Homeಕರ್ನಾಟಕಬೊಮ್ಮಾಯಿಯವರು ಅವಿವೇಕದ ತುತ್ತತುದಿಗೆ ಏರಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

ಬೊಮ್ಮಾಯಿಯವರು ಅವಿವೇಕದ ತುತ್ತತುದಿಗೆ ಏರಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

- Advertisement -
- Advertisement -

”ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾನು ಪ್ರಾಜ್ಞರು ಹಾಗೂ ಪ್ರಜ್ಞಾವಂತರೆಂದು ಭಾವಿಸಿದ್ದೆ ಆದರೆ ಅವರು ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುತ್ತತುದಿಗೆ ಏರಿದ್ದಾರೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಅತಿ ಶೀಘ್ರದಲ್ಲೇ ತುರ್ತು ಪರಿಸ್ಥಿತಿ ತಲೆದೋರಬಹುದು ಎಂದು ಬೊಮ್ಮಾಯಿ ಅವರು ಹೇಳಿಕೆ ನೀಡಿದ ಬಳಿಕ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದರು. ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡ ಬಳಿಕ ಬಾಲ ಸುಟ್ಟ ಬೆಕ್ಕಿನಂತಾಗಿದ್ದಾರೆ ಎಂದು ಕೆಣಕಿದ್ದರು. ಅದಕ್ಕೆ ಪ್ರತಿಯಾಗಿ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದರು. ಇದೀಗ ಬೊಮ್ಮಾಯಿ ಹಾಗೂ ದಿನೇಶ್ ಗುಂಡೂರಾವ್ ನಡುವೆ ಟ್ವಿಟ್ಟರ್ ವಾರ್ ಶುರುವಾಗಿದೆ.

ಗುಂಡುರಾವ್ ಅವರ ಟ್ವೀಟ್‌ಗೆ ಪ್ರತಿ ಟ್ವೀಟ್ ಮಾಡಿದ್ದ ಬೊಮ್ಮಾಯಿ ಅವರು, ”ಕೇಂದ್ರದಲ್ಲಿ ಇಷ್ಟು ದಿನ ಅಪರಾಧಗಳನ್ನು ಮಾಡಿ ರಾಜಕೀಯ ರಕ್ಷಣೆಯನ್ನು ಯುಪಿಎ ಕಾಲದಲ್ಲಿ ಪಡೆಯುತ್ತಿದ್ದರು. ಈಗ ಕೇಂದ್ರ ಸರ್ಕಾರ ಅಪರಾಧ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡಿದೆ‌. ಇವೆಲ್ಲವೂ ಕೂಡ ನ್ಯಾಯಾಂಗದ ಪರಿಶೀಲನೆಯಲ್ಲಿ ನಡೆಯುತ್ತಿದೆ. ಇಲ್ಲಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಹದಿನೈದು ದಿನಗಳು ಕಳೆದಿಲ್ಲ‌ ಬರಿ ಮಾತನಾಡಿದರೆ ಜೈಲಿಗೆ ಹಾಕುತ್ತೇವೆ ಎಂದು ಮಂತ್ರಿಗಳ ಬಾಯಲ್ಲಿ ಬರುತ್ತಿರುವುದು, ವಿರೋಧಿಗಳನ್ನು ನಿಮ್ಮ ಅಧಿಕಾರ ಬಲದಿಂದ ದಮನ ಮಾಡುವ ತಂತ್ರ 1975 ರ ಎಮರ್ಜನ್ಸಿಯನ್ನು ನೆನಪಿಸುತ್ತದೆ. ಆರಂಭದಲ್ಲಿಯೇ ಅಧಿಕಾರದ ಮದದಿಂದ ಜನ ಕೊಟ್ಟ ಅಧಿಕಾರ ವಿರೋಧಿಗಳ ದಮನಕ್ಕಾಗಿ ಇದೆ ಎಂದು ತಾವು ಭಾವಿಸಿದ್ದರೆ ಖಂಡಿತವಾಗಿಯೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ” ಎಂದಿದ್ದರು.

