Homeಕರ್ನಾಟಕಬೊಮ್ಮಾಯಿಯವರು ಅವಿವೇಕದ ತುತ್ತತುದಿಗೆ ಏರಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

ಬೊಮ್ಮಾಯಿಯವರು ಅವಿವೇಕದ ತುತ್ತತುದಿಗೆ ಏರಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

- Advertisement -
- Advertisement -

”ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾನು ಪ್ರಾಜ್ಞರು ಹಾಗೂ ಪ್ರಜ್ಞಾವಂತರೆಂದು ಭಾವಿಸಿದ್ದೆ ಆದರೆ ಅವರು ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುತ್ತತುದಿಗೆ ಏರಿದ್ದಾರೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಅತಿ ಶೀಘ್ರದಲ್ಲೇ ತುರ್ತು ಪರಿಸ್ಥಿತಿ ತಲೆದೋರಬಹುದು ಎಂದು ಬೊಮ್ಮಾಯಿ ಅವರು ಹೇಳಿಕೆ ನೀಡಿದ ಬಳಿಕ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದರು. ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡ ಬಳಿಕ ಬಾಲ ಸುಟ್ಟ ಬೆಕ್ಕಿನಂತಾಗಿದ್ದಾರೆ ಎಂದು ಕೆಣಕಿದ್ದರು. ಅದಕ್ಕೆ ಪ್ರತಿಯಾಗಿ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದರು. ಇದೀಗ ಬೊಮ್ಮಾಯಿ ಹಾಗೂ ದಿನೇಶ್ ಗುಂಡೂರಾವ್ ನಡುವೆ ಟ್ವಿಟ್ಟರ್ ವಾರ್ ಶುರುವಾಗಿದೆ.

ಗುಂಡುರಾವ್ ಅವರ ಟ್ವೀಟ್‌ಗೆ ಪ್ರತಿ ಟ್ವೀಟ್ ಮಾಡಿದ್ದ ಬೊಮ್ಮಾಯಿ ಅವರು, ”ಕೇಂದ್ರದಲ್ಲಿ ಇಷ್ಟು ದಿನ ಅಪರಾಧಗಳನ್ನು ಮಾಡಿ ರಾಜಕೀಯ ರಕ್ಷಣೆಯನ್ನು ಯುಪಿಎ ಕಾಲದಲ್ಲಿ ಪಡೆಯುತ್ತಿದ್ದರು. ಈಗ ಕೇಂದ್ರ ಸರ್ಕಾರ ಅಪರಾಧ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡಿದೆ‌. ಇವೆಲ್ಲವೂ ಕೂಡ ನ್ಯಾಯಾಂಗದ ಪರಿಶೀಲನೆಯಲ್ಲಿ ನಡೆಯುತ್ತಿದೆ. ಇಲ್ಲಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಹದಿನೈದು ದಿನಗಳು ಕಳೆದಿಲ್ಲ‌ ಬರಿ ಮಾತನಾಡಿದರೆ ಜೈಲಿಗೆ ಹಾಕುತ್ತೇವೆ ಎಂದು ಮಂತ್ರಿಗಳ ಬಾಯಲ್ಲಿ ಬರುತ್ತಿರುವುದು, ವಿರೋಧಿಗಳನ್ನು ನಿಮ್ಮ ಅಧಿಕಾರ ಬಲದಿಂದ ದಮನ ಮಾಡುವ ತಂತ್ರ 1975 ರ ಎಮರ್ಜನ್ಸಿಯನ್ನು ನೆನಪಿಸುತ್ತದೆ. ಆರಂಭದಲ್ಲಿಯೇ ಅಧಿಕಾರದ ಮದದಿಂದ ಜನ ಕೊಟ್ಟ ಅಧಿಕಾರ ವಿರೋಧಿಗಳ ದಮನಕ್ಕಾಗಿ ಇದೆ ಎಂದು ತಾವು ಭಾವಿಸಿದ್ದರೆ ಖಂಡಿತವಾಗಿಯೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ” ಎಂದಿದ್ದರು.

