Homeಮುಖಪುಟನೂತನ ಸಂಸತ್ ಕಟ್ಟಡದಲ್ಲಿ ‘ಅಖಂಡ ಭಾರತ’ ಚಿತ್ರ; ಭಾರತದ ಸ್ಪಷ್ಟನೆ ಬಯಸಿದ ಬಾಂಗ್ಲಾ

ನೂತನ ಸಂಸತ್ ಕಟ್ಟಡದಲ್ಲಿ ‘ಅಖಂಡ ಭಾರತ’ ಚಿತ್ರ; ಭಾರತದ ಸ್ಪಷ್ಟನೆ ಬಯಸಿದ ಬಾಂಗ್ಲಾ

ಪ್ರಹ್ಲಾದ್ ಜೋಶಿಯವರು ಮಾಡಿರುವ ಟ್ವೀಟ್‌ಗೆ ಪಾಕಿಸ್ತಾನ ಮತ್ತು ನೇಪಾಳದಲ್ಲಿ ಆಕ್ಷೇಪಗಳು ವ್ಯಕ್ತವಾಗಿವೆ.

- Advertisement -
- Advertisement -

ಹೊಸ ಸಂಸತ್ತಿನ ಕಟ್ಟಡದಲ್ಲಿ ಇರಿಸಲಾಗಿರುವ ‘ಅಖಂಡ ಭಾರತ’ ಚಿತ್ರದ ಬಗ್ಗೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಸ್ಪಷ್ಟನೆ ಪಡೆಯಲು ಬಾಂಗ್ಲಾದೇಶ ಸರ್ಕಾರ ನಿರ್ಧರಿಸಿದೆ.

‘ಅಖಂಡ ಭಾರತ್‌’ ಎಂದು ಬಿಂಬಿಸಲಾಗಿರುವ ಚಿತ್ರ ಈಗ ಅಂತಾರಾಷ್ಟ್ರೀಯ ವಿದ್ಯಮಾನಕ್ಕೆ ಕಾರಣವಾಗಿದೆ. ಪಾಕಿಸ್ತಾನ ಮತ್ತು ನೇಪಾಳದಲ್ಲಿ ಪ್ರತಿಭಟನೆಗಳು ದಾಖಲಾಗಿವೆ. “ಈ ಸಂಬಂಧ ಬಾಂಗ್ಲಾದ ಅವಾಮಿ ಲೀಗ್ ಸರ್ಕಾರವು ಭಾರತದಿಂದ ಸ್ಪಷ್ಟೀಕರಣವನ್ನು ಪಡೆಯುವ ಪ್ರಕ್ರಿಯೆಯಲ್ಲಿದೆ” ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶಹರಿಯಾರ್ ಆಲಂ ಅವರು ಢಾಕಾದಲ್ಲಿ ಪತ್ರಕರ್ತರಿಗೆ ತಿಳಿಸಿದ್ದಾರೆ.

ಅಲ್ಲಿನ ವಿರೋಧ ಪಕ್ಷವಾದ ‘ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ’ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಆನಂತರ ಬಾಂಗ್ಲಾ ವಿದೇಶಾಂಗ ಸಚಿವರ ಹೇಳಿಕೆ ಹೊರಬಿದ್ದಿದೆ. “ಅಖಂಡ ಭಾರತ ಕಲ್ಪನೆಯು ಬಾಂಗ್ಲಾದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತೆಗೆ ನೀಡಿರುವ ಬೆದರಿಕೆ” ಎಂದು ವಿರೋಧ ಪಕ್ಷ ಎಚ್ಚರಿಸಿದೆ.

ಸ್ಥಳೀಯ ಒತ್ತಡದಿಂದಾಗಿ ಬಾಂಗ್ಲಾ ಸರ್ಕಾರ ಈ ನಿರ್ಧಾರಕ್ಕೆ (ಸ್ಪಷ್ಟನೆ ಕೇಳುವುದಕ್ಕೆ) ಬಂದಿರಬಹುದೆಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರರು ಹೇಳಿದ್ದಾರೆ. ಅಶೋಕ ಸಾಮ್ರಾಜ್ಯದ ಕಾಲದಲ್ಲಿನ ಭಾರತದ ಗಡಿಗಳ ಬಗ್ಗೆ ತೋರಿಸುವ ಪ್ರಯತ್ನವೇ ಈ ಚಿತ್ರವಾಗಿದೆ. ಸಾಮ್ರಾಜ್ಯವನ್ನು ಪುನರುಜ್ಜೀನವಗೊಳಿಸುವ ಕಲ್ಪನೆಯದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆಲಂ ಪ್ರತಿಕ್ರಿಯಿಸಿ,  “ಈ ವಿಷಯದ ಬಗ್ಗೆ ಭಾರತದ ಅಧಿಕೃತ ವಿವರಣೆಯನ್ನು ಪಡೆಯಲು ಭಾರತವನ್ನು ಸಂಪರ್ಕಿಸುವಂತೆ ದೆಹಲಿಯಲ್ಲಿರುವ ಬಾಂಗ್ಲಾದೇಶ ರಾಯಭಾರಿ ಕಚೇರಿಗೆ ಸೂಚನೆ ನೀಡಲಾಗಿದೆ” ಎಂದಿದ್ದಾರೆ. ಆಲಂ ಹೇಳಿಕೆ ಕುರಿತು ‘ಢಾಕಾ ಟ್ರಿಬ್ಯೂನ್’ ವರದಿ ಮಾಡಿದೆ.

