Homeಮುಖಪುಟಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಮೌನವಾಗಿರುವುದೇಕೆ?: ಜೈರಾಮ್ ರಮೇಶ್ ಪ್ರಶ್ನೆ

ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಮೌನವಾಗಿರುವುದೇಕೆ?: ಜೈರಾಮ್ ರಮೇಶ್ ಪ್ರಶ್ನೆ

- Advertisement -
- Advertisement -

ಕಳೆದ ಒಂದು ತಿಂಗಳಿನಿಂದ ಮಣಿಪುರ ರಾಜ್ಯ ಅಕ್ಷರಶಃ ಹೊತ್ತಿಯುರಿಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಮೌನವಾಗಿರುವುದನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ”ಮಣಿಪುರವು ಕಳೆದ ಏಳು ವಾರಗಳಿಂದ ತೀವ್ರ ಮತ್ತು ಅಗಾಧ ವಿಪತ್ತನ್ನು ಅನುಭವಿಸುತ್ತಿದೆ. ಅಲ್ಲಿ ಯಾವುದೇ ಸುಧಾರಣೆಯ ಲಕ್ಷಣಗಳು ಕಾಣಿಸುತ್ತಿಲ್ಲ. ದುರಂತ ಸಂಭವಿಸಿದ ಒಂದು ತಿಂಗಳ ನಂತರ ಗೃಹ ಸಚಿವರ ಸಂತ್ರಸ್ತ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಗೃಹ ಸಚಿವರು ಒಂದು ತಿಂಗಳ ನಂತರ ವಿಳಂಬವಾದರೂ ಭೇಟಿ ನೀಡಿದ್ದಾರೆ. ಅವರ ಸಣ್ಣ ಕರುಣೆಗೆ ರಾಷ್ಟ್ರವು ಕೃತಜ್ಞರಾಗಿರಬೇಕು.”

”ಆದರೆ, ಪ್ರಧಾನಿ ನರೇಂದ್ರ ಮೋದಿಯವರು ಇನ್ನೂ ಮೌನವಾಗಿರುವುದೇಕೆ? ಅವರು ಏಕೆ ರಾಜ್ಯಕ್ಕೆ ಭೇಟಿ ನೀಡಿಲ್ಲ ಮತ್ತು ಸಮುದಾಯಗಳ ನಡುವೆ ಸೌಹಾರ್ದತೆ ಕಾಪಾಡಿಕೊಳ್ಳುವಂತೆ ಜನರಲ್ಲಿ ಏಕೆ ಮನವಿ ಮಾಡುತ್ತಿಲ್ಲ? ಮಣಿಪುರಕ್ಕೆ ಸರ್ವಪಕ್ಷ ನಿಯೋಗ ತೆರಳಲು ಅವರು ಏಕೆ ಪ್ರೋತ್ಸಾಹಿಸಬಾರದು?” ಎಂದು ಕೇಳಿದ್ದಾರೆ.

ಬಿಜೆಪಿ ನೇತೃತ್ವದ ಆಡಳಿತಾರೂಢ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ವಾಗ್ದಾಳಿ ನಡೆಸುತ್ತಿರುವುದು ಇದೇ ಮೊದಲಲ್ಲ.

ಇದನ್ನೂ ಓದಿ: ಮಣಿಪುರದಲ್ಲಿ ಹಿಂಸಾಚಾರ ತಡೆಯಲು ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

ಮಣಿಪುರದಲ್ಲಿ ಭೀಕರ ಹಿಂಸಾಚಾರ ಭುಗಿಲೆದ್ದ 15 ದಿನಗಳ ನಂತರ ಮತ್ತು ಇನ್ನೂ ಐದು ದಿನಗಳವರೆಗೆ ಇಂಟರ್ನೆಟ್ ಅನ್ನು ಮತ್ತೆ ಸ್ಥಗಿತಗೊಳಿಸಿದ ನಂತರ, ರಾಜ್ಯದಲ್ಲಿ ಶಾಂತಿಗಾಗಿ ಕರೆ ನೀಡುವ ಯಾವುದೇ ಸಂದೇಶವನ್ನು ನೀಡಲು ಪ್ರಧಾನಿ ಮೋದಿ ವಿಫಲರಾಗಿದ್ದಾರೆ ಎಂದು ಈ ಹಿಂದೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರತಿಪಾದಿಸಿದರು.

ಈ ಮಧ್ಯೆ ಗೃಹ ವ್ಯವಹಾರಗಳ ಸಚಿವಾಲಯವು ಘಟನೆಗಳ ತನಿಖೆಗಾಗಿ ತನಿಖಾ ಆಯೋಗವನ್ನು ನೇಮಿಸಿದೆ. ಬಿಕ್ಕಟ್ಟಿನ ಹಿಂದಿನ ಕಾರಣಗಳು ಮತ್ತು ಅಂಶಗಳನ್ನು ಪರಿಶೀಲಿಸಲು ಮಣಿಪುರ ಸರ್ಕಾರವು 1952ರ ವಿಚಾರಣಾ ಆಯೋಗಗಳ ಅಡಿಯಲ್ಲಿ ನ್ಯಾಯಾಂಗ ವಿಚಾರಣಾ ಆಯೋಗವನ್ನು ಸ್ಥಾಪಿಸಲು ಶಿಫಾರಸು ಮಾಡಿತ್ತು.

ವಿಶೇಷ ಸದಸ್ಯರನ್ನು ಒಳಗೊಂಡ ತನಿಖಾ ಆಯೋಗವು ಮಣಿಪುರದಲ್ಲಿ ನಡೆದ ಹಿಂಸಾಚಾರದ ಘಟನೆಗಳನ್ನು ಕೂಲಂಕಷವಾಗಿ ಪರಿಶೀಲಿಸು ಮುಂದಾಗಿದೆ. ಈ ಹಿಂಸಾಚಾರಕ್ಕೆ ಮೂಲ ಕಾರಣವಾದದ್ದು ಏನು ಎಂಬ ಬಗ್ಗೆ ಬೆಳಕು ಚೆಲ್ಲುತ್ತಿದೆ. ಈ ಆಯೋಗದಲ್ಲಿ ನ್ಯಾಯಮೂರ್ತಿ ಅಜಯ್ ಲಂಬಾ, ಗೌಹಾಟಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ, ಹಿಮಾಂಶು ಶೇಖರ್ ದಾಸ್ (ಐಎಎಸ್ ನಿವೃತ್ತ), ಮತ್ತು ಅಲೋಕ ಪ್ರಭಾಕರ್ (ಐಪಿಎಸ್ ನಿವೃತ್ತ) ಇದ್ದಾರೆ.

ಈ ಆಯೋಗವು ತನ್ನ ಮೊದಲ ಸಭೆಯ ದಿನಾಂಕದಿಂದ ಆರು ತಿಂಗಳೊಳಗೆ ತನ್ನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ಆದಾಗ್ಯೂ, ಇದು ನಿಗದಿತ ಗಡುವಿನ ಮೊದಲು ಯಾವುದೇ ಸಂಬಂಧಿತ ವಿಷಯಗಳ ಕುರಿತು ಮಧ್ಯಂತರ ವರದಿಗಳನ್ನು ಒದಗಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...