Homeಕರ್ನಾಟಕಬೆಂಗಳೂರು: ಫೇಸ್‌ಬುಕ್‌ ಗೆಳತಿಯಿಂದ ವಂಚನೆ, 37 ಲಕ್ಷ ರೂ. ಕಳೆದುಕೊಂಡ ಸ್ವಾಮೀಜಿ

ಬೆಂಗಳೂರು: ಫೇಸ್‌ಬುಕ್‌ ಗೆಳತಿಯಿಂದ ವಂಚನೆ, 37 ಲಕ್ಷ ರೂ. ಕಳೆದುಕೊಂಡ ಸ್ವಾಮೀಜಿ

- Advertisement -
- Advertisement -

ಸಾಮಾಜಿಕ ಮಾಧ್ಯಮವಾದ ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವತಿಯೊಬ್ಬರು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರಿಗೆ 37 ಲಕ್ಷ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ.

ಫೇಸ್‌ಬುಕ್‌ನಲ್ಲಿ ಪರಿಚಯವಾಗಿ, ನಂತರ ವಿಡಿಯೊ ಕಾಲ್‌ಗಳ ಮೂಲಕ ಸಲುಗೆ ತೋರುತ್ತಿದ್ದ ಯುವತಿಯು ಚನ್ನವೀರ ಶಿವಾಚಾರ್ಯ ಸ್ವಾಮೀಜಿಯಿಂದ 37 ಲಕ್ಷ ರೂಪಾಯಿ ಕಸಿದುಕೊಂಡಿರುವ ಸಂಬಂಧ ದಾಬಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಆಗಿದೆ.

“ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರು ಹಣ ವರ್ಗಾವಣೆ ದಾಖಲೆ ಸಮೇತ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಯುವತಿ ವರ್ಷಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಏನಿದು ಪ್ರಕರಣ?

ಶಿವಾಚಾರ್ಯ ಸ್ವಾಮೀಜಿಗೆ 2020ರಲ್ಲಿ ವರ್ಷಾ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್‌ ಬಂದಿತ್ತು. ಅವರನ್ನು ಸ್ವಾಮೀಜಿ ಫ್ರೆಂಡ್ ಮಾಡಿಕೊಂಡಿದ್ದರು. ಅಧ್ಯಾತ್ಮದಲ್ಲಿ ಆಸಕ್ತಿ ಇದೆ ಎನ್ನುತ್ತಾ ಯುವತಿಯು ಸ್ವಾಮೀಜಿಯೊಂದಿಗೆ ಚಾಟ್ ಮಾಡುತ್ತಿದ್ದಳು. ಸ್ವಾಮೀಜಿಯ ಮೊಬೈಲ್ ನಂಬರ್‌ ಪಡೆದು, ತನ್ನ ನಂಬರ್‌ ಕೂಡ ಶೇರ್‌ ಮಾಡಿಕೊಂಡಿದ್ದಳು ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮೊಬೈಲ್ ನಂಬರ್ ಪಡೆದ ಬಳಿಕ ವಾಟ್ಸ್‌ಆ್ಯಪ್‌ನಲ್ಲಿ ಚಾಟ್‌ ಕೂಡ ಮಾಡುತ್ತಿದ್ದರು. ತಾನೊಬ್ಬ ಅನಾಥೆ ಎನ್ನುತ್ತಿದ್ದ ವರ್ಷಾ, ವಿಡಿಯೊ ಕಾಲ್‌ ಮಾಡಲಾರಂಭಿಸಿದ್ದಳು. ಹಲವು ಬಾರಿ ವಿಡಿಯೊ ಕರೆ ಮಾಡಿದ್ದ ಯುವತಿ, ಎಂದಿಗೂ ಮುಖ ತೋರಿಸಿರಲಿಲ್ಲ. ಕೈ–ಕಾಲುಗಳನ್ನು ಮಾತ್ರ ತೋರಿಸಿ ಮಾತನಾಡುತ್ತಿದ್ದಳು” ಎಂದೂ ಸ್ವಾಮೀಜಿ ದೂರಿನಲ್ಲಿ ಹೇಳಿದ್ದಾರೆ.

“ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್ ಮಾಡುತ್ತಿರುವುದಾಗಿ ಹೇಳಿಕೊಂಡು 2 ಲಕ್ಷ ರೂಪಾಯಿ ನನ್ನಿಂದ ಪಡೆದುಕೊಂಡಿದ್ದಳು. ತನ್ನ ಹೆಸರಿನಲ್ಲಿರುವ ಜಮೀನನ್ನು ಮಠದ ಹೆಸರಿಗೆ ಬರೆದುಕೊಡುವುದಾಗಿ ಹೇಳಿ, ಹಂತಹಂತವಾಗಿ ಹೆಚ್ಚುವರಿಯಾಗಿ 35 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿಕೊಂಡಿದ್ದಳು” ಎಂದು ಸ್ವಾಮೀಜಿ ತಿಳಿಸಿದ್ದಾರೆ.

