Homeಮುಖಪುಟಕ್ರೀಡಾ ಸಚಿವ ಠಾಕೂರ್ ಎದುರು ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನಿಟ್ಟ ಕುಸ್ತಿಪಟುಗಳು

ಕ್ರೀಡಾ ಸಚಿವ ಠಾಕೂರ್ ಎದುರು ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನಿಟ್ಟ ಕುಸ್ತಿಪಟುಗಳು

- Advertisement -
- Advertisement -

ಹಲವು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಸಭೆಯನ್ನು ಇಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರ ಮುಂದೆ ಕುಸ್ತಿಪಟುಗಳ 5 ಬೇಡಿಕೆಗಳನ್ನು ಇಟ್ಟಿದ್ದಾರೆ. ಅದರಲ್ಲಿ ಒಂದು ಮಹಿಳಾ ಫೆಡರೇಶನ್ ಮುಖ್ಯಸ್ಥರು ಬೇಕು ಎಂದು ಹೇಳಿದ್ದಾರೆ.

ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ನಿನ್ನೆ ರಾತ್ರಿ 12:47 ಕ್ಕೆ ಟ್ವೀಟ್ ಮಾಡಿದ್ದು, ”ಸರ್ಕಾರವು ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸಿದ್ಧವಾಗಿದೆ. ನಾನು ಮತ್ತೊಮ್ಮೆ ಕುಸ್ತಿಪಟುಗಳನ್ನು ಆಹ್ವಾನಿಸಿದ್ದೇನೆ” ಎಂದು ಹೇಳಿದ್ದರು.

ಅದರಂತೆ ಇಂದು (ಬುಧವಾರ) ಅನುರಾಗ್ ಠಾಕೂರ್ ಅವರನ್ನು ಕುಸ್ತಿಪಟುಗಳು ಭೇಟಿಯಾದರು. ಈ ವೇಳೆ, ಭಾರತ ಕುಸ್ತಿ ಒಕ್ಕೂಟಕ್ಕೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಹಾಗೂ ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನು ಕುಸ್ತಿಪಟುಗಳು ಸಚಿವರಿಗೆ ಸಲ್ಲಿಸಿದರು. ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬ ಸದಸ್ಯರು ಡಬ್ಲ್ಯುಎಫ್‌ಐ ಭಾಗವಾಗಿರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಕುಸ್ತಿಪಟುಗಳು ಕಳೆದ ತಿಂಗಳು ಭಾರತದ ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಿದ ದಿನದಂದು ತಮ್ಮ ಪ್ರತಿಭಟನೆಯ ಬಗ್ಗೆ ತಮ್ಮ ವಿರುದ್ಧ ಪೋಲೀಸ್ ಪ್ರಕರಣವನ್ನು ದಾಖಲಿಸಬೇಕೆಂದು ಬಯಸುತ್ತಾರೆ. ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಅವರು ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

ಪ್ರತಿಭಟನೆಯ ಪ್ರಮುಖ ಮುಖವಾದ ವಿನೇಶ್ ಫೋಗಟ್ ಅವರು ಪೂರ್ವ ನಿಗದಿತ ‘ಪಂಚಾಯತ್’ ನಲ್ಲಿ ಪಾಲ್ಗೊಳ್ಳಲು ಹರಿಯಾಣದ ಬಲಾಲಿ ಗ್ರಾಮದಲ್ಲಿರುವ ಕಾರಣ ಸಭೆಗೆ ಹಾಜರಾಗುತ್ತಿಲ್ಲ.

