Homeಕರ್ನಾಟಕಬೆಂಗಳೂರು: ಫೇಸ್‌ಬುಕ್‌ ಗೆಳತಿಯಿಂದ ವಂಚನೆ, 37 ಲಕ್ಷ ರೂ. ಕಳೆದುಕೊಂಡ ಸ್ವಾಮೀಜಿ

ಬೆಂಗಳೂರು: ಫೇಸ್‌ಬುಕ್‌ ಗೆಳತಿಯಿಂದ ವಂಚನೆ, 37 ಲಕ್ಷ ರೂ. ಕಳೆದುಕೊಂಡ ಸ್ವಾಮೀಜಿ

- Advertisement -
- Advertisement -

ಸಾಮಾಜಿಕ ಮಾಧ್ಯಮವಾದ ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವತಿಯೊಬ್ಬರು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರಿಗೆ 37 ಲಕ್ಷ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ.

ಫೇಸ್‌ಬುಕ್‌ನಲ್ಲಿ ಪರಿಚಯವಾಗಿ, ನಂತರ ವಿಡಿಯೊ ಕಾಲ್‌ಗಳ ಮೂಲಕ ಸಲುಗೆ ತೋರುತ್ತಿದ್ದ ಯುವತಿಯು ಚನ್ನವೀರ ಶಿವಾಚಾರ್ಯ ಸ್ವಾಮೀಜಿಯಿಂದ 37 ಲಕ್ಷ ರೂಪಾಯಿ ಕಸಿದುಕೊಂಡಿರುವ ಸಂಬಂಧ ದಾಬಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಆಗಿದೆ.

“ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರು ಹಣ ವರ್ಗಾವಣೆ ದಾಖಲೆ ಸಮೇತ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಯುವತಿ ವರ್ಷಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಏನಿದು ಪ್ರಕರಣ?

ಶಿವಾಚಾರ್ಯ ಸ್ವಾಮೀಜಿಗೆ 2020ರಲ್ಲಿ ವರ್ಷಾ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್‌ ಬಂದಿತ್ತು. ಅವರನ್ನು ಸ್ವಾಮೀಜಿ ಫ್ರೆಂಡ್ ಮಾಡಿಕೊಂಡಿದ್ದರು. ಅಧ್ಯಾತ್ಮದಲ್ಲಿ ಆಸಕ್ತಿ ಇದೆ ಎನ್ನುತ್ತಾ ಯುವತಿಯು ಸ್ವಾಮೀಜಿಯೊಂದಿಗೆ ಚಾಟ್ ಮಾಡುತ್ತಿದ್ದಳು. ಸ್ವಾಮೀಜಿಯ ಮೊಬೈಲ್ ನಂಬರ್‌ ಪಡೆದು, ತನ್ನ ನಂಬರ್‌ ಕೂಡ ಶೇರ್‌ ಮಾಡಿಕೊಂಡಿದ್ದಳು ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮೊಬೈಲ್ ನಂಬರ್ ಪಡೆದ ಬಳಿಕ ವಾಟ್ಸ್‌ಆ್ಯಪ್‌ನಲ್ಲಿ ಚಾಟ್‌ ಕೂಡ ಮಾಡುತ್ತಿದ್ದರು. ತಾನೊಬ್ಬ ಅನಾಥೆ ಎನ್ನುತ್ತಿದ್ದ ವರ್ಷಾ, ವಿಡಿಯೊ ಕಾಲ್‌ ಮಾಡಲಾರಂಭಿಸಿದ್ದಳು. ಹಲವು ಬಾರಿ ವಿಡಿಯೊ ಕರೆ ಮಾಡಿದ್ದ ಯುವತಿ, ಎಂದಿಗೂ ಮುಖ ತೋರಿಸಿರಲಿಲ್ಲ. ಕೈ–ಕಾಲುಗಳನ್ನು ಮಾತ್ರ ತೋರಿಸಿ ಮಾತನಾಡುತ್ತಿದ್ದಳು” ಎಂದೂ ಸ್ವಾಮೀಜಿ ದೂರಿನಲ್ಲಿ ಹೇಳಿದ್ದಾರೆ.

“ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್ ಮಾಡುತ್ತಿರುವುದಾಗಿ ಹೇಳಿಕೊಂಡು 2 ಲಕ್ಷ ರೂಪಾಯಿ ನನ್ನಿಂದ ಪಡೆದುಕೊಂಡಿದ್ದಳು. ತನ್ನ ಹೆಸರಿನಲ್ಲಿರುವ ಜಮೀನನ್ನು ಮಠದ ಹೆಸರಿಗೆ ಬರೆದುಕೊಡುವುದಾಗಿ ಹೇಳಿ, ಹಂತಹಂತವಾಗಿ ಹೆಚ್ಚುವರಿಯಾಗಿ 35 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿಕೊಂಡಿದ್ದಳು” ಎಂದು ಸ್ವಾಮೀಜಿ ತಿಳಿಸಿದ್ದಾರೆ.

