Homeಮುಖಪುಟಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಬೇಕು; ಬೆದರಿಕೆಯ ಪೋಸ್ಟರ್‌ ಅಂಟಿಸಿದ ಕಿಡಿಗೇಡಿಗಳು

ಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಬೇಕು; ಬೆದರಿಕೆಯ ಪೋಸ್ಟರ್‌ ಅಂಟಿಸಿದ ಕಿಡಿಗೇಡಿಗಳು

- Advertisement -
- Advertisement -

ಸೋಮವಾರ ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚುಬೇಕು ಎಂದು ಬೆದರಿಕೆ ಹಾಕುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಇದು ಪುರೋಲಾ ಮುಖ್ಯ ಮಾರುಕಟ್ಟೆಯಲ್ಲಿ ನಡೆದಿದೆ. ಈ ಮಾರುಕಟ್ಟೆಯಲ್ಲಿ ಸರಿಸುಮಾರು 650-700 ಅಂಗಡಿಗಳಿದ್ದು, ಇವುಗಳಲ್ಲಿ ಸುಮಾರು 30-40 ಮುಸ್ಲಿಮರ ಅಂಗಡಿಗಳಿವೆ.

ಪುರೋಲಾ ಪ್ರದೇಶದಲ್ಲಿ ಕಳೆದ ತಿಂಗಳು 14 ವರ್ಷದ ಹಿಂದೂ ಹುಡುಗಿಯನ್ನು ಇಬ್ಬರು ಪುರುಷರು – ಒಬ್ಬ ಮುಸ್ಲಿಂ ಮತ್ತು ಇನ್ನೊಬ್ಬ ಹಿಂದೂ ಅಪಹರಣ ಯತ್ನ ನಡೆಸಿದ ಆರೋಪದ ಮೇಲೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಸೋಮವಾರ ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಜೂನ್ 15 ರೊಳಗೆ ಅಂಗಡಿಗಳನ್ನು ಮುಚ್ಚುವುದಾಗಿ ಬೆದರಿಕೆ ಹಾಕುವ ಪೋಸ್ಟರ್‌ಗಳು ಕಾಣಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಅಂಗಡಿಯ ಉಬೇದ್ ಖಾನ್ (24), ಮತ್ತು ಮೋಟಾರ್ ಸೈಕಲ್ ಮೆಕ್ಯಾನಿಕ್ ಜಿತೇಂದರ್ ಸೈನಿ (23) ಎನ್ನುವವರು ಯುವತಿಯ ಅಪಹರಣದ ಪ್ರಯತ್ನ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಒಂದು ದಿನದ ನಂತರ ಮೇ 27 ರಂದು ಬಂಧಿಸಲಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದು ‘ಲವ್ ಜಿಹಾದ್’ ಪ್ರಕರಣ ಎಂದು ಬಲಪಂಥೀಯ ಗುಂಪುಗಳು ಆರೋಪಿಸಿವೆ. ಇಂತಹ ಪ್ರಕರಣಗಳಲ್ಲಿ ಬಲಪಂಥೀಯರು, ಹಿಂದೂ ಮಹಿಳೆಯರನ್ನು ಓಲೈಸಲು ಮತ್ತು ಮೋಹಿಸಲು ಮುಸ್ಲಿಂ ಪುರುಷರು ನಡೆಸಿದ ಪಿತೂರಿ ಎಂದು ವಿವರಿಸಲು ಘಟನೆಯನ್ನು ಬಳಸಿಕೊಳ್ಳುತ್ತಾರೆ. ಆದರೆ ನ್ಯಾಯಾಲಯಗಳು ಮತ್ತು ಕೇಂದ್ರ ಸರ್ಕಾರ ಇದನ್ನು ಅಧಿಕೃತವಾಗಿ ಗುರುತಿಸುವುದಿಲ್ಲ.

ಉತ್ತರಕಾಶಿಯ ಪುರೋಲಾ ಮುಖ್ಯ ಮಾರುಕಟ್ಟೆಯಲ್ಲಿ ಜೂನ್ 15 ರಂದು ನಡೆಯುವ ಮಹಾಪಂಚಾಯತ್‌ಗೆ ಮುನ್ನ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಖಾಲಿ ಮಾಡುವಂತೆ ಪೋಸ್ಟರ್‌ಗಳಲ್ಲಿ ಹೇಳಲಾಗಿದೆ.