“ಜಮೀನು ದಾಖಲೆ ತರುವ ವೇಳೆ ನನ್ನ ಮೇಲೆ ಹಲ್ಲೆಯಾಗಿದೆ, ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವರ್ಷಾ ಹೇಳಿಕೊಂಡಿದ್ದರು. ಆಸ್ಪತ್ರೆಯ ಬಿಲ್ ಪಾವತಿಗಾಗಿ ಮತ್ತೆ ಹಣದ ಕೋರಿಕೆ ಇಟ್ಟಿದ್ದಳು. ಆನಂತರ ಅನುಮಾನಗೊಂಡು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಪರಿಚಯಸ್ಥರೊಬ್ಬರನ್ನು ಕಳಿಸಿ ವಿಚಾರಿಸಿದೆ. ವರ್ಷಾ ಎಂಬವರು ಯಾರೂ ದಾಖಲಾಗಿಲ್ಲ ಎಂದು ತಿಳಿಯಿತು” ಎಂದಿದ್ದಾರೆ ಸ್ವಾಮೀಜಿ.

ಇದನ್ನೂ ಓದಿರಿ: ಚಂಡೀಗಢ: ಬಿಜೆಪಿ ಸಂಸದೆ ಜೊತೆ ವಾಗ್ವಾದ; ಸದನದಿಂದ ಎಎಪಿ ಕೌನ್ಸಿಲರ್‌ಗಳ ಅಮಾನತು

“ವರ್ಷಾ ಸ್ನೇಹಿತೆ ಎನ್ನಲಾದ ಮಂಜುಳಾಗೆ ಕಾಲ್‌ ಮಾಡಿದಾಗ, 55 ಲಕ್ಷ ರೂಪಾಯಿ ಸಾಲ ಮಾಡಿ ವರ್ಷಾರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದ್ದರು. ಆಸ್ಪತ್ರೆಗೆ ನೀಡಿರುವ ಹಣವನ್ನು ಸಾಲದ ರೂಪದಲ್ಲಿ ತಂದಿದ್ದು, ಅದನ್ನು ತೀರಿಸಬೇಕು. ನೀವು ಹಣ ನೀಡದಿದ್ದರೆ ವರ್ಷಾ ಜೊತೆಗಿನ ಸಲುಗೆಯ ವಿಷಯವನ್ನು ಎಲ್ಲರಿಗೂ ಹೇಳಿ ಮರ್ಯಾದೆ ತೆಗೆಯುತ್ತೇನೆ ಎಂದು ಬೆದರಿಸಲಾಗಿತ್ತು” ಎಂದು ಸ್ವಾಮೀಜಿ ಹೇಳಿರುವುದಾಗಿ ವರದಿಯಾಗಿದೆ.

ವರ್ಷಾ ಕಡೆಯವರು ಎನ್ನಲಾದ ಮಂಜುಳಾ ಹಾಗೂ ಇತರರು ಮೇ 23ರಂದು ಮಠಕ್ಕೆ ಹೋಗಿ ಗಲಾಟೆ ಮಾಡಿದ್ದರು. 55 ಲಕ್ಷ ರೂಪಾಯಿ ವಾಪಸ್‌ ಕೊಡುವಂತೆ ಸ್ವಾಮೀಜಿಗೆ ಧಮ್ಕಿ ಹಾಕಿದ್ದರು. ಇದಾದ ನಂತರ ಸ್ವಾಮೀಜಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.

ಸ್ವಾಮೀಜಿ ಸುಮಾರು 50 ಲಕ್ಷ ರೂಪಾಯಿವರೆಗೂ ಹಣ ಕಳೆದುಕೊಂಡಿರುವ ಸಾಧ್ಯತೆ ಇದೆ. ವರ್ಷಾ ಮತ್ತು ಮಂಜುಳಾ ನಡುವಿನ ಸಂಬಂಧ ಏನೆಂಬುದು ತನಿಖೆಯಿಂದ ಬಯಲಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೇಸ್‌ಬುಕ್‌ ಮೂಲಕ ಪರಿಚಯವಾಗಿ, ಬೆತ್ತಲೆ ವಿಡಿಯೊ ಕಾಲ್ ಮಾಡುವ ಮೂಲಕ ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಸಾಕಷ್ಟು ವರದಿಯಾಗಿವೆ. ಸ್ವಾಮೀಜಿಯೇ ಇಂತಹದ್ದೊಂದು ಜಾಲಕ್ಕೆ ಸಿಲುಕಿರುವುದು ಹಲವು ಚರ್ಚೆಗೆ ಅವಕಾಶ ನೀಡಿದೆ. ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರು ಇಷ್ಟು ಕಾಲ ಎಚ್ಚೆತ್ತುಕೊಳ್ಳದೆ ಇದ್ದದ್ದು ಏಕೆ? 37 ಲಕ್ಷ ರೂಪಾಯಿಯವರೆಗೂ ಅಪರಿಚಿತ ಯುವತಿಗೆ ಹಣ ವರ್ಗಾಯಿಸಿದ್ದು ಹೇಗೆ? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...