Homeಮುಖಪುಟಮುಂಬೈ: ಜೊತೆಗಾತಿಯನ್ನು ಕೊಂದು, ಮೃತದೇಹವನ್ನು ತುಂಡರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ವ್ಯಕ್ತಿ ಅರೆಸ್ಟ್

ಮುಂಬೈ: ಜೊತೆಗಾತಿಯನ್ನು ಕೊಂದು, ಮೃತದೇಹವನ್ನು ತುಂಡರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ವ್ಯಕ್ತಿ ಅರೆಸ್ಟ್

- Advertisement -
- Advertisement -

ವ್ಯಕ್ತಿಯೊಬ್ಬ ತನ್ನ ಜೊತೆ ಲಿವ್‌-ಇನ್-ಪಾರ್ಟನರ್‌ ಆಗಿದ್ದ ಮಹಿಳೆಯನ್ನು ಕೊಂದು ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿರುವ ಪ್ರಕರಣ ಮುಂಬೈನ ಮೀರಾ ರಸ್ತೆಯಲ್ಲಿರುವ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಆರೋಪಿಯನ್ನು – ಮನೋಜ್ ಸಹಾನಿ(56) ಎಂದು ಗುರುತಿಸಲಾಗಿದೆ – ಸರಸ್ವತಿ ವೈದ್ಯ (32) ಎಂಬಾಕೆಯೊಂದಿಗೆ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7 ನೇ ಹಂತದ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ವಾಸಿಸುತ್ತಿದ್ದನು. ಬುಧವಾರ ಸಂಜೆ ಆರೋಪಿ ಮನೋಜ್ ಅವರನ್ನು ಬಂಧಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ನಯಾನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು, ”ಆ ಮನೆಯಲ್ಲಿ ಪತ್ತೆಯಾದ ದೇಹದ ಭಾಗಗಳ ಕೊಳೆತಿರುವುದರಿಂದ ಎರಡು-ಮೂರು ದಿನಗಳ ಹಿಂದೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಯು ಇಷ್ಟು ದಿನ ದೇಹದ ಭಾಗಗಳೊಂದಿಗೆ ವಾಸಿಸುತ್ತಿದ್ದನೆಂದು ತೋರುತ್ತಿದೆ” ಎಂದು ಹೇಳಿದರು.

3-4 ದಿನಗಳ ಹಿಂದೆ ಸರಸ್ವತಿಯನ್ನು ಕೊಂದಿದ್ದ ಮನೋಜ್, ಟೀ ಕಟ್ಟರ್ ಅನ್ನು ಖರೀದಿಸಿ ಆಕೆಯ ದೇಹವನ್ನು 12-13 ತುಂಡು ಮಾಡಿದ್ದನು. ಬಳಿಕ, ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿ, ಹೊರಗೆ ಎಸೆಯುವ ಉದ್ದೇಶದಿಂದ ಪ್ಲಾಸ್ಟಿಕ್ ಪೇಪರ್‌ನಲ್ಲಿ ಸುತ್ತಿ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸರಸ್ವತಿ ವೈದ್ಯ ಮತ್ತು ಮನೋಜ್ ಸಹಾನಿ 3 ವರ್ಷಗಳಿಂದ ಈ ಜೋಡಿ ಫ್ಲ್ಯಾಟ್‌ನಲ್ಲಿ ವಾಸವಿತ್ತು ಎಂದು ನಯಾನಗ‌ ಪೊಲೀಸರು ತಿಳಿಸಿರುವುದಾಗಿ ‘ಇಂಡಿಯಾ ಟುಡೆ’ ವರದಿ ಮಾಡಿದೆ.

ಬುಧವಾರ ಸಂಜೆ 7 ಗಂಟೆ ಸುಮಾರಿಗೆ ನಯಾನಗರ ಪಿಎಸ್‌ಗೆ ನಿವಾಸಿಗಳಿಂದ ಕರೆ ಬಂದಿದ್ದು, ದಂಪತಿಯ ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿದೆ ಎಂದು ದೂರಿದರು. ಕಟ್ಟಡವನ್ನು ತಲುಪಿ ಫ್ಲಾಟ್‌ಗೆ ಪ್ರವೇಶಿಸಿದಾಗ ಪೊಲೀಸರಿಗೆ ಮಹಿಳೆಯ ದೇಹದ ಭಾಗಗಳು ಪತ್ತೆಯಾಗಿವೆ.

ಇದನ್ನೂ ಓದಿ: ಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

”ತಕ್ಷಣ ಸಹಾನಿಯನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ನಾವು ಸಹಾನಿಯನ್ನು ಬಂಧಿಸಿದ್ದೇವೆ ಮತ್ತು ಕೊಲೆಯ ಹಿಂದಿನ ಉದ್ದೇಶ ಮತ್ತು ಅದನ್ನು ಹೇಗೆ ಕಾರ್ಯಗತಗೊಳಿಸಿದನು ಎಂಬುದನ್ನು ಕಂಡುಹಿಡಿಯಲು ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಉಪ ಪೊಲೀಸ್ ಆಯುಕ್ತ (ವಲಯ 1) ಜಯಂತ್ ಬಜ್ಬಲೆ ಹೇಳಿದ್ದಾರೆ.

”ಸಹಾನಿ ಅವರು ಮಹಿಳೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದಾನೆ. ಇದರಿಂದಾಗಿ ಅವುಗಳನ್ನು ವಿಲೇವಾರಿ ಮಾಡಲು ಸುಲಭವಾಗುತ್ತದೆ ಎನ್ನುವ ಉದ್ದೇಶ ಅವನದ್ದಾಗಿದೆ ಎಂದು ಅನಿಸುತ್ತದೆ” ಎಂದು ಬಜ್ಬಾಲೆ ಹೇಳಿದರು.

”ದೇಹದ ಕೆಲವು ಭಾಗಗಳು ನಾಪತ್ತೆಯಾಗಿದ್ದು, ಆರೋಪಿ ಕೊಲೆ ಮತ್ತು ಸಾಕ್ಷ್ಯ ನಾಶಕ್ಕಾಗಿ ಅವುಗಳನ್ನು ಎಲ್ಲೋ ಎಸೆದಿರುವ ಶಂಕೆ ವ್ಯಕ್ತವಾಗಿದೆ” ಎಂದು ನಯಾನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಸಹಾನಿ ವಿರುದ್ಧ ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ.  ಫ್ಲಾಟ್‌ನಿಂದ ಮಾದರಿಗಳು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡವನ್ನು ಸಹ ಕರೆಯಲಾಗಿದೆ.

ಈ ಜೋಡಿ ತಮ್ಮೊಂದಿಗೆ ಬೆರೆಯುತ್ತಿರಲಿಲ್ಲ ಎಂದು ಕಟ್ಟಡದ ನಿವಾಸಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಅವರ ಫ್ಲ್ಯಾಟ್‌ನ ಬಾಗಿಲಿಗೆ ನಾಮಫಲಕವಿಲ್ಲ ಮತ್ತು ಅದನ್ನು ಸೋನಮ್ ಬಿಲ್ಡರ್ಸ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...