Homeಕರ್ನಾಟಕಟಿಪ್ಪುವನ್ನು ಮುಕ್ತವಾಗಿ ಹೊಗಳಿದ್ದ ಬಿಜೆಪಿ ಸಂಸ್ಥಾಪಕ ಸದಸ್ಯ ಮಲ್ಕಾನಿ: ಪಿ.ಸಾಯಿನಾಥ್‌ ಉಲ್ಲೇಖ

ಟಿಪ್ಪುವನ್ನು ಮುಕ್ತವಾಗಿ ಹೊಗಳಿದ್ದ ಬಿಜೆಪಿ ಸಂಸ್ಥಾಪಕ ಸದಸ್ಯ ಮಲ್ಕಾನಿ: ಪಿ.ಸಾಯಿನಾಥ್‌ ಉಲ್ಲೇಖ

ಕೆ.ಆರ್‌.ಮಲ್ಕಾನಿಯವರು ಟಿಪ್ಪು ಬಗ್ಗೆ ಮುಕ್ತವಾಗಿ ಹೊಗಳಿರುವುದನ್ನು ಉಲ್ಲೇಖಿಸಿ ‘ಪ್ರಜಾವಾಣಿ’, ‘ಡೆಕ್ಕನ್‌ಹೆರಾಲ್ಡ್‌’ ಪತ್ರಿಕೆಗಳಿಗೆ ಪಿ.ಸಾಯಿನಾಥ್ ಲೇಖನ ಬರೆದಿದ್ದಾರೆ

- Advertisement -
- Advertisement -

“ಬಿಜೆಪಿಯ ಸಂಸ್ಥಾಪಕ ಸದಸ್ಯ, ಬಲಪಂಥೀಯ ಪ್ರಖರ ಪತ್ರಕರ್ತ, ಆರ್‌ಎಸ್‌ಎಸ್‌ನ ಆರ್ಗನೈಸರ್‌ ಸಂಪಾದಕರಾಗಿದ್ದ ‘ಕೇವಲ್ ರಾಮ್ ರತನ್ ಕುಮಾರ್ ಮಲ್ಕಾನಿ’ (ಕೆ.ಆರ್.ಮಲ್ಕಾನಿ) ಅವರು ಟಿಪ್ಪು ಸುಲ್ತಾನ್‌ರನ್ನು ಮುಕ್ತವಾಗಿ ಹೊಗಳಿದ್ದರು” ಎಂದು ಮ್ಯಾಗಸ್ಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಸ್ಮರಿಸಿದ್ದಾರೆ.

‘ಡೆಕ್ಕನ್ ಹೆರಾಲ್ಡ್‌’ ಮತ್ತು ‘ಪ್ರಜಾವಾಣಿ’ಯಲ್ಲಿ ಬುಧವಾರ (ಜೂನ್‌ 7) ಪ್ರಕಟವಾಗಿರುವ ಸಾಯಿನಾಥ್ ಅವರ ಲೇಖನವು ಹಲವು ಮಹತ್ತರವಾದ ವಿಚಾರಗಳನ್ನು ಒಳಗೊಂಡಿದೆ. ಟಿಪ್ಪು ಕುರಿತು ಬಿಜೆಪಿಯವರು ಸೃಷ್ಟಿಸಿರುವ ಗೊಂದಲಗಳಿಗೆ ‘ಮಲ್ಕಾನಿ’ ಅವರ ಮಾತುಗಳ ಮೂಲಕ ಪ್ರತಿಕ್ರಿಯಿಸುವ ಪ್ರಯತ್ನವನ್ನು ಈ ಲೇಖನ ಮಾಡಿದೆ. ಕೆ.ಆರ್‌.ಮಲ್ಕಾನಿಯವರ ಹಿನ್ನಲೆ, ಆರ್‌ಎಸ್‌ಎಸ್‌ ಮತ್ತು ಬಿಜೆಪಿಗಾಗಿ ಅವರು ಸಲ್ಲಿಸಿರುವ ಸೇವೆಯನ್ನು ಉಲ್ಲೇಖಿಸಲಾಗಿದೆ.