ಐದು ದಿನಗಳಲ್ಲಿ ಕುಸ್ತಿಪಟುಗಳು ಮತ್ತು ಸರ್ಕಾರದ ನಡುವೆ ನಡೆದ ಎರಡನೇ ಸಭೆಯಾಗಿದೆ. ಏಳು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕೈಗೊಳ್ಳಲು ಕುಸ್ತಿಪಟುಗಳು ಶನಿವಾರ ತಡರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ಶನಿವಾರ ರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸರ್ಕಾರ ಮತ್ತು ಪ್ರತಿಭಟನಾ ನಿರತ ಕುಸ್ತಿಪಟುಗಳ ನಡುವಿನ ಎರಡನೇ ಸುತ್ತಿನ ಸಭೆ ಇದಾಗಿದೆ. ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ ಠಾಕೂರ್ ಅವರು ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಬಿಕ್ಕಟ್ಟು ಮುರಿಯಲು ಸಭೆ ಕರೆದಿದ್ದರು.

ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ, ಏಳು ಮಹಿಳಾ ಕುಸ್ತಿಪಟುಗಳಿರ್ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಶನಿವಾರ ತಡ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬಳಿಕ ಕ್ರೀಡಾಪಟುಗಳು ಮಾಧ್ಯಮದವರೊಂದಿಗೆ ಯಾವುದೇ ಮಾತುಗಳನ್ನಾಡಲಿಲ್ಲ. ಸೋಮವಾರ ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದರು. ಇದು ಹಲವು ಊಹಾಪೋಹಗಳಿಗೆ ಕಾರಣವಾಯಿತು. ಸರ್ಕಾರದೊಂದಿಗೆ ಕ್ರೀಡಾಪಟುಗಳೊಂದಿಗೆ ಡೀಲ್ ಮಾಡಿಕೊಂಡಿದ್ದಾರೆ ಎನ್ನುವ ಮಾಧ್ಯಮವರದಿಗಳು ಪ್ರಸಾರಗೊಂಡವು.

ಮಂಗಳವಾರ ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಕುಸ್ತಿಪಟು ಬಜರಂಗ್ ಪುನಿಯಾ ಅವರು ಎಲ್ಲ ಊಹಾಪೋಹಳಿಗೆ ತೆರೆ ಎಳೆದಿದ್ದಾರೆ. ”ಅಮಿತ್ ಶಾ ಅವರೊಂದಿಗೆ ಕುಸ್ತಿಪಟುಗಳು ಯಾವುದೇ ಹೊಂದಾಣಿಕೆ ಅಥವಾ ಡೀಲ್ ಮಾಡಿಕೊಂಡಿಲ್ಲ ಮತ್ತು ಪ್ರತಿಭಟನೆಗಳು ಮುಂದುವರಿಯುತ್ತವೆ” ಎಂದು ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ತಡರಾತ್ರಿ ಭೇಟಿಯಾದ ಬಗ್ಗೆ ಮಾತನಾಡದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭಾರತ ಸರ್ಕಾರದಿಂದ ಕೇಳಲಾಗಿದೆ ಎಂದು ಪುನಿಯಾ ಹೇಳಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವವರಲ್ಲಿ ಅಪ್ರಾಪ್ತ ವಯಸ್ಕಳು ತನ್ನ ದೂರನ್ನು ಹಿಂಪಡೆದಿದ್ದಾರೆ ಎಂಬ ವರದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಲಾಯಿತು. ಈ ಬಗ್ಗೆ ಮಾತನಾಡಿದ ಪುನಿಯಾ, ”ಪೋಸ್ಕೋ ಕಾಯ್ದೆಯಡಿ ಬ್ರಿಜ್ ಭೂಷಣ್ ವಿರುದ್ದ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ತಂದೆ ಮತ್ತು ಆ ಬಾಲಕಿ, ದೂರನ್ನು ಹಿಂಪಡೆದಿಲ್ಲ, ಆದರೆ ಬ್ರಿಜ್ ಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಸಂಬಂಧಿತ ವಿವರಗಳೊಂದಿಗೆ ಹೊಸದಾಗಿ ಸಲ್ಲಿಸಿದ್ದಾಳೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕುಸ್ತಿಪಟುಗಳೊಂದಿಗೆ ಮತ್ತೊಮ್ಮೆ ಚರ್ಚಿಸಲು ಸರ್ಕಾರ ಸಿದ್ಧವಿದೆ; ಅನುರಾಗ್ ಠಾಕೂರ್‌

