Homeಮುಖಪುಟನೂತನ ಸಂಸತ್ ಕಟ್ಟಡದಲ್ಲಿ ‘ಅಖಂಡ ಭಾರತ’ ಚಿತ್ರ; ಭಾರತದ ಸ್ಪಷ್ಟನೆ ಬಯಸಿದ ಬಾಂಗ್ಲಾ

ನೂತನ ಸಂಸತ್ ಕಟ್ಟಡದಲ್ಲಿ ‘ಅಖಂಡ ಭಾರತ’ ಚಿತ್ರ; ಭಾರತದ ಸ್ಪಷ್ಟನೆ ಬಯಸಿದ ಬಾಂಗ್ಲಾ

ಪ್ರಹ್ಲಾದ್ ಜೋಶಿಯವರು ಮಾಡಿರುವ ಟ್ವೀಟ್‌ಗೆ ಪಾಕಿಸ್ತಾನ ಮತ್ತು ನೇಪಾಳದಲ್ಲಿ ಆಕ್ಷೇಪಗಳು ವ್ಯಕ್ತವಾಗಿವೆ.

- Advertisement -
- Advertisement -

ಹೊಸ ಸಂಸತ್ತಿನ ಕಟ್ಟಡದಲ್ಲಿ ಇರಿಸಲಾಗಿರುವ ‘ಅಖಂಡ ಭಾರತ’ ಚಿತ್ರದ ಬಗ್ಗೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಸ್ಪಷ್ಟನೆ ಪಡೆಯಲು ಬಾಂಗ್ಲಾದೇಶ ಸರ್ಕಾರ ನಿರ್ಧರಿಸಿದೆ.

‘ಅಖಂಡ ಭಾರತ್‌’ ಎಂದು ಬಿಂಬಿಸಲಾಗಿರುವ ಚಿತ್ರ ಈಗ ಅಂತಾರಾಷ್ಟ್ರೀಯ ವಿದ್ಯಮಾನಕ್ಕೆ ಕಾರಣವಾಗಿದೆ. ಪಾಕಿಸ್ತಾನ ಮತ್ತು ನೇಪಾಳದಲ್ಲಿ ಪ್ರತಿಭಟನೆಗಳು ದಾಖಲಾಗಿವೆ. “ಈ ಸಂಬಂಧ ಬಾಂಗ್ಲಾದ ಅವಾಮಿ ಲೀಗ್ ಸರ್ಕಾರವು ಭಾರತದಿಂದ ಸ್ಪಷ್ಟೀಕರಣವನ್ನು ಪಡೆಯುವ ಪ್ರಕ್ರಿಯೆಯಲ್ಲಿದೆ” ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶಹರಿಯಾರ್ ಆಲಂ ಅವರು ಢಾಕಾದಲ್ಲಿ ಪತ್ರಕರ್ತರಿಗೆ ತಿಳಿಸಿದ್ದಾರೆ.

ಅಲ್ಲಿನ ವಿರೋಧ ಪಕ್ಷವಾದ ‘ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ’ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಆನಂತರ ಬಾಂಗ್ಲಾ ವಿದೇಶಾಂಗ ಸಚಿವರ ಹೇಳಿಕೆ ಹೊರಬಿದ್ದಿದೆ. “ಅಖಂಡ ಭಾರತ ಕಲ್ಪನೆಯು ಬಾಂಗ್ಲಾದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತೆಗೆ ನೀಡಿರುವ ಬೆದರಿಕೆ” ಎಂದು ವಿರೋಧ ಪಕ್ಷ ಎಚ್ಚರಿಸಿದೆ.

ಸ್ಥಳೀಯ ಒತ್ತಡದಿಂದಾಗಿ ಬಾಂಗ್ಲಾ ಸರ್ಕಾರ ಈ ನಿರ್ಧಾರಕ್ಕೆ (ಸ್ಪಷ್ಟನೆ ಕೇಳುವುದಕ್ಕೆ) ಬಂದಿರಬಹುದೆಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರರು ಹೇಳಿದ್ದಾರೆ. ಅಶೋಕ ಸಾಮ್ರಾಜ್ಯದ ಕಾಲದಲ್ಲಿನ ಭಾರತದ ಗಡಿಗಳ ಬಗ್ಗೆ ತೋರಿಸುವ ಪ್ರಯತ್ನವೇ ಈ ಚಿತ್ರವಾಗಿದೆ. ಸಾಮ್ರಾಜ್ಯವನ್ನು ಪುನರುಜ್ಜೀನವಗೊಳಿಸುವ ಕಲ್ಪನೆಯದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆಲಂ ಪ್ರತಿಕ್ರಿಯಿಸಿ,  “ಈ ವಿಷಯದ ಬಗ್ಗೆ ಭಾರತದ ಅಧಿಕೃತ ವಿವರಣೆಯನ್ನು ಪಡೆಯಲು ಭಾರತವನ್ನು ಸಂಪರ್ಕಿಸುವಂತೆ ದೆಹಲಿಯಲ್ಲಿರುವ ಬಾಂಗ್ಲಾದೇಶ ರಾಯಭಾರಿ ಕಚೇರಿಗೆ ಸೂಚನೆ ನೀಡಲಾಗಿದೆ” ಎಂದಿದ್ದಾರೆ. ಆಲಂ ಹೇಳಿಕೆ ಕುರಿತು ‘ಢಾಕಾ ಟ್ರಿಬ್ಯೂನ್’ ವರದಿ ಮಾಡಿದೆ.

