Homeಕರ್ನಾಟಕಟಿಪ್ಪುವನ್ನು ಮುಕ್ತವಾಗಿ ಹೊಗಳಿದ್ದ ಬಿಜೆಪಿ ಸಂಸ್ಥಾಪಕ ಸದಸ್ಯ ಮಲ್ಕಾನಿ: ಪಿ.ಸಾಯಿನಾಥ್‌ ಉಲ್ಲೇಖ

ಟಿಪ್ಪುವನ್ನು ಮುಕ್ತವಾಗಿ ಹೊಗಳಿದ್ದ ಬಿಜೆಪಿ ಸಂಸ್ಥಾಪಕ ಸದಸ್ಯ ಮಲ್ಕಾನಿ: ಪಿ.ಸಾಯಿನಾಥ್‌ ಉಲ್ಲೇಖ

ಕೆ.ಆರ್‌.ಮಲ್ಕಾನಿಯವರು ಟಿಪ್ಪು ಬಗ್ಗೆ ಮುಕ್ತವಾಗಿ ಹೊಗಳಿರುವುದನ್ನು ಉಲ್ಲೇಖಿಸಿ ‘ಪ್ರಜಾವಾಣಿ’, ‘ಡೆಕ್ಕನ್‌ಹೆರಾಲ್ಡ್‌’ ಪತ್ರಿಕೆಗಳಿಗೆ ಪಿ.ಸಾಯಿನಾಥ್ ಲೇಖನ ಬರೆದಿದ್ದಾರೆ

- Advertisement -
- Advertisement -

“ಬಿಜೆಪಿಯ ಸಂಸ್ಥಾಪಕ ಸದಸ್ಯ, ಬಲಪಂಥೀಯ ಪ್ರಖರ ಪತ್ರಕರ್ತ, ಆರ್‌ಎಸ್‌ಎಸ್‌ನ ಆರ್ಗನೈಸರ್‌ ಸಂಪಾದಕರಾಗಿದ್ದ ‘ಕೇವಲ್ ರಾಮ್ ರತನ್ ಕುಮಾರ್ ಮಲ್ಕಾನಿ’ (ಕೆ.ಆರ್.ಮಲ್ಕಾನಿ) ಅವರು ಟಿಪ್ಪು ಸುಲ್ತಾನ್‌ರನ್ನು ಮುಕ್ತವಾಗಿ ಹೊಗಳಿದ್ದರು” ಎಂದು ಮ್ಯಾಗಸ್ಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಸ್ಮರಿಸಿದ್ದಾರೆ.

‘ಡೆಕ್ಕನ್ ಹೆರಾಲ್ಡ್‌’ ಮತ್ತು ‘ಪ್ರಜಾವಾಣಿ’ಯಲ್ಲಿ ಬುಧವಾರ (ಜೂನ್‌ 7) ಪ್ರಕಟವಾಗಿರುವ ಸಾಯಿನಾಥ್ ಅವರ ಲೇಖನವು ಹಲವು ಮಹತ್ತರವಾದ ವಿಚಾರಗಳನ್ನು ಒಳಗೊಂಡಿದೆ. ಟಿಪ್ಪು ಕುರಿತು ಬಿಜೆಪಿಯವರು ಸೃಷ್ಟಿಸಿರುವ ಗೊಂದಲಗಳಿಗೆ ‘ಮಲ್ಕಾನಿ’ ಅವರ ಮಾತುಗಳ ಮೂಲಕ ಪ್ರತಿಕ್ರಿಯಿಸುವ ಪ್ರಯತ್ನವನ್ನು ಈ ಲೇಖನ ಮಾಡಿದೆ. ಕೆ.ಆರ್‌.ಮಲ್ಕಾನಿಯವರ ಹಿನ್ನಲೆ, ಆರ್‌ಎಸ್‌ಎಸ್‌ ಮತ್ತು ಬಿಜೆಪಿಗಾಗಿ ಅವರು ಸಲ್ಲಿಸಿರುವ ಸೇವೆಯನ್ನು ಉಲ್ಲೇಖಿಸಲಾಗಿದೆ.

