Homeಕರ್ನಾಟಕಬಿಜೆಪಿ ಜೊತೆ ಕೈ ಜೋಡಿಸದ ಒಂದು ಪಕ್ಷವಿದ್ದರೆ ತೋರಿಸಿ: ಎಚ್‌.ಡಿ.ದೇವೇಗೌಡರ ಪ್ರತಿಕ್ರಿಯೆ

ಬಿಜೆಪಿ ಜೊತೆ ಕೈ ಜೋಡಿಸದ ಒಂದು ಪಕ್ಷವಿದ್ದರೆ ತೋರಿಸಿ: ಎಚ್‌.ಡಿ.ದೇವೇಗೌಡರ ಪ್ರತಿಕ್ರಿಯೆ

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿವೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರು ಪ್ರತಿಕ್ರಿಯಿಸಿದ್ದು, “ದೇಶದಲ್ಲಿ ಬಿಜೆಪಿ ಜತೆ ಕೈಜೋಡಿಸದೇ ಇರುವ ಯಾವುದಾದರೂ ಒಂದು ಪಕ್ಷವಿದ್ದರೆ ತೋರಿಸಿ. ಆ ನಂತರ ವಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಮಾತನಾಡುವೆ” ಎಂದು ಸವಾಲು ಹಾಕಿದ್ದಾರೆ.

ಜೆಡಿಎಸ್‌ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. “ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದು, ಜೆಡಿಎಸ್‌ ಇದನ್ನು ಬೆಂಬಲಿಸಲಿದೆಯೇ?” ಎಂದು ಕೇಳಲಾದ ಪ್ರಶ್ನೆಗೆ ದೇವೇಗೌಡರು ಹೀಗೆ ಪ್ರತಿಕ್ರಿಯಿಸಿದ್ದಾರೆ.

“ಎಲ್ಲ ಪಕ್ಷಗಳೂ ಬಿಜೆಪಿ ಜತೆ ನೇರವಾಗಿ ಅಥವಾ ಪರೋಕ್ಷವಾಗಿ ಕೈಜೋಡಿಸಿವೆ. ಕಾಂಗ್ರೆಸ್ ಪಕ್ಷದ‌ ಕೆಲವು ನಾಯಕರೂ ಅವರಲ್ಲಿ ಸೇರಿದ್ದಾರೆ” ಎಂದು ತಿಳಿಸಿದ್ದಾರೆ.

ಜೆಡಿಎಸ್ ಪಕ್ಷವು ಮುಂದಿನ ಲೋಕಸಭಾ ಚುನಾವಣೆ ಬಗ್ಗೆ ಚಿಂತಿಸುವುದಿಲ್ಲ. ಈಗ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆಗಳು ಬರಲಿವೆ. ಈ ಚುನಾವಣೆಗಳಲ್ಲಿ ಪಕ್ಷ ಪಡೆಯುವ ಜನಬೆಂಬಲ ಆಧರಿಸಿ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಕ್ಷೇತ್ರಗಳಲ್ಲಿ, ಯಾವ ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

“ನನಗೆ ಈಗ 91 ವರ್ಷ ವಯಸ್ಸು. ಈಗ‌ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಯಾರು ಅಭ್ಯರ್ಥಿ ಆಗಬೇಕು ಎಂಬುದನ್ನು ಪಕ್ಷ ನಿರ್ಧಾರ ಮಾಡುತ್ತದೆ. ವಿಧಾನಸಭಾ ಚುನಾವಣೆಯ ಸೋಲಿನಿಂದ ಕಾರ್ಯಕರ್ತರು ಹತಾಶರಾಗಬೇಕಿಲ್ಲ. ಎಲ್ಲ ಹಂತಗಳಲ್ಲಿ ಪಕ್ಷದ ಸಂಘಟನೆಯಲ್ಲಿ ಬದಲಾವಣೆಗಳನ್ನು ಮಾಡಲಾಗುವುದು. ಪಕ್ಷವನ್ನು ಮತ್ತೆ ಬಲವಾಗಿ ಕಟ್ಟುವುದು ತಮ್ಮ ಮುಂದಿನ ಗುರಿ” ಎಂದಿದ್ದಾರೆ.

ಇದರ ನಡುವೆ 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜೊತೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಬಿಜೆಪಿ ಚಿಂತಿಸುತ್ತಿರುವುದಾಗಿ ವರದಿಗಳಾಗಿವೆ. ಬಿಜೆಪಿ ಗೆಲ್ಲಬಹುದಾದ 15 ರಿಂದ 18 ಕ್ಷೇತ್ರಗಳತ್ತ ಗಮನ ಹರಿಸಿ, 5-6 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ನಿಟ್ಟಿನಲ್ಲಿಯೂ ಕಸರತ್ತುಗಳು ನಡೆಯುತ್ತಿವೆ.

ಇದನ್ನೂ ಓದಿರಿ: ಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಐದು ಗ್ಯಾರಂಟಿಗಳನ್ನು ಹಂತಹಂತವಾಗಿ ಜಾರಿಗೆ ತರುತ್ತಿದೆ. ಇದು ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಪ್ರಭಾವಿಸುವ ಸಾಧ್ಯತೆ ಇದೆ. 2019ರ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಮುಂದಿನ ಚುನಾವಣೆಯಲ್ಲಿಯೂ ಅಷ್ಟೇ ಸ್ಥಾನಗಳನ್ನು ಗೆಲ್ಲುತ್ತದೆ ಎಂಬುದಕ್ಕೆ ಯಾವುದೇ ಖಾತ್ರಿ ಇಲ್ಲ. ಹೀಗಾಗಿ ಮೈತ್ರಿ ಚರ್ಚೆಗಳು ಮುನ್ನೆಲೆಗೆ ಬರುತ್ತಿವೆ.

28 ಕ್ಷೇತ್ರಗಳ ಪೈಕಿ ಬಿಜೆಪಿ 20 ರಿಂದ 22 ಸ್ಥಾನಗಳನ್ನು ಗೆದ್ದು, ಜೆಡಿಎಸ್‌ಗೆ 8 ಸ್ಥಾನಗಳನ್ನು ಬಿಟ್ಟುಕೊಡಬಹುದು. ಹೀಗಾಗಿ ಜೆಡಿಎಸ್‌ ಒಪ್ಪಿದರೆ ಮೈತ್ರಿ ಲೇಸು ಎಂಬ ಲೆಕ್ಕಾಚಾರ ಬಿಜೆಪಿಯಲ್ಲಿ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...