ಭಿತ್ತಿಚಿತ್ರದ ವಿರುದ್ಧ ನೇಪಾಳದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದವು. ನಂತರ ಭಾರತೀಯ ವಿದೇಶಾಂಗ ಸಚಿವಾಲಯ ವಿವರಣೆ ನೀಡಿತು.

“ಇದು ಕ್ರಿಸ್ತನ ಜನನಕ್ಕೆ 300 ವರ್ಷಗಳ ಹಿಂದಿನ ಅಶೋಕ ಸಾಮ್ರಾಜ್ಯದ ನಕ್ಷೆ” ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಹೇಳಿದ್ದಾರೆ. “ಈ ಚಿತ್ರವು ಜನರ ಪ್ರಯಾಣವನ್ನು ಚಿತ್ರಿಸುತ್ತದೆ. ಸಾಂಸ್ಕೃತಿಕ ಸಾಮ್ಯತೆಗಳಿರಬಹುದು, ಆದರೆ ಅದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಆಲಂ ಅವರೂ ಪುನರುಚ್ಚರಿಸಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು, “ಸಂಕಲ್ಪ ಸ್ಪಷ್ಟವಾಗಿದೆ – ಅಖಂಡ ಭಾರತ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಟ್ವೀಟ್ ಮಾಡಿದ ನಂತರ ಈ ಸಮಸ್ಯೆ ಉದ್ಭವವಾಗಿದೆ.

ನೇಪಾಳದಲ್ಲಿ ಭಿತ್ತಿಚಿತ್ರದ ಬಗ್ಗೆ ಬೀದಿ ಪ್ರತಿಭಟನೆಗಳು ನಡೆದವು. ಕೆಲವು ರಾಜಕಾರಣಿಗಳು ಪ್ರತಿಕ್ರಿಯಿಸಿ, “ಈ ಕ್ರಮವು ಕಠ್ಮಂಡು ಮತ್ತು ದೆಹಲಿ ನಡುವೆ ಈಗಾಗಲೇ ಇರುವ ವಿಶ್ವಾಸದ ಕೊರತೆಯನ್ನು ಉಲ್ಬಣಗೊಳಿಸಬಹುದು” ಎಂದು ಎಚ್ಚರಿಸಿದರು.

ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಬಲೂಚ್ ಅವರು ಪ್ರತಿಕ್ರಿಯಿಸಿ, “ಜೋಶಿಯವರ ಹೇಳಿಕೆಯಿಂದ ಆಘಾತವಾಗಿದೆ. ‘ಅಖಂಡ ಭಾರತ’ದ ಅನಪೇಕ್ಷಿತ ಪ್ರತಿಪಾದನೆಯು ಪರಿಷ್ಕರಣೆ ಮತ್ತು ವಿಸ್ತರಣಾವಾದಿ ಮನಸ್ಥಿತಿಯ ದ್ಯೋತಕವಾಗಿದೆ. ಇದು ಭಾರತದ ನೆರೆಯ ರಾಷ್ಟ್ರಗಳ ಗುರುತು ಮತ್ತು ಸಂಸ್ಕೃತಿಯನ್ನು ಅಧೀನಗೊಳಿಸಲು ಪ್ರಯತ್ನಿಸುತ್ತಿದೆ. ಆದರೆ ತನ್ನದೇ ದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನೂ ಅಧೀನಗೊಳಿಸಲು ಯತ್ನಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಜಾತಿಗಣತಿ ಜಾರಿಗೊಳಿಸುವ ಸಿಎಂ ನಿರ್ಧಾರ ಸ್ವಾಗತಾರ್ಹವೇಕೆ?

ಕಳೆದ ವಾರ ಭಾರತೀಯ ವಿದೇಶಾಂಗ ವಕ್ತಾರ ಅರಿಂದಮ್ ಬಾಗ್ಚಿ ಪ್ರತಿಕ್ರಿಯಿಸಿ, “ಸದರಿ ಭಿತ್ತಿಚಿತ್ರವು ‘ಅಖಂಡ ಭಾರತ’ದ ಬಗ್ಗೆ ಇಲ್ಲ. ಪ್ರಾಚೀನ ಮೌರ್ಯ ಸಾಮ್ರಾಜ್ಯದಲ್ಲಿನ ಸಾಮ್ರಾಜ್ಯ ವಿಸ್ತರಣೆಗೆ ಸಂಬಂಧಿಸಿದೆ” ಎಂದಿದ್ದರು.

“ಟೀಕೆಗೆ ಗುರಿಯಾಗಿರುವ ಚಿತ್ರವು ಅಶೋಕ ಸಾಮ್ರಾಜ್ಯ, ಆತನ ಚಿಂತನೆ, ಆಡಳಿತದ ಸುಧಾರಣೆಗೆ ಸಂಬಂಧಿಸಿದೆ. ಚಿತ್ರದ ಮುಂಭಾಗದಲ್ಲಿರುವ ಫಲಕವು ಅದನ್ನೇ ಹೇಳುತ್ತದೆ. ಮತ್ತೇನೂ ಅಲ್ಲ” ಬಾಗ್ಚಿ ಸ್ಪಷ್ಟಪಡಿಸಿದ್ದರು.

ಜೋಶಿಯವರ ಟ್ವೀಟ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು, “ಇತರ ರಾಜಕೀಯ ನಾಯಕರು ನೀಡಬಹುದಾದ ಹೇಳಿಕೆಗಳ ಬಗ್ಗೆ ನಾನು ಖಂಡಿತವಾಗಿಯೂ ಪ್ರತಿಕ್ರಿಯಿಸುವುದಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...