Homeಮುಖಪುಟಅಮಿತ್ ಶಾರೊಂದಿಗೆ ನಾವು ಡೀಲ್ ಮಾಡಿಕೊಂಡಿಲ್ಲ, ಪ್ರತಿಭಟನೆ ಮುಂದುವರೆಸುತ್ತೇವೆ: ಕುಸ್ತಿಪಟು ಬಜರಂಗ್ ಪುನಿಯಾ

ಅಮಿತ್ ಶಾರೊಂದಿಗೆ ನಾವು ಡೀಲ್ ಮಾಡಿಕೊಂಡಿಲ್ಲ, ಪ್ರತಿಭಟನೆ ಮುಂದುವರೆಸುತ್ತೇವೆ: ಕುಸ್ತಿಪಟು ಬಜರಂಗ್ ಪುನಿಯಾ

- Advertisement -
- Advertisement -

ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬಳಿಕ ಮಾತನಾಡಿರುವ ಕುಸ್ತಿಪಟು ಬಜರಂಗ್ ಪುನಿಯಾ, ಅಮಿತ್ ಶಾ ಅವರೊಂದಿಗೆ ಗ್ರಾಪ್ಲರ್‌ಗಳು ಯಾವುದೇ ಹೊಂದಾಣಿಕೆ ಅಥವಾ ಡೀಲ್ ಮಾಡಿಕೊಂಡಿಲ್ಲ ಮತ್ತು ಪ್ರತಿಭಟನೆಗಳು ಮುಂದುವರಿಯುತ್ತವೆ ಎಂದು ಹೇಳಿದ್ದಾರೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ, ಪುನಿಯಾ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ತಡರಾತ್ರಿ ಭೇಟಿಯಾದ ಬಗ್ಗೆ ಮಾತನಾಡದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭಾರತ ಸರ್ಕಾರದಿಂದ ಕೇಳಲಾಗಿದೆ ಎಂದು ಹೇಳಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವವರಲ್ಲಿ ಅಪ್ರಾಪ್ತ ವಯಸ್ಕಳು ತನ್ನ ದೂರನ್ನು ಹಿಂಪಡೆದಿದ್ದಾರೆ ಎಂಬ ವರದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಲಾಯಿತು. ಈ ಬಗ್ಗೆ ಮಾತನಾಡಿದ ಪುನಿಯಾ, ”ಪೋಸ್ಕೋ ಕಾಯ್ದೆಯಡಿ ಬ್ರಿಜ್ ಭೂಷಣ್ ವಿರುದ್ದ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ತಂದೆ ಮತ್ತು ಆ ಬಾಲಕಿ, ದೂರನ್ನು ಹಿಂಪಡೆದಿಲ್ಲ, ಆದರೆ ಬ್ರಿಜ್ ಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಸಂಬಂಧಿತ ವಿವರಗಳೊಂದಿಗೆ ಹೊಸದಾಗಿ ಸಲ್ಲಿಸಿದ್ದಾಳೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ”ನಾವು ಎಲ್ಲವನ್ನೂ ಪಣಕ್ಕಿಟ್ಟಿದ್ದೇವೆ ಮತ್ತು ನಮ್ಮ ಆಂದೋಲನದಲ್ಲಿ ಒಂದು ಅಡಚಣೆಯಾದರೆ ನಮ್ಮ ಸರ್ಕಾರಿ ಉದ್ಯೋಗಗಳನ್ನು ತ್ಯಜಿಸಲು ಸಿದ್ಧರಿದ್ದೇವೆ. ಇದು ದೊಡ್ಡ ವಿಷಯವಲ್ಲ” ಎಂದು ಅವರು ಹೇಳಿದರು.

”ಇದು ಗೌರವ ಮತ್ತು ಘನತೆಗಾಗಿ ಹೋರಾಟವಾಗಿದೆ. ನಾವು ವದಂತಿಗಳಿಗೆ ಹೆದರುವುದಿಲ್ಲ, ಅಥವಾ ರೈಲ್ವೇ ಉದ್ಯೋಗವನ್ನು ಕಳೆದುಕೊಳ್ಳುತ್ತೇವೆ. ಯಾರಾದರೂ ನಮ್ಮ ಮೇಲೆ ಒತ್ತಡ ಹೇರಿದರೆ ನಾವು ಕೆಲಸವನ್ನು ತೊರೆಯುತ್ತೇವೆ” ಎಂದು ಪುನಿಯಾ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಜ್‌ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಹಿಂಪಡೆದಿಲ್ಲ; ಮಾಧ್ಯಮಗಳ ಸುಳ್ಳು ಸುದ್ದಿಗೆ ದೂರುದಾರರ ಸ್ಪಷ್ಟನೆ

”ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧದ ದೂರಿನ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಯಾವುದೇ ಡೀಲ್ ಮಾಡಿಕೊಂಡಿಲ್ಲ” ಎಂದು ಪುನಿಯಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

”ಪ್ರತಿಭಟನಾ ಚಳವಳಿಯು ಸತ್ತು ಹೋಗಿಲ್ಲ, ಅದು ಮುಂದುವರಿಯುತ್ತದೆ. ಅದನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎಂಬುದರ ಕುರಿತು ನಾವು ಕಾರ್ಯತಂತ್ರ ರೂಪಿಸುತ್ತಿದ್ದೇವೆ” ಎಂದು ಪುನಿಯಾ ಹೇಳಿದರು.

”ಪ್ರತಿಭಟನಾ ನಿರತ ಕುಸ್ತಿಪಟುಗಳು ಸರ್ಕಾರದೊಂದಿಗೆ ‘ಡೀಲ್’ ಮಾಡಿಕೊಂಡಿದ್ದಾರೆ ಎಂದು ಈ ಹಿಂದೆ ವರದಿಗಳು ಬಂದಿದ್ದವು. ಆದರೆ ನಾವು ಸಭೆಯಲ್ಲಿನ ಚಚೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡದಂತೆ ಸರ್ಕಾರ ಕೇಳಿಕೊಂಡಿತ್ತು. ಹಾಗಾಗಿ ನಾವುಗಳು ಮಾತನಾಡಿರಲಿಲ್ಲ. ಆದರೆ, ಆನಂತರ ಸರ್ಕಾರದೊಳಗಿನವರೇ ಚರ್ಚೆಯ ವಿಚಾರವನ್ನು ಸೋರಿಕೆ ಮಾಡಿದ್ದಾರೆ” ಎಂದು ಪುನಿಯಾ ಹೇಳಿದರು.

ಪ್ರತಿಭಟನಾ ನಿರತ ಕುಸ್ತಿಪಟುಗಳು ಸರ್ಕಾರದ ಪ್ರತಿಕ್ರಿಯೆಯಿಂದ ತೃಪ್ತರಾಗಿಲ್ಲ, ಅವರ ಬೇಡಿಕೆಗಳಿಗೆ ಸರ್ಕಾರವು ಮನ್ನಣೆ ನೀಡುತ್ತಿಲ್ಲ ಎಂದು ಪುನಿಯಾ ಅಸಮಧಾನ ಹೊರಹಾಕಿದರು.

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ಸಂಗೀತಾ ಫೋಗಟ್ ಮತ್ತು ಸತ್ಯವರ್ತ್ ಕಡಿಯಾನ್ ಸೋಮವಾರ ರಾತ್ರಿ 11 ಗಂಟೆಗೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಸಭೆ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು ಎಂದು ವರದಿಯಾಗಿದೆ.

ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ ಎಂದು ಅಮಿತ್ ಶಾ ಕುಸ್ತಿಪಟುಗಳಿಗೆ ಭರವಸೆ ನೀಡಿದರು. ”ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಲಿ” ಎಂದು ಅವರು ಕುಸ್ತಿಪಟುಗಳಿಗೆ ಹೇಳಿದರು. ಅವರು (ಶಾ) ಕ್ರಮ ತಗೆದುಕೊಳ್ಳುವ ಬಗ್ಗೆ ಚರ್ಚಿಸುತ್ತಿದ್ದಾರೆ. ಹಾಗಂತ ಅವರು ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತಾರೆ ಎನ್ನುವ ಭರವಸೆಗಳ ಆಧಾರದ ಮೇಲೆ ಹಿಂತೆಗೆದುಕೊಳ್ಳುವುದಿಲ್ಲ” ಎಂದು ಹೇಳಿದರು.

”ಸರ್ಕಾರದ ಭರವಸೆಗಳ ಆಧಾರದ ಮೇಲೆ ನಾವು ಜನವರಿಯಲ್ಲಿ ಹಿಂತಿರುಗಿದ್ದೇವೆ, ಆದರೆ ನಂತರ ಸುಳ್ಳುಗಾರರು ಎಂದು ಘೋಷಿಸಲಾಯಿತು” ಎಂದು ಪುನಿಯಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...