Homeಮುಖಪುಟಕ್ರೀಡಾ ಸಚಿವ ಠಾಕೂರ್ ಎದುರು ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನಿಟ್ಟ ಕುಸ್ತಿಪಟುಗಳು

ಕ್ರೀಡಾ ಸಚಿವ ಠಾಕೂರ್ ಎದುರು ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನಿಟ್ಟ ಕುಸ್ತಿಪಟುಗಳು

- Advertisement -
- Advertisement -

ಹಲವು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಸಭೆಯನ್ನು ಇಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರ ಮುಂದೆ ಕುಸ್ತಿಪಟುಗಳ 5 ಬೇಡಿಕೆಗಳನ್ನು ಇಟ್ಟಿದ್ದಾರೆ. ಅದರಲ್ಲಿ ಒಂದು ಮಹಿಳಾ ಫೆಡರೇಶನ್ ಮುಖ್ಯಸ್ಥರು ಬೇಕು ಎಂದು ಹೇಳಿದ್ದಾರೆ.

ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ನಿನ್ನೆ ರಾತ್ರಿ 12:47 ಕ್ಕೆ ಟ್ವೀಟ್ ಮಾಡಿದ್ದು, ”ಸರ್ಕಾರವು ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸಿದ್ಧವಾಗಿದೆ. ನಾನು ಮತ್ತೊಮ್ಮೆ ಕುಸ್ತಿಪಟುಗಳನ್ನು ಆಹ್ವಾನಿಸಿದ್ದೇನೆ” ಎಂದು ಹೇಳಿದ್ದರು.

ಅದರಂತೆ ಇಂದು (ಬುಧವಾರ) ಅನುರಾಗ್ ಠಾಕೂರ್ ಅವರನ್ನು ಕುಸ್ತಿಪಟುಗಳು ಭೇಟಿಯಾದರು. ಈ ವೇಳೆ, ಭಾರತ ಕುಸ್ತಿ ಒಕ್ಕೂಟಕ್ಕೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಹಾಗೂ ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನು ಕುಸ್ತಿಪಟುಗಳು ಸಚಿವರಿಗೆ ಸಲ್ಲಿಸಿದರು. ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬ ಸದಸ್ಯರು ಡಬ್ಲ್ಯುಎಫ್‌ಐ ಭಾಗವಾಗಿರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಕುಸ್ತಿಪಟುಗಳು ಕಳೆದ ತಿಂಗಳು ಭಾರತದ ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಿದ ದಿನದಂದು ತಮ್ಮ ಪ್ರತಿಭಟನೆಯ ಬಗ್ಗೆ ತಮ್ಮ ವಿರುದ್ಧ ಪೋಲೀಸ್ ಪ್ರಕರಣವನ್ನು ದಾಖಲಿಸಬೇಕೆಂದು ಬಯಸುತ್ತಾರೆ. ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಅವರು ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

ಪ್ರತಿಭಟನೆಯ ಪ್ರಮುಖ ಮುಖವಾದ ವಿನೇಶ್ ಫೋಗಟ್ ಅವರು ಪೂರ್ವ ನಿಗದಿತ ‘ಪಂಚಾಯತ್’ ನಲ್ಲಿ ಪಾಲ್ಗೊಳ್ಳಲು ಹರಿಯಾಣದ ಬಲಾಲಿ ಗ್ರಾಮದಲ್ಲಿರುವ ಕಾರಣ ಸಭೆಗೆ ಹಾಜರಾಗುತ್ತಿಲ್ಲ.

