Homeಕರ್ನಾಟಕಬೆಂಗಳೂರು: ಫೇಸ್‌ಬುಕ್‌ ಗೆಳತಿಯಿಂದ ವಂಚನೆ, 37 ಲಕ್ಷ ರೂ. ಕಳೆದುಕೊಂಡ ಸ್ವಾಮೀಜಿ

ಬೆಂಗಳೂರು: ಫೇಸ್‌ಬುಕ್‌ ಗೆಳತಿಯಿಂದ ವಂಚನೆ, 37 ಲಕ್ಷ ರೂ. ಕಳೆದುಕೊಂಡ ಸ್ವಾಮೀಜಿ

- Advertisement -
- Advertisement -

ಸಾಮಾಜಿಕ ಮಾಧ್ಯಮವಾದ ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವತಿಯೊಬ್ಬರು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರಿಗೆ 37 ಲಕ್ಷ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ.

ಫೇಸ್‌ಬುಕ್‌ನಲ್ಲಿ ಪರಿಚಯವಾಗಿ, ನಂತರ ವಿಡಿಯೊ ಕಾಲ್‌ಗಳ ಮೂಲಕ ಸಲುಗೆ ತೋರುತ್ತಿದ್ದ ಯುವತಿಯು ಚನ್ನವೀರ ಶಿವಾಚಾರ್ಯ ಸ್ವಾಮೀಜಿಯಿಂದ 37 ಲಕ್ಷ ರೂಪಾಯಿ ಕಸಿದುಕೊಂಡಿರುವ ಸಂಬಂಧ ದಾಬಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಆಗಿದೆ.

“ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರು ಹಣ ವರ್ಗಾವಣೆ ದಾಖಲೆ ಸಮೇತ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಯುವತಿ ವರ್ಷಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಏನಿದು ಪ್ರಕರಣ?

ಶಿವಾಚಾರ್ಯ ಸ್ವಾಮೀಜಿಗೆ 2020ರಲ್ಲಿ ವರ್ಷಾ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್‌ ಬಂದಿತ್ತು. ಅವರನ್ನು ಸ್ವಾಮೀಜಿ ಫ್ರೆಂಡ್ ಮಾಡಿಕೊಂಡಿದ್ದರು. ಅಧ್ಯಾತ್ಮದಲ್ಲಿ ಆಸಕ್ತಿ ಇದೆ ಎನ್ನುತ್ತಾ ಯುವತಿಯು ಸ್ವಾಮೀಜಿಯೊಂದಿಗೆ ಚಾಟ್ ಮಾಡುತ್ತಿದ್ದಳು. ಸ್ವಾಮೀಜಿಯ ಮೊಬೈಲ್ ನಂಬರ್‌ ಪಡೆದು, ತನ್ನ ನಂಬರ್‌ ಕೂಡ ಶೇರ್‌ ಮಾಡಿಕೊಂಡಿದ್ದಳು ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮೊಬೈಲ್ ನಂಬರ್ ಪಡೆದ ಬಳಿಕ ವಾಟ್ಸ್‌ಆ್ಯಪ್‌ನಲ್ಲಿ ಚಾಟ್‌ ಕೂಡ ಮಾಡುತ್ತಿದ್ದರು. ತಾನೊಬ್ಬ ಅನಾಥೆ ಎನ್ನುತ್ತಿದ್ದ ವರ್ಷಾ, ವಿಡಿಯೊ ಕಾಲ್‌ ಮಾಡಲಾರಂಭಿಸಿದ್ದಳು. ಹಲವು ಬಾರಿ ವಿಡಿಯೊ ಕರೆ ಮಾಡಿದ್ದ ಯುವತಿ, ಎಂದಿಗೂ ಮುಖ ತೋರಿಸಿರಲಿಲ್ಲ. ಕೈ–ಕಾಲುಗಳನ್ನು ಮಾತ್ರ ತೋರಿಸಿ ಮಾತನಾಡುತ್ತಿದ್ದಳು” ಎಂದೂ ಸ್ವಾಮೀಜಿ ದೂರಿನಲ್ಲಿ ಹೇಳಿದ್ದಾರೆ.

“ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್ ಮಾಡುತ್ತಿರುವುದಾಗಿ ಹೇಳಿಕೊಂಡು 2 ಲಕ್ಷ ರೂಪಾಯಿ ನನ್ನಿಂದ ಪಡೆದುಕೊಂಡಿದ್ದಳು. ತನ್ನ ಹೆಸರಿನಲ್ಲಿರುವ ಜಮೀನನ್ನು ಮಠದ ಹೆಸರಿಗೆ ಬರೆದುಕೊಡುವುದಾಗಿ ಹೇಳಿ, ಹಂತಹಂತವಾಗಿ ಹೆಚ್ಚುವರಿಯಾಗಿ 35 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿಕೊಂಡಿದ್ದಳು” ಎಂದು ಸ್ವಾಮೀಜಿ ತಿಳಿಸಿದ್ದಾರೆ.

