Homeಮುಖಪುಟನೂತನ ಸಂಸತ್ ಕಟ್ಟಡದಲ್ಲಿ ‘ಅಖಂಡ ಭಾರತ’ ಚಿತ್ರ; ಭಾರತದ ಸ್ಪಷ್ಟನೆ ಬಯಸಿದ ಬಾಂಗ್ಲಾ

ನೂತನ ಸಂಸತ್ ಕಟ್ಟಡದಲ್ಲಿ ‘ಅಖಂಡ ಭಾರತ’ ಚಿತ್ರ; ಭಾರತದ ಸ್ಪಷ್ಟನೆ ಬಯಸಿದ ಬಾಂಗ್ಲಾ

ಪ್ರಹ್ಲಾದ್ ಜೋಶಿಯವರು ಮಾಡಿರುವ ಟ್ವೀಟ್‌ಗೆ ಪಾಕಿಸ್ತಾನ ಮತ್ತು ನೇಪಾಳದಲ್ಲಿ ಆಕ್ಷೇಪಗಳು ವ್ಯಕ್ತವಾಗಿವೆ.

- Advertisement -
- Advertisement -

ಹೊಸ ಸಂಸತ್ತಿನ ಕಟ್ಟಡದಲ್ಲಿ ಇರಿಸಲಾಗಿರುವ ‘ಅಖಂಡ ಭಾರತ’ ಚಿತ್ರದ ಬಗ್ಗೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಸ್ಪಷ್ಟನೆ ಪಡೆಯಲು ಬಾಂಗ್ಲಾದೇಶ ಸರ್ಕಾರ ನಿರ್ಧರಿಸಿದೆ.

‘ಅಖಂಡ ಭಾರತ್‌’ ಎಂದು ಬಿಂಬಿಸಲಾಗಿರುವ ಚಿತ್ರ ಈಗ ಅಂತಾರಾಷ್ಟ್ರೀಯ ವಿದ್ಯಮಾನಕ್ಕೆ ಕಾರಣವಾಗಿದೆ. ಪಾಕಿಸ್ತಾನ ಮತ್ತು ನೇಪಾಳದಲ್ಲಿ ಪ್ರತಿಭಟನೆಗಳು ದಾಖಲಾಗಿವೆ. “ಈ ಸಂಬಂಧ ಬಾಂಗ್ಲಾದ ಅವಾಮಿ ಲೀಗ್ ಸರ್ಕಾರವು ಭಾರತದಿಂದ ಸ್ಪಷ್ಟೀಕರಣವನ್ನು ಪಡೆಯುವ ಪ್ರಕ್ರಿಯೆಯಲ್ಲಿದೆ” ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶಹರಿಯಾರ್ ಆಲಂ ಅವರು ಢಾಕಾದಲ್ಲಿ ಪತ್ರಕರ್ತರಿಗೆ ತಿಳಿಸಿದ್ದಾರೆ.

ಅಲ್ಲಿನ ವಿರೋಧ ಪಕ್ಷವಾದ ‘ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ’ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಆನಂತರ ಬಾಂಗ್ಲಾ ವಿದೇಶಾಂಗ ಸಚಿವರ ಹೇಳಿಕೆ ಹೊರಬಿದ್ದಿದೆ. “ಅಖಂಡ ಭಾರತ ಕಲ್ಪನೆಯು ಬಾಂಗ್ಲಾದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತೆಗೆ ನೀಡಿರುವ ಬೆದರಿಕೆ” ಎಂದು ವಿರೋಧ ಪಕ್ಷ ಎಚ್ಚರಿಸಿದೆ.

ಸ್ಥಳೀಯ ಒತ್ತಡದಿಂದಾಗಿ ಬಾಂಗ್ಲಾ ಸರ್ಕಾರ ಈ ನಿರ್ಧಾರಕ್ಕೆ (ಸ್ಪಷ್ಟನೆ ಕೇಳುವುದಕ್ಕೆ) ಬಂದಿರಬಹುದೆಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರರು ಹೇಳಿದ್ದಾರೆ. ಅಶೋಕ ಸಾಮ್ರಾಜ್ಯದ ಕಾಲದಲ್ಲಿನ ಭಾರತದ ಗಡಿಗಳ ಬಗ್ಗೆ ತೋರಿಸುವ ಪ್ರಯತ್ನವೇ ಈ ಚಿತ್ರವಾಗಿದೆ. ಸಾಮ್ರಾಜ್ಯವನ್ನು ಪುನರುಜ್ಜೀನವಗೊಳಿಸುವ ಕಲ್ಪನೆಯದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆಲಂ ಪ್ರತಿಕ್ರಿಯಿಸಿ,  “ಈ ವಿಷಯದ ಬಗ್ಗೆ ಭಾರತದ ಅಧಿಕೃತ ವಿವರಣೆಯನ್ನು ಪಡೆಯಲು ಭಾರತವನ್ನು ಸಂಪರ್ಕಿಸುವಂತೆ ದೆಹಲಿಯಲ್ಲಿರುವ ಬಾಂಗ್ಲಾದೇಶ ರಾಯಭಾರಿ ಕಚೇರಿಗೆ ಸೂಚನೆ ನೀಡಲಾಗಿದೆ” ಎಂದಿದ್ದಾರೆ. ಆಲಂ ಹೇಳಿಕೆ ಕುರಿತು ‘ಢಾಕಾ ಟ್ರಿಬ್ಯೂನ್’ ವರದಿ ಮಾಡಿದೆ.