‘ದಿ ಗ್ರೇಟ್‌ನೆಸ್ ಆಫ್‌ ಟಿಪ್ಪು ಸುಲ್ತಾನ್‌’ ಎಂಬ ಶೀರ್ಷಿಕೆಯಲ್ಲಿ ‘ಡೆಕ್ಕನ್‌ ಹೆರಾಲ್ಡ್‌’ನಲ್ಲಿಯೂ, ‘ಟಿಪ್ಪು ಹಿರಿಮೆಗೆ ಮಸಿ ಬಳಿಯಲು ಸಾಧ್ಯವೆ?’ ಎಂಬ ತಲೆಬರೆಹದಲ್ಲಿ ‘ಪ್ರಜಾವಾಣಿ’ಯಲ್ಲಿಯೂ ಲೇಖನ ಪ್ರಕಟವಾಗಿದೆ.

ಮಲ್ಕಾನಿ ಅವರು ಟಿಪ್ಪುವನ್ನು ಹೇಗೆಲ್ಲ ಬಣ್ಣಿಸಿದ್ದರು ಎಂಬುದನ್ನು ಸಾಯಿನಾಥ್ ವಿಸ್ತೃತವಾಗಿ ಚರ್ಚಿಸಿದ್ದಾರೆ. ಮಲ್ಕಾನಿಯವರ ‘ಇಂಡಿಯಾ ಫಸ್ಟ್’ ಕೃತಿಯಲ್ಲಿ ದಾಖಲಾಗಿರುವ ಸಾಲುಗಳನ್ನು ಸಾಕ್ಷಿಯಾಗಿ ಒದಗಿಸಿದ್ದಾರೆ.

“ಅಕ್ಬರ್, ದಾರಾ ಶಿಕೋ ಹಾಗೂ ಟಿಪ್ಪು ಸುಲ್ತಾನ್‌ನಂತಹವರು ಹೀರೊಗಳೆಂದು ಪರಿಗಣಿಸಲ್ಪಡಬೇಕೇ ವಿನಾ ಖಳನಾಯಕರಾಗಿ ಅಲ್ಲ ಎನ್ನುವುದು ನನ್ನ ಅಭಿಪ್ರಾಯ. ಟಿಪ್ಪುವಿನ ಬಗ್ಗೆ ಹೆಚ್ಚೆಚ್ಚು ಓದಿದಷ್ಟೂ ನನಗೆ ಆತನ ವ್ಯಕ್ತಿತ್ವದ ಹಿರಿಮೆ ಮನವರಿಕೆಯಾಗಿದೆ. … (ಟಿಪ್ಪು ಸುಲ್ತಾನ್) ಮಾತ್ರವೇ ಬ್ರಿಟಿಷರ ವಿರುದ್ಧ ಹೋರಾಡುತ್ತಾ ಮಡಿದ ರಾಜಕುಮಾರ” ಎಂದು ಮಲ್ಕಾನಿಯವರು ಬರೆದಿರುವುದನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ.