ಭಿತ್ತಿಚಿತ್ರದ ವಿರುದ್ಧ ನೇಪಾಳದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದವು. ನಂತರ ಭಾರತೀಯ ವಿದೇಶಾಂಗ ಸಚಿವಾಲಯ ವಿವರಣೆ ನೀಡಿತು.

“ಇದು ಕ್ರಿಸ್ತನ ಜನನಕ್ಕೆ 300 ವರ್ಷಗಳ ಹಿಂದಿನ ಅಶೋಕ ಸಾಮ್ರಾಜ್ಯದ ನಕ್ಷೆ” ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಹೇಳಿದ್ದಾರೆ. “ಈ ಚಿತ್ರವು ಜನರ ಪ್ರಯಾಣವನ್ನು ಚಿತ್ರಿಸುತ್ತದೆ. ಸಾಂಸ್ಕೃತಿಕ ಸಾಮ್ಯತೆಗಳಿರಬಹುದು, ಆದರೆ ಅದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಆಲಂ ಅವರೂ ಪುನರುಚ್ಚರಿಸಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು, “ಸಂಕಲ್ಪ ಸ್ಪಷ್ಟವಾಗಿದೆ – ಅಖಂಡ ಭಾರತ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಟ್ವೀಟ್ ಮಾಡಿದ ನಂತರ ಈ ಸಮಸ್ಯೆ ಉದ್ಭವವಾಗಿದೆ.

ನೇಪಾಳದಲ್ಲಿ ಭಿತ್ತಿಚಿತ್ರದ ಬಗ್ಗೆ ಬೀದಿ ಪ್ರತಿಭಟನೆಗಳು ನಡೆದವು. ಕೆಲವು ರಾಜಕಾರಣಿಗಳು ಪ್ರತಿಕ್ರಿಯಿಸಿ, “ಈ ಕ್ರಮವು ಕಠ್ಮಂಡು ಮತ್ತು ದೆಹಲಿ ನಡುವೆ ಈಗಾಗಲೇ ಇರುವ ವಿಶ್ವಾಸದ ಕೊರತೆಯನ್ನು ಉಲ್ಬಣಗೊಳಿಸಬಹುದು” ಎಂದು ಎಚ್ಚರಿಸಿದರು.

ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಬಲೂಚ್ ಅವರು ಪ್ರತಿಕ್ರಿಯಿಸಿ, “ಜೋಶಿಯವರ ಹೇಳಿಕೆಯಿಂದ ಆಘಾತವಾಗಿದೆ. ‘ಅಖಂಡ ಭಾರತ’ದ ಅನಪೇಕ್ಷಿತ ಪ್ರತಿಪಾದನೆಯು ಪರಿಷ್ಕರಣೆ ಮತ್ತು ವಿಸ್ತರಣಾವಾದಿ ಮನಸ್ಥಿತಿಯ ದ್ಯೋತಕವಾಗಿದೆ. ಇದು ಭಾರತದ ನೆರೆಯ ರಾಷ್ಟ್ರಗಳ ಗುರುತು ಮತ್ತು ಸಂಸ್ಕೃತಿಯನ್ನು ಅಧೀನಗೊಳಿಸಲು ಪ್ರಯತ್ನಿಸುತ್ತಿದೆ. ಆದರೆ ತನ್ನದೇ ದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನೂ ಅಧೀನಗೊಳಿಸಲು ಯತ್ನಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಜಾತಿಗಣತಿ ಜಾರಿಗೊಳಿಸುವ ಸಿಎಂ ನಿರ್ಧಾರ ಸ್ವಾಗತಾರ್ಹವೇಕೆ?

ಕಳೆದ ವಾರ ಭಾರತೀಯ ವಿದೇಶಾಂಗ ವಕ್ತಾರ ಅರಿಂದಮ್ ಬಾಗ್ಚಿ ಪ್ರತಿಕ್ರಿಯಿಸಿ, “ಸದರಿ ಭಿತ್ತಿಚಿತ್ರವು ‘ಅಖಂಡ ಭಾರತ’ದ ಬಗ್ಗೆ ಇಲ್ಲ. ಪ್ರಾಚೀನ ಮೌರ್ಯ ಸಾಮ್ರಾಜ್ಯದಲ್ಲಿನ ಸಾಮ್ರಾಜ್ಯ ವಿಸ್ತರಣೆಗೆ ಸಂಬಂಧಿಸಿದೆ” ಎಂದಿದ್ದರು.

“ಟೀಕೆಗೆ ಗುರಿಯಾಗಿರುವ ಚಿತ್ರವು ಅಶೋಕ ಸಾಮ್ರಾಜ್ಯ, ಆತನ ಚಿಂತನೆ, ಆಡಳಿತದ ಸುಧಾರಣೆಗೆ ಸಂಬಂಧಿಸಿದೆ. ಚಿತ್ರದ ಮುಂಭಾಗದಲ್ಲಿರುವ ಫಲಕವು ಅದನ್ನೇ ಹೇಳುತ್ತದೆ. ಮತ್ತೇನೂ ಅಲ್ಲ” ಬಾಗ್ಚಿ ಸ್ಪಷ್ಟಪಡಿಸಿದ್ದರು.

ಜೋಶಿಯವರ ಟ್ವೀಟ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು, “ಇತರ ರಾಜಕೀಯ ನಾಯಕರು ನೀಡಬಹುದಾದ ಹೇಳಿಕೆಗಳ ಬಗ್ಗೆ ನಾನು ಖಂಡಿತವಾಗಿಯೂ ಪ್ರತಿಕ್ರಿಯಿಸುವುದಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...