ಐದು ದಿನಗಳಲ್ಲಿ ಕುಸ್ತಿಪಟುಗಳು ಮತ್ತು ಸರ್ಕಾರದ ನಡುವೆ ನಡೆದ ಎರಡನೇ ಸಭೆಯಾಗಿದೆ. ಏಳು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕೈಗೊಳ್ಳಲು ಕುಸ್ತಿಪಟುಗಳು ಶನಿವಾರ ತಡರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ಶನಿವಾರ ರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸರ್ಕಾರ ಮತ್ತು ಪ್ರತಿಭಟನಾ ನಿರತ ಕುಸ್ತಿಪಟುಗಳ ನಡುವಿನ ಎರಡನೇ ಸುತ್ತಿನ ಸಭೆ ಇದಾಗಿದೆ. ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ ಠಾಕೂರ್ ಅವರು ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಬಿಕ್ಕಟ್ಟು ಮುರಿಯಲು ಸಭೆ ಕರೆದಿದ್ದರು.

ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ, ಏಳು ಮಹಿಳಾ ಕುಸ್ತಿಪಟುಗಳಿರ್ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಶನಿವಾರ ತಡ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬಳಿಕ ಕ್ರೀಡಾಪಟುಗಳು ಮಾಧ್ಯಮದವರೊಂದಿಗೆ ಯಾವುದೇ ಮಾತುಗಳನ್ನಾಡಲಿಲ್ಲ. ಸೋಮವಾರ ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದರು. ಇದು ಹಲವು ಊಹಾಪೋಹಗಳಿಗೆ ಕಾರಣವಾಯಿತು. ಸರ್ಕಾರದೊಂದಿಗೆ ಕ್ರೀಡಾಪಟುಗಳೊಂದಿಗೆ ಡೀಲ್ ಮಾಡಿಕೊಂಡಿದ್ದಾರೆ ಎನ್ನುವ ಮಾಧ್ಯಮವರದಿಗಳು ಪ್ರಸಾರಗೊಂಡವು.

ಮಂಗಳವಾರ ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಕುಸ್ತಿಪಟು ಬಜರಂಗ್ ಪುನಿಯಾ ಅವರು ಎಲ್ಲ ಊಹಾಪೋಹಳಿಗೆ ತೆರೆ ಎಳೆದಿದ್ದಾರೆ. ”ಅಮಿತ್ ಶಾ ಅವರೊಂದಿಗೆ ಕುಸ್ತಿಪಟುಗಳು ಯಾವುದೇ ಹೊಂದಾಣಿಕೆ ಅಥವಾ ಡೀಲ್ ಮಾಡಿಕೊಂಡಿಲ್ಲ ಮತ್ತು ಪ್ರತಿಭಟನೆಗಳು ಮುಂದುವರಿಯುತ್ತವೆ” ಎಂದು ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ತಡರಾತ್ರಿ ಭೇಟಿಯಾದ ಬಗ್ಗೆ ಮಾತನಾಡದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭಾರತ ಸರ್ಕಾರದಿಂದ ಕೇಳಲಾಗಿದೆ ಎಂದು ಪುನಿಯಾ ಹೇಳಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವವರಲ್ಲಿ ಅಪ್ರಾಪ್ತ ವಯಸ್ಕಳು ತನ್ನ ದೂರನ್ನು ಹಿಂಪಡೆದಿದ್ದಾರೆ ಎಂಬ ವರದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಲಾಯಿತು. ಈ ಬಗ್ಗೆ ಮಾತನಾಡಿದ ಪುನಿಯಾ, ”ಪೋಸ್ಕೋ ಕಾಯ್ದೆಯಡಿ ಬ್ರಿಜ್ ಭೂಷಣ್ ವಿರುದ್ದ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ತಂದೆ ಮತ್ತು ಆ ಬಾಲಕಿ, ದೂರನ್ನು ಹಿಂಪಡೆದಿಲ್ಲ, ಆದರೆ ಬ್ರಿಜ್ ಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಸಂಬಂಧಿತ ವಿವರಗಳೊಂದಿಗೆ ಹೊಸದಾಗಿ ಸಲ್ಲಿಸಿದ್ದಾಳೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕುಸ್ತಿಪಟುಗಳೊಂದಿಗೆ ಮತ್ತೊಮ್ಮೆ ಚರ್ಚಿಸಲು ಸರ್ಕಾರ ಸಿದ್ಧವಿದೆ; ಅನುರಾಗ್ ಠಾಕೂರ್‌