‘ದಿ ಗ್ರೇಟ್‌ನೆಸ್ ಆಫ್‌ ಟಿಪ್ಪು ಸುಲ್ತಾನ್‌’ ಎಂಬ ಶೀರ್ಷಿಕೆಯಲ್ಲಿ ‘ಡೆಕ್ಕನ್‌ ಹೆರಾಲ್ಡ್‌’ನಲ್ಲಿಯೂ, ‘ಟಿಪ್ಪು ಹಿರಿಮೆಗೆ ಮಸಿ ಬಳಿಯಲು ಸಾಧ್ಯವೆ?’ ಎಂಬ ತಲೆಬರೆಹದಲ್ಲಿ ‘ಪ್ರಜಾವಾಣಿ’ಯಲ್ಲಿಯೂ ಲೇಖನ ಪ್ರಕಟವಾಗಿದೆ.

ಮಲ್ಕಾನಿ ಅವರು ಟಿಪ್ಪುವನ್ನು ಹೇಗೆಲ್ಲ ಬಣ್ಣಿಸಿದ್ದರು ಎಂಬುದನ್ನು ಸಾಯಿನಾಥ್ ವಿಸ್ತೃತವಾಗಿ ಚರ್ಚಿಸಿದ್ದಾರೆ. ಮಲ್ಕಾನಿಯವರ ‘ಇಂಡಿಯಾ ಫಸ್ಟ್’ ಕೃತಿಯಲ್ಲಿ ದಾಖಲಾಗಿರುವ ಸಾಲುಗಳನ್ನು ಸಾಕ್ಷಿಯಾಗಿ ಒದಗಿಸಿದ್ದಾರೆ.

“ಅಕ್ಬರ್, ದಾರಾ ಶಿಕೋ ಹಾಗೂ ಟಿಪ್ಪು ಸುಲ್ತಾನ್‌ನಂತಹವರು ಹೀರೊಗಳೆಂದು ಪರಿಗಣಿಸಲ್ಪಡಬೇಕೇ ವಿನಾ ಖಳನಾಯಕರಾಗಿ ಅಲ್ಲ ಎನ್ನುವುದು ನನ್ನ ಅಭಿಪ್ರಾಯ. ಟಿಪ್ಪುವಿನ ಬಗ್ಗೆ ಹೆಚ್ಚೆಚ್ಚು ಓದಿದಷ್ಟೂ ನನಗೆ ಆತನ ವ್ಯಕ್ತಿತ್ವದ ಹಿರಿಮೆ ಮನವರಿಕೆಯಾಗಿದೆ. … (ಟಿಪ್ಪು ಸುಲ್ತಾನ್) ಮಾತ್ರವೇ ಬ್ರಿಟಿಷರ ವಿರುದ್ಧ ಹೋರಾಡುತ್ತಾ ಮಡಿದ ರಾಜಕುಮಾರ” ಎಂದು ಮಲ್ಕಾನಿಯವರು ಬರೆದಿರುವುದನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ.

