Homeಮುಖಪುಟಮುಂಬೈ: ಜೊತೆಗಾತಿಯನ್ನು ಕೊಂದು, ಮೃತದೇಹವನ್ನು ತುಂಡರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ವ್ಯಕ್ತಿ ಅರೆಸ್ಟ್

ಮುಂಬೈ: ಜೊತೆಗಾತಿಯನ್ನು ಕೊಂದು, ಮೃತದೇಹವನ್ನು ತುಂಡರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ವ್ಯಕ್ತಿ ಅರೆಸ್ಟ್

- Advertisement -
- Advertisement -

ವ್ಯಕ್ತಿಯೊಬ್ಬ ತನ್ನ ಜೊತೆ ಲಿವ್‌-ಇನ್-ಪಾರ್ಟನರ್‌ ಆಗಿದ್ದ ಮಹಿಳೆಯನ್ನು ಕೊಂದು ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿರುವ ಪ್ರಕರಣ ಮುಂಬೈನ ಮೀರಾ ರಸ್ತೆಯಲ್ಲಿರುವ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಆರೋಪಿಯನ್ನು – ಮನೋಜ್ ಸಹಾನಿ(56) ಎಂದು ಗುರುತಿಸಲಾಗಿದೆ – ಸರಸ್ವತಿ ವೈದ್ಯ (32) ಎಂಬಾಕೆಯೊಂದಿಗೆ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7 ನೇ ಹಂತದ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ವಾಸಿಸುತ್ತಿದ್ದನು. ಬುಧವಾರ ಸಂಜೆ ಆರೋಪಿ ಮನೋಜ್ ಅವರನ್ನು ಬಂಧಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ನಯಾನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು, ”ಆ ಮನೆಯಲ್ಲಿ ಪತ್ತೆಯಾದ ದೇಹದ ಭಾಗಗಳ ಕೊಳೆತಿರುವುದರಿಂದ ಎರಡು-ಮೂರು ದಿನಗಳ ಹಿಂದೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಯು ಇಷ್ಟು ದಿನ ದೇಹದ ಭಾಗಗಳೊಂದಿಗೆ ವಾಸಿಸುತ್ತಿದ್ದನೆಂದು ತೋರುತ್ತಿದೆ” ಎಂದು ಹೇಳಿದರು.

3-4 ದಿನಗಳ ಹಿಂದೆ ಸರಸ್ವತಿಯನ್ನು ಕೊಂದಿದ್ದ ಮನೋಜ್, ಟೀ ಕಟ್ಟರ್ ಅನ್ನು ಖರೀದಿಸಿ ಆಕೆಯ ದೇಹವನ್ನು 12-13 ತುಂಡು ಮಾಡಿದ್ದನು. ಬಳಿಕ, ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿ, ಹೊರಗೆ ಎಸೆಯುವ ಉದ್ದೇಶದಿಂದ ಪ್ಲಾಸ್ಟಿಕ್ ಪೇಪರ್‌ನಲ್ಲಿ ಸುತ್ತಿ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸರಸ್ವತಿ ವೈದ್ಯ ಮತ್ತು ಮನೋಜ್ ಸಹಾನಿ 3 ವರ್ಷಗಳಿಂದ ಈ ಜೋಡಿ ಫ್ಲ್ಯಾಟ್‌ನಲ್ಲಿ ವಾಸವಿತ್ತು ಎಂದು ನಯಾನಗ‌ ಪೊಲೀಸರು ತಿಳಿಸಿರುವುದಾಗಿ ‘ಇಂಡಿಯಾ ಟುಡೆ’ ವರದಿ ಮಾಡಿದೆ.

ಬುಧವಾರ ಸಂಜೆ 7 ಗಂಟೆ ಸುಮಾರಿಗೆ ನಯಾನಗರ ಪಿಎಸ್‌ಗೆ ನಿವಾಸಿಗಳಿಂದ ಕರೆ ಬಂದಿದ್ದು, ದಂಪತಿಯ ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿದೆ ಎಂದು ದೂರಿದರು. ಕಟ್ಟಡವನ್ನು ತಲುಪಿ ಫ್ಲಾಟ್‌ಗೆ ಪ್ರವೇಶಿಸಿದಾಗ ಪೊಲೀಸರಿಗೆ ಮಹಿಳೆಯ ದೇಹದ ಭಾಗಗಳು ಪತ್ತೆಯಾಗಿವೆ.

ಇದನ್ನೂ ಓದಿ: ಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

”ತಕ್ಷಣ ಸಹಾನಿಯನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ನಾವು ಸಹಾನಿಯನ್ನು ಬಂಧಿಸಿದ್ದೇವೆ ಮತ್ತು ಕೊಲೆಯ ಹಿಂದಿನ ಉದ್ದೇಶ ಮತ್ತು ಅದನ್ನು ಹೇಗೆ ಕಾರ್ಯಗತಗೊಳಿಸಿದನು ಎಂಬುದನ್ನು ಕಂಡುಹಿಡಿಯಲು ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಉಪ ಪೊಲೀಸ್ ಆಯುಕ್ತ (ವಲಯ 1) ಜಯಂತ್ ಬಜ್ಬಲೆ ಹೇಳಿದ್ದಾರೆ.

”ಸಹಾನಿ ಅವರು ಮಹಿಳೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದಾನೆ. ಇದರಿಂದಾಗಿ ಅವುಗಳನ್ನು ವಿಲೇವಾರಿ ಮಾಡಲು ಸುಲಭವಾಗುತ್ತದೆ ಎನ್ನುವ ಉದ್ದೇಶ ಅವನದ್ದಾಗಿದೆ ಎಂದು ಅನಿಸುತ್ತದೆ” ಎಂದು ಬಜ್ಬಾಲೆ ಹೇಳಿದರು.

”ದೇಹದ ಕೆಲವು ಭಾಗಗಳು ನಾಪತ್ತೆಯಾಗಿದ್ದು, ಆರೋಪಿ ಕೊಲೆ ಮತ್ತು ಸಾಕ್ಷ್ಯ ನಾಶಕ್ಕಾಗಿ ಅವುಗಳನ್ನು ಎಲ್ಲೋ ಎಸೆದಿರುವ ಶಂಕೆ ವ್ಯಕ್ತವಾಗಿದೆ” ಎಂದು ನಯಾನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಸಹಾನಿ ವಿರುದ್ಧ ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ.  ಫ್ಲಾಟ್‌ನಿಂದ ಮಾದರಿಗಳು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡವನ್ನು ಸಹ ಕರೆಯಲಾಗಿದೆ.

ಈ ಜೋಡಿ ತಮ್ಮೊಂದಿಗೆ ಬೆರೆಯುತ್ತಿರಲಿಲ್ಲ ಎಂದು ಕಟ್ಟಡದ ನಿವಾಸಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಅವರ ಫ್ಲ್ಯಾಟ್‌ನ ಬಾಗಿಲಿಗೆ ನಾಮಫಲಕವಿಲ್ಲ ಮತ್ತು ಅದನ್ನು ಸೋನಮ್ ಬಿಲ್ಡರ್ಸ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...