಗೊಳಿಸಿದ ಕರ್ನಾಟಕ ಹೈಕೋರ್ಟ್

”ಸಾಮಾಜಿಕ ಕಾರ್ಯಕರ್ತೆ ಫಾತಿಮಾ ಅವರು ಮಕ್ಕಳನ್ನು ಯಾವುದೇ ಲೈಂಗಿಕ ಕ್ರಿಯೆಗಳಿಗೆ ಮತ್ತು ಲೈಂಗಿಕ ತೃಪ್ತಿಗಾಗಿ ಬಳಸಿಕೊಳ್ಳಲಾಗಿದೆ ಎಂದು ಊಹಿಸಲು ಸಾಧ್ಯವಿಲ್ಲ. ಫಾತಿಮಾ ತನ್ನ ದೇಹವನ್ನು ತನ್ನ ಮಕ್ಕಳಿಗೆ ಚಿತ್ರಿಸಲು ಕ್ಯಾನ್ವಾಸ್ ಆಗಿ ಬಳಸಿದ್ದಳು” ಎಂದು ನ್ಯಾಯಾಧೀಶರು ಹೇಳಿದರು.

”ಒಬ್ಬ ಮಹಿಳೆ ತನ್ನ ದೇಹದ ಬಗ್ಗೆ ಸ್ವಾಯತ್ತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕು ಸಮಾನತೆ ಮತ್ತು ಗೌಪ್ಯತೆಯ ಮೂಲಭೂತ ಹಕ್ಕಿನ ತಿರುಳಾಗಿದೆ. ಇದು ಸಂವಿಧಾನದ 21 ನೇ ವಿಧಿಯಿಂದ ಖಾತರಿಪಡಿಸಿದ ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ನ್ಯಾಯಾಧೀಶರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಸೋಮವಾರದ ತೀರ್ಪಿನಲ್ಲಿ, ನ್ಯಾಯಾಲಯವು ಫಾತಿಮಾ ಅವರ ವಾದವನ್ನು ಒಪ್ಪಿಕೊಂಡಿತು ಮತ್ತು ಪುರುಷರ ಮೇಲಿನ ದೇಹದ ನಗ್ನ ಪ್ರದರ್ಶನವನ್ನು ಎಂದಿಗೂ ಅಶ್ಲೀಲ ಅಥವಾ ಅಸಭ್ಯವೆಂದು ಪರಿಗಣಿಸಲಾಗುವುದಿಲ್ಲ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಇದೇ ವೇಳೆ ಪ್ರಾಚೀನ ದೇವಾಲಯಗಳಲ್ಲಿ ಕೆತ್ತಿರುವ ಅರೆನಗ್ನ ಮೂರ್ತಿಗಳ ಬಗ್ಗೆಯೂ ಉಲ್ಲೇಖಿಸಿದ ಹೈಕೋರ್ಟ್‌, ಸಾರ್ವಜನಿಕ ಸ್ಥಳಗಳಲ್ಲಿ ಮುಕ್ತವಾಗಿ ಲಭ್ಯವಿರುವ ನಗ್ನ ಶಿಲ್ಪಗಳು ಮತ್ತು ವರ್ಣ ಚಿತ್ರಗಳನ್ನು ಕಲೆ ಎಂದು ಪರಿಗಣಿಸಲಾಗುತ್ತದೆ. ದೇವರ ಭಕ್ತಿಗೆ ದೇವಾಲಯಕ್ಕೆ ಹೋದಾಗಲು ಭಕ್ತರ ಮನಸ್ಸು ಅರೆನಗ್ನ ಮೂರ್ತಿಗಳನ್ನು ನೋಡೋವಾಗ ಅದನ್ನು ಕಲೆಯಾಗಿ ನೋಡಿ, ದೇವರನ್ನು ಪ್ರಾರ್ಥಿಸುತ್ತಾರೆ. ಆದರೆ ಲೈಂಗಿಕತೆಯ ದೃಷ್ಟಿಕೋನದಲ್ಲಿ ನೋಡುವುದಿಲ್ಲ’ ಎಂದು ಕೋರ್ಟ್ ಹೇಳಿದೆ.