“ಜಮೀನು ದಾಖಲೆ ತರುವ ವೇಳೆ ನನ್ನ ಮೇಲೆ ಹಲ್ಲೆಯಾಗಿದೆ, ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವರ್ಷಾ ಹೇಳಿಕೊಂಡಿದ್ದರು. ಆಸ್ಪತ್ರೆಯ ಬಿಲ್ ಪಾವತಿಗಾಗಿ ಮತ್ತೆ ಹಣದ ಕೋರಿಕೆ ಇಟ್ಟಿದ್ದಳು. ಆನಂತರ ಅನುಮಾನಗೊಂಡು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಪರಿಚಯಸ್ಥರೊಬ್ಬರನ್ನು ಕಳಿಸಿ ವಿಚಾರಿಸಿದೆ. ವರ್ಷಾ ಎಂಬವರು ಯಾರೂ ದಾಖಲಾಗಿಲ್ಲ ಎಂದು ತಿಳಿಯಿತು” ಎಂದಿದ್ದಾರೆ ಸ್ವಾಮೀಜಿ.

ಇದನ್ನೂ ಓದಿರಿ: ಚಂಡೀಗಢ: ಬಿಜೆಪಿ ಸಂಸದೆ ಜೊತೆ ವಾಗ್ವಾದ; ಸದನದಿಂದ ಎಎಪಿ ಕೌನ್ಸಿಲರ್‌ಗಳ ಅಮಾನತು

“ವರ್ಷಾ ಸ್ನೇಹಿತೆ ಎನ್ನಲಾದ ಮಂಜುಳಾಗೆ ಕಾಲ್‌ ಮಾಡಿದಾಗ, 55 ಲಕ್ಷ ರೂಪಾಯಿ ಸಾಲ ಮಾಡಿ ವರ್ಷಾರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದ್ದರು. ಆಸ್ಪತ್ರೆಗೆ ನೀಡಿರುವ ಹಣವನ್ನು ಸಾಲದ ರೂಪದಲ್ಲಿ ತಂದಿದ್ದು, ಅದನ್ನು ತೀರಿಸಬೇಕು. ನೀವು ಹಣ ನೀಡದಿದ್ದರೆ ವರ್ಷಾ ಜೊತೆಗಿನ ಸಲುಗೆಯ ವಿಷಯವನ್ನು ಎಲ್ಲರಿಗೂ ಹೇಳಿ ಮರ್ಯಾದೆ ತೆಗೆಯುತ್ತೇನೆ ಎಂದು ಬೆದರಿಸಲಾಗಿತ್ತು” ಎಂದು ಸ್ವಾಮೀಜಿ ಹೇಳಿರುವುದಾಗಿ ವರದಿಯಾಗಿದೆ.

ವರ್ಷಾ ಕಡೆಯವರು ಎನ್ನಲಾದ ಮಂಜುಳಾ ಹಾಗೂ ಇತರರು ಮೇ 23ರಂದು ಮಠಕ್ಕೆ ಹೋಗಿ ಗಲಾಟೆ ಮಾಡಿದ್ದರು. 55 ಲಕ್ಷ ರೂಪಾಯಿ ವಾಪಸ್‌ ಕೊಡುವಂತೆ ಸ್ವಾಮೀಜಿಗೆ ಧಮ್ಕಿ ಹಾಕಿದ್ದರು. ಇದಾದ ನಂತರ ಸ್ವಾಮೀಜಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.

ಸ್ವಾಮೀಜಿ ಸುಮಾರು 50 ಲಕ್ಷ ರೂಪಾಯಿವರೆಗೂ ಹಣ ಕಳೆದುಕೊಂಡಿರುವ ಸಾಧ್ಯತೆ ಇದೆ. ವರ್ಷಾ ಮತ್ತು ಮಂಜುಳಾ ನಡುವಿನ ಸಂಬಂಧ ಏನೆಂಬುದು ತನಿಖೆಯಿಂದ ಬಯಲಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೇಸ್‌ಬುಕ್‌ ಮೂಲಕ ಪರಿಚಯವಾಗಿ, ಬೆತ್ತಲೆ ವಿಡಿಯೊ ಕಾಲ್ ಮಾಡುವ ಮೂಲಕ ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಸಾಕಷ್ಟು ವರದಿಯಾಗಿವೆ. ಸ್ವಾಮೀಜಿಯೇ ಇಂತಹದ್ದೊಂದು ಜಾಲಕ್ಕೆ ಸಿಲುಕಿರುವುದು ಹಲವು ಚರ್ಚೆಗೆ ಅವಕಾಶ ನೀಡಿದೆ. ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರು ಇಷ್ಟು ಕಾಲ ಎಚ್ಚೆತ್ತುಕೊಳ್ಳದೆ ಇದ್ದದ್ದು ಏಕೆ? 37 ಲಕ್ಷ ರೂಪಾಯಿಯವರೆಗೂ ಅಪರಿಚಿತ ಯುವತಿಗೆ ಹಣ ವರ್ಗಾಯಿಸಿದ್ದು ಹೇಗೆ? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...