Homeಮುಖಪುಟಪೆರಿಯಾರ್ ಹೇಳಿಕೆ ಉಲ್ಲೇಖಿಸಿ 370 ನೇ ವಿಧಿ ರದ್ದತಿಯನ್ನು ಖಂಡಿಸಿದ ನಟ ವಿಜಯ್ ಸೇತುಪಥಿ.

ಪೆರಿಯಾರ್ ಹೇಳಿಕೆ ಉಲ್ಲೇಖಿಸಿ 370 ನೇ ವಿಧಿ ರದ್ದತಿಯನ್ನು ಖಂಡಿಸಿದ ನಟ ವಿಜಯ್ ಸೇತುಪಥಿ.

ಜನರು ತಮ್ಮ ವಿಷಯಗಳು ಮತ್ತು ಸಮಸ್ಯೆಗಳ ಬಗ್ಗೆ ಸ್ವತಃ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೆರಿಯಾರ್ ಮೊದಲೇ ಹೇಳಿದ್ದರು ಎಂದು ವಿಜಯ್ ಸೇತುಪಥಿ ಉಲ್ಲೇಖಿಸಿದ್ದಾರೆ.

- Advertisement -
- Advertisement -

ಕಾಶ್ಮೀರ ಜನತೆಯ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ತೀವ್ರವಾಗಿ ಖಂಡಿಸಿದ್ದಾರೆ.

‘ಎಸ್‌ಬಿಎಸ್ ಆಸ್ಟ್ರೇಲಿಯಾ ತಮಿಳು’ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಅವರು, “ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಜನರು ತಮ್ಮ ವಿಷಯಗಳು ಮತ್ತು ಸಮಸ್ಯೆಗಳ ಬಗ್ಗೆ ಸ್ವತಃ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೆರಿಯಾರ್ ಮೊದಲೇ ಹೇಳಿದ್ದರು. ನಿಮ್ಮ ಮನೆಯ ವ್ಯವಹಾರಗಳಲ್ಲಿ ನಾನು ಹಸ್ತಕ್ಷೇಪ ಮಾಡಬಹುದೇ? ನೀವು ಅಲ್ಲಿ ವಾಸಿಸುವವರು… ನಾನು ನಿಮ್ಮ ಬಗ್ಗೆ ಕಾಳಜಿ ವಹಿಸಬಹುದು, ಆದರೆ ನನ್ನ ನಿರ್ಧಾರಗಳನ್ನು ನಿಮ್ಮ ಮೇಲೆ ಹೇರಲು ಸಾಧ್ಯವಿಲ್ಲ ಅಲ್ಲವೇ? ಕಾಳಜಿ ತೋರುವುದು ಬೇರೆ, ತಲೆಹಾಕುವುದು ಬೇರೆ. ಇವೆರಡೂ ಬೇರೆ ಬೇರೆಯೆಂದು ಕೇಂದ್ರ ಸರ್ಕಾರಕ್ಕೆ ಗೊತ್ತಿಲ್ಲವೇ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೆಲ್ಬೋರ್ನ್ 2019 ರ ಭಾರತೀಯ ಚಲನಚಿತ್ರೋತ್ಸವದಲ್ಲಿ ಇತ್ತೀಚೆಗೆ ತಮಿಳು ಚಿತ್ರ ‘ಸೂಪರ್ ಡಿಲಕ್ಸ್’ ಗಾಗಿ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ಪಡೆದ ನಟ, ಕಾಶ್ಮೀರದ ಬಗ್ಗೆ ತಾನು ಓದಿದ ವರದಿಗಳು ತನಗೆ ತುಂಬಾ ನೋವು ತಂದಿದೆ ಎಂದಿದ್ದಾರೆ. ಕಾಶ್ಮೀರದ ಹೊರಗಿನವರು ಕಾಶ್ಮೀರದ ಬಗ್ಗೆ ಕಾಳಜಿ ವಹಿಸಬಹುದು ಆದರೆ ಜಮ್ಮು ಮತ್ತು ಕಾಶ್ಮೀರದ ಪ್ರದೇಶದಲ್ಲಿನ ವ್ಯವಹಾರಗಳ ಮೇ ಮತ್ತು ಅದರ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ತಿಳಿಸಿದ್ದಾರೆ.