“ಕೇರಳದ ತ್ರಿಶೂರ್‌ನಲ್ಲಿ ನಡೆಯುವ ‘ಪುಲಿಕಲಿ’ ಉತ್ಸವಗಳಲ್ಲಿ ಪುರುಷರ ದೇಹದ ಮೇಲೆ ಚಿತ್ರಿಸುವುದು ಅಂಗೀಕೃತ ಸಂಪ್ರದಾಯವಾಗಿದೆ” ಎಂದು ನ್ಯಾಯಮೂರ್ತಿ ಎಡಪ್ಪಗತ್ ಹೇಳಿದರು. ದೇವಾಲಯದಲ್ಲಿ ‘ತೆಯ್ಯಂ’ ಮತ್ತು ಇತರ ಆಚರಣೆಗಳನ್ನು ನಡೆಸಿದಾಗ, ಪುರುಷ ಕಲಾವಿದರ ದೇಹದ ಮೇಲೆ ಚಿತ್ರಕಲೆ ನಡೆಸಲಾಗುತ್ತದೆ. ಪುರುಷ ದೇಹವನ್ನು ಸಿಕ್ಸ್ ಪ್ಯಾಕ್ ಎಬಿಎಸ್, ಬೈಸೆಪ್ಸ್ ಇತ್ಯಾದಿಗಳ ರೂಪದಲ್ಲಿ ಪ್ರದರ್ಶಿಸಲಾಗುತ್ತದೆ. ಪುರುಷರು ಶರ್ಟ್ ಧರಿಸದೆ ತಿರುಗಾಡುವುದನ್ನು ನಾವು ಸಾಮಾನ್ಯವಾಗಿ ಕಾಣುತ್ತೇವೆ, ಆದರೆ ಈ ಕೃತ್ಯಗಳನ್ನು ಎಂದಿಗೂ ಅಶ್ಲೀಲ ಅಥವಾ ಅಸಭ್ಯವೆಂದು ಪರಿಗಣಿಸಲಾಗುವುದಿಲ್ಲ. ಆದರೆ ಕೆಲವು ಜನರು ಮಹಿಳೆಯ ಬೆತ್ತಲೆ ದೇಹವನ್ನು ಅತಿಯಾದ ಲೈಂಗಿಕತೆ ಅಥವಾ ಕೇವಲ ಬಯಕೆಯ ವಸ್ತು ಎಂದು ಪರಿಗಣಿಸುತ್ತಾರೆ ಎಂದು ನ್ಯಾಯಾಲಯವು ಹೇಳಿದೆ.

ನಗ್ನತೆಯನ್ನು ಅಶ್ಲೀಲ ಅಥವಾ ಅಸಭ್ಯ ಅಥವಾ ಅನೈತಿಕ ಎಂದು ವರ್ಗೀಕರಿಸುವುದೇ ಮೂಲಭೂತವಾಗಿ ತಪ್ಪು ಎಂದ ನ್ಯಾಯಮೂರ್ತಿ ಕೌಸರ್ ಎಡಪ್ಪಗತ್, ಕೆಲವು ಅಸ್ಪೃಶ್ಯ ಸಮುದಾಯದ ಮಹಿಳೆಯರು ತಮ್ಮ ಸ್ತನಗಳನ್ನು ಮುಚ್ಚುವ ಹಕ್ಕಿಗಾಗಿ ಹೋರಾಟ ನಡೆಸಿದ ರಾಜ್ಯ ಇದು. ಪುರುಷ ದೇಹದ ಸ್ವಾತಂತ್ರ್ಯವನ್ನು ಪ್ರಶ್ನಿಸುವ ಸಂಖ್ಯೆ ಕಡಿಮೆ. ಆದರೆ ಪಿತೃಪ್ರಧಾನ ವ್ಯವಸ್ಥೆಯಲ್ಲಿ ಹೆಣ್ಣು ತನ್ನ ದೇಹಕ್ಕೆ ಸಂಬಂಧಿಸಿದಂತೆ ತನ್ನದೇ ಆದ ಸ್ವತಂತ್ರ ಧೋರಣೆ ಹೊಂದುವುದಕ್ಕೆ ಅವಕಾಶ ನೀಡುವುದಿಲ್ಲ. ನಿರಂತರವಾಗಿ ಆಕೆಯನ್ನು ಬೆದರಿಸಲಾಗುತ್ತದೆ. ತಮ್ಮ ದೇಹ ಮತ್ತು ಜೀವನದ ಬಗ್ಗೆ ತಮ್ಮದೇ ಆದ ಆಯ್ಕೆಗಳನ್ನು ಮಾಡಿಕೊಳ್ಳುವುದಕ್ಕೆ ಹೆಣ್ಣಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

ಮಹಿಳೆಯ ದೇಹದ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಅಭಿಪ್ರಾಯ ರೂಪಿಸುವುದು ವೀಡಿಯೋದ ಉದ್ದೇಶವಾಗಿತ್ತು ಎಂದು ಕೋರ್ಟ್ ನಿರೂಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...