Homeಮುಖಪುಟಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಬೇಕು; ಬೆದರಿಕೆಯ ಪೋಸ್ಟರ್‌ ಅಂಟಿಸಿದ ಕಿಡಿಗೇಡಿಗಳು

ಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಬೇಕು; ಬೆದರಿಕೆಯ ಪೋಸ್ಟರ್‌ ಅಂಟಿಸಿದ ಕಿಡಿಗೇಡಿಗಳು

- Advertisement -
- Advertisement -

ಸೋಮವಾರ ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚುಬೇಕು ಎಂದು ಬೆದರಿಕೆ ಹಾಕುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಇದು ಪುರೋಲಾ ಮುಖ್ಯ ಮಾರುಕಟ್ಟೆಯಲ್ಲಿ ನಡೆದಿದೆ. ಈ ಮಾರುಕಟ್ಟೆಯಲ್ಲಿ ಸರಿಸುಮಾರು 650-700 ಅಂಗಡಿಗಳಿದ್ದು, ಇವುಗಳಲ್ಲಿ ಸುಮಾರು 30-40 ಮುಸ್ಲಿಮರ ಅಂಗಡಿಗಳಿವೆ.

ಪುರೋಲಾ ಪ್ರದೇಶದಲ್ಲಿ ಕಳೆದ ತಿಂಗಳು 14 ವರ್ಷದ ಹಿಂದೂ ಹುಡುಗಿಯನ್ನು ಇಬ್ಬರು ಪುರುಷರು – ಒಬ್ಬ ಮುಸ್ಲಿಂ ಮತ್ತು ಇನ್ನೊಬ್ಬ ಹಿಂದೂ ಅಪಹರಣ ಯತ್ನ ನಡೆಸಿದ ಆರೋಪದ ಮೇಲೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಸೋಮವಾರ ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಜೂನ್ 15 ರೊಳಗೆ ಅಂಗಡಿಗಳನ್ನು ಮುಚ್ಚುವುದಾಗಿ ಬೆದರಿಕೆ ಹಾಕುವ ಪೋಸ್ಟರ್‌ಗಳು ಕಾಣಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಅಂಗಡಿಯ ಉಬೇದ್ ಖಾನ್ (24), ಮತ್ತು ಮೋಟಾರ್ ಸೈಕಲ್ ಮೆಕ್ಯಾನಿಕ್ ಜಿತೇಂದರ್ ಸೈನಿ (23) ಎನ್ನುವವರು ಯುವತಿಯ ಅಪಹರಣದ ಪ್ರಯತ್ನ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಒಂದು ದಿನದ ನಂತರ ಮೇ 27 ರಂದು ಬಂಧಿಸಲಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದು ‘ಲವ್ ಜಿಹಾದ್’ ಪ್ರಕರಣ ಎಂದು ಬಲಪಂಥೀಯ ಗುಂಪುಗಳು ಆರೋಪಿಸಿವೆ. ಇಂತಹ ಪ್ರಕರಣಗಳಲ್ಲಿ ಬಲಪಂಥೀಯರು, ಹಿಂದೂ ಮಹಿಳೆಯರನ್ನು ಓಲೈಸಲು ಮತ್ತು ಮೋಹಿಸಲು ಮುಸ್ಲಿಂ ಪುರುಷರು ನಡೆಸಿದ ಪಿತೂರಿ ಎಂದು ವಿವರಿಸಲು ಘಟನೆಯನ್ನು ಬಳಸಿಕೊಳ್ಳುತ್ತಾರೆ. ಆದರೆ ನ್ಯಾಯಾಲಯಗಳು ಮತ್ತು ಕೇಂದ್ರ ಸರ್ಕಾರ ಇದನ್ನು ಅಧಿಕೃತವಾಗಿ ಗುರುತಿಸುವುದಿಲ್ಲ.

ಉತ್ತರಕಾಶಿಯ ಪುರೋಲಾ ಮುಖ್ಯ ಮಾರುಕಟ್ಟೆಯಲ್ಲಿ ಜೂನ್ 15 ರಂದು ನಡೆಯುವ ಮಹಾಪಂಚಾಯತ್‌ಗೆ ಮುನ್ನ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಖಾಲಿ ಮಾಡುವಂತೆ ಪೋಸ್ಟರ್‌ಗಳಲ್ಲಿ ಹೇಳಲಾಗಿದೆ.