”ಲವ್ ಜಿಹಾದಿಗಳು ಜೂನ್ 15ರಂದು ಮಹಾಪಂಚಾಯತ್‌ಗೆ ಮುಂಚಿತವಾಗಿ ಅಂಗಡಿಗಳನ್ನು ಖಾಲಿ ಮಾಡಬೇಕು ಎಂದು ತಿಳಿಸಲಾಗಿದೆ. ಅವರು ಖಾಲಿ ಮಾಡದಿದ್ದರೆ,  ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದು ‘ಭೂಮಿ ರಕ್ಷಣೆಗಾಗಿ ಅಭಿಯಾನಕ್ಕೆ ಕರೆ ನೀಡುತ್ತದೆ” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಬಾರ್ಕೋಟ್‌ನಲ್ಲಿ ಪ್ರತಿಭಟನೆ ನಡೆಸಿ ಬಲಪಂಥೀಯ ಸಂಘಟನೆಗಳ ಸದಸ್ಯರು ಮುಸ್ಲಿಮರ ಅಂಗಡಿಗಳು ಮತ್ತು ಮನೆಗಳ ಮೇಲೆ ದಾಳಿ ಮಾಡಿದರು. ಇದಾದ ಎರಡು ದಿನಗಳ ನಂತರ ಈ ಪೋಸ್ಟರ್‌ಗಳು ಕಾಣಿಸಿಕೊಂಡವು. ಮತ್ತೊಂದೆಡೆ ಆ ದಾಳಿಕೋರರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಪೋಸ್ಟರ್‌ಗಳನ್ನು ಸೋಮವಾರ ತೆಗೆದುಹಾಕಲಾಗಿದ್ದು, ಅವುಗಳನ್ನು ಅಂಟಿಸಿದವರನ್ನು ಗುರುತಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ’ದಿ ಕೇರಳ ಸ್ಟೋರಿ’ ವರ್ಸಸ್ ’ದಿ ಗುಜರಾತ್ ಸ್ಟೋರಿ’!

”ನಾವು ಈ ಪೋಸ್ಟರ್‌ಗಳನ್ನು ತೆಗೆದುಹಾಕಿದ್ದೇವೆ ಮತ್ತು ಅವುಗಳನ್ನು ಅಂಟಿಸಿದ ಸಮಾಜವಿರೋಧಿಗಳನ್ನು ಗುರುತಿಸುತ್ತಿದ್ದೇವೆ” ಎಂದು ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅರ್ಪಣ್ ಯದುವಂಶಿ ಹೇಳಿದ್ದಾರೆ.

ಸ್ಥಳೀಯ ನಿವಾಸಿಗಳು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ ಎಂದು ಸ್ಥಳೀಯ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಖಂಡರೊಬ್ಬರು ತಿಳಿಸಿದ್ದಾರೆ.

”ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಉಳಿಯಲು ನಿರ್ದಿಷ್ಟ ಸಮುದಾಯದ ಜನರು ಪಟ್ಟಣವನ್ನು ತೊರೆಯಬೇಕೆಂದು ಬಯಸುವ ಸ್ಥಳೀಯ ನಿವಾಸಿಗಳು ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ. ಅವರು ವ್ಯಾಪಾರ ಮಾಡುವ ನೆಪದಲ್ಲಿ ಇಲ್ಲಿಗೆ ಬಂದರು ಆದರೆ ನಮ್ಮ ಸಮುದಾಯದ ಹುಡುಗಿಯರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ವಿಎಚ್‌ಪಿ ನಾಯಕ ವೀರೇಂದ್ರ ರಾಣಾ ಆರೋಪ ಮಾಡಿದ್ದಾರೆ.

ಪುರೋಲಾದಲ್ಲಿ ಗಾರ್ಮೆಂಟ್ಸ್ ಅಂಗಡಿಯನ್ನು ನಡೆಸುತ್ತಿರುವ ಸಲೀಂ (35) ಅವರು ನಡೆಯುತ್ತಿರುವ ಉದ್ವಿಗ್ನತೆ ಬಗ್ಗೆ ಮಾತನಾಡಿ,”ನಾವು ನಿರಂತರ ಭಯದಲ್ಲಿ ಬದುಕುತ್ತಿದ್ದೇವೆ ಮತ್ತು ಅಂತಹ ವಾತಾವರಣದಲ್ಲಿ ಪುರೋಲಾಗೆ ಹಿಂತಿರುಗಲು ಸಾಧ್ಯವಿಲ್ಲ. ನಾವು ಅಂಗಡಿಯಲ್ಲಿನ ಬಟ್ಟೆಗಳನ್ನೆಲ್ಲಾ ಬಿಟ್ಟು ಓಡಿಹೋಗಬೇಕೆಂದು ಅವರು ಬಯಸಿದ್ದಾರೆ. ಒಂದುವೇಳೆ ಅದೇ ರೀತಿಯಾದರೆ, ಅಧಿಕಾರಿಗಳು ನಮ್ಮ ಒಡೆತನದ ಆಸ್ತಿಗೆ ಪರಿಹಾರ ನೀಡಬೇಕು” ಎಂದು ಹೇಳಿದ್ದಾರೆ. ಸಧ್ಯ ಅವರು ಆ ಸ್ಥಳ ಬಿಟ್ಟು ಡೆಹ್ರಾಡೂನ್‌ನಲ್ಲಿರುವ ತನ್ನ ಸಹೋದರನ ಮನೆಗೆ ಓಡಿಹೋಗಿದ್ದಾರೆ.