ಭಾನುವಾರ ಚೆನ್ನೈನಲ್ಲಿ ನಟ ರಜನಿಕಾಂತ್ ಮಾಡಿದ ಭಾಷಣದಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ-ಷಾ ಜೋಡಿಯನ್ನು ಅಭಿನಂದಿಸುತ್ತಾ ಎನ್‌ಡಿಎ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಶ್ಲಾಘಿಸಿದ ಬೆನ್ನಲ್ಲೇ ವಿಜಯ್ ಸೇತುಪತಿ ಅವರು ಈ ನಿರ್ಧಾರವನ್ನು ಖಂಡಿಸಿದ್ದಾರೆ.

ನಟ ರಜನಿಕಾಂತ್ ಅವರು, “ನಿಮ್ಮ ಮಿಷನ್ ಕಾಶ್ಮೀರ ಕಾರ್ಯಾಚರಣೆಗೆ ನಿಜವಾಗಿಯೂ ನನ್ನ ಹೃತ್ಪೂರ್ವಕ ಅಭಿನಂದನೆಗಳು, ಸರ್. ನೀವು ಅದನ್ನು ನಡೆಸಿದ ರೀತಿ, ಹ್ಯಾಟ್ಸ್ ಆಫ್, ವಿಶೇಷವಾಗಿ ನೀವು ಸಂಸತ್ತಿನಲ್ಲಿ ಮಾಡಿದ ಭಾಷಣ, ಅದ್ಭುತ ಸರ್, ಅದ್ಭುತ. ಎಂದು ಮೋದಿ ಅಮಿತ್ ಶಾರನ್ನು ಕೊಂಡಾಡಿದ್ದರು.

ಹಾಗೆಯೇ ಮತ್ತೊರ್ವ ಖ್ಯಾತ ನಟ ಕಮಲ್ ಹಾಸನ್ ಸೇರಿದಂತೆ ಹಲವರು “ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಹಿಂತೆಗೆದುಕೊಳ್ಳುವಿಕೆ ಮತ್ತು ವಿಭಜನೆಯನ್ನು ಘೋಷಿಸುವ ಮೊದಲು ಕಾಶ್ಮೀರಿ ನಾಯಕರನ್ನು ಗೃಹಬಂಧನದಲ್ಲಿರಿಸುವುದು ಮತ್ತು ಸಂವಹನ ಮಾರ್ಗಗಳನ್ನು ಕಡಿತಗೊಳಿಸಿರುವುದರ ಬಗ್ಗೆ ಅನೇಕರು ಟೀಕಿಸಿದ್ದಾರೆ.

ಕಳೆದ ವಾರ ಸಂಸತ್ತಿನಲ್ಲಿ ನಡೆದ ಕ್ರಮವನ್ನು ತಮಿಳುನಾಡಿನ ಆಡಳಿತ ಪಕ್ಷ ಎಐಎಡಿಎಂಕೆ ಸ್ವಾಗತಿಸಿದರೆ, ವಿರೋಧ ಪಕ್ಷದ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು ಇದನ್ನು ತೀವ್ರವಾಗಿ ಖಂಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

    • Please let me know how many more years we should keep article 370? So far 60 years situation in J&K is not improved, then y should we take different chance?

  1. Modi is right.that is not only Kashmir internal issue.the issue is Jammu people and ladak people.ladak is fight for there rights from the freedom to till now no one talking ……… …..
    Vijay sethupathi don’t know what is really going on there simply he stiing reading book and telling……First he listen ladak Mp speech in Rajyasabha how that people happy that UT .

  2. ೬೦-೭೦ ವರ್ಷಗಳಿಂದ ಕಾಶ್ಮೀರವನ್ನು ಉಗ್ರಗಾಮಿಗಳ ಸ್ವರ್ಗವನ್ನಾಗಿಸಿದ್ದು ಸಾಕು, ಇನ್ನಾದರೂ ವೋಟ್ ಬ್ಯಾಂಕ್ ರಾಜಕಾರಣವನ್ನು ಬಿಟ್ಟು ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣಗೊಳಿಸುವುದು ನಮ್ಮ ಆದ್ಯತೆ ಆದರೆ ಇಷ್ಟು ವರ್ಷ ಹುತಾತ್ಮ ರಾದ ಯೋಧರ ಮತ್ತು ಕಾಶ್ಮೀರಿಗರ ತ್ಯಾಗಕ್ಕೆ ಅರ್ಥ ಬರಬಹುದು. ಆಂತರಿಕ ದೇಶದ್ರೋಹಕ್ಕೆ ಧಿಕ್ಕಾರ.

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...