”ಲವ್ ಜಿಹಾದಿಗಳು ಜೂನ್ 15ರಂದು ಮಹಾಪಂಚಾಯತ್‌ಗೆ ಮುಂಚಿತವಾಗಿ ಅಂಗಡಿಗಳನ್ನು ಖಾಲಿ ಮಾಡಬೇಕು ಎಂದು ತಿಳಿಸಲಾಗಿದೆ. ಅವರು ಖಾಲಿ ಮಾಡದಿದ್ದರೆ,  ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದು ‘ಭೂಮಿ ರಕ್ಷಣೆಗಾಗಿ ಅಭಿಯಾನಕ್ಕೆ ಕರೆ ನೀಡುತ್ತದೆ” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಬಾರ್ಕೋಟ್‌ನಲ್ಲಿ ಪ್ರತಿಭಟನೆ ನಡೆಸಿ ಬಲಪಂಥೀಯ ಸಂಘಟನೆಗಳ ಸದಸ್ಯರು ಮುಸ್ಲಿಮರ ಅಂಗಡಿಗಳು ಮತ್ತು ಮನೆಗಳ ಮೇಲೆ ದಾಳಿ ಮಾಡಿದರು. ಇದಾದ ಎರಡು ದಿನಗಳ ನಂತರ ಈ ಪೋಸ್ಟರ್‌ಗಳು ಕಾಣಿಸಿಕೊಂಡವು. ಮತ್ತೊಂದೆಡೆ ಆ ದಾಳಿಕೋರರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಪೋಸ್ಟರ್‌ಗಳನ್ನು ಸೋಮವಾರ ತೆಗೆದುಹಾಕಲಾಗಿದ್ದು, ಅವುಗಳನ್ನು ಅಂಟಿಸಿದವರನ್ನು ಗುರುತಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ’ದಿ ಕೇರಳ ಸ್ಟೋರಿ’ ವರ್ಸಸ್ ’ದಿ ಗುಜರಾತ್ ಸ್ಟೋರಿ’!

”ನಾವು ಈ ಪೋಸ್ಟರ್‌ಗಳನ್ನು ತೆಗೆದುಹಾಕಿದ್ದೇವೆ ಮತ್ತು ಅವುಗಳನ್ನು ಅಂಟಿಸಿದ ಸಮಾಜವಿರೋಧಿಗಳನ್ನು ಗುರುತಿಸುತ್ತಿದ್ದೇವೆ” ಎಂದು ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅರ್ಪಣ್ ಯದುವಂಶಿ ಹೇಳಿದ್ದಾರೆ.

ಸ್ಥಳೀಯ ನಿವಾಸಿಗಳು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ ಎಂದು ಸ್ಥಳೀಯ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಖಂಡರೊಬ್ಬರು ತಿಳಿಸಿದ್ದಾರೆ.

”ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಉಳಿಯಲು ನಿರ್ದಿಷ್ಟ ಸಮುದಾಯದ ಜನರು ಪಟ್ಟಣವನ್ನು ತೊರೆಯಬೇಕೆಂದು ಬಯಸುವ ಸ್ಥಳೀಯ ನಿವಾಸಿಗಳು ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ. ಅವರು ವ್ಯಾಪಾರ ಮಾಡುವ ನೆಪದಲ್ಲಿ ಇಲ್ಲಿಗೆ ಬಂದರು ಆದರೆ ನಮ್ಮ ಸಮುದಾಯದ ಹುಡುಗಿಯರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ವಿಎಚ್‌ಪಿ ನಾಯಕ ವೀರೇಂದ್ರ ರಾಣಾ ಆರೋಪ ಮಾಡಿದ್ದಾರೆ.

ಪುರೋಲಾದಲ್ಲಿ ಗಾರ್ಮೆಂಟ್ಸ್ ಅಂಗಡಿಯನ್ನು ನಡೆಸುತ್ತಿರುವ ಸಲೀಂ (35) ಅವರು ನಡೆಯುತ್ತಿರುವ ಉದ್ವಿಗ್ನತೆ ಬಗ್ಗೆ ಮಾತನಾಡಿ,”ನಾವು ನಿರಂತರ ಭಯದಲ್ಲಿ ಬದುಕುತ್ತಿದ್ದೇವೆ ಮತ್ತು ಅಂತಹ ವಾತಾವರಣದಲ್ಲಿ ಪುರೋಲಾಗೆ ಹಿಂತಿರುಗಲು ಸಾಧ್ಯವಿಲ್ಲ. ನಾವು ಅಂಗಡಿಯಲ್ಲಿನ ಬಟ್ಟೆಗಳನ್ನೆಲ್ಲಾ ಬಿಟ್ಟು ಓಡಿಹೋಗಬೇಕೆಂದು ಅವರು ಬಯಸಿದ್ದಾರೆ. ಒಂದುವೇಳೆ ಅದೇ ರೀತಿಯಾದರೆ, ಅಧಿಕಾರಿಗಳು ನಮ್ಮ ಒಡೆತನದ ಆಸ್ತಿಗೆ ಪರಿಹಾರ ನೀಡಬೇಕು” ಎಂದು ಹೇಳಿದ್ದಾರೆ. ಸಧ್ಯ ಅವರು ಆ ಸ್ಥಳ ಬಿಟ್ಟು ಡೆಹ್ರಾಡೂನ್‌ನಲ್ಲಿರುವ ತನ್ನ ಸಹೋದರನ ಮನೆಗೆ ಓಡಿಹೋಗಿದ್ದಾರೆ.