ಹೆಸರು ಹೇಳಲಿಚ್ಚಿಸದ ಮಾರುಕಟ್ಟೆಯಲ್ಲಿನ ಮತ್ತೊಬ್ಬ ಮುಸ್ಲಿಂ ಅಂಗಡಿಯವವರು ಮಾತನಾಡಿದ್ದು, ”ನಾವು ಅಪಹರಣ ಪ್ರಯತ್ನವನ್ನು ಖಂಡಿಸುತ್ತೇವೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತೇವೆ. ಅಪರಾಧ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಜನರನ್ನು ನಾವು ಬೆಂಬಲಿಸುವುದಿಲ್ಲ” ಎಂದು ಹೇಳಿದ್ದಾರೆ.

ಸೋಮವಾರ, ಕೆಲವು ಮುಸ್ಲಿಂ ಕುಟುಂಬಗಳು ಪುರೋಲೋ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ (SDM) ಜ್ಞಾಪಕ ಪತ್ರವನ್ನು ಹಸ್ತಾಂತರಿಸಿದ್ದು, ಅವರು ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಎತ್ತಿ ತೋರಿಸಿದರು ಮತ್ತು ಅಂಗಡಿಗಳನ್ನು ಪುನಃ ತೆರೆಯಲು ಭದ್ರತೆಯನ್ನು ಕೋರಿದರು. ಜ್ಞಾಪಕ ಪತ್ರದಲ್ಲಿ ಮುಸ್ಲಿಮರಿಗೆ ಏನಾದರೂ ಅಹಿತಕರವಾದರೆ ಆಡಳಿತವೇ ಹೊಣೆಯಾಗುತ್ತದೆ ಎಂದು ಹೇಳಿದೆ.

ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ದೇವಾನಂದ್ ಶರ್ಮಾ ಈ ಬಗ್ಗೆ ಮಾತನಾಡಿ, ”ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಪಟ್ಟಣದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಲು ನಾವು ಬೆಳವಣಿಗೆಗಳ ಮೇಲೆ ಕಣ್ಣಿಟ್ಟಿದ್ದೇವೆ” ಎಂದು ಹೇಳಿದರು.

ಮೇ 26 ರಂದು ಇಬ್ಬರು ವ್ಯಕ್ತಿಗಳು ಅಪ್ರಾಪ್ತೆಯನ್ನು ಅಪಹರಿಸಲು ಪ್ರಯತ್ನಿಸಿದಾಗ ಉತ್ತರಕಾಶಿಯಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಅಪಹರಣ ಪ್ರಯತ್ನ ವಿಫಲವಾದ ನಂತರ ಆರೋಪಿಗಳು ಪರಾರಿಯಾಗಿದ್ದು, ಮರುದಿನ ಹುಡೋಳಿ ಗ್ರಾಮದಿಂದ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 29 ರಂದು, ಕೆಲವು ಪ್ರತಿಭಟನಾಕಾರರು ಮುಸ್ಲಿಮರಿಗೆ ಸೇರಿದ ಅಂಗಡಿಗಳು ಮತ್ತು ಸಂಸ್ಥೆಗಳ ಮೇಲೆ ದಾಳಿ ಮಾಡಿದ ನಂತರ ಪುರೋಲಾದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿತು. ಯಮುನಾ ಘಾಟಿ ಹಿಂದೂ ಜಾಗೃತಿ ಸಂಘಟನೆಯ ಬ್ಯಾನರ್ ಅಡಿಯಲ್ಲಿ ಶನಿವಾರ ಇದೇ ರೀತಿಯ ಪ್ರತಿಭಟನೆ ನಡೆಸಲಾಯಿತು. ಸುಮಾರು 900 ಜನರು ಈ ಧರಣಿಯಲ್ಲಿ ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...