ಮುಂದುವರಿದು, “ಬ್ರಿಟಿಷರ ವಿರುದ್ಧ ಹೋರಾಡುವುದಷ್ಟಕ್ಕೇ ಟಿಪ್ಪು ತೃಪ್ತನಾಗಲಿಲ್ಲ, ಶಂಕಿತರಿಗೆ ಚಿತ್ರಹಿಂಸೆ ನೀಡುವುದನ್ನೂ ಸಾರ್ವಜನಿಕ ಕೆಲಸಗಳಿಗೆ ಜನರನ್ನು ಬಲವಂತವಾಗಿ ಕೂಲಿಗಳನ್ನಾಗಿ ಬಳಸಿಕೊಳ್ಳುವುದನ್ನೂ ವಿರೋಧಿಸಿದ್ದ. ಈತ ಪಾನ ನಿಷೇಧವನ್ನು ಜಾರಿಗೆ ತಂದ. ಮರಗಳನ್ನು ಕಡಿಯುವುದನ್ನು ವಿರೋಧಿಸಿದ. ಪ್ರತಿ ನಾಲ್ಕು ಮೈಲಿಗೆ ಒಂದು ಶಾಲೆಯನ್ನು ತೆರೆಯಲು ಯತ್ನಿಸಿದ. ಯಾವಾಗ ಶಸ್ತ್ರ ಉತ್ಪಾದನಾ ಕಾರ್ಖಾನೆಯಿಂದ ಕಾವೇರಿ ನದಿ ಕಲುಷಿತವಾಗುತ್ತಿದೆ ಎಂದು ಗೊತ್ತಾಯಿತೋ ತಕ್ಷಣ ಆತ ಆ ಕಾರ್ಖಾನೆಯನ್ನೇ ಸ್ಥಳಾಂತರಿಸಿದ. ಪರಿಸರವಾದಿಗಳಿಗೆ ಮಾದರಿ ಎನ್ನಬಹುದಾದ ರಾಜನೊಬ್ಬ ಅವನೊಳಗಿದ್ದ. ಭಾರತದ ರಾಜರುಗಳ ಪೈಕಿ ಟಿಪ್ಪು ಮಾತ್ರವೇ ವಿಶ್ವದೃಷ್ಟಿ ಉಳ್ಳವನಾಗಿದ್ದ. ಟಿಪ್ಪುವಿನ ಮರಣದಿಂದಾಗಿ ಭಾರತದ ಸ್ವಾತಂತ್ರ್ಯ ಒಂದೂವರೆ ಶತಮಾನದಷ್ಟು ಮುಂದೆ ಹೋಯಿತು… ಆತ ಬಯಸಿದ್ದರೆ, ಹಿಂದಿನ ಕೆಲ ಅರಸರಂತೆ, ಬ್ರಿಟಿಷರ ಅಡಿಯಾಳಾಗಿ ತನ್ನ ಅರಸುತನವನ್ನು ಉಳಿಸಿಕೊಳ್ಳಬಹುದಾಗಿತ್ತು. ಅಂದು ಅವನು ಹಾಗೆ ಮಾಡಿದ್ದೇ ಆಗಿದ್ದಲ್ಲಿ, ಇಂದು ಆತನ ಮರಿ, ಗಿರಿಮಕ್ಕಳು ಕೊಲ್ಕೊತ್ತಾದ ರಸ್ತೆಗಳಲ್ಲಿ ಸೈಕಲ್ ರಿಕ್ಷಾ ತುಳಿಯುತ್ತಾ ಬದುಕು ಸವೆಸಬೇಕಾದ ಅನಿವಾರ್ಯ ಸ್ಥಿತಿಗೆ ಸಿಲುಕುತ್ತಿರಲಿಲ್ಲ. ಗೌರವ ಕಳೆದುಕೊಂಡು ಬದುಕುವುದಕ್ಕಿಂತಲೂ ಸಾವು ಆತನ ಆಯ್ಕೆಯಾಗಿತ್ತು”- ಹೀಗೆ ಮಲ್ಕಾನಿಯವರು ಬಣ್ಣಿಸಿರುವುದಾಗಿ ಸಾಯಿನಾಥ್‌ ಬರೆದಿದ್ದಾರೆ.

ಮಲ್ಕಾನಿ ಅವರು ಟಿಪ್ಪು ಬಗ್ಗೆ ಬರೆದ ಲೇಖನವನ್ನು ಒಳಗೊಂಡ ಪುಸ್ತಕಕ್ಕೆ ಹಿಂದುತ್ವದ ಹೀರೊ ಎಲ್.ಕೆ.ಅಡ್ವಾಣಿ ಅವರೇ ಮುನ್ನುಡಿ ಬರೆದಿದ್ದರು. ಭಾರತದ ಉಪಪ್ರಧಾನಿಯಾಗಿದ್ದ ಅಡ್ವಾಣಿ ಅವರು ಮಲ್ಕಾನಿ ಅವರನ್ನು ‘ಮಹಾನ್ ಪತ್ರಕರ್ತ’ ಎಂದೇ ಬಣ್ಣಿಸುತ್ತಿದ್ದರು. ಆರ್‌ಎಸ್ಎಸ್ ಸಹ ಎಲ್ಲಿಯೂ ಮಲ್ಕಾನಿ ಅವರನ್ನು ನಿರಾಕರಿಸಿಲ್ಲ ಎಂದು ಸಾಯಿನಾಥ್‌ ಅಭಿಪ್ರಾಯಪಟ್ಟಿದ್ದಾರೆ.