ಹೆಸರು ಹೇಳಲಿಚ್ಚಿಸದ ಮಾರುಕಟ್ಟೆಯಲ್ಲಿನ ಮತ್ತೊಬ್ಬ ಮುಸ್ಲಿಂ ಅಂಗಡಿಯವವರು ಮಾತನಾಡಿದ್ದು, ”ನಾವು ಅಪಹರಣ ಪ್ರಯತ್ನವನ್ನು ಖಂಡಿಸುತ್ತೇವೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತೇವೆ. ಅಪರಾಧ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಜನರನ್ನು ನಾವು ಬೆಂಬಲಿಸುವುದಿಲ್ಲ” ಎಂದು ಹೇಳಿದ್ದಾರೆ.

ಸೋಮವಾರ, ಕೆಲವು ಮುಸ್ಲಿಂ ಕುಟುಂಬಗಳು ಪುರೋಲೋ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ (SDM) ಜ್ಞಾಪಕ ಪತ್ರವನ್ನು ಹಸ್ತಾಂತರಿಸಿದ್ದು, ಅವರು ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಎತ್ತಿ ತೋರಿಸಿದರು ಮತ್ತು ಅಂಗಡಿಗಳನ್ನು ಪುನಃ ತೆರೆಯಲು ಭದ್ರತೆಯನ್ನು ಕೋರಿದರು. ಜ್ಞಾಪಕ ಪತ್ರದಲ್ಲಿ ಮುಸ್ಲಿಮರಿಗೆ ಏನಾದರೂ ಅಹಿತಕರವಾದರೆ ಆಡಳಿತವೇ ಹೊಣೆಯಾಗುತ್ತದೆ ಎಂದು ಹೇಳಿದೆ.

ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ದೇವಾನಂದ್ ಶರ್ಮಾ ಈ ಬಗ್ಗೆ ಮಾತನಾಡಿ, ”ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಪಟ್ಟಣದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಲು ನಾವು ಬೆಳವಣಿಗೆಗಳ ಮೇಲೆ ಕಣ್ಣಿಟ್ಟಿದ್ದೇವೆ” ಎಂದು ಹೇಳಿದರು.

ಮೇ 26 ರಂದು ಇಬ್ಬರು ವ್ಯಕ್ತಿಗಳು ಅಪ್ರಾಪ್ತೆಯನ್ನು ಅಪಹರಿಸಲು ಪ್ರಯತ್ನಿಸಿದಾಗ ಉತ್ತರಕಾಶಿಯಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಅಪಹರಣ ಪ್ರಯತ್ನ ವಿಫಲವಾದ ನಂತರ ಆರೋಪಿಗಳು ಪರಾರಿಯಾಗಿದ್ದು, ಮರುದಿನ ಹುಡೋಳಿ ಗ್ರಾಮದಿಂದ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 29 ರಂದು, ಕೆಲವು ಪ್ರತಿಭಟನಾಕಾರರು ಮುಸ್ಲಿಮರಿಗೆ ಸೇರಿದ ಅಂಗಡಿಗಳು ಮತ್ತು ಸಂಸ್ಥೆಗಳ ಮೇಲೆ ದಾಳಿ ಮಾಡಿದ ನಂತರ ಪುರೋಲಾದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿತು. ಯಮುನಾ ಘಾಟಿ ಹಿಂದೂ ಜಾಗೃತಿ ಸಂಘಟನೆಯ ಬ್ಯಾನರ್ ಅಡಿಯಲ್ಲಿ ಶನಿವಾರ ಇದೇ ರೀತಿಯ ಪ್ರತಿಭಟನೆ ನಡೆಸಲಾಯಿತು. ಸುಮಾರು 900 ಜನರು ಈ ಧರಣಿಯಲ್ಲಿ ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...