ಭಿತ್ತಿಚಿತ್ರದ ವಿರುದ್ಧ ನೇಪಾಳದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದವು. ನಂತರ ಭಾರತೀಯ ವಿದೇಶಾಂಗ ಸಚಿವಾಲಯ ವಿವರಣೆ ನೀಡಿತು.

“ಇದು ಕ್ರಿಸ್ತನ ಜನನಕ್ಕೆ 300 ವರ್ಷಗಳ ಹಿಂದಿನ ಅಶೋಕ ಸಾಮ್ರಾಜ್ಯದ ನಕ್ಷೆ” ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಹೇಳಿದ್ದಾರೆ. “ಈ ಚಿತ್ರವು ಜನರ ಪ್ರಯಾಣವನ್ನು ಚಿತ್ರಿಸುತ್ತದೆ. ಸಾಂಸ್ಕೃತಿಕ ಸಾಮ್ಯತೆಗಳಿರಬಹುದು, ಆದರೆ ಅದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಆಲಂ ಅವರೂ ಪುನರುಚ್ಚರಿಸಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು, “ಸಂಕಲ್ಪ ಸ್ಪಷ್ಟವಾಗಿದೆ – ಅಖಂಡ ಭಾರತ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಟ್ವೀಟ್ ಮಾಡಿದ ನಂತರ ಈ ಸಮಸ್ಯೆ ಉದ್ಭವವಾಗಿದೆ.

ನೇಪಾಳದಲ್ಲಿ ಭಿತ್ತಿಚಿತ್ರದ ಬಗ್ಗೆ ಬೀದಿ ಪ್ರತಿಭಟನೆಗಳು ನಡೆದವು. ಕೆಲವು ರಾಜಕಾರಣಿಗಳು ಪ್ರತಿಕ್ರಿಯಿಸಿ, “ಈ ಕ್ರಮವು ಕಠ್ಮಂಡು ಮತ್ತು ದೆಹಲಿ ನಡುವೆ ಈಗಾಗಲೇ ಇರುವ ವಿಶ್ವಾಸದ ಕೊರತೆಯನ್ನು ಉಲ್ಬಣಗೊಳಿಸಬಹುದು” ಎಂದು ಎಚ್ಚರಿಸಿದರು.

ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಬಲೂಚ್ ಅವರು ಪ್ರತಿಕ್ರಿಯಿಸಿ, “ಜೋಶಿಯವರ ಹೇಳಿಕೆಯಿಂದ ಆಘಾತವಾಗಿದೆ. ‘ಅಖಂಡ ಭಾರತ’ದ ಅನಪೇಕ್ಷಿತ ಪ್ರತಿಪಾದನೆಯು ಪರಿಷ್ಕರಣೆ ಮತ್ತು ವಿಸ್ತರಣಾವಾದಿ ಮನಸ್ಥಿತಿಯ ದ್ಯೋತಕವಾಗಿದೆ. ಇದು ಭಾರತದ ನೆರೆಯ ರಾಷ್ಟ್ರಗಳ ಗುರುತು ಮತ್ತು ಸಂಸ್ಕೃತಿಯನ್ನು ಅಧೀನಗೊಳಿಸಲು ಪ್ರಯತ್ನಿಸುತ್ತಿದೆ. ಆದರೆ ತನ್ನದೇ ದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನೂ ಅಧೀನಗೊಳಿಸಲು ಯತ್ನಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಜಾತಿಗಣತಿ ಜಾರಿಗೊಳಿಸುವ ಸಿಎಂ ನಿರ್ಧಾರ ಸ್ವಾಗತಾರ್ಹವೇಕೆ?

ಕಳೆದ ವಾರ ಭಾರತೀಯ ವಿದೇಶಾಂಗ ವಕ್ತಾರ ಅರಿಂದಮ್ ಬಾಗ್ಚಿ ಪ್ರತಿಕ್ರಿಯಿಸಿ, “ಸದರಿ ಭಿತ್ತಿಚಿತ್ರವು ‘ಅಖಂಡ ಭಾರತ’ದ ಬಗ್ಗೆ ಇಲ್ಲ. ಪ್ರಾಚೀನ ಮೌರ್ಯ ಸಾಮ್ರಾಜ್ಯದಲ್ಲಿನ ಸಾಮ್ರಾಜ್ಯ ವಿಸ್ತರಣೆಗೆ ಸಂಬಂಧಿಸಿದೆ” ಎಂದಿದ್ದರು.

“ಟೀಕೆಗೆ ಗುರಿಯಾಗಿರುವ ಚಿತ್ರವು ಅಶೋಕ ಸಾಮ್ರಾಜ್ಯ, ಆತನ ಚಿಂತನೆ, ಆಡಳಿತದ ಸುಧಾರಣೆಗೆ ಸಂಬಂಧಿಸಿದೆ. ಚಿತ್ರದ ಮುಂಭಾಗದಲ್ಲಿರುವ ಫಲಕವು ಅದನ್ನೇ ಹೇಳುತ್ತದೆ. ಮತ್ತೇನೂ ಅಲ್ಲ” ಬಾಗ್ಚಿ ಸ್ಪಷ್ಟಪಡಿಸಿದ್ದರು.

ಜೋಶಿಯವರ ಟ್ವೀಟ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು, “ಇತರ ರಾಜಕೀಯ ನಾಯಕರು ನೀಡಬಹುದಾದ ಹೇಳಿಕೆಗಳ ಬಗ್ಗೆ ನಾನು ಖಂಡಿತವಾಗಿಯೂ ಪ್ರತಿಕ್ರಿಯಿಸುವುದಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...