ಇದೀಗ ಬೊಮ್ಮಾಯಿ ಅವರ ಟ್ವೀಟ್‌ಗೆ ಪ್ರತಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಅವರು, ”ಬೊಮ್ಮಾಯಿ ಅವರನ್ನು ನಾನು ಪ್ರಾಜ್ಞರು ಹಾಗೂ ಪ್ರಜ್ಞಾವಂತರೆಂದು ಭಾವಿಸಿದ್ದೆ. ಆದರೆ, ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತೆ ಜನತಾ ಪರಿವಾರದ ಬೊಮ್ಮಾಯಿ, ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುತ್ತತುದಿಗೆ ಏರಿದ್ದಾರೆ. ಬೊಮ್ಮಾಯಿಯವರೇ, ನೀವು ಮುಖ್ಯಮಂತ್ರಿ ಆಗಿದ್ದವರು. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತಪ್ಪೇ” ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ.

”ಬೊಮ್ಮಾಯಿಯವರೇ, UPA ಅವಧಿಯಲ್ಲಿ ಅಪರಾಧಿಗಳ ರಕ್ಷಣೆಯಾಗುತಿತ್ತು ಎಂದು ಹೇಳಿದ್ದೀರಿ‌. ನಮ್ಮ ಅವಧಿಯಲ್ಲಿ ಯಾವ ಅಪರಾಧಿಯ ರಕ್ಷಣೆಯಾಗಿದೆ ಎಂದು ಹೇಳಿ? ನಾರಾಯಣ ರಾಣೆ, ಸುವೇಂದು ಅಧಿಕಾರಿಯನ್ನು ಮಹಾಭ್ರಷ್ಟರೆಂದು ಬಿಂಬಿಸಿದ್ದು ನಿಮ್ಮ ಪಕ್ಷವೇ ಅಲ್ಲವೇ? ಅವರೀಗ ನಿಮ್ಮ ಪಕ್ಷದ ಸದಸ್ಯರು, ಬೇರೆ ಪಕ್ಷದಲ್ಲಿದ್ದಾಗ ಮಹಾಭ್ರಷ್ಟರು. ಈಗ ಅವರೇನು?” ಎಂದು ಸರಣಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರ ಕಳೆದುಕೊಂಡ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌: ಬೊಮ್ಮಾಯಿಗೆ ದಿನೇಶ್ ಗುಂಡೂರಾವ್ ತಿರುಗೇಟು

ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಂಗಳವಾರ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿ ಮಾತನಾಡಿದ ಸಚಿವರು, ”ಮಂಗಳೂರಿನಲ್ಲಿ ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳನ್ನು ಪರಿಶೀಲಿಸಿದ್ದೇನೆ. ಇದು ನನಗೆ ಹೊಸ ಹುದ್ದೆ ಅಲ್ಲ. ಹೊಸ ಸವಾಲುಗಳು ಹುಟ್ಟಿಕೊಂಡಿವೆ ಮತ್ತು ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪೊಲೀಸ್ ಇಲಾಖೆಗೂ ಹೊಸ ಸವಾಲುಗಳು ಎದುರಾಗಿವೆ” ಎಂದರು.

”ನೈತಿಕ ಪೊಲೀಸ್​ಗಿರಿ ತಡೆಯಲು ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಎಂಬ ಹೊಸ ಘಟಕ ಸ್ಥಾಪಿಸುತ್ತೇವೆ. ಆ್ಯಂಟಿ ಕಮ್ಯುನಲ್ ವಿಂಗ್​ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ” ಎಂದರು.

”ಈ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಎಂದು ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಎಂದು ಜನ ಮಾತನಾಡುತ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

”ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ದರೆ ಇಲಾಖೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ನೈತಿಕ ಪೊಲೀಸ್​ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು” ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...