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ”ನಾವು ಎಲ್ಲವನ್ನೂ ಪಣಕ್ಕಿಟ್ಟಿದ್ದೇವೆ ಮತ್ತು ನಮ್ಮ ಆಂದೋಲನದಲ್ಲಿ ಒಂದು ಅಡಚಣೆಯಾದರೆ ನಮ್ಮ ಸರ್ಕಾರಿ ಉದ್ಯೋಗಗಳನ್ನು ತ್ಯಜಿಸಲು ಸಿದ್ಧರಿದ್ದೇವೆ. ಇದು ದೊಡ್ಡ ವಿಷಯವಲ್ಲ” ಎಂದು ಅವರು ಹೇಳಿದರು.

”ಇದು ಗೌರವ ಮತ್ತು ಘನತೆಗಾಗಿ ಹೋರಾಟವಾಗಿದೆ. ನಾವು ವದಂತಿಗಳಿಗೆ ಹೆದರುವುದಿಲ್ಲ, ಅಥವಾ ರೈಲ್ವೇ ಉದ್ಯೋಗವನ್ನು ಕಳೆದುಕೊಳ್ಳುತ್ತೇವೆ. ಯಾರಾದರೂ ನಮ್ಮ ಮೇಲೆ ಒತ್ತಡ ಹೇರಿದರೆ ನಾವು ಕೆಲಸವನ್ನು ತೊರೆಯುತ್ತೇವೆ” ಎಂದು ಪುನಿಯಾ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

”ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧದ ದೂರಿನ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಯಾವುದೇ ಡೀಲ್ ಮಾಡಿಕೊಂಡಿಲ್ಲ” ಎಂದು ಪುನಿಯಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

”ಪ್ರತಿಭಟನಾ ಚಳವಳಿಯು ಸತ್ತು ಹೋಗಿಲ್ಲ, ಅದು ಮುಂದುವರಿಯುತ್ತದೆ. ಅದನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎಂಬುದರ ಕುರಿತು ನಾವು ಕಾರ್ಯತಂತ್ರ ರೂಪಿಸುತ್ತಿದ್ದೇವೆ” ಎಂದು ಪುನಿಯಾ ಹೇಳಿದರು.

”ಪ್ರತಿಭಟನಾ ನಿರತ ಕುಸ್ತಿಪಟುಗಳು ಸರ್ಕಾರದೊಂದಿಗೆ ‘ಡೀಲ್’ ಮಾಡಿಕೊಂಡಿದ್ದಾರೆ ಎಂದು ಈ ಹಿಂದೆ ವರದಿಗಳು ಬಂದಿದ್ದವು. ಆದರೆ ನಾವು ಸಭೆಯಲ್ಲಿನ ಚಚೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡದಂತೆ ಸರ್ಕಾರ ಕೇಳಿಕೊಂಡಿತ್ತು. ಹಾಗಾಗಿ ನಾವುಗಳು ಮಾತನಾಡಿರಲಿಲ್ಲ. ಆದರೆ, ಆನಂತರ ಸರ್ಕಾರದೊಳಗಿನವರೇ ಚರ್ಚೆಯ ವಿಚಾರವನ್ನು ಸೋರಿಕೆ ಮಾಡಿದ್ದಾರೆ” ಎಂದು ಪುನಿಯಾ ಹೇಳಿದರು.

ಪ್ರತಿಭಟನಾ ನಿರತ ಕುಸ್ತಿಪಟುಗಳು ಸರ್ಕಾರದ ಪ್ರತಿಕ್ರಿಯೆಯಿಂದ ತೃಪ್ತರಾಗಿಲ್ಲ, ಅವರ ಬೇಡಿಕೆಗಳಿಗೆ ಸರ್ಕಾರವು ಮನ್ನಣೆ ನೀಡುತ್ತಿಲ್ಲ ಎಂದು ಪುನಿಯಾ ಅಸಮಧಾನ ಹೊರಹಾಕಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...