ಇದೀಗ ಬೊಮ್ಮಾಯಿ ಅವರ ಟ್ವೀಟ್‌ಗೆ ಪ್ರತಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಅವರು, ”ಬೊಮ್ಮಾಯಿ ಅವರನ್ನು ನಾನು ಪ್ರಾಜ್ಞರು ಹಾಗೂ ಪ್ರಜ್ಞಾವಂತರೆಂದು ಭಾವಿಸಿದ್ದೆ. ಆದರೆ, ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತೆ ಜನತಾ ಪರಿವಾರದ ಬೊಮ್ಮಾಯಿ, ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುತ್ತತುದಿಗೆ ಏರಿದ್ದಾರೆ. ಬೊಮ್ಮಾಯಿಯವರೇ, ನೀವು ಮುಖ್ಯಮಂತ್ರಿ ಆಗಿದ್ದವರು. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತಪ್ಪೇ” ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ.

”ಬೊಮ್ಮಾಯಿಯವರೇ, UPA ಅವಧಿಯಲ್ಲಿ ಅಪರಾಧಿಗಳ ರಕ್ಷಣೆಯಾಗುತಿತ್ತು ಎಂದು ಹೇಳಿದ್ದೀರಿ‌. ನಮ್ಮ ಅವಧಿಯಲ್ಲಿ ಯಾವ ಅಪರಾಧಿಯ ರಕ್ಷಣೆಯಾಗಿದೆ ಎಂದು ಹೇಳಿ? ನಾರಾಯಣ ರಾಣೆ, ಸುವೇಂದು ಅಧಿಕಾರಿಯನ್ನು ಮಹಾಭ್ರಷ್ಟರೆಂದು ಬಿಂಬಿಸಿದ್ದು ನಿಮ್ಮ ಪಕ್ಷವೇ ಅಲ್ಲವೇ? ಅವರೀಗ ನಿಮ್ಮ ಪಕ್ಷದ ಸದಸ್ಯರು, ಬೇರೆ ಪಕ್ಷದಲ್ಲಿದ್ದಾಗ ಮಹಾಭ್ರಷ್ಟರು. ಈಗ ಅವರೇನು?” ಎಂದು ಸರಣಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರ ಕಳೆದುಕೊಂಡ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌: ಬೊಮ್ಮಾಯಿಗೆ ದಿನೇಶ್ ಗುಂಡೂರಾವ್ ತಿರುಗೇಟು

ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಂಗಳವಾರ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿ ಮಾತನಾಡಿದ ಸಚಿವರು, ”ಮಂಗಳೂರಿನಲ್ಲಿ ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳನ್ನು ಪರಿಶೀಲಿಸಿದ್ದೇನೆ. ಇದು ನನಗೆ ಹೊಸ ಹುದ್ದೆ ಅಲ್ಲ. ಹೊಸ ಸವಾಲುಗಳು ಹುಟ್ಟಿಕೊಂಡಿವೆ ಮತ್ತು ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪೊಲೀಸ್ ಇಲಾಖೆಗೂ ಹೊಸ ಸವಾಲುಗಳು ಎದುರಾಗಿವೆ” ಎಂದರು.

”ನೈತಿಕ ಪೊಲೀಸ್​ಗಿರಿ ತಡೆಯಲು ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಎಂಬ ಹೊಸ ಘಟಕ ಸ್ಥಾಪಿಸುತ್ತೇವೆ. ಆ್ಯಂಟಿ ಕಮ್ಯುನಲ್ ವಿಂಗ್​ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ” ಎಂದರು.

”ಈ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಎಂದು ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಎಂದು ಜನ ಮಾತನಾಡುತ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

”ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ದರೆ ಇಲಾಖೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ನೈತಿಕ ಪೊಲೀಸ್​ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು” ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...