ಮುಂದುವರಿದು, “ಬ್ರಿಟಿಷರ ವಿರುದ್ಧ ಹೋರಾಡುವುದಷ್ಟಕ್ಕೇ ಟಿಪ್ಪು ತೃಪ್ತನಾಗಲಿಲ್ಲ, ಶಂಕಿತರಿಗೆ ಚಿತ್ರಹಿಂಸೆ ನೀಡುವುದನ್ನೂ ಸಾರ್ವಜನಿಕ ಕೆಲಸಗಳಿಗೆ ಜನರನ್ನು ಬಲವಂತವಾಗಿ ಕೂಲಿಗಳನ್ನಾಗಿ ಬಳಸಿಕೊಳ್ಳುವುದನ್ನೂ ವಿರೋಧಿಸಿದ್ದ. ಈತ ಪಾನ ನಿಷೇಧವನ್ನು ಜಾರಿಗೆ ತಂದ. ಮರಗಳನ್ನು ಕಡಿಯುವುದನ್ನು ವಿರೋಧಿಸಿದ. ಪ್ರತಿ ನಾಲ್ಕು ಮೈಲಿಗೆ ಒಂದು ಶಾಲೆಯನ್ನು ತೆರೆಯಲು ಯತ್ನಿಸಿದ. ಯಾವಾಗ ಶಸ್ತ್ರ ಉತ್ಪಾದನಾ ಕಾರ್ಖಾನೆಯಿಂದ ಕಾವೇರಿ ನದಿ ಕಲುಷಿತವಾಗುತ್ತಿದೆ ಎಂದು ಗೊತ್ತಾಯಿತೋ ತಕ್ಷಣ ಆತ ಆ ಕಾರ್ಖಾನೆಯನ್ನೇ ಸ್ಥಳಾಂತರಿಸಿದ. ಪರಿಸರವಾದಿಗಳಿಗೆ ಮಾದರಿ ಎನ್ನಬಹುದಾದ ರಾಜನೊಬ್ಬ ಅವನೊಳಗಿದ್ದ. ಭಾರತದ ರಾಜರುಗಳ ಪೈಕಿ ಟಿಪ್ಪು ಮಾತ್ರವೇ ವಿಶ್ವದೃಷ್ಟಿ ಉಳ್ಳವನಾಗಿದ್ದ. ಟಿಪ್ಪುವಿನ ಮರಣದಿಂದಾಗಿ ಭಾರತದ ಸ್ವಾತಂತ್ರ್ಯ ಒಂದೂವರೆ ಶತಮಾನದಷ್ಟು ಮುಂದೆ ಹೋಯಿತು… ಆತ ಬಯಸಿದ್ದರೆ, ಹಿಂದಿನ ಕೆಲ ಅರಸರಂತೆ, ಬ್ರಿಟಿಷರ ಅಡಿಯಾಳಾಗಿ ತನ್ನ ಅರಸುತನವನ್ನು ಉಳಿಸಿಕೊಳ್ಳಬಹುದಾಗಿತ್ತು. ಅಂದು ಅವನು ಹಾಗೆ ಮಾಡಿದ್ದೇ ಆಗಿದ್ದಲ್ಲಿ, ಇಂದು ಆತನ ಮರಿ, ಗಿರಿಮಕ್ಕಳು ಕೊಲ್ಕೊತ್ತಾದ ರಸ್ತೆಗಳಲ್ಲಿ ಸೈಕಲ್ ರಿಕ್ಷಾ ತುಳಿಯುತ್ತಾ ಬದುಕು ಸವೆಸಬೇಕಾದ ಅನಿವಾರ್ಯ ಸ್ಥಿತಿಗೆ ಸಿಲುಕುತ್ತಿರಲಿಲ್ಲ. ಗೌರವ ಕಳೆದುಕೊಂಡು ಬದುಕುವುದಕ್ಕಿಂತಲೂ ಸಾವು ಆತನ ಆಯ್ಕೆಯಾಗಿತ್ತು”- ಹೀಗೆ ಮಲ್ಕಾನಿಯವರು ಬಣ್ಣಿಸಿರುವುದಾಗಿ ಸಾಯಿನಾಥ್‌ ಬರೆದಿದ್ದಾರೆ.

ಮಲ್ಕಾನಿ ಅವರು ಟಿಪ್ಪು ಬಗ್ಗೆ ಬರೆದ ಲೇಖನವನ್ನು ಒಳಗೊಂಡ ಪುಸ್ತಕಕ್ಕೆ ಹಿಂದುತ್ವದ ಹೀರೊ ಎಲ್.ಕೆ.ಅಡ್ವಾಣಿ ಅವರೇ ಮುನ್ನುಡಿ ಬರೆದಿದ್ದರು. ಭಾರತದ ಉಪಪ್ರಧಾನಿಯಾಗಿದ್ದ ಅಡ್ವಾಣಿ ಅವರು ಮಲ್ಕಾನಿ ಅವರನ್ನು ‘ಮಹಾನ್ ಪತ್ರಕರ್ತ’ ಎಂದೇ ಬಣ್ಣಿಸುತ್ತಿದ್ದರು. ಆರ್‌ಎಸ್ಎಸ್ ಸಹ ಎಲ್ಲಿಯೂ ಮಲ್ಕಾನಿ ಅವರನ್ನು ನಿರಾಕರಿಸಿಲ್ಲ ಎಂದು ಸಾಯಿನಾಥ್‌ ಅಭಿಪ್ರಾಯಪಟ್ಟಿದ್ದಾರೆ.

