Homeಕರ್ನಾಟಕಬೊಮ್ಮಾಯಿಯವರು ಅವಿವೇಕದ ತುತ್ತತುದಿಗೆ ಏರಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

ಬೊಮ್ಮಾಯಿಯವರು ಅವಿವೇಕದ ತುತ್ತತುದಿಗೆ ಏರಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

- Advertisement -
- Advertisement -

”ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾನು ಪ್ರಾಜ್ಞರು ಹಾಗೂ ಪ್ರಜ್ಞಾವಂತರೆಂದು ಭಾವಿಸಿದ್ದೆ ಆದರೆ ಅವರು ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುತ್ತತುದಿಗೆ ಏರಿದ್ದಾರೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಅತಿ ಶೀಘ್ರದಲ್ಲೇ ತುರ್ತು ಪರಿಸ್ಥಿತಿ ತಲೆದೋರಬಹುದು ಎಂದು ಬೊಮ್ಮಾಯಿ ಅವರು ಹೇಳಿಕೆ ನೀಡಿದ ಬಳಿಕ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದರು. ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡ ಬಳಿಕ ಬಾಲ ಸುಟ್ಟ ಬೆಕ್ಕಿನಂತಾಗಿದ್ದಾರೆ ಎಂದು ಕೆಣಕಿದ್ದರು. ಅದಕ್ಕೆ ಪ್ರತಿಯಾಗಿ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದರು. ಇದೀಗ ಬೊಮ್ಮಾಯಿ ಹಾಗೂ ದಿನೇಶ್ ಗುಂಡೂರಾವ್ ನಡುವೆ ಟ್ವಿಟ್ಟರ್ ವಾರ್ ಶುರುವಾಗಿದೆ.

ಗುಂಡುರಾವ್ ಅವರ ಟ್ವೀಟ್‌ಗೆ ಪ್ರತಿ ಟ್ವೀಟ್ ಮಾಡಿದ್ದ ಬೊಮ್ಮಾಯಿ ಅವರು, ”ಕೇಂದ್ರದಲ್ಲಿ ಇಷ್ಟು ದಿನ ಅಪರಾಧಗಳನ್ನು ಮಾಡಿ ರಾಜಕೀಯ ರಕ್ಷಣೆಯನ್ನು ಯುಪಿಎ ಕಾಲದಲ್ಲಿ ಪಡೆಯುತ್ತಿದ್ದರು. ಈಗ ಕೇಂದ್ರ ಸರ್ಕಾರ ಅಪರಾಧ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡಿದೆ‌. ಇವೆಲ್ಲವೂ ಕೂಡ ನ್ಯಾಯಾಂಗದ ಪರಿಶೀಲನೆಯಲ್ಲಿ ನಡೆಯುತ್ತಿದೆ. ಇಲ್ಲಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಹದಿನೈದು ದಿನಗಳು ಕಳೆದಿಲ್ಲ‌ ಬರಿ ಮಾತನಾಡಿದರೆ ಜೈಲಿಗೆ ಹಾಕುತ್ತೇವೆ ಎಂದು ಮಂತ್ರಿಗಳ ಬಾಯಲ್ಲಿ ಬರುತ್ತಿರುವುದು, ವಿರೋಧಿಗಳನ್ನು ನಿಮ್ಮ ಅಧಿಕಾರ ಬಲದಿಂದ ದಮನ ಮಾಡುವ ತಂತ್ರ 1975 ರ ಎಮರ್ಜನ್ಸಿಯನ್ನು ನೆನಪಿಸುತ್ತದೆ. ಆರಂಭದಲ್ಲಿಯೇ ಅಧಿಕಾರದ ಮದದಿಂದ ಜನ ಕೊಟ್ಟ ಅಧಿಕಾರ ವಿರೋಧಿಗಳ ದಮನಕ್ಕಾಗಿ ಇದೆ ಎಂದು ತಾವು ಭಾವಿಸಿದ್ದರೆ ಖಂಡಿತವಾಗಿಯೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ” ಎಂದಿದ್ದರು.

