Homeಕರ್ನಾಟಕಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ...

ಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ದೇವದುರ್ಗ ಕ್ಷೇತ್ರದ ಜೆಡಿಎಸ್‌ ಶಾಸಕಿ ಕರೆಮ್ಮ ಜಿ ನಾಯಕ ಅವರನ್ನು ಅಶ್ಲೀಲವಾಗಿ ನಿಂದಿಸಿದ ಆರೋಪದ ಮೇಲೆ ಬಿಜೆಪಿಯ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರ ಸಹೋದರ ಸೇರಿ ಎಂಟು ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ.

ದೇವದುರ್ಗ ತಾಲೂಕಿನ ಆಲದಮರ ತಾಂಡಾದಲ್ಲಿ ಭಾನುವಾರ ಲೈನ್‌ಮನ್ ವಿರೂಪಾಕ್ಷ ಮೃತಪಟ್ಟ ಸ್ಥಳಕ್ಕೆ ಶಾಸಕಿ ಕರೆಮ್ಮ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿಯ ಮುಖಂಡರು ಶಾಸಕಿಯನ್ನು ಅಶ್ಲೀಲ ಪದಗಳಿಂದ ನಿಂದಿಸಿದ್ದರು.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಬಿಜೆಪಿ ಮುಖಂಡರನ್ನು ಬಂಧಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

ಪೊಲೀಸರ ವೈಫಲ್ಯದಿಂದ ಇಂತಹ ಘಟನೆ ನಡೆಯುತ್ತಿವೆ. ಶಾಸಕಿ ಕರೆಮ್ಮ ಅವರಿಗೆ ರಕ್ಷಣೆ ಇಲ್ಲ. ಇನ್‌ಸ್ಪೆಕ್ಟರ್‌ ಹೊಸಕೆರಪ್ಪ ತಾಲೂಕಿನಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ. ಇನ್‌ಸ್ಪೆಕ್ಟರ್‌ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜೆಡಿಎಸ್‌ ಮುಖಂಡ ಬಸವರಾಜ ನಾಯಕ ಕೊತ್ತದೊಡ್ಡಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿರ್ದೇಶನ ನೀಡಿದ ನಂತರ ಇನ್‌ಸ್ಪೆಕ್ಟರ್‌ ಹೊಸಕೇರಪ್ಪ ಅವರು ಬಿಜೆಪಿಯ ಮಾಜಿ ಶಾಸಕ ಕೆ ಶಿವನಗೌಡ ಸಹೋದರ ಭಗವಂತ್ರಾಯ ನಾಯಕ ಸೇರಿದಂತೆ ಎಂಟು ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳನ್ನು 24 ಗಂಟೆಯ ಒಳಗೆ ಬಂಧಿಸದಿದ್ದರೆ ಠಾಣೆಗೆ ಮತ್ತೆ ಮುತ್ತಿಗೆ ಹಾಕಲಾಗುವುದು ಎಂದು ಜೆಡಿಎಸ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಹೋರಾಟದ ಹಿನ್ನೆಲೆಯವರಾದ ಕರೆಮ್ಮ, ಪ್ರಭಾವಿ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕರನ್ನು ಸೋಲಿಸಿ ಗಮನ ಸೆಳೆದಿದ್ದಾರೆ. 2005ರಲ್ಲಿ ಗ್ರಾಮ ಪಂಚಾಯತಿ ಚುನಾವಣೆಯ ಮೂಲಕ ರಾಜಕೀಯ ಪ್ರವೇಶ ಮಾಡಿ ಹೋರಾಟದ ಮೂಲಕ ಗುರುತಿಸಿಕೊಂಡಿರುವ ಕರೆಮ್ಮ ಈಗ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.

ಇದನ್ನೂ ಓದಿರಿ: ಜನ ಮೆಚ್ಚಿದ ನಾಯಕಿ, ಹೋರಾಟಗಾರ್ತಿ ಕರೆಮ್ಮ ಜಿ.ನಾಯಕ

2018ರ ವಿಧಾನಸಭೆ ಚುನಾವಣೆಗೆ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾದರು. ಕ್ಷೇತ್ರದಲ್ಲಿ ಇದನ್ನು ಗಮನಿಸಿದ ಬಿಜೆಪಿಯ ಕೆ.ಶಿವನಗೌಡ ನಾಯಕ ಅವರು ಹಣಬಲವನ್ನು ಬಳಸಿ ಟಿಕೆಟನ್ನು ಕರೆಮ್ಮ ಅವರಿಗೆ ತಪ್ಪಿಸಿ, ತಮ್ಮ ಸಂಬಂಧಿಕರಾದ ವೆಂಕಟೇಶ್ ಪೂಜಾರಿ ಎನ್ನುವ ವ್ಯಕ್ತಿಗೆ ಕೊಡಿಸಿದ್ದರು. ಅ ನಂತರ ಟಿಕೆಟ್‌ ವಂಚಿತರಾದ ಕರೆಮ್ಮ ಜನಾಭಿಪ್ರಾಯವನ್ನು ಪಡೆದು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು 26,000 ಮತಗಳನ್ನು ಪಡೆಯುವ ಮೂಲಕ ಮೂರನೆಯ ಸ್ಥಾನಕ್ಕಿಳಿದು ಸೋಲು ಕಂಡಿದ್ದರು.

ಸೋತರೂ ಧೃತಿಗೆಡದ ಗಟ್ಟಿಗಿತ್ತಿ ದಿಟ್ಟ ಮಹಿಳೆಯಾದ ಹಳ್ಳಿಗಾಡಿನ ಕರೆಮ್ಮ, ಮತ್ತೆ ಜನರ ಬಳಿಗೆ ಹೋಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತ ಸಣ್ಣಪುಟ್ಟ ಕೆಲಸಗಳಿಗೆ ಬೆನ್ನುಲುಬಾಗಿ ನಿಂತು ಕಳೆದ ಐದು ವರ್ಷ ಕ್ಷೇತ್ರದಲ್ಲಿ ವಿರೋಧ ಪಕ್ಷದ ರೀತಿಯಲ್ಲಿ ಹಾಲಿ ಶಾಸಕರ ವಿರುದ್ಧ ದನಿ ಎತ್ತುವ ಮೂಲಕ ಅಪಾರ ಜನರ ಪ್ರೀತಿ, ವಿಶ್ವಾಸ, ನಂಬಿಕೆಯನ್ನು ಗಳಿಸಿಕೊಂಡು ಜನರ ಮನಸ್ಸನ್ನು ಗೆದ್ದರು.

ಸಾಮಾನ್ಯ ಬಡ ಕುಟುಂಬದಲ್ಲಿ ಜನಿಸಿ ಶಾಸಕರಾಗಿದ್ದು ಯಾರದ್ದೋ ಬೆಂಬಲದಿಂದಲ್ಲ, ಸತತ 8 ವರ್ಷಗಳಿಂದ ಕ್ಷೇತ್ರದ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದರ ಪರಿಣಾಮ. 200 ಹಳ್ಳಿಗಳ ಜನ ಊರಿನ ಮಗಳೆಂದು ಹಾರೈಸಿ, ಸನ್ಮಾನಿಸಿ, ಉಡಿ ತುಂಬಿ ಹಾರೈಸಿದ್ದು, ಜೊತೆಗೆ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಜನರ ಸಮಸ್ಯೆಗಳನ್ನ ಆಲಿಸಿದ್ದು ಗೆಲುವಿಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...