ಮಲ್ಕಾನಿಯವರ ಹಿನ್ನೆಲೆಯ ಕುರಿತು ಬರೆಯುತ್ತಾ, “ಅವರು ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಬಿಜೆಪಿಯ ಉಪಾಧ್ಯಕ್ಷರಾಗಿ ಹಲವಾರು ವರ್ಷ ಕಾರ್ಯನಿರ್ವಹಿಸಿದ್ದರು. ಆರ್‌ಎಸ್ಎಸ್‌ನ ಅತಿಮುಖ್ಯ ಚಿಂತಕರಲ್ಲಿ ಒಬ್ಬರಾಗಿದ್ದರು. ಆ ಸಂಘಟನೆಯ ಮಾಧ್ಯಮ ವ್ಯಕ್ತಿಯೂ ಆಗಿದ್ದರು. 1940ರ ದಶಕದಲ್ಲಿ ‘ದಿ ಹಿಂದೂಸ್ಥಾನ್ ಟೈಮ್ಸ್’ನಲ್ಲಿ ಕೆಲಕಾಲ ಕೆಲಸ ಮಾಡಿದ್ದರು (ಅದೇ ಸಮಯದಲ್ಲಿ ‘ಆರ್ಗನೈಸರ್’ ವಾರಪತ್ರಿಕೆಗೂ ಬರೆಯುತ್ತಿದ್ದರು). ಆನಂತರದಲ್ಲಿ ಅವರು ಪೂರ್ಣಾವಧಿಗೆ ಹಿಂದುತ್ವದ ತೆಕ್ಕೆಗೆ ಬಂದರು. ಆರ್‌ಎಸ್ಎಸ್‌ನ ದನಿಯಾಗಿದ್ದ ‘ಆರ್ಗನೈಸರ್’ಗೆ ಸುಮಾರು 35 ವರ್ಷದಷ್ಟು ದೀರ್ಘಕಾಲ ಸಂಪಾದಕರಾಗಿದ್ದು ಇವರೊಬ್ಬರೇ. ‘ಆರ್ಗನೈಸರ್’ನ ಹಿಂದಿ ಆವೃತ್ತಿ ‘ಪಾಂಚಜನ್ಯ’ದ ಸಂಪಾದಕರಾಗಿಯೂ ಕೆಲಸ ಮಾಡಿದ್ದರು” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಟಿಪ್ಪು v/s ಸಾವರ್ಕರ್‌ ಎಂಬುದಕ್ಕೆ ನನ್ನ ಒಪ್ಪಿಗೆ ಇಲ್ಲ: ಯಡಿಯೂರಪ್ಪ

“ಪುದುಚೇರಿಯ ಲೆಫ್ಟಿನೆಂಟ್ ಗರ್ವನರ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ 2003ರಲ್ಲಿ ನಿಧನರಾದ ಮಲ್ಕಾನಿ ಅವರು ಸ್ಪಷ್ಟ ಚಿಂತನೆ ಮತ್ತು ನೇರ ನುಡಿಯ ವ್ಯಕ್ತಿತ್ವದವರು. ಟಿಪ್ಪು, ಭಗತ್ ಸಿಂಗ್, ಹಿಜಾಬ್ ಹಾಗೂ ಮತ್ತಿತರ ವಿಷಯವಾಗಿ ಕರ್ನಾಟಕದಲ್ಲಿ ಅನಗತ್ಯ ಗಲಭೆಗಳನ್ನು ಸೃಷ್ಟಿಸಿದ ಗುಂಪಿನಂತಲ್ಲ” ಎಂದು ಬಣ್ಣಿಸಿದ್ದಾರೆ.

“ಮಲ್ಕಾನಿಯವರ ಈ ಆರ್‌ಎಸ್ಎಸ್ ಹೆಗ್ಗುರುತಿನ ಜೊತೆ ಬಿ.ಸಿ.ನಾಗೇಶ್‌ ಅವರನ್ನು ಹೋಲಿಸಿ ನೋಡಿದರೆ ಅವರು (ಬಿ.ಸಿ.ನಾಗೇಶ್) ತೀರಾ ಕೃಶವಾಗಿ ತೋರುತ್ತಾರೆ” ಎಂದು ಕುಟುಕಿರುವ ಸಾಯಿನಾಥ್, ನಾಗೇಶ್ ಅವರು ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಟಿಪ್ಪು ಸುಲ್ತಾನ್‌, ಭಗತ್ ಸಿಂಗ್‌ ಕುರಿತ ಪಠ್ಯವನ್ನು ಕಿತ್ತು ಹಾಕಿದ್ದನ್ನು ಟೀಕಿಸಿದ್ದಾರೆ.

(‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿರುವ ಪೂರ್ಣ ಲೇಖನವನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...