“ಜಮೀನು ದಾಖಲೆ ತರುವ ವೇಳೆ ನನ್ನ ಮೇಲೆ ಹಲ್ಲೆಯಾಗಿದೆ, ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವರ್ಷಾ ಹೇಳಿಕೊಂಡಿದ್ದರು. ಆಸ್ಪತ್ರೆಯ ಬಿಲ್ ಪಾವತಿಗಾಗಿ ಮತ್ತೆ ಹಣದ ಕೋರಿಕೆ ಇಟ್ಟಿದ್ದಳು. ಆನಂತರ ಅನುಮಾನಗೊಂಡು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಪರಿಚಯಸ್ಥರೊಬ್ಬರನ್ನು ಕಳಿಸಿ ವಿಚಾರಿಸಿದೆ. ವರ್ಷಾ ಎಂಬವರು ಯಾರೂ ದಾಖಲಾಗಿಲ್ಲ ಎಂದು ತಿಳಿಯಿತು” ಎಂದಿದ್ದಾರೆ ಸ್ವಾಮೀಜಿ.

ಇದನ್ನೂ ಓದಿರಿ: ಚಂಡೀಗಢ: ಬಿಜೆಪಿ ಸಂಸದೆ ಜೊತೆ ವಾಗ್ವಾದ; ಸದನದಿಂದ ಎಎಪಿ ಕೌನ್ಸಿಲರ್‌ಗಳ ಅಮಾನತು

“ವರ್ಷಾ ಸ್ನೇಹಿತೆ ಎನ್ನಲಾದ ಮಂಜುಳಾಗೆ ಕಾಲ್‌ ಮಾಡಿದಾಗ, 55 ಲಕ್ಷ ರೂಪಾಯಿ ಸಾಲ ಮಾಡಿ ವರ್ಷಾರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದ್ದರು. ಆಸ್ಪತ್ರೆಗೆ ನೀಡಿರುವ ಹಣವನ್ನು ಸಾಲದ ರೂಪದಲ್ಲಿ ತಂದಿದ್ದು, ಅದನ್ನು ತೀರಿಸಬೇಕು. ನೀವು ಹಣ ನೀಡದಿದ್ದರೆ ವರ್ಷಾ ಜೊತೆಗಿನ ಸಲುಗೆಯ ವಿಷಯವನ್ನು ಎಲ್ಲರಿಗೂ ಹೇಳಿ ಮರ್ಯಾದೆ ತೆಗೆಯುತ್ತೇನೆ ಎಂದು ಬೆದರಿಸಲಾಗಿತ್ತು” ಎಂದು ಸ್ವಾಮೀಜಿ ಹೇಳಿರುವುದಾಗಿ ವರದಿಯಾಗಿದೆ.

ವರ್ಷಾ ಕಡೆಯವರು ಎನ್ನಲಾದ ಮಂಜುಳಾ ಹಾಗೂ ಇತರರು ಮೇ 23ರಂದು ಮಠಕ್ಕೆ ಹೋಗಿ ಗಲಾಟೆ ಮಾಡಿದ್ದರು. 55 ಲಕ್ಷ ರೂಪಾಯಿ ವಾಪಸ್‌ ಕೊಡುವಂತೆ ಸ್ವಾಮೀಜಿಗೆ ಧಮ್ಕಿ ಹಾಕಿದ್ದರು. ಇದಾದ ನಂತರ ಸ್ವಾಮೀಜಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.

ಸ್ವಾಮೀಜಿ ಸುಮಾರು 50 ಲಕ್ಷ ರೂಪಾಯಿವರೆಗೂ ಹಣ ಕಳೆದುಕೊಂಡಿರುವ ಸಾಧ್ಯತೆ ಇದೆ. ವರ್ಷಾ ಮತ್ತು ಮಂಜುಳಾ ನಡುವಿನ ಸಂಬಂಧ ಏನೆಂಬುದು ತನಿಖೆಯಿಂದ ಬಯಲಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೇಸ್‌ಬುಕ್‌ ಮೂಲಕ ಪರಿಚಯವಾಗಿ, ಬೆತ್ತಲೆ ವಿಡಿಯೊ ಕಾಲ್ ಮಾಡುವ ಮೂಲಕ ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಸಾಕಷ್ಟು ವರದಿಯಾಗಿವೆ. ಸ್ವಾಮೀಜಿಯೇ ಇಂತಹದ್ದೊಂದು ಜಾಲಕ್ಕೆ ಸಿಲುಕಿರುವುದು ಹಲವು ಚರ್ಚೆಗೆ ಅವಕಾಶ ನೀಡಿದೆ. ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರು ಇಷ್ಟು ಕಾಲ ಎಚ್ಚೆತ್ತುಕೊಳ್ಳದೆ ಇದ್ದದ್ದು ಏಕೆ? 37 ಲಕ್ಷ ರೂಪಾಯಿಯವರೆಗೂ ಅಪರಿಚಿತ ಯುವತಿಗೆ ಹಣ ವರ್ಗಾಯಿಸಿದ್ದು ಹೇಗೆ? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...