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ”ನಾವು ಎಲ್ಲವನ್ನೂ ಪಣಕ್ಕಿಟ್ಟಿದ್ದೇವೆ ಮತ್ತು ನಮ್ಮ ಆಂದೋಲನದಲ್ಲಿ ಒಂದು ಅಡಚಣೆಯಾದರೆ ನಮ್ಮ ಸರ್ಕಾರಿ ಉದ್ಯೋಗಗಳನ್ನು ತ್ಯಜಿಸಲು ಸಿದ್ಧರಿದ್ದೇವೆ. ಇದು ದೊಡ್ಡ ವಿಷಯವಲ್ಲ” ಎಂದು ಅವರು ಹೇಳಿದರು.

”ಇದು ಗೌರವ ಮತ್ತು ಘನತೆಗಾಗಿ ಹೋರಾಟವಾಗಿದೆ. ನಾವು ವದಂತಿಗಳಿಗೆ ಹೆದರುವುದಿಲ್ಲ, ಅಥವಾ ರೈಲ್ವೇ ಉದ್ಯೋಗವನ್ನು ಕಳೆದುಕೊಳ್ಳುತ್ತೇವೆ. ಯಾರಾದರೂ ನಮ್ಮ ಮೇಲೆ ಒತ್ತಡ ಹೇರಿದರೆ ನಾವು ಕೆಲಸವನ್ನು ತೊರೆಯುತ್ತೇವೆ” ಎಂದು ಪುನಿಯಾ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

”ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧದ ದೂರಿನ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಯಾವುದೇ ಡೀಲ್ ಮಾಡಿಕೊಂಡಿಲ್ಲ” ಎಂದು ಪುನಿಯಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

”ಪ್ರತಿಭಟನಾ ಚಳವಳಿಯು ಸತ್ತು ಹೋಗಿಲ್ಲ, ಅದು ಮುಂದುವರಿಯುತ್ತದೆ. ಅದನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎಂಬುದರ ಕುರಿತು ನಾವು ಕಾರ್ಯತಂತ್ರ ರೂಪಿಸುತ್ತಿದ್ದೇವೆ” ಎಂದು ಪುನಿಯಾ ಹೇಳಿದರು.

”ಪ್ರತಿಭಟನಾ ನಿರತ ಕುಸ್ತಿಪಟುಗಳು ಸರ್ಕಾರದೊಂದಿಗೆ ‘ಡೀಲ್’ ಮಾಡಿಕೊಂಡಿದ್ದಾರೆ ಎಂದು ಈ ಹಿಂದೆ ವರದಿಗಳು ಬಂದಿದ್ದವು. ಆದರೆ ನಾವು ಸಭೆಯಲ್ಲಿನ ಚಚೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡದಂತೆ ಸರ್ಕಾರ ಕೇಳಿಕೊಂಡಿತ್ತು. ಹಾಗಾಗಿ ನಾವುಗಳು ಮಾತನಾಡಿರಲಿಲ್ಲ. ಆದರೆ, ಆನಂತರ ಸರ್ಕಾರದೊಳಗಿನವರೇ ಚರ್ಚೆಯ ವಿಚಾರವನ್ನು ಸೋರಿಕೆ ಮಾಡಿದ್ದಾರೆ” ಎಂದು ಪುನಿಯಾ ಹೇಳಿದರು.

ಪ್ರತಿಭಟನಾ ನಿರತ ಕುಸ್ತಿಪಟುಗಳು ಸರ್ಕಾರದ ಪ್ರತಿಕ್ರಿಯೆಯಿಂದ ತೃಪ್ತರಾಗಿಲ್ಲ, ಅವರ ಬೇಡಿಕೆಗಳಿಗೆ ಸರ್ಕಾರವು ಮನ್ನಣೆ ನೀಡುತ್ತಿಲ್ಲ ಎಂದು ಪುನಿಯಾ ಅಸಮಧಾನ ಹೊರಹಾಕಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...