ಇದೀಗ ಬೊಮ್ಮಾಯಿ ಅವರ ಟ್ವೀಟ್‌ಗೆ ಪ್ರತಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಅವರು, ”ಬೊಮ್ಮಾಯಿ ಅವರನ್ನು ನಾನು ಪ್ರಾಜ್ಞರು ಹಾಗೂ ಪ್ರಜ್ಞಾವಂತರೆಂದು ಭಾವಿಸಿದ್ದೆ. ಆದರೆ, ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತೆ ಜನತಾ ಪರಿವಾರದ ಬೊಮ್ಮಾಯಿ, ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುತ್ತತುದಿಗೆ ಏರಿದ್ದಾರೆ. ಬೊಮ್ಮಾಯಿಯವರೇ, ನೀವು ಮುಖ್ಯಮಂತ್ರಿ ಆಗಿದ್ದವರು. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತಪ್ಪೇ” ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ.

”ಬೊಮ್ಮಾಯಿಯವರೇ, UPA ಅವಧಿಯಲ್ಲಿ ಅಪರಾಧಿಗಳ ರಕ್ಷಣೆಯಾಗುತಿತ್ತು ಎಂದು ಹೇಳಿದ್ದೀರಿ‌. ನಮ್ಮ ಅವಧಿಯಲ್ಲಿ ಯಾವ ಅಪರಾಧಿಯ ರಕ್ಷಣೆಯಾಗಿದೆ ಎಂದು ಹೇಳಿ? ನಾರಾಯಣ ರಾಣೆ, ಸುವೇಂದು ಅಧಿಕಾರಿಯನ್ನು ಮಹಾಭ್ರಷ್ಟರೆಂದು ಬಿಂಬಿಸಿದ್ದು ನಿಮ್ಮ ಪಕ್ಷವೇ ಅಲ್ಲವೇ? ಅವರೀಗ ನಿಮ್ಮ ಪಕ್ಷದ ಸದಸ್ಯರು, ಬೇರೆ ಪಕ್ಷದಲ್ಲಿದ್ದಾಗ ಮಹಾಭ್ರಷ್ಟರು. ಈಗ ಅವರೇನು?” ಎಂದು ಸರಣಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರ ಕಳೆದುಕೊಂಡ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌: ಬೊಮ್ಮಾಯಿಗೆ ದಿನೇಶ್ ಗುಂಡೂರಾವ್ ತಿರುಗೇಟು

ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಂಗಳವಾರ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿ ಮಾತನಾಡಿದ ಸಚಿವರು, ”ಮಂಗಳೂರಿನಲ್ಲಿ ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳನ್ನು ಪರಿಶೀಲಿಸಿದ್ದೇನೆ. ಇದು ನನಗೆ ಹೊಸ ಹುದ್ದೆ ಅಲ್ಲ. ಹೊಸ ಸವಾಲುಗಳು ಹುಟ್ಟಿಕೊಂಡಿವೆ ಮತ್ತು ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪೊಲೀಸ್ ಇಲಾಖೆಗೂ ಹೊಸ ಸವಾಲುಗಳು ಎದುರಾಗಿವೆ” ಎಂದರು.

”ನೈತಿಕ ಪೊಲೀಸ್​ಗಿರಿ ತಡೆಯಲು ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಎಂಬ ಹೊಸ ಘಟಕ ಸ್ಥಾಪಿಸುತ್ತೇವೆ. ಆ್ಯಂಟಿ ಕಮ್ಯುನಲ್ ವಿಂಗ್​ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ” ಎಂದರು.

”ಈ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಎಂದು ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಎಂದು ಜನ ಮಾತನಾಡುತ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

”ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ದರೆ ಇಲಾಖೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ನೈತಿಕ ಪೊಲೀಸ್​ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು” ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...