ಮಲ್ಕಾನಿಯವರ ಹಿನ್ನೆಲೆಯ ಕುರಿತು ಬರೆಯುತ್ತಾ, “ಅವರು ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಬಿಜೆಪಿಯ ಉಪಾಧ್ಯಕ್ಷರಾಗಿ ಹಲವಾರು ವರ್ಷ ಕಾರ್ಯನಿರ್ವಹಿಸಿದ್ದರು. ಆರ್‌ಎಸ್ಎಸ್‌ನ ಅತಿಮುಖ್ಯ ಚಿಂತಕರಲ್ಲಿ ಒಬ್ಬರಾಗಿದ್ದರು. ಆ ಸಂಘಟನೆಯ ಮಾಧ್ಯಮ ವ್ಯಕ್ತಿಯೂ ಆಗಿದ್ದರು. 1940ರ ದಶಕದಲ್ಲಿ ‘ದಿ ಹಿಂದೂಸ್ಥಾನ್ ಟೈಮ್ಸ್’ನಲ್ಲಿ ಕೆಲಕಾಲ ಕೆಲಸ ಮಾಡಿದ್ದರು (ಅದೇ ಸಮಯದಲ್ಲಿ ‘ಆರ್ಗನೈಸರ್’ ವಾರಪತ್ರಿಕೆಗೂ ಬರೆಯುತ್ತಿದ್ದರು). ಆನಂತರದಲ್ಲಿ ಅವರು ಪೂರ್ಣಾವಧಿಗೆ ಹಿಂದುತ್ವದ ತೆಕ್ಕೆಗೆ ಬಂದರು. ಆರ್‌ಎಸ್ಎಸ್‌ನ ದನಿಯಾಗಿದ್ದ ‘ಆರ್ಗನೈಸರ್’ಗೆ ಸುಮಾರು 35 ವರ್ಷದಷ್ಟು ದೀರ್ಘಕಾಲ ಸಂಪಾದಕರಾಗಿದ್ದು ಇವರೊಬ್ಬರೇ. ‘ಆರ್ಗನೈಸರ್’ನ ಹಿಂದಿ ಆವೃತ್ತಿ ‘ಪಾಂಚಜನ್ಯ’ದ ಸಂಪಾದಕರಾಗಿಯೂ ಕೆಲಸ ಮಾಡಿದ್ದರು” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಟಿಪ್ಪು v/s ಸಾವರ್ಕರ್‌ ಎಂಬುದಕ್ಕೆ ನನ್ನ ಒಪ್ಪಿಗೆ ಇಲ್ಲ: ಯಡಿಯೂರಪ್ಪ

“ಪುದುಚೇರಿಯ ಲೆಫ್ಟಿನೆಂಟ್ ಗರ್ವನರ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ 2003ರಲ್ಲಿ ನಿಧನರಾದ ಮಲ್ಕಾನಿ ಅವರು ಸ್ಪಷ್ಟ ಚಿಂತನೆ ಮತ್ತು ನೇರ ನುಡಿಯ ವ್ಯಕ್ತಿತ್ವದವರು. ಟಿಪ್ಪು, ಭಗತ್ ಸಿಂಗ್, ಹಿಜಾಬ್ ಹಾಗೂ ಮತ್ತಿತರ ವಿಷಯವಾಗಿ ಕರ್ನಾಟಕದಲ್ಲಿ ಅನಗತ್ಯ ಗಲಭೆಗಳನ್ನು ಸೃಷ್ಟಿಸಿದ ಗುಂಪಿನಂತಲ್ಲ” ಎಂದು ಬಣ್ಣಿಸಿದ್ದಾರೆ.

“ಮಲ್ಕಾನಿಯವರ ಈ ಆರ್‌ಎಸ್ಎಸ್ ಹೆಗ್ಗುರುತಿನ ಜೊತೆ ಬಿ.ಸಿ.ನಾಗೇಶ್‌ ಅವರನ್ನು ಹೋಲಿಸಿ ನೋಡಿದರೆ ಅವರು (ಬಿ.ಸಿ.ನಾಗೇಶ್) ತೀರಾ ಕೃಶವಾಗಿ ತೋರುತ್ತಾರೆ” ಎಂದು ಕುಟುಕಿರುವ ಸಾಯಿನಾಥ್, ನಾಗೇಶ್ ಅವರು ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಟಿಪ್ಪು ಸುಲ್ತಾನ್‌, ಭಗತ್ ಸಿಂಗ್‌ ಕುರಿತ ಪಠ್ಯವನ್ನು ಕಿತ್ತು ಹಾಕಿದ್ದನ್ನು ಟೀಕಿಸಿದ್ದಾರೆ.

(‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿರುವ ಪೂರ್ಣ ಲೇಖನವನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...